Homeಮುಖಪುಟಜಮ್ಮು ಕಾಶ್ಮೀರ ಸಹಜ ಸ್ಥಿತಿಗೆ ಎಂದ ಅಮಿತ್ ಶಾ; ಇಲ್ಲ ಎಂದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ

ಜಮ್ಮು ಕಾಶ್ಮೀರ ಸಹಜ ಸ್ಥಿತಿಗೆ ಎಂದ ಅಮಿತ್ ಶಾ; ಇಲ್ಲ ಎಂದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ

- Advertisement -
- Advertisement -

ಜಮ್ಮು ಕಾಶ್ಮೀರದಲ್ಲಿ ಸಹಜಸ್ಥಿತಿಯನ್ನು ಸಂಪೂರ್ಣವಾಗಿ ಪುನಃಸ್ಥಾಪನೆಯಾಗಿಲ್ಲ ಎಂದು ಕೇಂದ್ರಾಡಳಿತ ಪ್ರದೇಶದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಶುಕ್ರವಾರದಂದು ಹೇಳಿದ್ದಾರೆ. ಸಂವಿಧಾನದ 370 ನೇ ವಿಧಿಯು ಭಯೋತ್ಪಾದನೆಯ ಬೀಜಗಳನ್ನು ಬಿತ್ತಿತ್ತು, ಆದರೆ ನರೇಂದ್ರ ಮೋದಿ ಸರ್ಕಾರವು ಕಣಿವೆಯಲ್ಲಿ ಭಯೋತ್ಪಾದನೆ ಮತ್ತು ಭಯೋತ್ಪಾದಕ ಪರಿಸರ ವ್ಯವಸ್ಥೆಯನ್ನು ಕೊನೆಗೊಳಿಸಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ ಒಂದು ದಿನದ ನಂತರ ಮುಖ್ಯಮಂತ್ರಿ ಹೇಳಿಕೆ ನೀಡಿದ್ದಾರೆ. ಜಮ್ಮು ಕಾಶ್ಮೀರ ಸಹಜ ಸ್ಥಿತಿಗೆ

“ಗೃಹ ಸಚಿವರ ಹೇಳಿಕೆಯ ಬಗ್ಗೆ ನಾನು ಏನನ್ನೂ ಹೇಳಲು ಬಯಸುವುದಿಲ್ಲ. ಜಮ್ಮು ಕಾಶ್ಮೀರದಲ್ಲಿ ಇನ್ನೂ ಸಹಜತೆಯನ್ನು ಸಂಪೂರ್ಣವಾಗಿ ಪುನಃಸ್ಥಾಪನೆಯಾಗಿಲ್ಲ. ಇದು ಒಂದು ಪ್ರಕ್ರಿಯೆಯಾಗಿದ್ದು, ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂಬುದನ್ನು ನಾವು ಕಾದು ನೋಡಬೇಕಾಗಿದೆ” ಎಂದು ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜಮ್ಮು ಕಾಶ್ಮೀರದ ಹೆಸರನ್ನು “ಕಶ್ಯಪ್” ಎಂದು ಬದಲಾಯಿಸಲಾಗುತ್ತಿದೆ ಎಂಬ ವದಂತಿಗಳನ್ನು ಮುಖ್ಯಮಂತ್ರಿ ತಿರಸ್ಕರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಅಂತಹದ್ದೇನೂ ಇಲ್ಲ. ಕೆಲವು ಮಾಧ್ಯಮ ಸಂಸ್ಥೆಗಳು ಅದನ್ನು ವರದಿ ಮಾಡಿತ್ತಾದರೂ, ನಂತರ ಅವರು ಅದನ್ನು ಸರಿಪಡಿಸಿದ್ದಾರೆ. ಅಂತಹ ಯಾವುದೇ ಪ್ರಸ್ತಾವನೆ ಅಸ್ತಿತ್ವದಲ್ಲಿಲ್ಲ ಮತ್ತು ಜಮ್ಮು ಕಾಶ್ಮೀರ ಸರ್ಕಾರದ ಒಪ್ಪಿಗೆಯಿಲ್ಲದೆ ಇದು ಸಂಭವಿಸುವುದಿಲ್ಲ” ಎಂದು ಹೇಳಿದ್ದಾರೆ.

2024 ರಲ್ಲಿ ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳೊಂದಿಗಿನ ವಿವಿಧ ಎನ್‌ಕೌಂಟರ್‌ಗಳಲ್ಲಿ 45 ಪಾಕಿಸ್ತಾನಿಗಳು ಸೇರಿದಂತೆ ಕನಿಷ್ಠ 75 ಶಂಕಿತ ಉಗ್ರರು ಹತರಾಗಿದ್ದಾರೆ ಎಂದು ವರದಿ ಯಾಗಿದೆ. ಕೊಲ್ಲಲ್ಪಟ್ಟ 75 ಜನರಲ್ಲಿ 45 ಪಾಕಿಸ್ತಾನಿ ಪ್ರಜೆಗಳಾಗಿದ್ದು, ಅಲ್ಲಿನ ವಿವಿಧ ಸಂಘಟನೆಗಳಿಗೆ ಸೇರಿದವರು ಮತ್ತು ಉಳಿದವರು ಸ್ಥಳೀಯ ಬಂಡುಕೋರರು ಎಂದು ವರದಿ ಉಲ್ಲೇಖಿಸಿವೆ.

ಬಾರಾಮುಲ್ಲಾ, ಬಂಡಿಪೋರಾ ಮತ್ತು ಕುಪ್ವಾರದ ಮೂರು ಜಿಲ್ಲೆಗಳನ್ನು ಒಳಗೊಂಡಿರುವ ಉತ್ತರ ಕಾಶ್ಮೀರವು 2024 ರಲ್ಲಿ 17 ಎನ್‌ಕೌಂಟರ್‌ಗಳಿಗೆ ಸಾಕ್ಷಿಯಾಗಿದೆ. ಈ ಎನ್‌ಕೌಂಟರ್‌ಗಳಲ್ಲಿ, 28 ಬಂಡುಕೋರರು, ಐವರು ಭದ್ರತಾ ಸಿಬ್ಬಂದಿ ಮತ್ತು ಇಬ್ಬರು ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ. ಜಮ್ಮು ಕಾಶ್ಮೀರ ಸಹಜ ಸ್ಥಿತಿಗೆ

ಕಳೆದ ಕೆಲವು ವರ್ಷಗಳಲ್ಲಿ ಜಮ್ಮು ಕಾಶ್ಮೀರದಲ್ಲಿ ಹಿಂಸಾಚಾರ ಉಲ್ಬಣಗೊಂಡಿದ್ದು, ಜಮ್ಮು ಪ್ರದೇಶದಲ್ಲಿ 2024 ರಲ್ಲಿ ಭದ್ರತಾ ಪಡೆಗಳೊಂದಿಗೆ ವಿವಿಧ ಎನ್‌ಕೌಂಟರ್‌ಗಳಲ್ಲಿ 14 ಶಂಕಿತ ಉಗ್ರರು ಹತರಾಗಿದ್ದರು. ಜಮ್ಮು ಪ್ರದೇಶದ 10 ಜಿಲ್ಲೆಗಳಲ್ಲಿ 7 ರಲ್ಲಿ ಉಗ್ರಗಾಮಿ ದಾಳಿಗಳು ಮತ್ತು ಎನ್‌ಕೌಂಟರ್‌ಗಳು ನಡೆದಿವೆ.

2024 ರಲ್ಲಿ ನಡೆದ ಉಗ್ರಗಾಮಿ ಹಿಂಸಾಚಾರದಲ್ಲಿ ಒಟ್ಟು 28 ಭದ್ರತಾ ಸಿಬ್ಬಂದಿ ಹತರಾಗಿದ್ದರು ಮತ್ತು ಅವರಲ್ಲಿ 13 ಮಂದಿ ಜಮ್ಮು ಪ್ರದೇಶದಲ್ಲಿ ಎನ್‌ಕೌಂಟರ್ ಮತ್ತು ಉಗ್ರಗಾಮಿ ದಾಳಿಗಳಲ್ಲಿ ಕೊಲ್ಲಲ್ಪಟ್ಟಿದ್ದಾರೆ.

ಇದನ್ನೂಓದಿ:  ಕಾಲೇಜುಗಳಲ್ಲಿ ಜಾತಿ ತಾರತಮ್ಯ : ಯುಜಿಸಿಯಿಂದ ಮಾಹಿತಿ ಕೋರಿದ ಸುಪ್ರೀಂ ಕೋರ್ಟ್, ಕ್ರಮದ ಭರವಸೆ

ಕಾಲೇಜುಗಳಲ್ಲಿ ಜಾತಿ ತಾರತಮ್ಯ : ಯುಜಿಸಿಯಿಂದ ಮಾಹಿತಿ ಕೋರಿದ ಸುಪ್ರೀಂ ಕೋರ್ಟ್, ಕ್ರಮದ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...