Homeಮುಖಪುಟಜಮ್ಮು ಕಾಶ್ಮೀರ ಸಹಜ ಸ್ಥಿತಿಗೆ ಎಂದ ಅಮಿತ್ ಶಾ; ಇಲ್ಲ ಎಂದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ

ಜಮ್ಮು ಕಾಶ್ಮೀರ ಸಹಜ ಸ್ಥಿತಿಗೆ ಎಂದ ಅಮಿತ್ ಶಾ; ಇಲ್ಲ ಎಂದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ

- Advertisement -
- Advertisement -

ಜಮ್ಮು ಕಾಶ್ಮೀರದಲ್ಲಿ ಸಹಜಸ್ಥಿತಿಯನ್ನು ಸಂಪೂರ್ಣವಾಗಿ ಪುನಃಸ್ಥಾಪನೆಯಾಗಿಲ್ಲ ಎಂದು ಕೇಂದ್ರಾಡಳಿತ ಪ್ರದೇಶದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಶುಕ್ರವಾರದಂದು ಹೇಳಿದ್ದಾರೆ. ಸಂವಿಧಾನದ 370 ನೇ ವಿಧಿಯು ಭಯೋತ್ಪಾದನೆಯ ಬೀಜಗಳನ್ನು ಬಿತ್ತಿತ್ತು, ಆದರೆ ನರೇಂದ್ರ ಮೋದಿ ಸರ್ಕಾರವು ಕಣಿವೆಯಲ್ಲಿ ಭಯೋತ್ಪಾದನೆ ಮತ್ತು ಭಯೋತ್ಪಾದಕ ಪರಿಸರ ವ್ಯವಸ್ಥೆಯನ್ನು ಕೊನೆಗೊಳಿಸಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ ಒಂದು ದಿನದ ನಂತರ ಮುಖ್ಯಮಂತ್ರಿ ಹೇಳಿಕೆ ನೀಡಿದ್ದಾರೆ. ಜಮ್ಮು ಕಾಶ್ಮೀರ ಸಹಜ ಸ್ಥಿತಿಗೆ

“ಗೃಹ ಸಚಿವರ ಹೇಳಿಕೆಯ ಬಗ್ಗೆ ನಾನು ಏನನ್ನೂ ಹೇಳಲು ಬಯಸುವುದಿಲ್ಲ. ಜಮ್ಮು ಕಾಶ್ಮೀರದಲ್ಲಿ ಇನ್ನೂ ಸಹಜತೆಯನ್ನು ಸಂಪೂರ್ಣವಾಗಿ ಪುನಃಸ್ಥಾಪನೆಯಾಗಿಲ್ಲ. ಇದು ಒಂದು ಪ್ರಕ್ರಿಯೆಯಾಗಿದ್ದು, ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂಬುದನ್ನು ನಾವು ಕಾದು ನೋಡಬೇಕಾಗಿದೆ” ಎಂದು ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜಮ್ಮು ಕಾಶ್ಮೀರದ ಹೆಸರನ್ನು “ಕಶ್ಯಪ್” ಎಂದು ಬದಲಾಯಿಸಲಾಗುತ್ತಿದೆ ಎಂಬ ವದಂತಿಗಳನ್ನು ಮುಖ್ಯಮಂತ್ರಿ ತಿರಸ್ಕರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಅಂತಹದ್ದೇನೂ ಇಲ್ಲ. ಕೆಲವು ಮಾಧ್ಯಮ ಸಂಸ್ಥೆಗಳು ಅದನ್ನು ವರದಿ ಮಾಡಿತ್ತಾದರೂ, ನಂತರ ಅವರು ಅದನ್ನು ಸರಿಪಡಿಸಿದ್ದಾರೆ. ಅಂತಹ ಯಾವುದೇ ಪ್ರಸ್ತಾವನೆ ಅಸ್ತಿತ್ವದಲ್ಲಿಲ್ಲ ಮತ್ತು ಜಮ್ಮು ಕಾಶ್ಮೀರ ಸರ್ಕಾರದ ಒಪ್ಪಿಗೆಯಿಲ್ಲದೆ ಇದು ಸಂಭವಿಸುವುದಿಲ್ಲ” ಎಂದು ಹೇಳಿದ್ದಾರೆ.

2024 ರಲ್ಲಿ ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳೊಂದಿಗಿನ ವಿವಿಧ ಎನ್‌ಕೌಂಟರ್‌ಗಳಲ್ಲಿ 45 ಪಾಕಿಸ್ತಾನಿಗಳು ಸೇರಿದಂತೆ ಕನಿಷ್ಠ 75 ಶಂಕಿತ ಉಗ್ರರು ಹತರಾಗಿದ್ದಾರೆ ಎಂದು ವರದಿ ಯಾಗಿದೆ. ಕೊಲ್ಲಲ್ಪಟ್ಟ 75 ಜನರಲ್ಲಿ 45 ಪಾಕಿಸ್ತಾನಿ ಪ್ರಜೆಗಳಾಗಿದ್ದು, ಅಲ್ಲಿನ ವಿವಿಧ ಸಂಘಟನೆಗಳಿಗೆ ಸೇರಿದವರು ಮತ್ತು ಉಳಿದವರು ಸ್ಥಳೀಯ ಬಂಡುಕೋರರು ಎಂದು ವರದಿ ಉಲ್ಲೇಖಿಸಿವೆ.

ಬಾರಾಮುಲ್ಲಾ, ಬಂಡಿಪೋರಾ ಮತ್ತು ಕುಪ್ವಾರದ ಮೂರು ಜಿಲ್ಲೆಗಳನ್ನು ಒಳಗೊಂಡಿರುವ ಉತ್ತರ ಕಾಶ್ಮೀರವು 2024 ರಲ್ಲಿ 17 ಎನ್‌ಕೌಂಟರ್‌ಗಳಿಗೆ ಸಾಕ್ಷಿಯಾಗಿದೆ. ಈ ಎನ್‌ಕೌಂಟರ್‌ಗಳಲ್ಲಿ, 28 ಬಂಡುಕೋರರು, ಐವರು ಭದ್ರತಾ ಸಿಬ್ಬಂದಿ ಮತ್ತು ಇಬ್ಬರು ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ. ಜಮ್ಮು ಕಾಶ್ಮೀರ ಸಹಜ ಸ್ಥಿತಿಗೆ

ಕಳೆದ ಕೆಲವು ವರ್ಷಗಳಲ್ಲಿ ಜಮ್ಮು ಕಾಶ್ಮೀರದಲ್ಲಿ ಹಿಂಸಾಚಾರ ಉಲ್ಬಣಗೊಂಡಿದ್ದು, ಜಮ್ಮು ಪ್ರದೇಶದಲ್ಲಿ 2024 ರಲ್ಲಿ ಭದ್ರತಾ ಪಡೆಗಳೊಂದಿಗೆ ವಿವಿಧ ಎನ್‌ಕೌಂಟರ್‌ಗಳಲ್ಲಿ 14 ಶಂಕಿತ ಉಗ್ರರು ಹತರಾಗಿದ್ದರು. ಜಮ್ಮು ಪ್ರದೇಶದ 10 ಜಿಲ್ಲೆಗಳಲ್ಲಿ 7 ರಲ್ಲಿ ಉಗ್ರಗಾಮಿ ದಾಳಿಗಳು ಮತ್ತು ಎನ್‌ಕೌಂಟರ್‌ಗಳು ನಡೆದಿವೆ.

2024 ರಲ್ಲಿ ನಡೆದ ಉಗ್ರಗಾಮಿ ಹಿಂಸಾಚಾರದಲ್ಲಿ ಒಟ್ಟು 28 ಭದ್ರತಾ ಸಿಬ್ಬಂದಿ ಹತರಾಗಿದ್ದರು ಮತ್ತು ಅವರಲ್ಲಿ 13 ಮಂದಿ ಜಮ್ಮು ಪ್ರದೇಶದಲ್ಲಿ ಎನ್‌ಕೌಂಟರ್ ಮತ್ತು ಉಗ್ರಗಾಮಿ ದಾಳಿಗಳಲ್ಲಿ ಕೊಲ್ಲಲ್ಪಟ್ಟಿದ್ದಾರೆ.

ಇದನ್ನೂಓದಿ:  ಕಾಲೇಜುಗಳಲ್ಲಿ ಜಾತಿ ತಾರತಮ್ಯ : ಯುಜಿಸಿಯಿಂದ ಮಾಹಿತಿ ಕೋರಿದ ಸುಪ್ರೀಂ ಕೋರ್ಟ್, ಕ್ರಮದ ಭರವಸೆ

ಕಾಲೇಜುಗಳಲ್ಲಿ ಜಾತಿ ತಾರತಮ್ಯ : ಯುಜಿಸಿಯಿಂದ ಮಾಹಿತಿ ಕೋರಿದ ಸುಪ್ರೀಂ ಕೋರ್ಟ್, ಕ್ರಮದ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...