Homeಕರ್ನಾಟಕಸೂಕ್ತ ಪರಿಹಾರ ನೀಡದೆ ಯಾರ ಆಸ್ತಿಯನ್ನು ಕಿತ್ತುಕೊಳ್ಳುವಂತಿಲ್ಲ: ಸುಪ್ರೀಂ

ಸೂಕ್ತ ಪರಿಹಾರ ನೀಡದೆ ಯಾರ ಆಸ್ತಿಯನ್ನು ಕಿತ್ತುಕೊಳ್ಳುವಂತಿಲ್ಲ: ಸುಪ್ರೀಂ

- Advertisement -
- Advertisement -

ಹೊಸದಿಲ್ಲಿ: ಆಸ್ತಿಯ ಹಕ್ಕು ಎಂಬುದು ಪ್ರತಿಯೊಬ್ಬ ವ್ಯಕ್ತಿಯ ಮಾನವ ಹಕ್ಕು ಮತ್ತು ಸಾಂವಿಧಾನಿಕ ಹಕ್ಕು ಆಗಿದೆ. ಸೂಕ್ತ ಪರಿಹಾರವನ್ನು ನೀಡದೆ ಯಾವುದೇ ವ್ಯಕ್ತಿಯ ಆಸ್ತಿಯನ್ನು ಕಿತ್ತುಕೊಳ್ಳುವಂತಿಲ್ಲ ಎಂದು ಸುಪ್ರಿಂ ಕೋರ್ಟ್ ಗುರುವಾರ ತನ್ನ ತೀರ್ಪು ನೀಡಿದೆ.

ಕೆಲವು ಸಂದರ್ಭಗಳಲ್ಲಿ ಪರಿಹಾರ ವಿತರಣೆಯಲ್ಲಿ ವಿಳಂಬವಾಗಿದ್ದು, ಆಗ ಪರಿಹಾರದ ಧನದ ಮೊತ್ತವನ್ನು ಇತ್ತೀಚಿನ ಭೂಮಿಯ ಮಾರಾಟದ ಮೊತ್ತಕ್ಕೆ ಬದಲಾಯಿಸಬಹುದು ಎಂದು ನ್ಯಾಯಾಲಯ ಹೇಳಿದೆ.

2003ರಲ್ಲಿ ಬೆಂಗಳೂರು-ಮೈಸೂರು ಮೂಲಭೂತ ಸೌಕರ್ಯ ಕಾರಿಡಾರ್ ಯೋಜನೆಗಾಗಿ ಭೂ ಸ್ವಾಧೀನ ಪ್ರಶ್ನೆ ಕುರಿತು ಕರ್ನಾಟಕ ಉಚ್ಚ ನ್ಯಾಯಾಲಯದ ಏಕ ನ್ಯಾಯಾಧೀಶ ಪೀಠದ ತೀರ್ಪಿನ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ವಿಭಾಗೀಯ ಪೀಠದ ನ.22,2022ರ ಆದೇಶವನ್ನು ಪ್ರಶ್ನಿಸಿದ್ದ ಮೇಲ್ಮನವಿಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ಈ ತೀರ್ಪು ಹೊರಬಿದ್ದಿದೆ.

“ಸಂವಿಧಾನ (44ನೇ ತಿದ್ದುಪಡಿ) ಕಾಯಿದೆ, 1978ರ ಪ್ರಕಾರ ಆಸ್ತಿಯ ಹಕ್ಕು ಎಂಬುದು ಮೂಲಭೂತ ಹಕ್ಕು ಎಂದು ಹೇಳಿದೆ.  ಆದಾಗ್ಯೂ, ಇದು ಸಂವಿಧಾನದ 300-ಎ ವಿಧಿಯ ಅಡಿಯಲ್ಲಿ ಸಾಂವಿಧಾನಿಕ ಹಕ್ಕಾಗಿದೆ.  ಸಂವಿಧಾನದ 300-ಎ ವಿಧಿಯು ಯಾವುದೇ ವ್ಯಕ್ತಿ ತನ್ನ ಆಸ್ತಿಯಿಂದ ವಂಚಿತರಾಗಬಾರದು ಎಂದು ಹೇಳುತ್ತದೆ ಎಂದು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರ ಪೀಠವು ತನ್ನ ತೀರ್ಪಿನಲ್ಲಿ ಹೇಳಿದೆ.

ತಮಗೆ ಪರಿಹಾರ ನೀಡಲಾಗಿಲ್ಲ ಎಂದು ರೈತರು ಸಲ್ಲಿಸಿದ್ದ ಅರ್ಜಿಯ ಕುರಿತು ವಿಶೇಷ ಭೂ ಸ್ವಾಧೀನಾಧಿಕಾರಿಗಳು ಎಪ್ರಿಲ್ 22, 2019ರ ಆದೇಶದ ಮೂಲಕ ಭೂಸ್ವಾಧೀನಕ್ಕೆ ಪೂರ್ವಭಾವಿ ಅಧಿಸೂಚನೆಯ ದಿನಾಂಕವನ್ನು ಜ.29,2003ರಿಂದ 2011ಕ್ಕೆ ಮುಂದೂಡಲು ನಿರ್ಧರಿಸಿದ್ದರು ಮತ್ತು ಆ ವರ್ಷದ ಭೂಮಿಯ ದರಗಳನ್ನು ಆದೇಶಿಸಿದ್ದರು. ಇದರಂತೆ 11 ಎಕರೆ 1.25 ಗುಂಟೆ ಜಮೀನಿಗೆ 32,69,45,789 ರೂ.ಮೌಲ್ಯವನ್ನು ನಿಗದಿಗೊಳಿಸಲಾಗಿತ್ತು.

ಯೋಜನೆಯ ಪ್ರತಿಪಾದಕರು ಇದನ್ನು ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು, ಮೌಲ್ಯ ನಿಗದಿಯನ್ನು ರದ್ದುಗೊಳಿಸಿದ್ದ ಏಕ ನ್ಯಾಯಾಧೀಶ ಪೀಠವು ಕಾನೂನಿಗೆ ಅನುಗುಣವಾಗಿ ಹೊಸದಾಗಿ ಮೌಲ್ಯವನ್ನು ನಿಗದಿಗೊಳಿಸುವಂತೆ ನಿರ್ದೇಶನ ನೀಡಿತ್ತು. ಇದರ ವಿರುದ್ಧ ಮೇಲ್ಮನವಿಯನ್ನು ವಿಭಾಗೀಯ ಪೀಠವು ವಜಾಗೊಳಿಸಿತ್ತು ಮತ್ತು ಭೂ ಮಾಲಿಕರು ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದರು.

2003ರ ಮಾರುಕಟ್ಟೆ ದರದಲ್ಲಿ ಪರಿಹಾರವನ್ನು ಅನುಮತಿಸಿದರೆ ಅದು ನ್ಯಾಯದ ಅಪಹಾಸ್ಯಕ್ಕೆ ಅನುಮತಿ ನೀಡಿದಂತಾಗುತ್ತದೆ ಹಾಗೂ ವಿಧಿ 300-ಎ ಅಡಿ ಸಾಂವಿಧಾನಿಕ ನಿಬಂಧನೆಗಳ ಅಣಕವಾಗುತ್ತದೆ ಎಂದು ತನ್ನ ತೀರ್ಪಿನಲ್ಲಿ ಹೇಳಿರುವ ಸರ್ವೋಚ್ಚ ನ್ಯಾಯಾಲಯವು, ಮೇಲ್ಮನವಿದಾರರಿಗೆ ನೀಡಬೇಕಾದ ಪರಿಹಾರವನ್ನು ಎಪ್ರಿಲ್ 22,2019ರ ಮಾರುಕಟ್ಟೆ ದರದ ಆಧಾರದಲ್ಲಿ ನಿಗದಿಗೊಳಿಸುವಂತೆ ವಿಶೇಷ ಭೂಸ್ವಾಧೀನಾಧಿಕಾರಿಗೆ ಆದೇಶಿಸಿದೆ. ಮೇಲ್ಮನವಿದಾರರು 1894ರ ಭೂಸ್ವಾಧೀನ ಕಾಯ್ದೆಯಡಿ ತಮಗೆ ಲಭ್ಯವಿರುವ ಎಲ್ಲ ಶಾಸನಬದ್ಧ ಪ್ರಯೋಜನಗಳಿಗೂ ಅರ್ಹರಾಗಿರುತ್ತಾರೆ ಎಂದೂ ಅದು ಹೇಳಿದೆ.

ಸಂಚಾರ ನಿಯಂತ್ರಕರಾಗಿ 39 ಲಿಂಗತ್ವ ಅಲ್ಪಸಂಖ್ಯಾತರ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...