Homeಕರ್ನಾಟಕಸೂಕ್ತ ಪರಿಹಾರ ನೀಡದೆ ಯಾರ ಆಸ್ತಿಯನ್ನು ಕಿತ್ತುಕೊಳ್ಳುವಂತಿಲ್ಲ: ಸುಪ್ರೀಂ

ಸೂಕ್ತ ಪರಿಹಾರ ನೀಡದೆ ಯಾರ ಆಸ್ತಿಯನ್ನು ಕಿತ್ತುಕೊಳ್ಳುವಂತಿಲ್ಲ: ಸುಪ್ರೀಂ

- Advertisement -
- Advertisement -

ಹೊಸದಿಲ್ಲಿ: ಆಸ್ತಿಯ ಹಕ್ಕು ಎಂಬುದು ಪ್ರತಿಯೊಬ್ಬ ವ್ಯಕ್ತಿಯ ಮಾನವ ಹಕ್ಕು ಮತ್ತು ಸಾಂವಿಧಾನಿಕ ಹಕ್ಕು ಆಗಿದೆ. ಸೂಕ್ತ ಪರಿಹಾರವನ್ನು ನೀಡದೆ ಯಾವುದೇ ವ್ಯಕ್ತಿಯ ಆಸ್ತಿಯನ್ನು ಕಿತ್ತುಕೊಳ್ಳುವಂತಿಲ್ಲ ಎಂದು ಸುಪ್ರಿಂ ಕೋರ್ಟ್ ಗುರುವಾರ ತನ್ನ ತೀರ್ಪು ನೀಡಿದೆ.

ಕೆಲವು ಸಂದರ್ಭಗಳಲ್ಲಿ ಪರಿಹಾರ ವಿತರಣೆಯಲ್ಲಿ ವಿಳಂಬವಾಗಿದ್ದು, ಆಗ ಪರಿಹಾರದ ಧನದ ಮೊತ್ತವನ್ನು ಇತ್ತೀಚಿನ ಭೂಮಿಯ ಮಾರಾಟದ ಮೊತ್ತಕ್ಕೆ ಬದಲಾಯಿಸಬಹುದು ಎಂದು ನ್ಯಾಯಾಲಯ ಹೇಳಿದೆ.

2003ರಲ್ಲಿ ಬೆಂಗಳೂರು-ಮೈಸೂರು ಮೂಲಭೂತ ಸೌಕರ್ಯ ಕಾರಿಡಾರ್ ಯೋಜನೆಗಾಗಿ ಭೂ ಸ್ವಾಧೀನ ಪ್ರಶ್ನೆ ಕುರಿತು ಕರ್ನಾಟಕ ಉಚ್ಚ ನ್ಯಾಯಾಲಯದ ಏಕ ನ್ಯಾಯಾಧೀಶ ಪೀಠದ ತೀರ್ಪಿನ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ವಿಭಾಗೀಯ ಪೀಠದ ನ.22,2022ರ ಆದೇಶವನ್ನು ಪ್ರಶ್ನಿಸಿದ್ದ ಮೇಲ್ಮನವಿಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ಈ ತೀರ್ಪು ಹೊರಬಿದ್ದಿದೆ.

“ಸಂವಿಧಾನ (44ನೇ ತಿದ್ದುಪಡಿ) ಕಾಯಿದೆ, 1978ರ ಪ್ರಕಾರ ಆಸ್ತಿಯ ಹಕ್ಕು ಎಂಬುದು ಮೂಲಭೂತ ಹಕ್ಕು ಎಂದು ಹೇಳಿದೆ.  ಆದಾಗ್ಯೂ, ಇದು ಸಂವಿಧಾನದ 300-ಎ ವಿಧಿಯ ಅಡಿಯಲ್ಲಿ ಸಾಂವಿಧಾನಿಕ ಹಕ್ಕಾಗಿದೆ.  ಸಂವಿಧಾನದ 300-ಎ ವಿಧಿಯು ಯಾವುದೇ ವ್ಯಕ್ತಿ ತನ್ನ ಆಸ್ತಿಯಿಂದ ವಂಚಿತರಾಗಬಾರದು ಎಂದು ಹೇಳುತ್ತದೆ ಎಂದು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರ ಪೀಠವು ತನ್ನ ತೀರ್ಪಿನಲ್ಲಿ ಹೇಳಿದೆ.

ತಮಗೆ ಪರಿಹಾರ ನೀಡಲಾಗಿಲ್ಲ ಎಂದು ರೈತರು ಸಲ್ಲಿಸಿದ್ದ ಅರ್ಜಿಯ ಕುರಿತು ವಿಶೇಷ ಭೂ ಸ್ವಾಧೀನಾಧಿಕಾರಿಗಳು ಎಪ್ರಿಲ್ 22, 2019ರ ಆದೇಶದ ಮೂಲಕ ಭೂಸ್ವಾಧೀನಕ್ಕೆ ಪೂರ್ವಭಾವಿ ಅಧಿಸೂಚನೆಯ ದಿನಾಂಕವನ್ನು ಜ.29,2003ರಿಂದ 2011ಕ್ಕೆ ಮುಂದೂಡಲು ನಿರ್ಧರಿಸಿದ್ದರು ಮತ್ತು ಆ ವರ್ಷದ ಭೂಮಿಯ ದರಗಳನ್ನು ಆದೇಶಿಸಿದ್ದರು. ಇದರಂತೆ 11 ಎಕರೆ 1.25 ಗುಂಟೆ ಜಮೀನಿಗೆ 32,69,45,789 ರೂ.ಮೌಲ್ಯವನ್ನು ನಿಗದಿಗೊಳಿಸಲಾಗಿತ್ತು.

ಯೋಜನೆಯ ಪ್ರತಿಪಾದಕರು ಇದನ್ನು ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು, ಮೌಲ್ಯ ನಿಗದಿಯನ್ನು ರದ್ದುಗೊಳಿಸಿದ್ದ ಏಕ ನ್ಯಾಯಾಧೀಶ ಪೀಠವು ಕಾನೂನಿಗೆ ಅನುಗುಣವಾಗಿ ಹೊಸದಾಗಿ ಮೌಲ್ಯವನ್ನು ನಿಗದಿಗೊಳಿಸುವಂತೆ ನಿರ್ದೇಶನ ನೀಡಿತ್ತು. ಇದರ ವಿರುದ್ಧ ಮೇಲ್ಮನವಿಯನ್ನು ವಿಭಾಗೀಯ ಪೀಠವು ವಜಾಗೊಳಿಸಿತ್ತು ಮತ್ತು ಭೂ ಮಾಲಿಕರು ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದರು.

2003ರ ಮಾರುಕಟ್ಟೆ ದರದಲ್ಲಿ ಪರಿಹಾರವನ್ನು ಅನುಮತಿಸಿದರೆ ಅದು ನ್ಯಾಯದ ಅಪಹಾಸ್ಯಕ್ಕೆ ಅನುಮತಿ ನೀಡಿದಂತಾಗುತ್ತದೆ ಹಾಗೂ ವಿಧಿ 300-ಎ ಅಡಿ ಸಾಂವಿಧಾನಿಕ ನಿಬಂಧನೆಗಳ ಅಣಕವಾಗುತ್ತದೆ ಎಂದು ತನ್ನ ತೀರ್ಪಿನಲ್ಲಿ ಹೇಳಿರುವ ಸರ್ವೋಚ್ಚ ನ್ಯಾಯಾಲಯವು, ಮೇಲ್ಮನವಿದಾರರಿಗೆ ನೀಡಬೇಕಾದ ಪರಿಹಾರವನ್ನು ಎಪ್ರಿಲ್ 22,2019ರ ಮಾರುಕಟ್ಟೆ ದರದ ಆಧಾರದಲ್ಲಿ ನಿಗದಿಗೊಳಿಸುವಂತೆ ವಿಶೇಷ ಭೂಸ್ವಾಧೀನಾಧಿಕಾರಿಗೆ ಆದೇಶಿಸಿದೆ. ಮೇಲ್ಮನವಿದಾರರು 1894ರ ಭೂಸ್ವಾಧೀನ ಕಾಯ್ದೆಯಡಿ ತಮಗೆ ಲಭ್ಯವಿರುವ ಎಲ್ಲ ಶಾಸನಬದ್ಧ ಪ್ರಯೋಜನಗಳಿಗೂ ಅರ್ಹರಾಗಿರುತ್ತಾರೆ ಎಂದೂ ಅದು ಹೇಳಿದೆ.

ಸಂಚಾರ ನಿಯಂತ್ರಕರಾಗಿ 39 ಲಿಂಗತ್ವ ಅಲ್ಪಸಂಖ್ಯಾತರ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...