Homeಕರ್ನಾಟಕಬಿಜೆಪಿಯತ್ತ ಕೆ.ಎನ್. ರಾಜಣ್ಣ ಚಿತ್ತ?

ಬಿಜೆಪಿಯತ್ತ ಕೆ.ಎನ್. ರಾಜಣ್ಣ ಚಿತ್ತ?

- Advertisement -
- Advertisement -

| ಕೆ.ಈ.ಸಿದ್ದಯ್ಯ |

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಲೋಪದೋಷಗಳನ್ನು ಕಟುವಾಗಿ ಟೀಕಿಸಿದರೂ ಕೆ.ಎನ್.ರಾಜಣ್ಣ ಮಾತ್ರ ಬಿಜೆಪಿ ಮುಖಂಡರ ಜೊತೆ ಕುಚುಕು ಕುಚುಕು ಗೆಳೆಯರಾಗಿದ್ದಾರೆ. ಒಂದು ಮೂಲದ ಪ್ರಕಾರ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತುಮಕೂರಿನ ಕೆ.ಎನ್.ಆರ್ ಮನೆಗೆ ಹಲವು ಬಾರಿ ಭೇಟಿ ನೀಡಿ ಚರ್ಚೆ ಮಾಡಿಯೂ ಹೋಗಿದ್ದಾರೆ.

ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಬೇಲಿ ಮೇಲೆ ಕೂತಿದ್ದಾರೆ. ಯಾವುದೇ ಕ್ಷಣದಲ್ಲಿ ಹೇಗಾದರೂ ಹೊರಳಬಹುದು ಎಂಬುದು ಅವರ ಲೆಕ್ಕಾಚಾರ. ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದ ನಂತರ ಕೆ.ಎನ್.ರಾಜಣ್ಣ ನಡೆ ನಿಗೂಢವಾಗಿದೆ. ಒಮ್ಮೆ ‘ಕಮಲಮುಖಿ’ಯೂ ಮತ್ತೊಮ್ಮೆ ‘ಕೈ’ಮುಗಿಯುವುದು ಮಾಡುತ್ತಲೇ ಬರುತ್ತಿದ್ದಾರೆ.

ಹಿಂದೆ ಜೆಡಿಎಸ್‍ನಲ್ಲಿ ವಿಧಾನಪರಿಷತ್ ಸದಸ್ಯರಾಗಿದ್ದ ಡಾ.ಎಂ.ಆರ್.ಹುಲಿನಾಯ್ಕರ್ ತಮ್ಮ ಶ್ರೀದೇವಿ ಮೆಡಿಕಲ್ ಕಾಲೇಜಿಗೆ ಅನುಮತಿ ಪಡೆಯಲು ಬಿಜೆಪಿ ಸೇರ್ಪಡೆ ಯಾಗಿದ್ದರು. ಈಗ ಕೆ.ಎನ್.ರಾಜಣ್ಣ ಕೂಡ ತಮಗೆ ಎದುರಾಗಿರುವ ಅಡ್ಡಿಆತಂಕಗಳ ನಿವಾರಣೆಗೆ ಬಿಜೆಪಿ ಸೇರಿದರೆ ಅಚ್ಚರಿ ಇಲ್ಲ. ಇದಕ್ಕೆ ಇತ್ತೀಚಿನ ಬೆಳವಣಿಗೆಗಳು ಮತ್ತು ಅವರ ನಡೆಗಳೇ ಸಾಕ್ಷಿ. ಲೋಕಸಭಾ ಚುನಾವಣೆಯ ಸಮಯದಲ್ಲಿ ಜಿ.ಎಸ್.ಬಸವರಾಜು ಜೊತೆ ಫೋಟೋ ತೆಗೆಸಿಕೊಂಡು ತನ್ನ ಕಡುವೈರಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರಿಗೆ ಭಿನ್ನ ಸಂದೇಶ ರವಾನಿಸಿದ್ದರು. ಬಳಿಕ ಯಡಿಯೂರಪ್ಪರ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲೂ ಕೆ.ಎನ್.ಆರ್ ಹಾಜರಿದ್ದರು. ಮತ್ತೊಂದು ಕಾರ್ಯಕ್ರಮದಲ್ಲೂ ಬಿ.ಎಸ್.ಯಡಿಯೂರಪ್ಪ ಜೊತೆ ವೇದಿಕೆ ಹಂಚಿಕೊಂಡರು. ಇದೇ ಕಾರಣಕ್ಕೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದಿಂದ ರಾಜಣ್ಣ ಅವರನ್ನು ಕೆಳಗಿಳಿಸುವ ಪ್ರಯತ್ನವನ್ನು ಯಡಿಯೂರಪ್ಪ ಮಾಡಲಿಲ್ಲ..

ಈಗ ಇಬ್ಬರು ಮಾಜಿ ಕಬಡ್ಡಿ ಪಟುಗಳು ಒಂದಾಗಿ ಪತ್ರಿಕಾಗೋಷ್ಟಿ ನಡೆಸಿದ್ದಾರೆ. ಅದು ಸಹಕಾರಿ ಕಾರ್ಯಕ್ರಮ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಬರುತ್ತಿದ್ದಾರೆ. ಹಾಗಾದರೆ ಸೊಗಡು ಶಿವಣ್ಣ ಪತ್ರಿಕಾಗೋಷ್ಟಿಯಲ್ಲಿ ಯಾಕೆ? ಎಂಬ ಪತ್ರಕರ್ತರ ಪ್ರಶ್ನೆಗೆ ಶಿವಣ್ಣ ಸಹಕಾರಿ ಅಂದ್ರು. ಅದ್ಯಾವಾಗಿನಿಂದ ಸೊಗಡು ಶಿವಣ್ಣ ‘ಸಹಕಾರಿ’ ಆದರೋ?

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಲೋಪದೋಷಗಳನ್ನು ಕಟುವಾಗಿ ಟೀಕಿಸಿದರೂ ಕೆ.ಎನ್.ರಾಜಣ್ಣ ಮಾತ್ರ ಬಿಜೆಪಿ ಮುಖಂಡರ ಜೊತೆ ಕುಚುಕು ಕುಚುಕು ಗೆಳೆಯರಾಗಿದ್ದಾರೆ. ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ಯಡಿಯೂರಪ್ಪ ವಿಫಲರಾಗಿದ್ದರೂ ಅದರ ಬಗ್ಗೆ ರಾಜಣ್ಣ ಚಕಾರ ಎತ್ತಲಿಲ್ಲ. ಕಾಂಗ್ರೆಸ್ ತಾನು ಯಾರನ್ನು ವಿರೋಧಿಸುತ್ತದೆಯೋ ಆ ಪಕ್ಷದೊಂದಿಗೆ ಕೆಎನ್.ಆರ್ ಹೆಚ್ಚು ಸಖ್ಯ ಬೆಳೆಸಿದರೂ ಕ್ರಮ ಕೈಗೊಳ್ಳಲಿಲ್ಲ. ಒಂದು ಮೂಲದ ಪ್ರಕಾರ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತುಮಕೂರಿನ ಕೆ.ಎನ್.ಆರ್ ಮನೆಗೆ ಹಲವು ಬಾರಿ ಭೇಟಿ ನೀಡಿ ಚರ್ಚೆ ಮಾಡಿಯೂ ಹೋಗಿದ್ದಾರೆ.

ಹಾಗೆಯೇ ತನ್ನ ಹಳೆಯ ಕಬಡ್ಡಿ ಸ್ನೇಹಿತ ಸೊಗಡು ಶಿವಣ್ಣ ಜೊತೆಗೆ ಹೆಚ್ಚು ನಿಕಟ ಸಂಬಂಧವಿಟ್ಟುಕೊಂಡಿದ್ದಾರೆ. ರಾಜಣ್ಣ ಅವರಿಗೂ ಕಾಂಗ್ರೆಸ್‍ನಲ್ಲಿ ಸಚಿವ ಆಗಬೇಕೆಂಬ ಆಸೆ ಈಡೇರಲಿಲ್ಲ. ಆ ಕಾರಣವನ್ನಿಟ್ಟುಕೊಂಡೇ ಕೆ.ಎನ್.ಆರ್. ಬಿಜೆಪಿಗೆ ಜಿಗಿಯಲು ಸಿದ್ದತೆ ಮಾಡಿಕೊಂಡಿದ್ದಾರೆ. ಬಿಜೆಪಿಗೂ ರಾಜಣ್ಣ ಬೇಕು. ತುಮಕೂರು ಜಿಲ್ಲೆಯ ಕೆಲವು ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳ ಕೊರತೆ ಬಿಜೆಪಿಗೂ ಇದೆ. ಕೆ.ಎನ್.ಆರ್ ಬಿಜೆಪಿಗೆ ಬಂದರೆ ಮಧುಗಿರಿಯ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶವಾಗುತ್ತದೆ. ಇದು ರಾಜಣ್ಣನವರ ನಿರೀಕ್ಷೆಯೂ ಆಗಿದೆ. ಜಿಲ್ಲೆಯ ಕಾಂಗ್ರೆಸ್‍ನಲ್ಲಿ ಯಾರೂ ಕೂಡ ರಾಜಣ್ಣ ಬೆಂಬಲಕ್ಕೆ ನಿಲ್ಲುವುದಿಲ್ಲ. ಡಾ.ಪರಮೇಶ್ವರ್, ಟಿ.ಬಿ.ಜಯಚಂದ್ರ ಹೀಗೆ ಯಾರನ್ನೂ ಅವರು ನಂಬುತ್ತಿಲ್ಲ. ಮಾಜಿ ಸಂಸದ ಮುದ್ದಹನುಮೇಗೌಡರು ಕೆಎನ್‍ಆರ್ ಪರ ನಿಂತರೂ ಯಾವುದೇ ಹುದ್ದೆಯನ್ನು ಕೊಡಿಸುವಷ್ಟು ಶಕ್ತರಲ್ಲ.

ಈ ಎಲ್ಲಾ ಲೆಕ್ಕಾಚಾರಗಳನ್ನು ಇಟ್ಟುಕೊಂಡಿರುವ ಕೆಎನ್‍ಆರ್ ‘ಸಹಕಾರಿ’ಯಲ್ಲದ ಸಹವರ್ತಿಯ ಜೊತೆ ಕೈಜೋಡಿಸಿದ್ದಾರೆ. ಸೊಗಡು ಶಿವಣ್ಣ ಮತ್ತು ರಾಜಣ್ಣ ಜೋಡಿಯಾದರೆ ಅಪ್ಪ ಮಗನನ್ನು ಬಗ್ಗುಬಡಿಯಬಹುದು. ಜಿ.ಎಸ್.ಬಸವರಾಜು ಮತ್ತು ಜ್ಯೋತಿಗಣೇಶ್ ಅವರನ್ನು ಬಿಟ್ಟರೆ ಅವರೊಂದಿಗೆ ಪಕ್ಷದ ಕಾರ್ಯಕರ್ತರ ಬೆಂಬಲ ಅಷ್ಟಾಗಿ ಇಲ್ಲ. ಜೊತೆಗೆ ಸೊಗಡು ಶಿವಣ್ಣ ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಯೂ ಅಲ್ಲ. ಬಸವರಾಜು ಅಷ್ಟು ಸೊಗಡು ಅಪಾಯಕಾರಿಯೂ ಅಲ್ಲ ಎಂಬುದನ್ನು ರಾಜಣ್ಣ ಗಮನದಲ್ಲಿಟ್ಟುಕೊಂಡಿದ್ದು ಬಿಜೆಪಿ ಸೇರಲು ಮುಹೂರ್ತಕ್ಕಾಗಿ ಕಾಯುತ್ತಿದ್ದಾರೆ.

ರಾಜಣ್ಣ ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರೂ ಹೌದು. ಸರ್ಕಾರದ ಜೊತೆ ಹೊಂದಾಣಿಕೆ ಮಾಡಿಕೊಂಡು ಹೋಗಲೇಬೇಕು. ಇಲ್ಲದಿದ್ದರೆ ಕಿರಿಕಿರಿ ಅನುಭವಿಸುವುದು ತಪ್ಪುವುದಿಲ್ಲ. ಸರ್ಕಾರ ದಿಢೀರ್ ಎಂದು ಯಾವುದಾದರೂ ಕ್ರಮ ಕೈಗೊಳ್ಳಬಹುದು. ಹೀಗಾಗಿ ರಾಜಣ್ಣ ಅಲ್ಲಿಗೆ ಹೋಗುವುದಿಲ್ಲ ಎಂದು ಹೇಗೆ ಹೇಳುವುದು ಎನ್ನುತ್ತವೆ ಜಿಲ್ಲೆಯ ಕಾಂಗ್ರೆಸ್ ಮೂಲಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...