Homeಕರ್ನಾಟಕಕ್ಯಾಮೆರಾ ಮುಂದೆಯೆ ಯುವಕನಿಗೆ ಜನಾಂಗೀಯ ನಿಂದನೆ ಮಾಡಿದ ರಿಪಬ್ಲಿಕ್ ಕನ್ನಡ ವರದಿಗಾರ

ಕ್ಯಾಮೆರಾ ಮುಂದೆಯೆ ಯುವಕನಿಗೆ ಜನಾಂಗೀಯ ನಿಂದನೆ ಮಾಡಿದ ರಿಪಬ್ಲಿಕ್ ಕನ್ನಡ ವರದಿಗಾರ

- Advertisement -
- Advertisement -

ಹೊಸ ವರ್ಷಾಚರಣೆ ವೇಳೆ ಅನೇಕ ಕನ್ನಡ ಟಿವಿ ಚಾನೆಲ್‌ಗಳು ಮಹಿಳೆಯರನ್ನು ಕೆಟ್ಟದಾಗಿ ಬಿಂಬಿಸಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ. ಈ ನಡುವೆ ರಿಪಬ್ಲಿಕ್ ಕನ್ನಡ ಟಿವಿ ವರದಿಗಾರ ಕ್ಯಾಮೆರಾ ಮುಂದೆಯೆ ಯುವಕರೊಬ್ಬರಿಗೆ ಜನಾಂಗಿಯ ನಿಂದನೆ ಮಾಡಿದ್ದಾರೆ.

ಹೊಸವರ್ಷದ ಆಚರಣೆ ವೇಳೆ ಕನ್ನಡದ ಪ್ರಮುಖ ಸುದ್ದಿ ವಾಹಿನಿಗಳು ಬೆಂಗಳೂರಿನ ಎಂಜಿ ರಸ್ತೆ, ಕೋರಮಂಗಲ ಮತ್ತು ಇಂದಿರಾನಗರದ ಪಬ್‌ಗಳು ಮತ್ತು ಬಾರ್‌ಗಳಿಂದ ಯುವಕ, ಯುವತಿಯರು ನಿರ್ಗಮಿಸುವ ವೀಡಿಯೊಗಳನ್ನು ಪ್ರಸಾರ ಮಾಡಿತ್ತು. ಜೊತೆಗೆ ಅದಕ್ಕೆ ಕೆಟ್ಟದಾಗಿ ಶೀರ್ಷಿಕೆ ಹಾಕಿ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲೂ ಪ್ರಸಾರ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಮಧ್ಯೆ, ರಿಪಬ್ಲಿಕ್ ಕನ್ನಡ ಟಿವಿ ವರದಿಗಾರ ಅಶ್ವ ದಿವಿತ್ ನಗರದ ಚರ್ಚ್‌ ಸ್ಟ್ರೀಟ್‌ನಲ್ಲಿ ಸೇರಿದ್ದ ಜನರೊಂದಿಗೆ ಹೊಸ ವರ್ಷಾಚರಣೆಯ ಅಭಿಪ್ರಾಯಗಳನ್ನು ಕೇಳುತ್ತಿದ್ದರು. ಈ ವೇಳೆ ಯುವಕನೊಬ್ಬ, ಸಿನಿಮಾ ಡೈಲಾಗ್‌ ಒಂದನ್ನು ಹೇಳುತ್ತಾ, ಏನ್ರಿ ಮೀಡಿಯಾ ಎಂದು ರಿಪಬ್ಲಿಕ್ ಕನ್ನಡ ಟಿವಿ ಮೈಕ್ ಮುಂದೆ ಕೇಳಿದ್ದಾರೆ. ಈ ವೇಳೆ ಅಸಮಾಧಾನದಿಂದ ಮಾತನಾಡಿದ ವರದಿಗಾರ ಅಶ್ವ ದಿವಿತ್, ”ಹೋಗೋ ಕರಿಯ ಹೋಗ್…” ಎಂದು ಕ್ಯಾಮೆರಾ ಮುಂದೆಯೆ ಎರೆಡೆರೆದು ಭಾರಿ ಹೇಳಿ, ಯುವಕನ ಜನಾಂಗೀಯ ನಿಂದನೆ ಮಾಡಿದ್ದಾರೆ.

ವಿಡಿಯೊವನ್ನು ರಿಪಬ್ಲಿಕ್ ಕನ್ನಡ ಟಿವಿ ತನ್ನ ಯೂಟ್ಯೂಬ್‌ನಲ್ಲಿ ಹಾಗೆ ಪ್ರಸಾರ ಮಾಡಿದ್ದು, ಅದನ್ನು ಹಾಗೆಯೆ ಉಳಿಸಿಕೊಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಆಕ್ರೋಶ ಕೂಡಾ ವ್ಯಕ್ತವಾಗಿದೆ.

ಗೌಡ್ರು ಸರ್ಕಾರ ಎಂಬ ಟ್ವಿಟರ್ ಖಾತೆಯೊಂದು, “ಏನ್ರಿ ಮೀಡಿಯಾ ಅಂದಿದ್ದಕ್ಕೆ ಅಷ್ಟೊಂದು ಕೋಪ ಬಂತಾ? ಪ್ರತಿಷ್ಠಿತ ಸಂಸ್ಥೆಯ ನ್ಯೂಸ್ ರಿಪೋರ್ಟರ್ ಒಬ್ಬ ಯುವಕನಿಗೆ ನೇರವಾಗಿ ಹೋಗೋ ಕರಿಯಾ ಎಂದು ಜನಾಂಗೀಯ ನಿಂದನೆ ಮಾಡುತ್ತಿದ್ದಾನೆ, ಹಾಗಾದರೆ ಅವನ ಮೇಲೆ ಕ್ರಮ ಕೈಗೊಳ್ಳಬಾರದೇಕೆ?” ಎಂದು ಪ್ರಶ್ನಿಸಿದ್ದಾರೆ.

ಇಷ್ಟೆ ಅಲ್ಲದೆ, ಕನ್ನಡದ ಇತರ ಟಿವಿ ಮಾಧ್ಯಮಗಳು, ಹೊಸ ವರ್ಷಾಚರಣೆ ಮಾಡುತ್ತಿದ್ದ ಯುವತಿಯರ ದೇಹದ ಮೇಲೆ ಕ್ಯಾಮರಾವನ್ನು ಜೂಮ್ ಮಾಡಿ, ಅದರಕ್ಕೆ ಅಶ್ಲೀಲ ಶೀರ್ಷಿಕೆಯನ್ನು ಹಾಕಿ ಪ್ರಸಾರ ಮಾಡಿವೆ. ಈ ಬಗ್ಗೆ ಸರ್ಕಾರ ಯಾವುದೆ ಪ್ರತಿಕ್ರಿಯೆ ನೀಡಿಲ್ಲ, ದೂರು ಕೂಡಾ ದಾಖಲಾಗಿಲ್ಲ. ಅಲ್ಲದೆ, ಮಹಿಳಾ ಆಯೋಗ ಮತ್ತು ಮಾಧ್ಯಮಗಳನ್ನು ಮೇಲ್ವಿಚಾರಣೆ ಮಾಡುವ ಯಾವುದೆ ಪ್ರಾಧಿಕಾರಗಳು ಪ್ರತಿಕ್ರಿಯೆ ನೀಡಿಲ್ಲ.

ಕನ್ನಡ ಮಾಧ್ಯಮಗಳ ಈ ಕೃತ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಕಾನೂನು ತಜ್ಞರು, “ಸಾರ್ವಜನಿಕ ಪ್ರದೇಶದಲ್ಲಿ ಚಿತ್ರೀಕರಿಸಲು ಯಾವುದೇ ಕಾನೂನು ನಿರ್ಬಂಧವಿಲ್ಲದಿದ್ದರೂ, ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲದೆ ಖಾಸಗಿ ವ್ಯಕ್ತಿಯ ಮಾನಹಾನಿಕರ ವಿಷಯವನ್ನು ಪ್ರಸಾರ ಮಾಡಿದರೆ ಕಾನೂನು ವಿರೋಧಿಯಾಗಿದೆ” ಎಂದು ಹೇಳಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 79, ಮಹಿಳೆಯ ಗೌಪ್ಯತೆಯ ಉಲ್ಲಂಘನೆ ಮಾಡಿ ಅವಮಾನಿಸಿದರೆ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು ದಂಡದ ಕಠಿಣ ಶಿಕ್ಷೆಯಿದೆ.

ಇದನ್ನೂಓದಿ:  ನಾಯಿ ಮೇಲೆ ಕಸ ಎಸೆದ ಆರೋಪ: ದಲಿತ ಮಹಿಳೆ, ಪುತ್ರಿಯನ್ನು ರಸ್ತೆಯಲ್ಲಿ ದರದರ ಎಳೆದಾಡಿ, ಹಲ್ಲೆ

ನಾಯಿ ಮೇಲೆ ಕಸ ಎಸೆದ ಆರೋಪ: ದಲಿತ ಮಹಿಳೆ, ಪುತ್ರಿಯನ್ನು ರಸ್ತೆಯಲ್ಲಿ ದರದರ ಎಳೆದಾಡಿ, ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...