Homeಚಳವಳಿಲಕ್ಷಾಂತರ ರೈತರ ಜೀವಕ್ಕಿಂತ ನನ್ನ ಜೀವ ಮುಖ್ಯವಲ್ಲ - ರೈತ ನಾಯಕ ದಲ್ಲೆವಾಲ್

ಲಕ್ಷಾಂತರ ರೈತರ ಜೀವಕ್ಕಿಂತ ನನ್ನ ಜೀವ ಮುಖ್ಯವಲ್ಲ – ರೈತ ನಾಯಕ ದಲ್ಲೆವಾಲ್

- Advertisement -
- Advertisement -

ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಪಂಜಾಬ್-ಹರಿಯಾಣದ ಖಾನೌರಿ ಗಡಿಯಲ್ಲಿ ಕಿಸಾನ್ ಮಹಾಪಂಚಾಯತ್ ಅನ್ನು ಉದ್ದೇಶಿಸಿ ಶನಿವಾರ ಮಾತನಾಡಿದ್ದು, ಈಗಾಗಲೇ ಏಳು ಲಕ್ಷಕ್ಕೂ ಹೆಚ್ಚು ರೈತರು ಕೃಷಿ ವಲಯದಲ್ಲಿನ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಸಂಕಷ್ಟದಲ್ಲಿ ತತ್ತರಿಸುತ್ತಿರುವ ಲಕ್ಷಾಂತರ ಭಾರತೀಯ ರೈತರ ಜೀವಕ್ಕಿಂತ ನನ್ನ ಜೀವ ಮುಖ್ಯವಲ್ಲ ಎಂದು ಹೇಳಿದ್ದಾರೆ. ಲಕ್ಷಾಂತರ ರೈತರ

ಆಮರಣಾಂತ ಉಪವಾಸ ಸತ್ಯಾಗ್ರಹದ 40ನೇ ದಿನದಂದು ರೈತರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ದಲ್ಲೆವಾಲ್ ಅವರು, ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಅಡಿಯಲ್ಲಿ ರೈತರು ಖಾನೌರಿ ಗಡಿಯಲ್ಲಿರುವ ಪ್ರತಿ ಹಳ್ಳಿಯಿಂದ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ದೆಹಲಿಗೆ ಮೆರವಣಿಗೆ ಹೊರಟಿದ್ದ ರೈತರನ್ನು ಹರಿಯಾಣ ಪೊಲೀಸರು ತಡೆದ ನಂತರ ಕಳೆದ ವರ್ಷ ಫೆಬ್ರವರಿ 13 ರಿಂದ ಅವರು ಅಲ್ಲಿ ತಂಗಿದ್ದಾರೆ.

“ನೀವು ಇಂದು ಈ ಮಟ್ಟಿನ ಸಂಖ್ಯೆಯಲ್ಲಿ ಬಂದಿದ್ದೀರಿ, ಅದೇ ರೀತಿ ಈ ಹೋರಾಟವನ್ನು ಬಲಪಡಿಸಲು ಪ್ರತಿ ಹಳ್ಳಿಯಿಂದ ಒಂದು ಟ್ರಾಲಿ ಖಾನೌರಿಗೆ ತಲುಪಬೇಕು” ಎಂದು ದಲ್ಲೆವಾಲ್ ಹೇಳಿದ್ದಾರೆ. ತಮ್ಮ ಉಪವಾಸದ ಬಗ್ಗೆ ಮಾತನಾಡಿದ ಅವರು, ದುರ್ಬಲ ದಲ್ಲೆವಾಲ್‌ನನ್ನು ಆಸ್ಪತ್ರೆಗೆ ಕರೆದೊಯ್ಯಲು ಪೊಲೀಸರು ಹಲವಾರು ಪ್ರಯತ್ನಗಳನ್ನು ಮಾಡಿದ್ದಾರೆ, ಆದರೆ ಸ್ವಯಂಸೇವಕರು ಅದನ್ನು ವಿಫಲಗೊಳಿಸಿದರು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪೊಲೀಸರು ನಮ್ಮನ್ನು ಇಲ್ಲಿಂದ ಹೊರಹಾಕಲಿದ್ದಾರೆ ಎಂದು ನಮಗೆ ಮಾಹಿತಿ ಸಿಕ್ಕಿದ ಅದೇ ರಾತ್ರಿ ಹಲವಾರು ಯುವಕರು ಪಂಜಾಬ್ ಮತ್ತು ಹರಿಯಾಣದಿಂದ ಖಾನೌರಿಗೆ ತಲುಪಿದ, ಹೋರಾಟದ ಉಸ್ತುವಾರಿ ವಹಿಸಿಕೊಂಡರು” ಎಂದು ದಲ್ಲೆವಾಲ್ ಹೇಳಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾದ (ರಾಜಕೀಯೇತರ) ಸಂಚಾಲಕರಾಗಿರುವ ದಲ್ಲೆವಾಲ್ ಅವರು ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಕಾತರಿ ನೀಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟು ಆಮರಣಾಂತ ಉಪವಾಸ ಕೈಗೊಂಡಿದ್ದಾರೆ. ಜೊತೆಗೆ ಯಾವುದೇ ವೈದ್ಯಕೀಯ ನೆರವು ಪಡೆಯಲು ನಿರಾಕರಿಸಿದ್ದಾರೆ, ಹಾಗಾಗಿ ಅವರ ಆರೋಗ್ಯ ಹದಗೆಡುತ್ತಿದೆ ಎಂದು ವರದಿಯಾಗಿದೆ.

ಹದಗೆಟ್ಟಿರುವ ಅವರ ಆರೋಗ್ಯವನ್ನು ಪರಿಗಣಿಸಿ ಆಸ್ಪತ್ರೆಗೆ ಸ್ಥಳಾಂತರಿಸದ ಪಂಜಾಬ್ ಸರ್ಕಾರವನ್ನು ಸುಪ್ರೀಂ ಕೋರ್ಟ್ ಇತ್ತೀಚೆಗೆ ತರಾಟೆಗೆ ತೆಗೆದುಕೊಂಡಿತು ಮತ್ತು ಅವರಿಗೆ ತಕ್ಷಣ ವೈದ್ಯಕೀಯ ನೆರವು ನೀಡುವಂತೆ ಸೂಚಿಸಿದೆ. ಆದಾಗ್ಯೂ, ಈ ಆದೇಶವು ದಲ್ಲೆವಾಲ್ ಅವರ ಉಪವಾಸವನ್ನು ಮುರಿಯುವ ಉದ್ದೇಶವನ್ನು ಹೊಂದಿಲ್ಲ ಎಂದು ಸುಪ್ರೀಂಕೋರ್ಟ್‌ ಸ್ಪಷ್ಟಪಡಿಸಿದೆ. ಲಕ್ಷಾಂತರ ರೈತರ

“ದಲ್ಲೆವಾಲ್ ಅವರ ಜೀವ ಮುಖ್ಯ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ಹೇಳಿತ್ತು. ನಾನು ಅದೇ ದಿನ ಗೌರವಾನ್ವಿತ ಸುಪ್ರೀಂ ಕೋರ್ಟ್‌ನಲ್ಲಿ ಹೇಳಿದ್ದೆ, ನಾನು ಸಹ ಮನುಷ್ಯ, ಸರಿ, ಆದರೆ ಆತ್ಮಹತ್ಯೆ ಮಾಡಿಕೊಂಡ 7 ಲಕ್ಷ ರೈತರ ಕುಟುಂಬಗಳ ಬಗ್ಗೆ ಏನು ಹೇಳುತ್ತೀರಿ. ಭವಿಷ್ಯದಲ್ಲಿ ಈ ಆತ್ಮಹತ್ಯೆಗಳನ್ನು ನಿಲ್ಲಿಸಬೇಕಿದೆ” ಎಂದು ದಲ್ಲೆವಾಲ್ ಒತ್ತಿ ಹೇಳಿದ್ದಾರೆ. ಪ್ರತಿಭಟನಾ ನಿರತ ರೈತರ ನಿರಂತರ ಬೆಂಬಲಕ್ಕೆ ಧನ್ಯವಾದ ಹೇಳಿದ ದಲ್ಲೆವಾಲ್ ಅವರು ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲುವಂತೆ ಒತ್ತಾಯಿಸಿದ್ದಾರೆ.

ರೈತರ ಮಹಾಪಂಚಾಯತ್‌ ಕಾರಣಕ್ಕೆ ಪ್ರತಿಭಟನಾ ನಿರತರು ಖಾನೌರಿಯ ಹೆದ್ದಾರಿಯ ಉದ್ದಕ್ಕೂ ನಾಲ್ಕು ಕಿಲೋಮೀಟರ್ ವಿಸ್ತಾರದಲ್ಲಿ ಹರಡಿಕೊಂಡಿದ್ದರು ಎಂದು TNIE ವರದಿ ಮಾಡಿದೆ. ಇದೇ ವೇಳೆ ದಲ್ಲೇವಾಲ್ ಅವರು ತೋಹಾನಾದಲ್ಲಿ ನಡೆದ ಸಮಾನಾಂತರ ಮಹಾಪಂಚಾಯತ್‌ನಲ್ಲಿ ಭಾಗವಹಿಸಲು ಪ್ರಯಾಣಿಸುತ್ತಿದ್ದಾಗ ಅಪಘಾತದಲ್ಲಿ ಮೂವರು ಮಹಿಳೆಯರು ಸಾವಿಗೆ ಸಂತಾಪ ಸೂಚಿಸಿದ್ದಾರೆ.

ಇದನ್ನೂಓದಿ:  ರೈತ ಮುಖಂಡ ದಲ್ಲೆವಾಲ್‌ರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಕುರಿತ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್.

ರೈತ ಮುಖಂಡ ದಲ್ಲೆವಾಲ್‌ರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಕುರಿತ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...