Homeಚಳವಳಿಲಕ್ಷಾಂತರ ರೈತರ ಜೀವಕ್ಕಿಂತ ನನ್ನ ಜೀವ ಮುಖ್ಯವಲ್ಲ - ರೈತ ನಾಯಕ ದಲ್ಲೆವಾಲ್

ಲಕ್ಷಾಂತರ ರೈತರ ಜೀವಕ್ಕಿಂತ ನನ್ನ ಜೀವ ಮುಖ್ಯವಲ್ಲ – ರೈತ ನಾಯಕ ದಲ್ಲೆವಾಲ್

- Advertisement -
- Advertisement -

ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಪಂಜಾಬ್-ಹರಿಯಾಣದ ಖಾನೌರಿ ಗಡಿಯಲ್ಲಿ ಕಿಸಾನ್ ಮಹಾಪಂಚಾಯತ್ ಅನ್ನು ಉದ್ದೇಶಿಸಿ ಶನಿವಾರ ಮಾತನಾಡಿದ್ದು, ಈಗಾಗಲೇ ಏಳು ಲಕ್ಷಕ್ಕೂ ಹೆಚ್ಚು ರೈತರು ಕೃಷಿ ವಲಯದಲ್ಲಿನ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಸಂಕಷ್ಟದಲ್ಲಿ ತತ್ತರಿಸುತ್ತಿರುವ ಲಕ್ಷಾಂತರ ಭಾರತೀಯ ರೈತರ ಜೀವಕ್ಕಿಂತ ನನ್ನ ಜೀವ ಮುಖ್ಯವಲ್ಲ ಎಂದು ಹೇಳಿದ್ದಾರೆ. ಲಕ್ಷಾಂತರ ರೈತರ

ಆಮರಣಾಂತ ಉಪವಾಸ ಸತ್ಯಾಗ್ರಹದ 40ನೇ ದಿನದಂದು ರೈತರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ದಲ್ಲೆವಾಲ್ ಅವರು, ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಅಡಿಯಲ್ಲಿ ರೈತರು ಖಾನೌರಿ ಗಡಿಯಲ್ಲಿರುವ ಪ್ರತಿ ಹಳ್ಳಿಯಿಂದ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ದೆಹಲಿಗೆ ಮೆರವಣಿಗೆ ಹೊರಟಿದ್ದ ರೈತರನ್ನು ಹರಿಯಾಣ ಪೊಲೀಸರು ತಡೆದ ನಂತರ ಕಳೆದ ವರ್ಷ ಫೆಬ್ರವರಿ 13 ರಿಂದ ಅವರು ಅಲ್ಲಿ ತಂಗಿದ್ದಾರೆ.

“ನೀವು ಇಂದು ಈ ಮಟ್ಟಿನ ಸಂಖ್ಯೆಯಲ್ಲಿ ಬಂದಿದ್ದೀರಿ, ಅದೇ ರೀತಿ ಈ ಹೋರಾಟವನ್ನು ಬಲಪಡಿಸಲು ಪ್ರತಿ ಹಳ್ಳಿಯಿಂದ ಒಂದು ಟ್ರಾಲಿ ಖಾನೌರಿಗೆ ತಲುಪಬೇಕು” ಎಂದು ದಲ್ಲೆವಾಲ್ ಹೇಳಿದ್ದಾರೆ. ತಮ್ಮ ಉಪವಾಸದ ಬಗ್ಗೆ ಮಾತನಾಡಿದ ಅವರು, ದುರ್ಬಲ ದಲ್ಲೆವಾಲ್‌ನನ್ನು ಆಸ್ಪತ್ರೆಗೆ ಕರೆದೊಯ್ಯಲು ಪೊಲೀಸರು ಹಲವಾರು ಪ್ರಯತ್ನಗಳನ್ನು ಮಾಡಿದ್ದಾರೆ, ಆದರೆ ಸ್ವಯಂಸೇವಕರು ಅದನ್ನು ವಿಫಲಗೊಳಿಸಿದರು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪೊಲೀಸರು ನಮ್ಮನ್ನು ಇಲ್ಲಿಂದ ಹೊರಹಾಕಲಿದ್ದಾರೆ ಎಂದು ನಮಗೆ ಮಾಹಿತಿ ಸಿಕ್ಕಿದ ಅದೇ ರಾತ್ರಿ ಹಲವಾರು ಯುವಕರು ಪಂಜಾಬ್ ಮತ್ತು ಹರಿಯಾಣದಿಂದ ಖಾನೌರಿಗೆ ತಲುಪಿದ, ಹೋರಾಟದ ಉಸ್ತುವಾರಿ ವಹಿಸಿಕೊಂಡರು” ಎಂದು ದಲ್ಲೆವಾಲ್ ಹೇಳಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾದ (ರಾಜಕೀಯೇತರ) ಸಂಚಾಲಕರಾಗಿರುವ ದಲ್ಲೆವಾಲ್ ಅವರು ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಕಾತರಿ ನೀಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟು ಆಮರಣಾಂತ ಉಪವಾಸ ಕೈಗೊಂಡಿದ್ದಾರೆ. ಜೊತೆಗೆ ಯಾವುದೇ ವೈದ್ಯಕೀಯ ನೆರವು ಪಡೆಯಲು ನಿರಾಕರಿಸಿದ್ದಾರೆ, ಹಾಗಾಗಿ ಅವರ ಆರೋಗ್ಯ ಹದಗೆಡುತ್ತಿದೆ ಎಂದು ವರದಿಯಾಗಿದೆ.

ಹದಗೆಟ್ಟಿರುವ ಅವರ ಆರೋಗ್ಯವನ್ನು ಪರಿಗಣಿಸಿ ಆಸ್ಪತ್ರೆಗೆ ಸ್ಥಳಾಂತರಿಸದ ಪಂಜಾಬ್ ಸರ್ಕಾರವನ್ನು ಸುಪ್ರೀಂ ಕೋರ್ಟ್ ಇತ್ತೀಚೆಗೆ ತರಾಟೆಗೆ ತೆಗೆದುಕೊಂಡಿತು ಮತ್ತು ಅವರಿಗೆ ತಕ್ಷಣ ವೈದ್ಯಕೀಯ ನೆರವು ನೀಡುವಂತೆ ಸೂಚಿಸಿದೆ. ಆದಾಗ್ಯೂ, ಈ ಆದೇಶವು ದಲ್ಲೆವಾಲ್ ಅವರ ಉಪವಾಸವನ್ನು ಮುರಿಯುವ ಉದ್ದೇಶವನ್ನು ಹೊಂದಿಲ್ಲ ಎಂದು ಸುಪ್ರೀಂಕೋರ್ಟ್‌ ಸ್ಪಷ್ಟಪಡಿಸಿದೆ. ಲಕ್ಷಾಂತರ ರೈತರ

“ದಲ್ಲೆವಾಲ್ ಅವರ ಜೀವ ಮುಖ್ಯ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ಹೇಳಿತ್ತು. ನಾನು ಅದೇ ದಿನ ಗೌರವಾನ್ವಿತ ಸುಪ್ರೀಂ ಕೋರ್ಟ್‌ನಲ್ಲಿ ಹೇಳಿದ್ದೆ, ನಾನು ಸಹ ಮನುಷ್ಯ, ಸರಿ, ಆದರೆ ಆತ್ಮಹತ್ಯೆ ಮಾಡಿಕೊಂಡ 7 ಲಕ್ಷ ರೈತರ ಕುಟುಂಬಗಳ ಬಗ್ಗೆ ಏನು ಹೇಳುತ್ತೀರಿ. ಭವಿಷ್ಯದಲ್ಲಿ ಈ ಆತ್ಮಹತ್ಯೆಗಳನ್ನು ನಿಲ್ಲಿಸಬೇಕಿದೆ” ಎಂದು ದಲ್ಲೆವಾಲ್ ಒತ್ತಿ ಹೇಳಿದ್ದಾರೆ. ಪ್ರತಿಭಟನಾ ನಿರತ ರೈತರ ನಿರಂತರ ಬೆಂಬಲಕ್ಕೆ ಧನ್ಯವಾದ ಹೇಳಿದ ದಲ್ಲೆವಾಲ್ ಅವರು ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲುವಂತೆ ಒತ್ತಾಯಿಸಿದ್ದಾರೆ.

ರೈತರ ಮಹಾಪಂಚಾಯತ್‌ ಕಾರಣಕ್ಕೆ ಪ್ರತಿಭಟನಾ ನಿರತರು ಖಾನೌರಿಯ ಹೆದ್ದಾರಿಯ ಉದ್ದಕ್ಕೂ ನಾಲ್ಕು ಕಿಲೋಮೀಟರ್ ವಿಸ್ತಾರದಲ್ಲಿ ಹರಡಿಕೊಂಡಿದ್ದರು ಎಂದು TNIE ವರದಿ ಮಾಡಿದೆ. ಇದೇ ವೇಳೆ ದಲ್ಲೇವಾಲ್ ಅವರು ತೋಹಾನಾದಲ್ಲಿ ನಡೆದ ಸಮಾನಾಂತರ ಮಹಾಪಂಚಾಯತ್‌ನಲ್ಲಿ ಭಾಗವಹಿಸಲು ಪ್ರಯಾಣಿಸುತ್ತಿದ್ದಾಗ ಅಪಘಾತದಲ್ಲಿ ಮೂವರು ಮಹಿಳೆಯರು ಸಾವಿಗೆ ಸಂತಾಪ ಸೂಚಿಸಿದ್ದಾರೆ.

ಇದನ್ನೂಓದಿ:  ರೈತ ಮುಖಂಡ ದಲ್ಲೆವಾಲ್‌ರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಕುರಿತ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್.

ರೈತ ಮುಖಂಡ ದಲ್ಲೆವಾಲ್‌ರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಕುರಿತ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...