Homeಮುಖಪುಟಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಯಿಂದ ದುಷ್ಪರಿಣಾಮವಿಲ್ಲವೆಂಬ ಪ್ರಮಾಣ ಮಾಡುವಂತೆ ಕೋರಿ ಅರ್ಜಿ

ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಯಿಂದ ದುಷ್ಪರಿಣಾಮವಿಲ್ಲವೆಂಬ ಪ್ರಮಾಣ ಮಾಡುವಂತೆ ಕೋರಿ ಅರ್ಜಿ

- Advertisement -
- Advertisement -

ಭೋಪಾಲ್: ಪಿತಾಮ್‌ಪುರದಲ್ಲಿ ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿ ಮಾಡುವುದರಿಂದ ಹತ್ತಿರದ ಪ್ರದೇಶಗಳ ಜನರಿಗೆ ತೊಂದರೆಯಾಗುವುದಿಲ್ಲ ಎಂದು ಮಧ್ಯಪ್ರದೇಶ ಸರ್ಕಾರದಿಂದ ಭರವಸೆ ನೀಡುವಂತೆ ಕೋರಿ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ)ದ ಭೋಪಾಲ್ ಪೀಠದಲ್ಲಿ ಅರ್ಜಿ ಸಲ್ಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಜಬಲ್‌ಪುರ ಮೂಲದ ಸಾಮಾಜಿಕ ಸಂಘಟನೆಯೊಂದು ಸಲ್ಲಿಸಿರುವ ಅರ್ಜಿಯಲ್ಲಿ, ತ್ಯಾಜ್ಯವನ್ನು ವಿಲೇವಾರಿ ಮಾಡಲು ಸಾಗಿಸಲಾಗಿರುವ ಧಾರ್ ಜಿಲ್ಲೆಯ ಪಿತಾಂಪುರ್‌ನಲ್ಲಿನ ಜನರ ಸುರಕ್ಷತೆಯ ಪ್ರಮಾಣ ಮಾಡುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಆದೇಶ ನೀಡುವಂತೆ ಎನ್‌ಜಿಟಿಯನ್ನು ಒತ್ತಾಯಿಸಲಾಗಿದೆ.

ಡಿಸೆಂಬರ್ 2-3, 1984ರ ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿರುವ ಯೂನಿಯನ್ ಕಾರ್ಬೈಡ್ ಕೀಟನಾಶಕ ಕಾರ್ಖಾನೆಯಿಂದ ಮೀಥೈಲ್ ಐಸೊಸೈನೇಟ್ (MIC) ಅನಿಲ ಸೋರಿಕೆಯಾಗಿತ್ತು. ಆಗ ಕನಿಷ್ಠ 5,479 ಜನರು ಸಾವನ್ನಪ್ಪಿದ್ದರು ಮತ್ತು ಸಾವಿರಾರು ಜನರು ಗಂಭೀರವಾದ ಗಾಯಗಳು ಮತ್ತು ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ.

ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶದ ಮೇರೆಗೆ ಸುಮಾರು 337 ಟನ್‌ಗಳಷ್ಟು ಯೂನಿಯನ್ ಕಾರ್ಬೈಡ್ ತ್ಯಾಜ್ಯವು ಗುರುವಾರದಂದು ಭೋಪಾಲ್‌ನಿಂದ ಪಿತಾಂಪುರ್‌ಗೆ ವಿಲೇವಾರಿಯಾಗಿದೆ.

ಈ ತ್ಯಾಜ್ಯವನ್ನು ವಿಲೇವಾರಿ ಮಾಡುವುದರಿಂದ ಆ ಪ್ರದೇಶದ ನಿವಾಸಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಪ್ರಮಾಣ ಮಾಡುವಂತೆ ಧಾರ್‌ನಲ್ಲಿರುವ ಅಧಿಕಾರಿಗಳಿಗೆ ನಿರ್ದೇಶಿಸುವಂತೆ ಎನ್‌ಜಿಟಿಯ ಮುಂದೆ ಸಲ್ಲಿಸಿದ ಅರ್ಜಿಯಲ್ಲಿ ಕೋರಲಾಗಿದೆ.

ಇದಲ್ಲದೆ, ಸಾರ್ವಜನಿಕ ಕಳವಳವನ್ನು ನಿವಾರಿಸಲು ಈ ತ್ಯಾಜ್ಯವನ್ನು ವಿಲೇವಾರಿ ಮಾಡುವ ಬಗ್ಗೆ ನಿರ್ದಿಷ್ಟ ವರದಿಯನ್ನು ಹಿಂದಿ ಮತ್ತು ಇಂಗ್ಲಿಷ್ ಪತ್ರಿಕೆಗಳಲ್ಲಿ ಪ್ರಕಟಿಸಲು ಮಧ್ಯಪ್ರದೇಶ ಸರ್ಕಾರಕ್ಕೆ ನಿರ್ದೇಶಿಸುವಂತೆ ಮನವಿಯಲ್ಲಿ ಕೋರಲಾಗಿದೆ ಎಂದು ನಾಗರೀಕ ಉಪಭೋಕ್ತ ಮಾರ್ಗದರ್ಶಕ ಮಂಚ್‌ನ ಪಿ.ಜಿ.ನಾಜಪಾಂಡೆ ಮತ್ತು ಸಾಮಾಜಿಕ ಕಾರ್ಯಕರ್ತ ಸುನೀಲ್ ಭಾರ್ಗವ್ ಹೇಳಿದ್ದಾರೆ.

ಸಾಮಾಜಿಕ ಸಂಘಟನೆಯು ಶುಕ್ರವಾರ ಎನ್‌ಜಿಟಿಗೆ ಅರ್ಜಿ ಸಲ್ಲಿಸಿದೆ ಎಂದು ನಜಪಾಂಡೆ ಪಿಟಿಐಗೆ ತಿಳಿಸಿದ್ದಾರೆ.

ಡಿಸೆಂಬರ್ 1984 ರಲ್ಲಿ ಯೂನಿಯನ್ ಕಾರ್ಬೈಡ್ ಕಾರ್ಖಾನೆಯಿಂದ ವಿಷಕಾರಿ ಮೀಥೈಲ್ ಐಸೊಸೈನೇಟ್ ಅನಿಲ ಸೋರಿಕೆಯಿಂದ ಸಾವಿರಾರು ಜನರು ಸಾವನ್ನಪ್ಪಿದ ಕಾರಣ ನಿವಾಸಿಗಳಲ್ಲಿ ಆತಂಕವುಂಟಾಗಿದೆ ಎಂದು ಅವರು ಹೇಳಿದ್ದಾರೆ.

ಆದ್ದರಿಂದ, ಅವರ ಕಳವಳಗಳನ್ನು ನಿವಾರಿಸಲು ಈ ಅರ್ಜಿಯನ್ನು ನಾವು ಎನ್‌ಜಿಟಿಗೆ ವರ್ಗಾಯಿಸಿದ್ದೇವೆ  ಎಂದು ನಜಪಾಂಡೆ ತಿಳಿಸಿದರು.

ನಮ್ಮ ಪ್ರದೇಶದಲ್ಲಿ ಈ ವಿಷಕಾರಿ ತ್ಯಾಜ್ಯವನ್ನು ವಿಲೇವಾರಿ ಮಾಡುವುದು ಬೇಡ ಎಂದು ಪಿತಾಂಪುರದ ತ್ಯಾಜ್ಯ ದಹನ ಘಟಕದ ಪಕ್ಕದ ತಾರ್ಪುರದ ಹಳ್ಳಿಯ ಸ್ಥಳೀಯರ ಒತ್ತಾಯವಾಗಿದೆ. ಅಲ್ಲಿಗೆ ದೊಡ್ಡ ಪ್ರಮಾಣದ ತ್ಯಾಜ್ಯವನ್ನು ವಿಲೇವಾರಿ ಮಾಡಲು ತರಲಾಗಿದೆ. ವಿಶ್ವದ ಅತ್ಯಂತ ಭೀಕರ ಕೈಗಾರಿಕಾ ದುರಂತಗಳಲ್ಲಿ ಒಂದಾದ 1984ರ ಭೋಪಾಲ್ ಅನಿಲ ದುರಂತಕ್ಕೆ ಸಂಬಂಧಿಸಿದ ತ್ಯಾಜ್ಯವನ್ನು ವಿಲೇವಾರಿ ಮಾಡುವ ಯೋಜನೆಯು ಈ ಪ್ರದೇಶದಲ್ಲಿ ಪ್ರತಿಭಟನೆಯನ್ನು ಹುಟ್ಟುಹಾಕಿದೆ.

ಅಪಾರ ಪ್ರಮಾಣದ ವಿಷಕಾರಿ ತ್ಯಾಜ್ಯವನ್ನು ಸುಡುವುದರಿಂದ ಮನುಷ್ಯರಿಗೆ ಹಾಗೂ ಪರಿಸರಕ್ಕೆ ಅಪಾಯಕಾರಿಯಾಗಲಿದೆ. ಯಾವುದೇ ಹಾನಿಕಾರಕ ಪರಿಣಾಮಗಳಿಲ್ಲ ಎಂದು ಮಧ್ಯಪ್ರದೇಶ ಸರ್ಕಾರ ಭರವಸೆ ನೀಡಲು ಪ್ರಯತ್ನಿಸಿದರೂ ಈಗ ಗ್ರಾಮಸ್ಥರು ಭಯಪಡುತ್ತಿದ್ದಾರೆ. ಸ್ಥಳೀಯ ಆಡಳಿತವು ಪಿತಾಂಪುರದ ತ್ಯಾಜ್ಯ ವಿಲೇವಾರಿ ಘಟಕದ ಸುತ್ತಲಿನ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ ಮತ್ತು ಹೆಚ್ಚಿನ ಪೊಲೀಸ್ ಪಡೆಯನ್ನು ನಿಯೋಜಿಸಿದೆ.

ತಾರ್ಪುರದ ಅನೇಕ ನಿವಾಸಿಗಳು ಪಿತಾಂಪುರದ ಕೈಗಾರಿಕಾ ಘಟಕಗಳಲ್ಲಿ ಕೆಲಸ ಮಾಡುತ್ತಿದ್ದಾರೆ.

ಲಕ್ಷಾಂತರ ರೈತರ ಜೀವಕ್ಕಿಂತ ನನ್ನ ಜೀವ ಮುಖ್ಯವಲ್ಲ – ರೈತ ನಾಯಕ ದಲ್ಲೆವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...