Homeಚಳವಳಿಪಿತಾಂಪುರ್ ಪ್ರತಿಭಟನೆ ಹಿನ್ನಲೆ | ಭೋಪಾಲ್‌ನ ವಿಷಕಾರಿ ತ್ಯಾಜ್ಯ ದಹನ ಸ್ಥಗಿತ

ಪಿತಾಂಪುರ್ ಪ್ರತಿಭಟನೆ ಹಿನ್ನಲೆ | ಭೋಪಾಲ್‌ನ ವಿಷಕಾರಿ ತ್ಯಾಜ್ಯ ದಹನ ಸ್ಥಗಿತ

- Advertisement -
- Advertisement -

ಭೋಪಾಲ್‌ನ ನಿಷ್ಕ್ರಿಯಗೊಂಡ ಯೂನಿಯನ್ ಕಾರ್ಬೈಡ್ ಸ್ಥಾವರದ 40 ವರ್ಷಗಳಷ್ಟು ಹಳೆಯದಾದ 358 ಮೆಟ್ರಿಕ್ ಟನ್ ವಿಷಕಾರಿ ತ್ಯಾಜ್ಯವನ್ನು ದಹಿಸುವುದನ್ನು ವಿರೋಧಿಸಿ ಧಾರ್ ಜಿಲ್ಲೆಯ ಪಿತಾಂಪುರ್ ಕೈಗಾರಿಕಾ ಪಟ್ಟಣದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೆ, ಮಧ್ಯಪ್ರದೇಶ ಸರ್ಕಾರವು ಕೈಗಾರಿಕಾ ಪಟ್ಟಣದ ಆತಂಕಗಳು, ಕಳವಳಗಳು ಮತ್ತು ಭಾವನೆಗಳನ್ನು ನ್ಯಾಯಾಲಯಕ್ಕೆ ತಿಳಿಸಲು ನಿರ್ಧರಿಸಿದೆ ಎಂದು ವರದಿಯಾಗಿದೆ. ಪಿತಾಂಪುರ್ ಪ್ರತಿಭಟನೆ

“ನಮ್ಮ ಸರ್ಕಾರವು ಸಾರ್ವಜನಿಕ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ. ಕಳೆದ ತಿಂಗಳ ಹೈಕೋರ್ಟ್ ಆದೇಶದ ಅನ್ವಯ ಯೂನಿಯನ್ ಕಾರ್ಬೈಡ್ ಘಟಕದ ವಿಷಕಾರಿ ತ್ಯಾಜ್ಯವನ್ನು ಪಿತಾಂಪುರದ ತ್ಯಾಜ್ಯ ವಿಲೇವಾರಿ ಕೇಂದ್ರಕ್ಕೆ ಸಾಗಿಸಲಾಗಿದೆ. ಜನವರಿ 6 ರಂದು ಮುಂದಿನ ವಿಚಾರಣೆಯ ದಿನಾಂಕದ ಮೊದಲು ನಾಲ್ಕು ವಾರಗಳಲ್ಲಿ ತ್ಯಾಜ್ಯವನ್ನು ಪಿತಾಂಪುರದಲ್ಲಿರುವ ತ್ಯಾಜ್ಯ ಸಂಸ್ಕರಣೆ ಮತ್ತು ವಿಲೇವಾರಿ ಸೌಲಭ್ಯಕ್ಕೆ ಸುರಕ್ಷಿತವಾಗಿ ಸ್ಥಳಾಂತರಿಸಲು ನಮಗೆ ನಿರ್ದೇಶಿಸಲಾಗಿದೆ” ಎಂದು ಮಧ್ಯಪ್ರದೇಶದ ಸಿಎಂ ಡಾ. ಮೋಹನ್ ಯಾದವ್ ಹೇಳಿದ್ದಾರೆ.

ಸಾರ್ವಜನಿಕರ ಕಾಳಜಿ ಮತ್ತು ಆತಂಕಗಳನ್ನು ಗಮನದಲ್ಲಿಟ್ಟುಕೊಂಡು, ಮುಂದಿನ ನ್ಯಾಯಾಲಯದ ಆದೇಶದವರೆಗೆ ಈ ವಿಷಯದಲ್ಲಿ (ತ್ಯಾಜ್ಯವನ್ನು ಸುಡುವ ಬಗ್ಗೆ) ಯಾವುದೇ ಚಟುವಟಿಕೆ ಮಾಡದಿರಲು ನಾವು ನಿರ್ಧರಿಸಿದ್ದೇವೆ ಎಂದು ಅವರು ಹೇಳಿದ್ದಾರೆ. ಪಿತಾಂಪುರ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸರ್ಕಾರವು ಯೋಜಿತ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದ ಸ್ಥಳೀಯ ನಿವಾಸಿಗಳ ಸಂಪೂರ್ಣ ಕಾಳಜಿ, ಭಾವನೆಗಳು ಮತ್ತು ಆತಂಕಗಳನ್ನು ನ್ಯಾಯಾಲಯದ ಮುಂದೆ ಪ್ರಸ್ತುತಪಡಿಸುತ್ತದೆ. ಮುಂದಿನ ಕ್ರಮಕ್ಕಾಗಿ ಮುಂದಿನ ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತದೆ ಎಂದು ಸಿಎಂ ಹೇಳಿದ್ದಾರೆ. ಶುಕ್ರವಾರ ತಡರಾತ್ರಿ ಭೋಪಾಲ್‌ನಲ್ಲಿ ಈ ವಿಷಯದ ಕುರಿತು ಸರ್ಕಾರದ ಉನ್ನತ ಅಧಿಕಾರಿಗಳ ಸುದೀರ್ಘ ತುರ್ತು ಸಭೆಯ ಅಧ್ಯಕ್ಷತೆ ವಹಿಸಿದ ನಂತರ ಅವರು ಈ ಬಗ್ಗೆ ಹೇಳಿದ್ದಾರೆ.

2004 ರ ಡಿಸೆಂಬರ್ 3 ರಂದು ಭೋಪಾಲ್‌ನಿಂದ (ಯೋಜಿತ ವಿಲೇವಾರಿಗಾಗಿ) ವಿಷಕಾರಿ ತ್ಯಾಜ್ಯವನ್ನು ನಾಲ್ಕು ವಾರಗಳಲ್ಲಿ ಸ್ಥಳಾಂತರಿಸಲು ರಾಜ್ಯ ಸರ್ಕಾರಕ್ಕೆ ಆದೇಶಿಸಿದ 2004 ರ ಅರ್ಜಿಯ ವಿಚಾರಣೆಯನ್ನು ಮಧ್ಯಪ್ರದೇಶ ಹೈಕೋರ್ಟ್ ಜನವರಿ 6 ರಂದು ನಡೆಸಲಿದೆ.

ಭೋಪಾಲ್‌ನಲ್ಲಿ ಶುಕ್ರವಾರ ತಡರಾತ್ರಿ ನಡೆದ ತುರ್ತು ಸಭೆಯ 11 ಗಂಟೆಗಳ ನಂತರ, 358 ಟನ್ ವಿಷಕಾರಿ ತ್ಯಾಜ್ಯವನ್ನು ಸುಡಲು ಯೋಜಿಸಲಾಗಿರುವ ಸಂಸ್ಕರಣೆ-ಶೇಖರಣೆ-ವಿಲೇವಾರಿ ಸ್ಥಾವರದ (ಟಿಎಸ್‌ಡಿಎಫ್) ಹೊರಗೆ ಸ್ಥಳೀಯ ನಿವಾಸಿಗಳಿಂದ ಕಲ್ಲು ತೂರಾಟ ನಡೆದಿದೆ ಎಂದು ಶನಿವಾರ ಬೆಳಿಗ್ಗೆ ವರದಿಯಾಗಿತ್ತು.

“ಬಹುಶಃ ಜನವರಿ 2 ರಂದು ಬೆಳಿಗ್ಗೆ ಭೋಪಾಲ್‌ನಿಂದ ಪಿತಾಮ್‌ಪುರದ ಟಿಎಸ್‌ಡಿಎಫ್‌ಗೆ ತ್ಯಾಜ್ಯವನ್ನು ಸಾಗಿಸಿದ ಬಗ್ಗೆ ಕೆಲವು ವದಂತಿಗಳ ಹಿನ್ನಲೆ, ತಾರ್ಪುರ ಗ್ರಾಮದ 100 ಕ್ಕೂ ಹೆಚ್ಚು ನಿವಾಸಿಗಳು ಸ್ಥಾವರದ ಹೊರಗೆ ಕಲ್ಲು ತೂರಿದ್ದಾರೆ. ಜೊತೆಗೆ ಶನಿವಾರ ಬೆಳಿಗ್ಗೆ ಕರ್ತವ್ಯದಲ್ಲಿದ್ದ ಪೊಲೀಸರ ಕಣ್ಣಿಗೆ ಮೆಣಸಿನ ಪುಡಿ ಎರಚಲು ಪ್ರಯತ್ನಿಸಿದ್ದಾರೆ” ಎಂದು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಆದಾಗ್ಯೂ, ಪೊಲೀಸರು ಮಹಿಳೆಯರು ಸೇರಿದಂತೆ ಗುಂಪನ್ನು ಬೆನ್ನಟ್ಟಿದ್ದು, ಆಕ್ರೋಶಗೊಂಡ ಗ್ರಾಮಸ್ಥರನ್ನು ಚದುರಿಸಲು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದಾರೆ. ಇಂದು ಸಂಜೆಯ ನಂತರ ಈ ವಿಷಯದ ಬಗ್ಗೆ ಪ್ರಕರಣ ದಾಖಲಿಸಲಾಗುವುದು” ಎಂದು ಪಿತಾಂಪುರ ಪಟ್ಟಣದಲ್ಲಿ ಮೊಕ್ಕಾಂ ಹೂಡಿರುವ ಅವರುತಿಳಿಸಿದ್ದಾರೆ. ಶನಿವಾರ ಬೆಳಗ್ಗೆ 10.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಧಾರ್ ಜಿಲ್ಲಾಡಳಿತದಿಂದ ಪಿತಾಂಪುರ ಪಟ್ಟಣದ ಟಿಎಸ್‌ಡಿಎಫ್ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಅಲ್ಲದೆ, ಶುಕ್ರವಾರ ಪಿತಾಂಪುರ ಬಂದ್ ಕರೆ ವೇಳೆ ಪಿತಾಂಪುರ ಪಟ್ಟಣದಲ್ಲಿ ಪ್ರತಿಭಟನಾಕಾರರು ಸಾರ್ವಜನಿಕ ಗೊಂದಲ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಐದು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಎಫ್‌ಐಆರ್‌ಗಳಲ್ಲಿ ಒಂದು ಪ್ರಕರಣ, ಸಾರ್ವಜನಿಕ ಪ್ರತಿಭಟನೆಯ ಸಂದರ್ಭದಲ್ಲಿ ಇಬ್ಬರು ವ್ಯಕ್ತಿಗಳು ಆತ್ಮಾಹುತಿಗೆ ಯತ್ನಿಸಿ ಸುಟ್ಟ ಗಾಯಗಳಿಗೆ ಒಳಗಾದ ಘಟನೆಗೆ ಸಂಬಂಧಿಸಿದೆ. “ಆ ಘಟನೆಯಲ್ಲಿ ನಡೆಸಲಾಗಿರುವ ತನಿಖೆಯಲ್ಲಿ ವ್ಯಕ್ತಿಗಳಿಗೆ ಬೆಂಕಿ ಹೊತ್ತಿಸಿದ್ದು ಮೂರನೇ ವ್ಯಕ್ತಿ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆಗಳು ನಡೆಯುತ್ತಿವೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಏತನ್ಮಧ್ಯೆ, ಇಂದೋರ್ ಪ್ರದೇಶದ ಆಡಳಿತಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಶನಿವಾರ ಪಿತಾಂಪುರದ ಸಾರ್ವಜನಿಕ ಪ್ರತಿನಿಧಿಗಳು ಮತ್ತು ಪ್ರಮುಖ ನಾಗರಿಕರ ಜೊತೆಗೆ ಸುಮಾರು 45 ನಿಮಿಷಗಳ ಕಾಲ ಸಭೆ ನಡೆಸಿದ್ದು, ರಾಜ್ಯದ ಮುಖ್ಯಮಂತ್ರಿಯ ಸಂದೇಶವನ್ನು ರವಾನಿಸಿದ್ದಾರೆ. ಯೋಜಿತ ತ್ಯಾಜ್ಯ ದಹನದ ಬಗ್ಗೆ ಜನರ ಕುಂದುಕೊರತೆಗಳು ಮತ್ತು ಕಳವಳಗಳನ್ನು ಜನವರಿ 6 ರಂದು ಹೈಕೋರ್ಟ್‌ಗೆ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದ್ದು, ಮುಂದಿನ ನ್ಯಾಯಾಲಯದ ನಿರ್ದೇಶನದವರೆಗೆ, TSDF ನಲ್ಲಿ ತ್ಯಾಜ್ಯ ವಿಲೇವಾರಿಯಲ್ಲಿ ಏನೂ ನಡೆಯುವುದಿಲ್ಲ ಎಂದು ತಿಳಿಸಿದ್ದಾರೆ.

ಧಾರ್ ಪ್ರದೇಶವು ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿಮೀ ಮತ್ತು ಇಂದೋರ್ ನಗರದಿಂದ 30 ಕಿಮೀ ದೂರದಲ್ಲಿರುವ ಪಿತಾಂಪುರ್ ಮಧ್ಯಪ್ರದೇಶದ ಪ್ರಮುಖ ಕೈಗಾರಿಕಾ ಪಟ್ಟಣವಾಗಿದೆ. ಈ ಪಟ್ಟಣದಲ್ಲಿ 700 ಕಾರ್ಖಾನೆಗಳು (ಅವುಗಳಲ್ಲಿ ಹೆಚ್ಚಿನವು ಆಟೋಮೊಬೈಲ್ ಕ್ಷೇತ್ರಕ್ಕೆ ಸಂಬಂಧಿಸಿವೆ) ಇದ್ದು ಮತ್ತು ಸುಮಾರು 1.75 ಲಕ್ಷ ಜನಸಂಖ್ಯೆಯನ್ನು ಹೊಂದಿದೆ.

ಇದನ್ನೂಓದಿ:  ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಯಿಂದ ದುಷ್ಪರಿಣಾಮವಿಲ್ಲವೆಂಬ ಪ್ರಮಾಣ ಮಾಡುವಂತೆ ಕೋರಿ ಅರ್ಜಿ

ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಯಿಂದ ದುಷ್ಪರಿಣಾಮವಿಲ್ಲವೆಂಬ ಪ್ರಮಾಣ ಮಾಡುವಂತೆ ಕೋರಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...