Homeಮುಖಪುಟಛತ್ತೀಸ್‌ಗಢದಲ್ಲಿ ಪತ್ರಕರ್ತ ಮುಕೇಶ್‌ ಚಂದ್ರಾಕರ್‌ ಹತ್ಯೆ: ಯಾರಿ ಪತ್ರಕರ್ತ, ಏನಿದು ಪ್ರಕರಣ

ಛತ್ತೀಸ್‌ಗಢದಲ್ಲಿ ಪತ್ರಕರ್ತ ಮುಕೇಶ್‌ ಚಂದ್ರಾಕರ್‌ ಹತ್ಯೆ: ಯಾರಿ ಪತ್ರಕರ್ತ, ಏನಿದು ಪ್ರಕರಣ

- Advertisement -
- Advertisement -

ಛತ್ತೀಸ್‌ಗಢದ ಬಿಜಾಪುರದಲ್ಲಿ ರಸ್ತೆ ಕಾಮಗಾರಿಯ ಕುರಿತ ವರದಿ ಮಾಡಿದ್ದ ಕಾರಣಕ್ಕಾಗಿ  28ರ ಹರೆಯದ ಮುಕೇಶ್ ಚಂದ್ರಾಕರ್‌ ಎಂಬ ಪತ್ರಕರ್ತ ಹತ್ಯೆಯಾಗಿದ್ದಾರೆ. ಜನವರಿ 1ರಿಂದ ಕಾಣೆಯಾಗಿದ್ದ ಚಂದ್ರಾಕರ್ ಅವರ ಶವವು ಜನವರಿ 3ರಂದು ಗುತ್ತಿಗೆದಾರರೊಬ್ಬರ ಸೈಟ್‌ನಲ್ಲಿದ್ದ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆಯಾಗಿತ್ತು.

ಇದೊಂದು ವ್ಯವಸ್ಥಿತ ಹತ್ಯೆ ಪ್ರಕರಣವಾಗಿದ್ದು  ಇಲ್ಲಿಯವರೆಗೆ  ಮೂವರು ಶಂಕಿತರನ್ನು ಬಂಧಿಸಲಾಗಿದೆ. ಪತ್ರಕರ್ತನ ಹತ್ಯೆ ರಾಷ್ಟ್ರದೆಲ್ಲೆಡೆ ಭಾರೀ ಚರ್ಚೆಯ ವಿಷಯವಾಗಿದೆ.

ಪತ್ರಕರ್ತನ ಮೃತದೇಹದ ಮೇಲೆ ಶಸ್ತ್ರಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ ಗುರುತುಗಳಿದ್ದವು. ಈ ಪ್ರಕರಣದಲ್ಲಿ ದುಷ್ಕರ್ಮಿಗಳು ಅನುಮಾನಬಾರಬಾರದೆಂದು  ಟ್ಯಾಂಕ್‌ನ ಮೇಲೆ 4 ಇಂಚು ಸಿಮೆಂಟ್ ಸ್ಲ್ಯಾಬ್‌ ಇಟ್ಟು ಬಂದ್ ಮಾಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಛತ್ತೀಸಗಡದ ಬಿಜಾಪುರದ ಮುಕೇಶ್ ಬಾಲ್ಯದಲ್ಲೇ  ತನ್ನ ಹೆತ್ತವರನ್ನು ಕಳೆದುಕೊಂಡಿದ್ದು, ಸಹೋದರ ಯುಕೇಶ್ ಚಂದ್ರಾಕರ್ ಜತೆಗೆ ಬೆಳೆದು ಪತ್ರಕರ್ತನಾದವನು. 2021ರಲ್ಲಿ  ಮಾವೋವಾದಿಗಳು ಅಪಹರಿಸಿದ್ದ ಸಿಆರ್‌ಪಿಎಫ್‌ ಕಮಾಂಡೋ ರಾಕೇಶ್ವರ್ ಸಿಂಗ್ ಮನ್ಹಾಸ್‌ ಬಿಡುಗಡೆಯಲ್ಲಿ ಮುಕೇಶ್ ಚಂದ್ರಾಕರ್‌ ಪ್ರಮುಖ ಪಾತ್ರವಹಿಸಿದ್ದರು.

ಪ್ರಮುಖ ಸುದ್ದಿ ಚಾನೆಲ್‌ಗೆ ಸುದ್ದಿಗಾರನಾಗಿದ್ದ ಮುಕೇಶ್ ಚಂದ್ರಾಕರ್, ಸ್ಥಳೀಯವಾಗಿ ಬಸ್ತರ್‌ ಜಂಕ್ಷನ್ ಎಂಬ ಯೂಟ್ಯೂಬ್ ಚಾನೆಲ್ ಅನ್ನೂ ಹೊಂದಿದ್ದರು. ಅದು ಒಂದೂವರೆ ಲಕ್ಷಕ್ಕೂ ಹೆಚ್ಚು ಚಂದಾದಾರರನ್ನು ಹೊಂದಿತ್ತು. ಅವರ ಯೂಟ್ಯೂಬ್‌ ಚಾನೆಲ್‌ ಬಸ್ತರ್ ಜಂಕ್ಷನ್‌ನಲ್ಲಿ 486 ವಿಡಿಯೋಗಳಿದ್ದು, 1.61 ಲಕ್ಷಕ್ಕೂ ಹೆಚ್ಚು ಚಂದಾದಾರರಿದ್ದಾರೆ. ಇದರಲ್ಲಿರುವ ಹೆಚ್ಚಿನ ವಿಡಿಯೋಗಳು ಸರ್ಕಾರ ಮತ್ತು ಮಾವೋವಾದಿ ಸಂಘರ್ಷಕ್ಕೆ ಸಂಬಂಧಿಸಿವೆ.

ಪತ್ರಕರ್ತನಾಗಿರುವ ಸಹೋದರ ಯುಕೇಶ್‌ ಚಂದ್ರಾಕರ್‌ ಅವರು ಸಲ್ಲಿಸಿದ ದೂರಿನ ಆಧಾರದಲ್ಲಿ ಪೊಲೀಸರು ಮುಕೇಶ್ ಚಂದ್ರಾಕರ್‌ ಮೊಬೈಲ್ ಟ್ರಾಕ್ ಮಾಡಿ ಬಸ್ತಿಯಲ್ಲಿ ಶವ ಪತ್ತೆ ಹಚ್ಚಿದ್ದಾರೆ. ಸುರೇಶ್ ಚಂದ್ರಾಕರ್ ಅವರ ಜಾಗದಲ್ಲಿ ಮೃತದೇಹ ಪತ್ತೆಯಾಗಿದೆ. ಸುರೇಶ್ ಚಂದ್ರಾಕರ್‌ ಅವರು ಗುತ್ತಿಗೆದಾರರಾಗಿದ್ದು, ಅವರ ಹೆಸರನ್ನೂ ಯುಕೇಶ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮುಕೇಶ್ ಚಂದ್ರಾಕರ್‌ ಕೆಲವು ದಿನಗಳ ಹಿಂದೆ ಗಂಗಾಳೂರಿನಿಂದ ನೆಲಸನಾರ್‌ ಗ್ರಾಮದ ರಸ್ತೆ ನಿರ್ಮಾಣದಲ್ಲಿ ಗೋಲ್‌ಮಾಲ್ ಆಗಿರುವುದಾಗಿ ವರದಿ ಮಾಡಿದ್ದರು. ಇದಾದ ಬಳಿಕ ಅವರಿಗೆ ಕೆಲವರಿಂದ ಬೆದರಿಕೆ ಕರೆಗಳು ಹೋಗಿದ್ದವು. ಬೆದರಿಕೆ ಕರೆ ಮಾಡಿದವರ ಪೈಕಿ ಸುರೇಸ್ ಚಂದ್ರಾಕರ್ ಕೂಡ ಇದ್ದರು.

ಮಾವೋವಾದಿಗಳ ವಿರುದ್ಧ ಛತ್ತೀಸಗಢ ಸರ್ಕಾರ ಪೊಲೀಸರ ರಕ್ಷಣೆಯಲ್ಲಿ ಸಂಘಟಿಸಿದ್ದ ‘ಸಲ್ವಾ ಜುಡೂಮ್’ ಎಂಬ ಅರೆಶಸ್ತ್ರ ಪಡೆಯಲ್ಲಿದ್ದ ಸುರೇಶ್ ಚಂದ್ರಾಕರ್ ಹಿನ್ನೆಲೆ ತೀರಾ ಬಡತನದ್ದು. ಆದರೆ ಇತ್ತೀಚಿನ ವರ್ಷಗಳಲ್ಲಿ ಮಾವೋವಾದಿ ಪ್ರಭಾವದ ಸೀಮೆಯಲ್ಲಿ ಸರ್ಕಾರಿ ಕಾಮಗಾರಿಗಳ ಗುತ್ತಿಗೆ ಹಿಡಿದು ಬಸ್ತರ್ ನ ದೊಡ್ಡ ಗುತ್ತಿಗೆದಾರ ಕುಳ ಎನಿಸಿದ್ದ. 2021ರಲ್ಲಿ ಈತನ ಮದುವೆ ಭಾರೀ ಅದ್ದೂರಿಯಿಂದ ಜರುಗಿತ್ತು. ಮಾವನ ಮನೆಗೆ ಹೆಲಿಕಾಪ್ಟರಿನಲ್ಲಿ ಬಂದಿಳಿದಿದ್ದ. ಮದುವೆಯ ನೃತ್ಯಕ್ಕಾಗಿ ರಷ್ಯಾದಿಂದ ನರ್ತಕಿಯರ ತಂಡವನ್ನು ಕರೆಯಿಸಿದ್ದ. ಮದುವೆ ಔತಣಕೂಟವನ್ನು ಬೀಜಾಪುರದ ಸ್ಟೇಡಿಯಂ ನಲ್ಲಿ ಏರ್ಪಡಿಸಿದ್ದ. ಬಸ್ತರ್ ಹಿಂದೆಂದೂ ಕಂಡು ಕೇಳಿ ಅರಿಯದ ಮದುವೆಯಿದು ಎನ್ನಲಾಗಿದೆ.

ಜಾಗತಿಕವಾಗಿ ಪತ್ರಕರ್ತರ ಹತ್ಯೆ ಪ್ರಮಾಣದಲ್ಲಿ ಇಂದು ಬಾರೀ ಏರಿಕೆಯಾಗಿರುವ ಆತಂಕಕಾರಿ ಅಂಶ ಬೆಳಕಿಗೆ ಬಂದಿದೆ.  ಈ ವರ್ಷ ಒಟ್ಟು 18 ದೇಶದಲ್ಲಿ 44 ಪತ್ರಕರ್ತರು ಹತ್ಯೆಯಾಗಿದ್ದಾರೆ. ಕಳೆದ ವರ್ಷಾವಧಿಗೆ ಹೋಲಿಸಿದರೆ 2018ರ ಮೊದಲ ನಾಲ್ಕು ತಿಂಗಳಲ್ಲಿ  28ರಷ್ಟು ಹೆಚ್ಚು ಪತ್ರಕರ್ತರ ಹತ್ಯೆಯಾಗಿದ್ದಾರೆ ಎಂದು ಜಿನೀವಾ ಮೂಲದ ಪ್ರೆಸ್ ಎಂಬ್ಲಮ್ ಕ್ಯಾಂಪೇನ್ (ಪಿಇಸಿ) ವರದಿ ಮಾಡಿದೆ.

ಭಾರತದಲ್ಲಿ 1992ರ ನಂತರ ಸುಮಾರು 70ಕ್ಕೂ ಹೆಚ್ಚು ಪತ್ರಕರ್ತರನ್ನು ವಿವಿಧ ಕಾರಣಗಳಿಗಾಗಿ ಹತ್ಯೆ ಮಾಡಲಾಗಿದೆ ಎಂದು ವರದಿಯೊಂದು ಹೇಳಿದೆ.

ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...