Homeಮುಖಪುಟಛತ್ತೀಸ್‌ಗಢದಲ್ಲಿ ಪತ್ರಕರ್ತ ಮುಕೇಶ್‌ ಚಂದ್ರಾಕರ್‌ ಹತ್ಯೆ: ಯಾರಿ ಪತ್ರಕರ್ತ, ಏನಿದು ಪ್ರಕರಣ

ಛತ್ತೀಸ್‌ಗಢದಲ್ಲಿ ಪತ್ರಕರ್ತ ಮುಕೇಶ್‌ ಚಂದ್ರಾಕರ್‌ ಹತ್ಯೆ: ಯಾರಿ ಪತ್ರಕರ್ತ, ಏನಿದು ಪ್ರಕರಣ

- Advertisement -
- Advertisement -

ಛತ್ತೀಸ್‌ಗಢದ ಬಿಜಾಪುರದಲ್ಲಿ ರಸ್ತೆ ಕಾಮಗಾರಿಯ ಕುರಿತ ವರದಿ ಮಾಡಿದ್ದ ಕಾರಣಕ್ಕಾಗಿ  28ರ ಹರೆಯದ ಮುಕೇಶ್ ಚಂದ್ರಾಕರ್‌ ಎಂಬ ಪತ್ರಕರ್ತ ಹತ್ಯೆಯಾಗಿದ್ದಾರೆ. ಜನವರಿ 1ರಿಂದ ಕಾಣೆಯಾಗಿದ್ದ ಚಂದ್ರಾಕರ್ ಅವರ ಶವವು ಜನವರಿ 3ರಂದು ಗುತ್ತಿಗೆದಾರರೊಬ್ಬರ ಸೈಟ್‌ನಲ್ಲಿದ್ದ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆಯಾಗಿತ್ತು.

ಇದೊಂದು ವ್ಯವಸ್ಥಿತ ಹತ್ಯೆ ಪ್ರಕರಣವಾಗಿದ್ದು  ಇಲ್ಲಿಯವರೆಗೆ  ಮೂವರು ಶಂಕಿತರನ್ನು ಬಂಧಿಸಲಾಗಿದೆ. ಪತ್ರಕರ್ತನ ಹತ್ಯೆ ರಾಷ್ಟ್ರದೆಲ್ಲೆಡೆ ಭಾರೀ ಚರ್ಚೆಯ ವಿಷಯವಾಗಿದೆ.

ಪತ್ರಕರ್ತನ ಮೃತದೇಹದ ಮೇಲೆ ಶಸ್ತ್ರಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ ಗುರುತುಗಳಿದ್ದವು. ಈ ಪ್ರಕರಣದಲ್ಲಿ ದುಷ್ಕರ್ಮಿಗಳು ಅನುಮಾನಬಾರಬಾರದೆಂದು  ಟ್ಯಾಂಕ್‌ನ ಮೇಲೆ 4 ಇಂಚು ಸಿಮೆಂಟ್ ಸ್ಲ್ಯಾಬ್‌ ಇಟ್ಟು ಬಂದ್ ಮಾಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಛತ್ತೀಸಗಡದ ಬಿಜಾಪುರದ ಮುಕೇಶ್ ಬಾಲ್ಯದಲ್ಲೇ  ತನ್ನ ಹೆತ್ತವರನ್ನು ಕಳೆದುಕೊಂಡಿದ್ದು, ಸಹೋದರ ಯುಕೇಶ್ ಚಂದ್ರಾಕರ್ ಜತೆಗೆ ಬೆಳೆದು ಪತ್ರಕರ್ತನಾದವನು. 2021ರಲ್ಲಿ  ಮಾವೋವಾದಿಗಳು ಅಪಹರಿಸಿದ್ದ ಸಿಆರ್‌ಪಿಎಫ್‌ ಕಮಾಂಡೋ ರಾಕೇಶ್ವರ್ ಸಿಂಗ್ ಮನ್ಹಾಸ್‌ ಬಿಡುಗಡೆಯಲ್ಲಿ ಮುಕೇಶ್ ಚಂದ್ರಾಕರ್‌ ಪ್ರಮುಖ ಪಾತ್ರವಹಿಸಿದ್ದರು.

ಪ್ರಮುಖ ಸುದ್ದಿ ಚಾನೆಲ್‌ಗೆ ಸುದ್ದಿಗಾರನಾಗಿದ್ದ ಮುಕೇಶ್ ಚಂದ್ರಾಕರ್, ಸ್ಥಳೀಯವಾಗಿ ಬಸ್ತರ್‌ ಜಂಕ್ಷನ್ ಎಂಬ ಯೂಟ್ಯೂಬ್ ಚಾನೆಲ್ ಅನ್ನೂ ಹೊಂದಿದ್ದರು. ಅದು ಒಂದೂವರೆ ಲಕ್ಷಕ್ಕೂ ಹೆಚ್ಚು ಚಂದಾದಾರರನ್ನು ಹೊಂದಿತ್ತು. ಅವರ ಯೂಟ್ಯೂಬ್‌ ಚಾನೆಲ್‌ ಬಸ್ತರ್ ಜಂಕ್ಷನ್‌ನಲ್ಲಿ 486 ವಿಡಿಯೋಗಳಿದ್ದು, 1.61 ಲಕ್ಷಕ್ಕೂ ಹೆಚ್ಚು ಚಂದಾದಾರರಿದ್ದಾರೆ. ಇದರಲ್ಲಿರುವ ಹೆಚ್ಚಿನ ವಿಡಿಯೋಗಳು ಸರ್ಕಾರ ಮತ್ತು ಮಾವೋವಾದಿ ಸಂಘರ್ಷಕ್ಕೆ ಸಂಬಂಧಿಸಿವೆ.

ಪತ್ರಕರ್ತನಾಗಿರುವ ಸಹೋದರ ಯುಕೇಶ್‌ ಚಂದ್ರಾಕರ್‌ ಅವರು ಸಲ್ಲಿಸಿದ ದೂರಿನ ಆಧಾರದಲ್ಲಿ ಪೊಲೀಸರು ಮುಕೇಶ್ ಚಂದ್ರಾಕರ್‌ ಮೊಬೈಲ್ ಟ್ರಾಕ್ ಮಾಡಿ ಬಸ್ತಿಯಲ್ಲಿ ಶವ ಪತ್ತೆ ಹಚ್ಚಿದ್ದಾರೆ. ಸುರೇಶ್ ಚಂದ್ರಾಕರ್ ಅವರ ಜಾಗದಲ್ಲಿ ಮೃತದೇಹ ಪತ್ತೆಯಾಗಿದೆ. ಸುರೇಶ್ ಚಂದ್ರಾಕರ್‌ ಅವರು ಗುತ್ತಿಗೆದಾರರಾಗಿದ್ದು, ಅವರ ಹೆಸರನ್ನೂ ಯುಕೇಶ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮುಕೇಶ್ ಚಂದ್ರಾಕರ್‌ ಕೆಲವು ದಿನಗಳ ಹಿಂದೆ ಗಂಗಾಳೂರಿನಿಂದ ನೆಲಸನಾರ್‌ ಗ್ರಾಮದ ರಸ್ತೆ ನಿರ್ಮಾಣದಲ್ಲಿ ಗೋಲ್‌ಮಾಲ್ ಆಗಿರುವುದಾಗಿ ವರದಿ ಮಾಡಿದ್ದರು. ಇದಾದ ಬಳಿಕ ಅವರಿಗೆ ಕೆಲವರಿಂದ ಬೆದರಿಕೆ ಕರೆಗಳು ಹೋಗಿದ್ದವು. ಬೆದರಿಕೆ ಕರೆ ಮಾಡಿದವರ ಪೈಕಿ ಸುರೇಸ್ ಚಂದ್ರಾಕರ್ ಕೂಡ ಇದ್ದರು.

ಮಾವೋವಾದಿಗಳ ವಿರುದ್ಧ ಛತ್ತೀಸಗಢ ಸರ್ಕಾರ ಪೊಲೀಸರ ರಕ್ಷಣೆಯಲ್ಲಿ ಸಂಘಟಿಸಿದ್ದ ‘ಸಲ್ವಾ ಜುಡೂಮ್’ ಎಂಬ ಅರೆಶಸ್ತ್ರ ಪಡೆಯಲ್ಲಿದ್ದ ಸುರೇಶ್ ಚಂದ್ರಾಕರ್ ಹಿನ್ನೆಲೆ ತೀರಾ ಬಡತನದ್ದು. ಆದರೆ ಇತ್ತೀಚಿನ ವರ್ಷಗಳಲ್ಲಿ ಮಾವೋವಾದಿ ಪ್ರಭಾವದ ಸೀಮೆಯಲ್ಲಿ ಸರ್ಕಾರಿ ಕಾಮಗಾರಿಗಳ ಗುತ್ತಿಗೆ ಹಿಡಿದು ಬಸ್ತರ್ ನ ದೊಡ್ಡ ಗುತ್ತಿಗೆದಾರ ಕುಳ ಎನಿಸಿದ್ದ. 2021ರಲ್ಲಿ ಈತನ ಮದುವೆ ಭಾರೀ ಅದ್ದೂರಿಯಿಂದ ಜರುಗಿತ್ತು. ಮಾವನ ಮನೆಗೆ ಹೆಲಿಕಾಪ್ಟರಿನಲ್ಲಿ ಬಂದಿಳಿದಿದ್ದ. ಮದುವೆಯ ನೃತ್ಯಕ್ಕಾಗಿ ರಷ್ಯಾದಿಂದ ನರ್ತಕಿಯರ ತಂಡವನ್ನು ಕರೆಯಿಸಿದ್ದ. ಮದುವೆ ಔತಣಕೂಟವನ್ನು ಬೀಜಾಪುರದ ಸ್ಟೇಡಿಯಂ ನಲ್ಲಿ ಏರ್ಪಡಿಸಿದ್ದ. ಬಸ್ತರ್ ಹಿಂದೆಂದೂ ಕಂಡು ಕೇಳಿ ಅರಿಯದ ಮದುವೆಯಿದು ಎನ್ನಲಾಗಿದೆ.

ಜಾಗತಿಕವಾಗಿ ಪತ್ರಕರ್ತರ ಹತ್ಯೆ ಪ್ರಮಾಣದಲ್ಲಿ ಇಂದು ಬಾರೀ ಏರಿಕೆಯಾಗಿರುವ ಆತಂಕಕಾರಿ ಅಂಶ ಬೆಳಕಿಗೆ ಬಂದಿದೆ.  ಈ ವರ್ಷ ಒಟ್ಟು 18 ದೇಶದಲ್ಲಿ 44 ಪತ್ರಕರ್ತರು ಹತ್ಯೆಯಾಗಿದ್ದಾರೆ. ಕಳೆದ ವರ್ಷಾವಧಿಗೆ ಹೋಲಿಸಿದರೆ 2018ರ ಮೊದಲ ನಾಲ್ಕು ತಿಂಗಳಲ್ಲಿ  28ರಷ್ಟು ಹೆಚ್ಚು ಪತ್ರಕರ್ತರ ಹತ್ಯೆಯಾಗಿದ್ದಾರೆ ಎಂದು ಜಿನೀವಾ ಮೂಲದ ಪ್ರೆಸ್ ಎಂಬ್ಲಮ್ ಕ್ಯಾಂಪೇನ್ (ಪಿಇಸಿ) ವರದಿ ಮಾಡಿದೆ.

ಭಾರತದಲ್ಲಿ 1992ರ ನಂತರ ಸುಮಾರು 70ಕ್ಕೂ ಹೆಚ್ಚು ಪತ್ರಕರ್ತರನ್ನು ವಿವಿಧ ಕಾರಣಗಳಿಗಾಗಿ ಹತ್ಯೆ ಮಾಡಲಾಗಿದೆ ಎಂದು ವರದಿಯೊಂದು ಹೇಳಿದೆ.

ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...