Homeಮುಖಪುಟಛತ್ತೀಸ್‌ಗಢದಲ್ಲಿ ಪತ್ರಕರ್ತ ಮುಕೇಶ್‌ ಚಂದ್ರಾಕರ್‌ ಹತ್ಯೆ: ಯಾರಿ ಪತ್ರಕರ್ತ, ಏನಿದು ಪ್ರಕರಣ

ಛತ್ತೀಸ್‌ಗಢದಲ್ಲಿ ಪತ್ರಕರ್ತ ಮುಕೇಶ್‌ ಚಂದ್ರಾಕರ್‌ ಹತ್ಯೆ: ಯಾರಿ ಪತ್ರಕರ್ತ, ಏನಿದು ಪ್ರಕರಣ

- Advertisement -
- Advertisement -

ಛತ್ತೀಸ್‌ಗಢದ ಬಿಜಾಪುರದಲ್ಲಿ ರಸ್ತೆ ಕಾಮಗಾರಿಯ ಕುರಿತ ವರದಿ ಮಾಡಿದ್ದ ಕಾರಣಕ್ಕಾಗಿ  28ರ ಹರೆಯದ ಮುಕೇಶ್ ಚಂದ್ರಾಕರ್‌ ಎಂಬ ಪತ್ರಕರ್ತ ಹತ್ಯೆಯಾಗಿದ್ದಾರೆ. ಜನವರಿ 1ರಿಂದ ಕಾಣೆಯಾಗಿದ್ದ ಚಂದ್ರಾಕರ್ ಅವರ ಶವವು ಜನವರಿ 3ರಂದು ಗುತ್ತಿಗೆದಾರರೊಬ್ಬರ ಸೈಟ್‌ನಲ್ಲಿದ್ದ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆಯಾಗಿತ್ತು.

ಇದೊಂದು ವ್ಯವಸ್ಥಿತ ಹತ್ಯೆ ಪ್ರಕರಣವಾಗಿದ್ದು  ಇಲ್ಲಿಯವರೆಗೆ  ಮೂವರು ಶಂಕಿತರನ್ನು ಬಂಧಿಸಲಾಗಿದೆ. ಪತ್ರಕರ್ತನ ಹತ್ಯೆ ರಾಷ್ಟ್ರದೆಲ್ಲೆಡೆ ಭಾರೀ ಚರ್ಚೆಯ ವಿಷಯವಾಗಿದೆ.

ಪತ್ರಕರ್ತನ ಮೃತದೇಹದ ಮೇಲೆ ಶಸ್ತ್ರಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ ಗುರುತುಗಳಿದ್ದವು. ಈ ಪ್ರಕರಣದಲ್ಲಿ ದುಷ್ಕರ್ಮಿಗಳು ಅನುಮಾನಬಾರಬಾರದೆಂದು  ಟ್ಯಾಂಕ್‌ನ ಮೇಲೆ 4 ಇಂಚು ಸಿಮೆಂಟ್ ಸ್ಲ್ಯಾಬ್‌ ಇಟ್ಟು ಬಂದ್ ಮಾಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಛತ್ತೀಸಗಡದ ಬಿಜಾಪುರದ ಮುಕೇಶ್ ಬಾಲ್ಯದಲ್ಲೇ  ತನ್ನ ಹೆತ್ತವರನ್ನು ಕಳೆದುಕೊಂಡಿದ್ದು, ಸಹೋದರ ಯುಕೇಶ್ ಚಂದ್ರಾಕರ್ ಜತೆಗೆ ಬೆಳೆದು ಪತ್ರಕರ್ತನಾದವನು. 2021ರಲ್ಲಿ  ಮಾವೋವಾದಿಗಳು ಅಪಹರಿಸಿದ್ದ ಸಿಆರ್‌ಪಿಎಫ್‌ ಕಮಾಂಡೋ ರಾಕೇಶ್ವರ್ ಸಿಂಗ್ ಮನ್ಹಾಸ್‌ ಬಿಡುಗಡೆಯಲ್ಲಿ ಮುಕೇಶ್ ಚಂದ್ರಾಕರ್‌ ಪ್ರಮುಖ ಪಾತ್ರವಹಿಸಿದ್ದರು.

ಪ್ರಮುಖ ಸುದ್ದಿ ಚಾನೆಲ್‌ಗೆ ಸುದ್ದಿಗಾರನಾಗಿದ್ದ ಮುಕೇಶ್ ಚಂದ್ರಾಕರ್, ಸ್ಥಳೀಯವಾಗಿ ಬಸ್ತರ್‌ ಜಂಕ್ಷನ್ ಎಂಬ ಯೂಟ್ಯೂಬ್ ಚಾನೆಲ್ ಅನ್ನೂ ಹೊಂದಿದ್ದರು. ಅದು ಒಂದೂವರೆ ಲಕ್ಷಕ್ಕೂ ಹೆಚ್ಚು ಚಂದಾದಾರರನ್ನು ಹೊಂದಿತ್ತು. ಅವರ ಯೂಟ್ಯೂಬ್‌ ಚಾನೆಲ್‌ ಬಸ್ತರ್ ಜಂಕ್ಷನ್‌ನಲ್ಲಿ 486 ವಿಡಿಯೋಗಳಿದ್ದು, 1.61 ಲಕ್ಷಕ್ಕೂ ಹೆಚ್ಚು ಚಂದಾದಾರರಿದ್ದಾರೆ. ಇದರಲ್ಲಿರುವ ಹೆಚ್ಚಿನ ವಿಡಿಯೋಗಳು ಸರ್ಕಾರ ಮತ್ತು ಮಾವೋವಾದಿ ಸಂಘರ್ಷಕ್ಕೆ ಸಂಬಂಧಿಸಿವೆ.

ಪತ್ರಕರ್ತನಾಗಿರುವ ಸಹೋದರ ಯುಕೇಶ್‌ ಚಂದ್ರಾಕರ್‌ ಅವರು ಸಲ್ಲಿಸಿದ ದೂರಿನ ಆಧಾರದಲ್ಲಿ ಪೊಲೀಸರು ಮುಕೇಶ್ ಚಂದ್ರಾಕರ್‌ ಮೊಬೈಲ್ ಟ್ರಾಕ್ ಮಾಡಿ ಬಸ್ತಿಯಲ್ಲಿ ಶವ ಪತ್ತೆ ಹಚ್ಚಿದ್ದಾರೆ. ಸುರೇಶ್ ಚಂದ್ರಾಕರ್ ಅವರ ಜಾಗದಲ್ಲಿ ಮೃತದೇಹ ಪತ್ತೆಯಾಗಿದೆ. ಸುರೇಶ್ ಚಂದ್ರಾಕರ್‌ ಅವರು ಗುತ್ತಿಗೆದಾರರಾಗಿದ್ದು, ಅವರ ಹೆಸರನ್ನೂ ಯುಕೇಶ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮುಕೇಶ್ ಚಂದ್ರಾಕರ್‌ ಕೆಲವು ದಿನಗಳ ಹಿಂದೆ ಗಂಗಾಳೂರಿನಿಂದ ನೆಲಸನಾರ್‌ ಗ್ರಾಮದ ರಸ್ತೆ ನಿರ್ಮಾಣದಲ್ಲಿ ಗೋಲ್‌ಮಾಲ್ ಆಗಿರುವುದಾಗಿ ವರದಿ ಮಾಡಿದ್ದರು. ಇದಾದ ಬಳಿಕ ಅವರಿಗೆ ಕೆಲವರಿಂದ ಬೆದರಿಕೆ ಕರೆಗಳು ಹೋಗಿದ್ದವು. ಬೆದರಿಕೆ ಕರೆ ಮಾಡಿದವರ ಪೈಕಿ ಸುರೇಸ್ ಚಂದ್ರಾಕರ್ ಕೂಡ ಇದ್ದರು.

ಮಾವೋವಾದಿಗಳ ವಿರುದ್ಧ ಛತ್ತೀಸಗಢ ಸರ್ಕಾರ ಪೊಲೀಸರ ರಕ್ಷಣೆಯಲ್ಲಿ ಸಂಘಟಿಸಿದ್ದ ‘ಸಲ್ವಾ ಜುಡೂಮ್’ ಎಂಬ ಅರೆಶಸ್ತ್ರ ಪಡೆಯಲ್ಲಿದ್ದ ಸುರೇಶ್ ಚಂದ್ರಾಕರ್ ಹಿನ್ನೆಲೆ ತೀರಾ ಬಡತನದ್ದು. ಆದರೆ ಇತ್ತೀಚಿನ ವರ್ಷಗಳಲ್ಲಿ ಮಾವೋವಾದಿ ಪ್ರಭಾವದ ಸೀಮೆಯಲ್ಲಿ ಸರ್ಕಾರಿ ಕಾಮಗಾರಿಗಳ ಗುತ್ತಿಗೆ ಹಿಡಿದು ಬಸ್ತರ್ ನ ದೊಡ್ಡ ಗುತ್ತಿಗೆದಾರ ಕುಳ ಎನಿಸಿದ್ದ. 2021ರಲ್ಲಿ ಈತನ ಮದುವೆ ಭಾರೀ ಅದ್ದೂರಿಯಿಂದ ಜರುಗಿತ್ತು. ಮಾವನ ಮನೆಗೆ ಹೆಲಿಕಾಪ್ಟರಿನಲ್ಲಿ ಬಂದಿಳಿದಿದ್ದ. ಮದುವೆಯ ನೃತ್ಯಕ್ಕಾಗಿ ರಷ್ಯಾದಿಂದ ನರ್ತಕಿಯರ ತಂಡವನ್ನು ಕರೆಯಿಸಿದ್ದ. ಮದುವೆ ಔತಣಕೂಟವನ್ನು ಬೀಜಾಪುರದ ಸ್ಟೇಡಿಯಂ ನಲ್ಲಿ ಏರ್ಪಡಿಸಿದ್ದ. ಬಸ್ತರ್ ಹಿಂದೆಂದೂ ಕಂಡು ಕೇಳಿ ಅರಿಯದ ಮದುವೆಯಿದು ಎನ್ನಲಾಗಿದೆ.

ಜಾಗತಿಕವಾಗಿ ಪತ್ರಕರ್ತರ ಹತ್ಯೆ ಪ್ರಮಾಣದಲ್ಲಿ ಇಂದು ಬಾರೀ ಏರಿಕೆಯಾಗಿರುವ ಆತಂಕಕಾರಿ ಅಂಶ ಬೆಳಕಿಗೆ ಬಂದಿದೆ.  ಈ ವರ್ಷ ಒಟ್ಟು 18 ದೇಶದಲ್ಲಿ 44 ಪತ್ರಕರ್ತರು ಹತ್ಯೆಯಾಗಿದ್ದಾರೆ. ಕಳೆದ ವರ್ಷಾವಧಿಗೆ ಹೋಲಿಸಿದರೆ 2018ರ ಮೊದಲ ನಾಲ್ಕು ತಿಂಗಳಲ್ಲಿ  28ರಷ್ಟು ಹೆಚ್ಚು ಪತ್ರಕರ್ತರ ಹತ್ಯೆಯಾಗಿದ್ದಾರೆ ಎಂದು ಜಿನೀವಾ ಮೂಲದ ಪ್ರೆಸ್ ಎಂಬ್ಲಮ್ ಕ್ಯಾಂಪೇನ್ (ಪಿಇಸಿ) ವರದಿ ಮಾಡಿದೆ.

ಭಾರತದಲ್ಲಿ 1992ರ ನಂತರ ಸುಮಾರು 70ಕ್ಕೂ ಹೆಚ್ಚು ಪತ್ರಕರ್ತರನ್ನು ವಿವಿಧ ಕಾರಣಗಳಿಗಾಗಿ ಹತ್ಯೆ ಮಾಡಲಾಗಿದೆ ಎಂದು ವರದಿಯೊಂದು ಹೇಳಿದೆ.

ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...