HomeUncategorizedಶಿಕ್ಷಣ ಕ್ಷೇತ್ರದಲ್ಲಿ ಪ್ರಾಬಲ್ಯ ಸಾಧಿಸಿದ ಶಿಕ್ಷಕಿಯರು: ಶೇ.53.3ಕ್ಕೆ ಏರಿಕೆ

ಶಿಕ್ಷಣ ಕ್ಷೇತ್ರದಲ್ಲಿ ಪ್ರಾಬಲ್ಯ ಸಾಧಿಸಿದ ಶಿಕ್ಷಕಿಯರು: ಶೇ.53.3ಕ್ಕೆ ಏರಿಕೆ

- Advertisement -
- Advertisement -

ಹೊಸದಿಲ್ಲಿ: 2023-24ರಲ್ಲಿ ಭಾರತದ್ಯಂತ ಒಟ್ಟು ಶಾಲಾ ಶಿಕ್ಷಕರಲ್ಲಿ ಮಹಿಳಾ ಶಿಕ್ಷಕರು 53.3% ರಷ್ಟಿದ್ದಾರೆ. ಇದು ಇಲ್ಲಿಯವರೆಗಿನ ಶಿಕ್ಷಕಿಯರು ಅತ್ಯಧಿಕವಾಗಿ ದಾಖಲಾದ ಅನುಪಾತವಾಗಿದೆ. ಕಳೆದ ಕೆಲವು ವರ್ಷಗಳಿಂದ ಹೆಚ್ಚಿನ ಲಿಂಗ ವೈವಿಧ್ಯತೆಯಲ್ಲಿ ಬೋಧನಾ ಕ್ಷೇತ್ರವು ಶೀಘ್ರವಾದ ಬದಲಾವಣೆ ಕಾಣುತ್ತಿದೆ ಎಂದು ಇತ್ತೀಚಿನ ಸರ್ಕಾರಿ ಅಂಕಿ-ಅಂಶಗಳು ಹೇಳಿವೆ.

2018-19ರಲ್ಲಿ  50% ರಷ್ಟು ಪುರುಷ ಶಾಲಾ ಶಿಕ್ಷಕರು ಇದ್ದರು. 2018-19ರಲ್ಲಿ 94.3 ಲಕ್ಷ ಒಟ್ಟು ಶಾಲಾ ಶಿಕ್ಷಕರಲ್ಲಿ 47.16 ಲಕ್ಷ (50.01%) ಪುರುಷರು ಮತ್ತು 47.14 ಲಕ್ಷ (49.98%) ಮಹಿಳಾ ಶಿಕ್ಷಕರಿದ್ದರು.  2023-24ರಲ್ಲಿ ಮಹಿಳಾ ಶಿಕ್ಷಕರ ಸಂಖ್ಯೆ 52 ಲಕ್ಷಕ್ಕೆ ಏರಿದೆ, ಪುರುಷ ಶಿಕ್ಷಕರ ಸಂಖ್ಯೆ ಸರಿಸುಮಾರು 45 ಲಕ್ಷಕ್ಕೆ ಇಳಿದಿದೆ.

ಬೇರೆ ರೀತಿಯಲ್ಲಿ ಹೇಳುವುದಾದರೆ, 2018-19 ಮತ್ತು 2023-24ರ ನಡುವೆ, ಶಾಲಾ ಶಿಕ್ಷಕರ ಮಹಿಳಾ ಪ್ರಾತಿನಿಧ್ಯವು ಶೇ.3.3 ಪಾಯಿಂಟ್‌ಗಳಿಂದ 53.3% ಕ್ಕೆ ಜಿಗಿದಿದೆ ಮತ್ತು ಪುರುಷ ಪ್ರಾತಿನಿಧ್ಯವು 46.6% ಕ್ಕೆ ಇಳಿದಿದೆ. ಶಿಕ್ಷಣ ಸಚಿವಾಲಯದಿಂದ ಸಂಕಲಿಸಲ್ಪಟ್ಟ UDISE+ನ ಅಂಕಿ-ಅಂಶವು ಇದನ್ನು ಹೇಳುತ್ತದೆ.  UDISE+ ಎನ್ನುವುದು ಶಾಲಾ ಶಿಕ್ಷಣದ ಕುರಿತು ಭಾರತದಲ್ಲೆಡೆಯ ವ್ಯಾಪಕವಾದ ಅಂಕಿಅಂಶವಾಗಿದೆ ಮತ್ತು ರಾಜ್ಯಗಳು ನೇರವಾಗಿ ಸಲ್ಲಿಸಲಾದ ದತ್ತಾಂಶವನ್ನು ಇದು ಒಳಗೊಂಡಿದೆ. ಸಚಿವಾಲಯವು ಇತ್ತೀಚೆಗೆ 2022-23 ಮತ್ತು 2023-24 ವರ್ಷಗಳ UDISE+ ವರದಿಗಳನ್ನು ಒಟ್ಟಿಗೆ ಬಿಡುಗಡೆ ಮಾಡಿದೆ.

ಮಹಿಳಾ ಶಿಕ್ಷಕಿಯರು 2019-20ರಲ್ಲಿ ಈ ಮೊದಲಿನ 50% ದಾಖಲೆಯನ್ನು ಮುರಿದು 50.7%ಕ್ಕೆ ಏರಿದನ್ನು  ಈ ವರದಿ ತೋರಿಸುತ್ತದೆ. ಅಂದಿನಿಂದ, 2022-23 ಮತ್ತು 2023-24ರಲ್ಲಿ ಅವರ ಪ್ರಾತಿನಿಧ್ಯವು ಕ್ರಮವಾಗಿ 51.3% ರಿಂದ 52.3% ಮತ್ತು ನಂತರ 53.3% ಕ್ಕೆ ಏರಿಕೆಯಾಗಿ ಅವರ ಪಾಲು ಸ್ಥಿರವಾಗಿ ಹೆಚ್ಚುತ್ತಲೇ ಇದೆ.

ಉನ್ನತ ಶಿಕ್ಷಣದಲ್ಲಿ ಇದು ವ್ಯತಿರಿಕ್ತವಾಗಿದೆ. ಅಲ್ಲಿ ಬೋಧನೆಯು ಪುರುಷ ಪ್ರಧಾನ ವೃತ್ತಿಯಾಗಿ ಉಳಿದಿದೆ ಅಖಿಲ ಭಾರತ ಸಮೀಕ್ಷೆಯ ಉನ್ನತ ಶಿಕ್ಷಣದ (AISHE) ದತ್ತಾಂಶದ ಪ್ರಕಾರ 2021-22ರಲ್ಲಿ 57% ಪುರುಷ ಬೋಧಕರಿಗೆ ಹೋಲಿಸಿದರೆ ಮಹಿಳಾ ಬೋಧಕಿಯರು 43%ರಷ್ಟು ಇದ್ದರು. 2018-19ರಲ್ಲಿ ಮಹಿಳೆಯರು  42% ಮತ್ತು ಪುರುಷರು 58% ರಷ್ಟು ಇದ್ದರು.

ಆದಾಗ್ಯೂ, UDISE+ ದತ್ತಾಂಶವನ್ನು ಸೂಕ್ಷ್ಮವಾಗಿ ಗಮನಿಸಿದರೆ, ಖಾಸಗಿ ಶಾಲೆಗಳಲ್ಲಿ ಮಹಿಳಾ ಶಿಕ್ಷಕರ ಹೆಚ್ಚಳವು ಹೆಚ್ಚು ತೀಕ್ಷ್ಣವಾಗಿದೆ. ವಾಸ್ತವವಾಗಿ ಸರ್ಕಾರಿ ಶಾಲೆಗಳಲ್ಲಿ ಬೋಧನಾ ವರ್ಗವು ಪುರುಷರ ಪ್ರಾಬಲ್ಯವನ್ನು ಮುಂದುವರೆಸಿದೆ.

ಇದು 2018-19 ರಿಂದ 2023-24 ರವರೆಗೆ ಪ್ರತಿ ವರ್ಷವೂ ಹಾಗೆಯೇ ಉಳಿದಿದೆ. 2018-19ರಲ್ಲಿ 49.47 ಲಕ್ಷ ಸರ್ಕಾರಿ ಶಾಲಾ ಶಿಕ್ಷಕರಲ್ಲಿ 28.18 ಲಕ್ಷ (57%) ಪುರುಷರು ಮತ್ತು 21.29 ಲಕ್ಷ (43%) ಮಹಿಳೆಯರಿದ್ದಾರೆ. 2023-24ರಲ್ಲಿ ಮಹಿಳೆಯರ ಸಂಖ್ಯೆಯು ಸುಮಾರು 6%ರಷ್ಟು ಏರಿಕೆ ಕಂಡಿದೆ. 22.65 ಲಕ್ಷ ಮಹಿಳೆಯರು ಸರ್ಕಾರಿ ಶಾಲೆಗಳಲ್ಲಿ ಬೋಧಿಸುತ್ತಿದ್ದರೆ, 27.72 ಲಕ್ಷ ಪುರುಷರಿದ್ದಾರೆ.

ಇದಕ್ಕೆ ವ್ಯತಿರಿಕ್ತವಾಗಿ, ಖಾಸಗಿ ಶಾಲೆಗಳಲ್ಲಿ ಬೋಧನೆ ಮಾಡುವ ಮಹಿಳೆಯರ ಸಂಖ್ಯೆಯಲ್ಲಿ ಸುಮಾರು 20% ರಷ್ಟು ಹೆಚ್ಚಿನ ಏರಿಕೆ ಕಂಡಿದೆ. 2018-19ರಿಂದ 2023-24ರವರೆಗಿನ ಎಲ್ಲಾ ವರ್ಷಗಳಲ್ಲಿ ಖಾಸಗಿ ಶಾಲೆಗಳು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಶಿಕ್ಷಕರನ್ನು ಹೊಂದಿವೆ. 2018-19ರಲ್ಲಿ ಒಟ್ಟು 33.04 ಲಕ್ಷ ಖಾಸಗಿ ಶಾಲಾ ಶಿಕ್ಷಕರಲ್ಲಿ 20.63 ಲಕ್ಷ ಮಹಿಳೆಯರಿದ್ದರು. 2023-24ರಲ್ಲಿ 37.30 ಲಕ್ಷ ಖಾಸಗಿ ಶಾಲಾ ಶಿಕ್ಷಕರಲ್ಲಿ 24.76 (66%) ಮಹಿಳೆಯರಿದ್ದರು.

ಕೆಲವು ರಾಜ್ಯಗಳು ಸರ್ಕಾರಿ ಶಾಲೆಗಳಲ್ಲಿ ಮೇಲಿನ ದತ್ತಾಂಶಗಳಿಗೆ ವ್ಯತಿರಿಕ್ತವಾಗಿವೆ. ಉದಾಹರಣೆಗೆ ಕೇರಳದಲ್ಲಿ 78% ಸರ್ಕಾರಿ ಶಾಲಾ ಶಿಕ್ಷಕರು ಮಹಿಳೆಯರಾಗಿದ್ದರೆ, ತಮಿಳುನಾಡಿನಲ್ಲಿ 67% ಮತ್ತು ಪಂಜಾಬ್‌ನಲ್ಲಿ 64%,  ದೆಹಲಿಯಲ್ಲಿ 61%ರಷ್ಟು ಶಿಕ್ಷಕಿಯರಿದ್ದಾರೆ.

ಹರಿಯಾಣದ 767 ಶಾಲೆಗಳಲ್ಲಿ ಬಾಲಕಿಯರ ಶೌಚಾಲಯವಿಲ್ಲ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...