HomeUncategorizedಶಿಕ್ಷಣ ಕ್ಷೇತ್ರದಲ್ಲಿ ಪ್ರಾಬಲ್ಯ ಸಾಧಿಸಿದ ಶಿಕ್ಷಕಿಯರು: ಶೇ.53.3ಕ್ಕೆ ಏರಿಕೆ

ಶಿಕ್ಷಣ ಕ್ಷೇತ್ರದಲ್ಲಿ ಪ್ರಾಬಲ್ಯ ಸಾಧಿಸಿದ ಶಿಕ್ಷಕಿಯರು: ಶೇ.53.3ಕ್ಕೆ ಏರಿಕೆ

- Advertisement -
- Advertisement -

ಹೊಸದಿಲ್ಲಿ: 2023-24ರಲ್ಲಿ ಭಾರತದ್ಯಂತ ಒಟ್ಟು ಶಾಲಾ ಶಿಕ್ಷಕರಲ್ಲಿ ಮಹಿಳಾ ಶಿಕ್ಷಕರು 53.3% ರಷ್ಟಿದ್ದಾರೆ. ಇದು ಇಲ್ಲಿಯವರೆಗಿನ ಶಿಕ್ಷಕಿಯರು ಅತ್ಯಧಿಕವಾಗಿ ದಾಖಲಾದ ಅನುಪಾತವಾಗಿದೆ. ಕಳೆದ ಕೆಲವು ವರ್ಷಗಳಿಂದ ಹೆಚ್ಚಿನ ಲಿಂಗ ವೈವಿಧ್ಯತೆಯಲ್ಲಿ ಬೋಧನಾ ಕ್ಷೇತ್ರವು ಶೀಘ್ರವಾದ ಬದಲಾವಣೆ ಕಾಣುತ್ತಿದೆ ಎಂದು ಇತ್ತೀಚಿನ ಸರ್ಕಾರಿ ಅಂಕಿ-ಅಂಶಗಳು ಹೇಳಿವೆ.

2018-19ರಲ್ಲಿ  50% ರಷ್ಟು ಪುರುಷ ಶಾಲಾ ಶಿಕ್ಷಕರು ಇದ್ದರು. 2018-19ರಲ್ಲಿ 94.3 ಲಕ್ಷ ಒಟ್ಟು ಶಾಲಾ ಶಿಕ್ಷಕರಲ್ಲಿ 47.16 ಲಕ್ಷ (50.01%) ಪುರುಷರು ಮತ್ತು 47.14 ಲಕ್ಷ (49.98%) ಮಹಿಳಾ ಶಿಕ್ಷಕರಿದ್ದರು.  2023-24ರಲ್ಲಿ ಮಹಿಳಾ ಶಿಕ್ಷಕರ ಸಂಖ್ಯೆ 52 ಲಕ್ಷಕ್ಕೆ ಏರಿದೆ, ಪುರುಷ ಶಿಕ್ಷಕರ ಸಂಖ್ಯೆ ಸರಿಸುಮಾರು 45 ಲಕ್ಷಕ್ಕೆ ಇಳಿದಿದೆ.

ಬೇರೆ ರೀತಿಯಲ್ಲಿ ಹೇಳುವುದಾದರೆ, 2018-19 ಮತ್ತು 2023-24ರ ನಡುವೆ, ಶಾಲಾ ಶಿಕ್ಷಕರ ಮಹಿಳಾ ಪ್ರಾತಿನಿಧ್ಯವು ಶೇ.3.3 ಪಾಯಿಂಟ್‌ಗಳಿಂದ 53.3% ಕ್ಕೆ ಜಿಗಿದಿದೆ ಮತ್ತು ಪುರುಷ ಪ್ರಾತಿನಿಧ್ಯವು 46.6% ಕ್ಕೆ ಇಳಿದಿದೆ. ಶಿಕ್ಷಣ ಸಚಿವಾಲಯದಿಂದ ಸಂಕಲಿಸಲ್ಪಟ್ಟ UDISE+ನ ಅಂಕಿ-ಅಂಶವು ಇದನ್ನು ಹೇಳುತ್ತದೆ.  UDISE+ ಎನ್ನುವುದು ಶಾಲಾ ಶಿಕ್ಷಣದ ಕುರಿತು ಭಾರತದಲ್ಲೆಡೆಯ ವ್ಯಾಪಕವಾದ ಅಂಕಿಅಂಶವಾಗಿದೆ ಮತ್ತು ರಾಜ್ಯಗಳು ನೇರವಾಗಿ ಸಲ್ಲಿಸಲಾದ ದತ್ತಾಂಶವನ್ನು ಇದು ಒಳಗೊಂಡಿದೆ. ಸಚಿವಾಲಯವು ಇತ್ತೀಚೆಗೆ 2022-23 ಮತ್ತು 2023-24 ವರ್ಷಗಳ UDISE+ ವರದಿಗಳನ್ನು ಒಟ್ಟಿಗೆ ಬಿಡುಗಡೆ ಮಾಡಿದೆ.

ಮಹಿಳಾ ಶಿಕ್ಷಕಿಯರು 2019-20ರಲ್ಲಿ ಈ ಮೊದಲಿನ 50% ದಾಖಲೆಯನ್ನು ಮುರಿದು 50.7%ಕ್ಕೆ ಏರಿದನ್ನು  ಈ ವರದಿ ತೋರಿಸುತ್ತದೆ. ಅಂದಿನಿಂದ, 2022-23 ಮತ್ತು 2023-24ರಲ್ಲಿ ಅವರ ಪ್ರಾತಿನಿಧ್ಯವು ಕ್ರಮವಾಗಿ 51.3% ರಿಂದ 52.3% ಮತ್ತು ನಂತರ 53.3% ಕ್ಕೆ ಏರಿಕೆಯಾಗಿ ಅವರ ಪಾಲು ಸ್ಥಿರವಾಗಿ ಹೆಚ್ಚುತ್ತಲೇ ಇದೆ.

ಉನ್ನತ ಶಿಕ್ಷಣದಲ್ಲಿ ಇದು ವ್ಯತಿರಿಕ್ತವಾಗಿದೆ. ಅಲ್ಲಿ ಬೋಧನೆಯು ಪುರುಷ ಪ್ರಧಾನ ವೃತ್ತಿಯಾಗಿ ಉಳಿದಿದೆ ಅಖಿಲ ಭಾರತ ಸಮೀಕ್ಷೆಯ ಉನ್ನತ ಶಿಕ್ಷಣದ (AISHE) ದತ್ತಾಂಶದ ಪ್ರಕಾರ 2021-22ರಲ್ಲಿ 57% ಪುರುಷ ಬೋಧಕರಿಗೆ ಹೋಲಿಸಿದರೆ ಮಹಿಳಾ ಬೋಧಕಿಯರು 43%ರಷ್ಟು ಇದ್ದರು. 2018-19ರಲ್ಲಿ ಮಹಿಳೆಯರು  42% ಮತ್ತು ಪುರುಷರು 58% ರಷ್ಟು ಇದ್ದರು.

ಆದಾಗ್ಯೂ, UDISE+ ದತ್ತಾಂಶವನ್ನು ಸೂಕ್ಷ್ಮವಾಗಿ ಗಮನಿಸಿದರೆ, ಖಾಸಗಿ ಶಾಲೆಗಳಲ್ಲಿ ಮಹಿಳಾ ಶಿಕ್ಷಕರ ಹೆಚ್ಚಳವು ಹೆಚ್ಚು ತೀಕ್ಷ್ಣವಾಗಿದೆ. ವಾಸ್ತವವಾಗಿ ಸರ್ಕಾರಿ ಶಾಲೆಗಳಲ್ಲಿ ಬೋಧನಾ ವರ್ಗವು ಪುರುಷರ ಪ್ರಾಬಲ್ಯವನ್ನು ಮುಂದುವರೆಸಿದೆ.

ಇದು 2018-19 ರಿಂದ 2023-24 ರವರೆಗೆ ಪ್ರತಿ ವರ್ಷವೂ ಹಾಗೆಯೇ ಉಳಿದಿದೆ. 2018-19ರಲ್ಲಿ 49.47 ಲಕ್ಷ ಸರ್ಕಾರಿ ಶಾಲಾ ಶಿಕ್ಷಕರಲ್ಲಿ 28.18 ಲಕ್ಷ (57%) ಪುರುಷರು ಮತ್ತು 21.29 ಲಕ್ಷ (43%) ಮಹಿಳೆಯರಿದ್ದಾರೆ. 2023-24ರಲ್ಲಿ ಮಹಿಳೆಯರ ಸಂಖ್ಯೆಯು ಸುಮಾರು 6%ರಷ್ಟು ಏರಿಕೆ ಕಂಡಿದೆ. 22.65 ಲಕ್ಷ ಮಹಿಳೆಯರು ಸರ್ಕಾರಿ ಶಾಲೆಗಳಲ್ಲಿ ಬೋಧಿಸುತ್ತಿದ್ದರೆ, 27.72 ಲಕ್ಷ ಪುರುಷರಿದ್ದಾರೆ.

ಇದಕ್ಕೆ ವ್ಯತಿರಿಕ್ತವಾಗಿ, ಖಾಸಗಿ ಶಾಲೆಗಳಲ್ಲಿ ಬೋಧನೆ ಮಾಡುವ ಮಹಿಳೆಯರ ಸಂಖ್ಯೆಯಲ್ಲಿ ಸುಮಾರು 20% ರಷ್ಟು ಹೆಚ್ಚಿನ ಏರಿಕೆ ಕಂಡಿದೆ. 2018-19ರಿಂದ 2023-24ರವರೆಗಿನ ಎಲ್ಲಾ ವರ್ಷಗಳಲ್ಲಿ ಖಾಸಗಿ ಶಾಲೆಗಳು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಶಿಕ್ಷಕರನ್ನು ಹೊಂದಿವೆ. 2018-19ರಲ್ಲಿ ಒಟ್ಟು 33.04 ಲಕ್ಷ ಖಾಸಗಿ ಶಾಲಾ ಶಿಕ್ಷಕರಲ್ಲಿ 20.63 ಲಕ್ಷ ಮಹಿಳೆಯರಿದ್ದರು. 2023-24ರಲ್ಲಿ 37.30 ಲಕ್ಷ ಖಾಸಗಿ ಶಾಲಾ ಶಿಕ್ಷಕರಲ್ಲಿ 24.76 (66%) ಮಹಿಳೆಯರಿದ್ದರು.

ಕೆಲವು ರಾಜ್ಯಗಳು ಸರ್ಕಾರಿ ಶಾಲೆಗಳಲ್ಲಿ ಮೇಲಿನ ದತ್ತಾಂಶಗಳಿಗೆ ವ್ಯತಿರಿಕ್ತವಾಗಿವೆ. ಉದಾಹರಣೆಗೆ ಕೇರಳದಲ್ಲಿ 78% ಸರ್ಕಾರಿ ಶಾಲಾ ಶಿಕ್ಷಕರು ಮಹಿಳೆಯರಾಗಿದ್ದರೆ, ತಮಿಳುನಾಡಿನಲ್ಲಿ 67% ಮತ್ತು ಪಂಜಾಬ್‌ನಲ್ಲಿ 64%,  ದೆಹಲಿಯಲ್ಲಿ 61%ರಷ್ಟು ಶಿಕ್ಷಕಿಯರಿದ್ದಾರೆ.

ಹರಿಯಾಣದ 767 ಶಾಲೆಗಳಲ್ಲಿ ಬಾಲಕಿಯರ ಶೌಚಾಲಯವಿಲ್ಲ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...