HomeUncategorized'ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ'ಯಿಂದ ಬಸ್ ಪ್ರಯಾಣ ದರ ಏರಿಕೆಗೆ ವಿರೋಧ

‘ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ’ಯಿಂದ ಬಸ್ ಪ್ರಯಾಣ ದರ ಏರಿಕೆಗೆ ವಿರೋಧ

- Advertisement -
- Advertisement -

ರಾಜ್ಯ ಸರ್ಕಾರ ಉದ್ದೇಶಿಸಿರುವ ಬಸ್ ಪ್ರಯಾಣ ದರ ಏರಿಕೆಯನ್ನು ‘ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ’ ವಿರೊಧಿಸಿದ್ದು, ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದೆ. “ಆದಾಯ ಪಾರ್ಕಿಂಗ್ ಶುಲ್ಕ ಮತ್ತು ದಟ್ಟಣೆ ತೆರಿಗೆಯಂತಹ ಉಪಾಯಗಳನ್ನು ಸರ್ಕಾರ ಪರಿಗಣಿಸಬೇಕು ಎಂದು ಹೇಳಿರುವ ವೇದಿಕೆಯು, “ಟನಲ್ ರಸ್ತೆ ಮತ್ತು ಸಿಗ್ನಲ್ ಮುಕ್ತ ಕಾರಿಡಾರ್‌ಗಳಂತಹ ಯೋಜನೆಗಳನ್ನು ಸರ್ಕಾರ ಕೈಬಿಡಬೇಕು ಮತ್ತು ಬಸ್ ವ್ಯವಸ್ಥೆಯನ್ನು ಬಲಪಡಿಸಲು ಆ ಹಣವನ್ನು ಬಳಸಬೇಕು” ಎಂದು ಭಾನುವಾರ ಹೇಳಿದೆ. ಬೆಂಗಳೂರು ಬಸ್ ಪ್ರಯಾಣಿಕರ

ರಾಜ್ಯ ಸರ್ಕಾರ ಬಸ್ ದರ ಹೆಚ್ಚಳ ಮಾಡಿರೋದು ನ್ಯಾಯಯುತವಾಗಿಲ್ಲ ಎಂದು ಹೇಳಿರುವ ವೇದಿಕೆಯು, ಬಸ್ ದರ ಹೆಚ್ಚಿಸುವುದರಿಂದ ಸರ್ಕಾರವು ಜನರನ್ನು ಬಸ್ ಸೇವೆಯಿಂದ ದೂರ ತಳ್ಳುತಿದೆ, ದುಡಿಯುವ ವರ್ಗದ ಬಸ್ ಪ್ರಯಾಣಿಕರಿಗೆ, ಈ ಬಸ್ ದರದಿಂದ ಹೊಡೆತ ಬೀಳುತ್ತದೆ ಹಾಗೂ ಅವರಿಗೆ ಇದನ್ನು ಬರಿಸುವುದು ಕಷ್ಟವಾಗುತ್ತದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಹುಪಾಲು ಕಾರ್ಮಿಕ ವರ್ಗದವರಿಗೆ ಬಸ್ಸು ನಗರ ಸಂಚಾರದ ಜೀವನಾಡಿಯಾಗಿದೆ. ಸಾರ್ವಜನಿಕ ಸಾರಿಗೆಯನ್ನು ಬಳಸುತ್ತಿರುವುದಕ್ಕಾಗಿ ಅವರಿಗೆ ಈ ರೀತಿ ದರ ಏರಿಸಿ ದಂಡ ವಿಧಿಸುವುದು ಅನ್ಯಾಯವಾಗಿದೆ ಎಂದು ವೇದಿಕೆಯು ಹೇಳಿದೆ. ಬೆಂಗಳೂರಿನ ಸಂಚಾರ ಸಮಸ್ಯೆಗೆ ಆರಾಮದಾಯಕ, ಕೈಗೆಟುಕುವ ದರವುಳ್ಳ ಸಾರ್ವಜನಿಕ ಸಾರಿಗೆಯೇ ಪರಿಹಾರ ಎಂದಿರುವ ಬಸ್ ಪ್ರಯಾಣಿಕರ ವೇದಿಕೆ, ಇದರಿಂದ ಪರಿಸರಕ್ಕೂ ಒಳ್ಳೆಯದಾಗುತ್ತದೆ ಎಂದು ಹೇಳಿದೆ.ಬೆಂಗಳೂರು ಬಸ್ ಪ್ರಯಾಣಿಕರ

“ದ್ವಿಚಕ್ರವಾಹನ ಉಳ್ಳ ಬಸ್ ಪ್ರಯಾಣಿಕರು, ಬಸ್ ಅನ್ನು ಬಿಟ್ಟು ಮತ್ತೆ ದ್ವಿಚಕ್ರ ವಾಹನ ಉಪಯೋಗಿಸುವುದು ಪ್ರಾರಂಭಿಸುತ್ತಾರೋ ಎಂಬ ಆತಂಕ ಇದೆ. ಹೆಚ್ಚು ಶುಲ್ಕ ಕೊಟ್ಟು ಐರಾವತ ಹಾಗು ಎಸಿ ವೋಲ್ವೋ ಬಸ್ ಗಳಲ್ಲಿ ಪ್ರಯಾಣಿಸುವ ಗ್ರಾಹಕರು ದರ ಏರಿಕೆಯಿಂದ ಈ ಸೌಲತ್ತನ್ನು ಉಪಯೋಗಿಸುವುದು ನಿಲ್ಲಿಸಬಹುದು ಎಂದು ಸಹ ನಮಗೆ ಆತಂಕವಿದೆ” ಎಂದು ವೇದಿಕೆ ಹೇಳಿದ್ದು, ಸಾರಿಗೆ ನಿಗಮದ ಆದಾಯ ಹೆಚ್ಚಿಸಲು , ಸರ್ಕಾರ ಬೇರೆ ಮಾರ್ಗೋಪಾಯಗಳನ್ನು ಅನುಸರಿಸಬೇಕೆಂದು ಮನವಿ ಮಾಡಿದೆ.

ಜೊತೆಗೆ ಬಸ್ ಸಾರಿಗೆ ಸಂಸ್ಥೆಗಳು ಆದಾಯ ಹೆಚ್ಚಿಸಲು ಕೆಲವು ವಿಧಾನಗಳನ್ನು ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ಸರ್ಕಾರಕ್ಕೆ ಸೂಚಿಸಿದೆ.
1. ಎಲ್ಲ ರಸ್ತೆಗಳಲ್ಲೂ ಪಾರ್ಕಿಂಗ್ ಶುಲ್ಕ ಸಂಗ್ರಹಿಸಿ.
2. ಗರಿಷ್ಟ ಸಂಚಾರ ಸಮಯದಲ್ಲಿ ಖಾಸಗಿ ವಾಹನಗಳಿಂದ ದಟ್ಟಣೆ ಶುಲ್ಕ ( congestion tax) ಸಂಗ್ರಹಿಸಿ.
3. ಕಂಪನಿಗಳಿಗೆ ತಮ್ಮ ನೌಕರರ ಖಾಸಗಿ ಸಂಚಾರದ ಆದರದ ಮೇಲೆ ಟ್ರಾಫಿಕ್ ಸೆಸ್ಸ್ ವಿಧಿಸಿ, ಎಂಬ ಮೂರು ವಿಧಾನಗಳನ್ನು ಸೂಚಿಸಿದೆ.

ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ಹಕ್ಕೊತ್ತಾಯ

1. ಸರ್ಕಾರ ಬಸ್ ದರ ಏರಿಕೆಯನ್ನು ಹಿಂಪಡಿಯಬೇಕು.
2. ಟನಲ್ ರೋಡ್ ಫ್ಲೈಓವರ್ ಮತ್ತು ಮುಂತಾದ ಯೋಜನೆಗಳು, ಎಲ್ಲೂ ಸಹ ವಾಹನ ದಟ್ಟಣೆಯನ್ನು ನಿಲ್ಲಿಸಿಲ್ಲ, ಸಂಚಾರದ ಸಮಸ್ಯೆ ಪರಿಹರಿಸಿಲ್ಲ. ಹಾಗಾಗಿ ಸರ್ಕಾರ ಈ ಯೋಜನೆಗಳನ್ನು ಕೈ ಬಿಡಬೇಕು. ಈ ಯೋಜನೆಗಳಿಗೆ ಸುರಿಯುವ ಬಂಡವಾಳವನ್ನ ಬಸ್ ಸೇವೆ ಬಲಪಡಿಸಲು ಉಪಯೋಗಿಸಬಹುದು.
3. ಬೆಂಗಳೂರಿನ ಸಂಚಾರ ಸಮಸ್ಯೆಗೆ ಪರಿಹಾರವೆಂದರೆ ಹೆಚ್ಚು ಬಸ್‌ಗಳು ಹಾಗೂ ಬಸ್ ಆದ್ಯತೆ ಲೇನ್ ( bus-lanes). ಹಾಗಾಗಿ ಸರ್ಕಾರ ಇದಕ್ಕೆ ಆಧ್ಯತೆ ನೀಡಬೇಕು.
4. ಸರ್ಕಾರ ಬಸ್ ಸೇವೆಯ ಸಾಮರ್ಥ್ಯ ಮತ್ತು ವ್ಯಾಪ್ತಿಯನ್ನು ಹೆಚ್ಚಿಸಬೇಕು.
5. ನಗರಗಳಲ್ಲಿ ಕಾರ್ ಉಪಯೋಗಿಸುವುದನ್ನು ಸರ್ಕಾರ ನಿರುತ್ಸಾಹಗೊಳಿಸಬೇಕು – ಕಾರುಗಳ ಮೇಲೆ ಪಾರ್ಕಿಂಗ್ ಶುಲ್ಕ , ದಟ್ಟಣೆ ಶುಲ್ಕ , ಟ್ರಾಫಿಕ್ ಸೆಸ್ ಅನ್ನು ವಿಧಿಸಬೇಕು. ಸಾರ್ವಜನಿಕ ಸಂಚಾರವನ್ನು ಉಪಯೋಗಿಸಲು ಪ್ರೋತ್ಸಾಹಿಸಬೇಕು, ಹಾಗಾಗಿ ಬಸ್ ದರ ಕಮ್ಮಿ ಅಥವಾ ಉಚಿತ ಮಾಡಬೇಕು.

ಇದನ್ನೂಓದಿ:  ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...