Homeಮುಖಪುಟಸಿಂಧೂ ಕಣಿವೆ ಲಿಪಿ ಅರ್ಥೈಸುವವರಿಗೆ $1 ಮಿಲಿಯನ್ ಬಹುಮಾನ - ತಮಿಳುನಾಡು ಸಿಎಂ ಸ್ಟಾಲಿನ್

ಸಿಂಧೂ ಕಣಿವೆ ಲಿಪಿ ಅರ್ಥೈಸುವವರಿಗೆ $1 ಮಿಲಿಯನ್ ಬಹುಮಾನ – ತಮಿಳುನಾಡು ಸಿಎಂ ಸ್ಟಾಲಿನ್

- Advertisement -
- Advertisement -

ಪ್ರಾಚೀನ ಸಿಂಧೂ ಕಣಿವೆಯ ಲಿಪಿಯು ಶತಮಾನಕ್ಕೂ ಹೆಚ್ಚು ಕಾಲ ಬಿಡಿಸಲಾಗದ ಒಗಟಾಗಿ ಉಳಿದಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಚೆನ್ನೈನಲ್ಲಿ ಹೇಳಿದ್ದು, ಲಿಪಿಗಳನ್ನು ಅರ್ಥೈಸುವಲ್ಲಿ ಯಶಸ್ವಿಯಾಗುವ ತಜ್ಞರು ಅಥವಾ ಸಂಸ್ಥೆಗಳಿಗೆ 1 ಮಿಲಿಯನ್ ಅಮೆರಿಕನ್ ಡಾಲರ್ ಬಹುಮಾನ ನೀಡುವುದಾಗಿ ಅವರು ಘೋಷಿಸಿದ್ದಾರೆ. ಸಿಂಧೂ ಕಣಿವೆ ಲಿಪಿ

ಸಿಂಧೂ ನಾಗರಿಕತೆಯ ಆವಿಷ್ಕಾರದ ಶತಮಾನೋತ್ಸವದ ಅಂಗವಾಗಿ 3 ದಿನಗಳ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಸ್ಟಾಲಿನ್, “ಒಂದು ಕಾಲದಲ್ಲಿ ಪ್ರವರ್ಧಮಾನಕ್ಕೆ ಬಂದ ಸಿಂಧೂ ಕಣಿವೆಯ ನಾಗರಿಕತೆಯ ಲಿಪಿ 100 ವರ್ಷಗಳ ನಂತರವೂ ನಿಗೂಢವಾಗಿಯೇ ಉಳಿದಿದೆ. ಪುರಾತತ್ವಶಾಸ್ತ್ರಜ್ಞರು, ತಮಿಳು ಕಂಪ್ಯೂಟರ್ ಸಾಫ್ಟ್‌ವೇರ್ ತಜ್ಞರು ಮತ್ತು ಪ್ರಪಂಚದಾದ್ಯಂತದ ಕಂಪ್ಯೂಟರ್ ತಜ್ಞರು ಲಿಪಿಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಸಂಶೋಧನೆಗೆ ಉತ್ತೇಜನ ನೀಡಲು ಸರ್ಕಾರ ಒಂದು ಮಿಲಿಯನ್ ಡಾಲರ್ ನೀಡಲಿದೆ’’ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತಮಿಳು ಸಂಸ್ಕೃತಿಯ ಪ್ರಾಚೀನತೆಯನ್ನು ಎತ್ತಿ ಹಿಡಿಯಲು ಶ್ರಮಿಸುತ್ತಿರುವ ನಾಣ್ಯಶಾಸ್ತ್ರಜ್ಞರು ಮತ್ತು ಶಾಸನಶಾಸ್ತ್ರಜ್ಞರನ್ನು ಗೌರವಿಸಲು ಮತ್ತು ಪ್ರೋತ್ಸಾಹಿಸಲು ಸರ್ಕಾರ ಎರಡು ಪ್ರಶಸ್ತಿಗಳನ್ನು ಸ್ಥಾಪಿಸುತ್ತದೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ. ಸಿಂಧೂ ಕಣಿವೆ ಲಿಪಿ

ಸಿಂಧೂ ಕಣಿವೆ ನಾಗರೀಕತೆಯಲ್ಲಿ ವಾಣಿಜ್ಯ ಉದ್ದೇಶಗಳಿಗಾಗಿ ಬಳಸಲಾದ ಮುದ್ರೆಗಳಲ್ಲಿನ ಚಿಹ್ನೆಗಳು ತಮಿಳುನಾಡಿನ ಪುರಾತತ್ತ್ವ ಶಾಸ್ತ್ರದ ಉತ್ಖನನದ ಸಮಯದಲ್ಲಿ ಕಂಡುಬಂದ ಚಿಹ್ನೆಗಳೊಂದಿಗೆ 60 ಪ್ರತಿಶತದಷ್ಟು ಹೋಲಿಕೆಯನ್ನು ಹೊಂದಿವೆ ಎಂದು ಸೂಚಿಸಿದ ಸ್ಟಾಲಿನ್, ಸಿಂಧೂ ಕಣಿವೆಯ ನಾಗರಿಕತೆಯ ಕುಂಡಗಳಲ್ಲಿ ಇರುವ ಚಿಹ್ನೆಗಳು, ತಮಿಳುನಾಡಿನ ಮಣ್ಣಿನ ಪಾತ್ರೆಗಳಲ್ಲಿ ಕಂಡುಬರುವ ಚಿಹ್ನೆಗಳಿಗೆ 90% ಸಾಮ್ಯತೆಗಳನ್ನು ಹೊಂದಿವೆ ಎಂದು ಹೇಳಿದ್ದಾರೆ.

“ಆರ್ಯನ್ ಮತ್ತು ಸಂಸ್ಕೃತ ಭಾರತದ ಮೂಲ ಸಂಸ್ಕೃತಿ ಎಂದು ಹಲವರು ವಾದಿಸುತ್ತಿದ್ದರು. ಆದರೆ, ಜಾನ್ ಮಾರ್ಷಲ್ ಅವರ ಆವಿಷ್ಕಾರವು ಈ ಗ್ರಹಿಕೆಯನ್ನು ಸಂಪೂರ್ಣವಾಗಿ ಬದಲಾಯಿಸಿತು. ಸಿಂಧೂ ಕಣಿವೆ ನಾಗರೀಕತೆಯು ಆರ್ಯರ ನಾಗರಿಕತೆಗಿಂತ ಹಿಂದಿನದು ಮತ್ತು ಸಿಂಧೂ ಕಣಿವೆಯಲ್ಲಿ ಮಾತನಾಡುವ ಭಾಷೆ ದ್ರಾವಿಡವಾಗಿರಬಹುದು ಎಂಬ ಅವರ ವಾದವು ಮತ್ತಷ್ಟು ಬಲಗೊಂಡಿದೆ,” ಎಂದು ಸ್ಟಾಲಿನ್ ಹೇಳಿದ್ದಾರೆ.

ಸಿಂಧೂ ಕಣಿವೆಯಲ್ಲಿ ದ್ರಾವಿಡ ಸಂಕೇತವಾಗಿರುವ ಗೂಳಿಗಳಿವೆ ಎಂದು ಸ್ಟಾಲಿನ್ ಹೇಳಿದ್ದಾರೆ. “ಎತ್ತುಗಳು ಸಿಂಧೂ ಕಣಿವೆಯಿಂದ ತಮಿಳುನಾಡಿನ ಅಲಂಗನಲ್ಲೂರ್ (ಜಲ್ಲಿಕಟ್ಟು ನಡೆಯುವ ಸ್ಥಳ) ವರೆಗೆ ಹರಡಿವೆ. ಪುರಾತನ ತಮಿಳು ಸಾಹಿತ್ಯವು ಗೂಳಿಗಳನ್ನು ಪಳಗಿಸುವ ಬಗ್ಗೆ ಮಾತನಾಡುತ್ತದೆ ಮತ್ತು ಇದನ್ನು ಕೊಲ್ಲೆರು ತಝುವುತಲ್ ಎಂದು ಕರೆಯಲಾಗುತ್ತದೆ. ಸಿಂಧೂ ಕಣಿವೆಯ ಚಿಹ್ನೆಗಳಲ್ಲಿಯೂ ಸಹ ಅದನ್ನು ಪಳಗಿಸಲು ಪ್ರಯತ್ನಿಸಿದ ಯುವಕರನ್ನು ಎತ್ತುವ ಗೂಳಿಗಳ ಚಿತ್ರಗಳಿವೆ” ಎಂದು ಅವರು ಹೇಳಿದ್ದಾರೆ.

ಈ ವಿಷಯದ ಬಗ್ಗೆ ಆಳವಾದ ಜ್ಞಾನ ಹೊಂದಿರುವ ಹಣಕಾಸು ಮತ್ತು ಪುರಾತತ್ವ ಸಚಿವ ತಂಗಂ ತೆನ್ನರಸು ಮತ್ತು ಹಣಕಾಸು ಕಾರ್ಯದರ್ಶಿ ಟಿ.ಉದಯಚಂದ್ರನ್ ಅವರು ರಾಜ್ಯದಲ್ಲಿ ಇರುವುದು ತಮಿಳುನಾಡಿಗೆ ಹೆಮ್ಮೆಯ ವಿಚಾರವಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಸಿಂಧೂ ನಾಗರೀಕತೆ, ಅತ್ಯಂತ ಪ್ರಾಚೀನವಾದ ನಾಗರೀಕತೆಯಾಗಿದ್ದು, ಅದು ಅದರ ನಗರ ಸಂಸ್ಕೃತಿಗೆ ಹೆಸರುವಾಸಿಯಾಗಿದೆ. ಈ ನಾಗರೀಕತೆಯ ಲಿಪಿಯನ್ನು ಇನ್ನೂ ಓದಲು ಸಾಧ್ಯವಾಗಿಲ್ಲ.

ಇದನ್ನೂಓದಿ:  ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...