Homeಮುಖಪುಟಭಾ‍‍‍ಷಣದ ವೇಳೆ ಕೈಕೊಟ್ಟ ಟೆಲಿಪ್ರಾಂಪ್ಟರ್, ಪ್ರಧಾನಿ ಮೋದಿ ಕಕ್ಕಾಬಿಕ್ಕಿ!

ಭಾ‍‍‍ಷಣದ ವೇಳೆ ಕೈಕೊಟ್ಟ ಟೆಲಿಪ್ರಾಂಪ್ಟರ್, ಪ್ರಧಾನಿ ಮೋದಿ ಕಕ್ಕಾಬಿಕ್ಕಿ!

- Advertisement -
- Advertisement -

ದೆಹಲಿ ವಿಧಾನಸಭಾ ಚುನಾವಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಪ್ರಾರಂಭಿಸಿದ್ದಾರೆ. ಪ್ರಚಾರ ಭಾಷಣದ ವೇಳೆ ಅವರ ಟೆಲಿಪ್ರಾಂಪ್ಟರ್ ಕೈಕೊಟ್ಟಿದ್ದರಿಂದ ಮೋದಿ ಅವರು ಕಕ್ಕಾಬಿಕ್ಕಿಯಾದ ಘಟನೆ ಭಾನುವಾರ ಸಂಭವಿಸಿದೆ. ಇದೀಗ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಾ‍‍‍ಷಣದ ವೇಳೆ ಕೈಕೊಟ್ಟ

ಪ್ರಧಾನಿ ಮೋದಿ ಅವರ ತಮ್ಮ ಸಾರ್ವಜನಿಕ ಭಾಷಣಗಳಲ್ಲಿ ಟೆಲಿಪ್ರಾಂಪ್ಟರ್ ಹಾಕಿಕೊಂಡು, ಭಾಷಣ ಮಾಡುತ್ತಾರೆ ಎಂಬ ವಿಚಾರ ಹಲವು ವರ್ಷಗಳಿಂದ ಚರ್ಚೆಯಲ್ಲಿದೆ. ಈ ಹಿಂದೆಯೂ ಒಮ್ಮೆ ಭಾಷಣದ ವೇಳೆ ಟೆಲಿಪ್ರಾಮ್ಟರ್‌ ಕೈಕೊಟ್ಟಿದ್ದರಿಂದ ಮೋದಿ ಅವರು ಮಾತನಾಡುವಾಗ ಕಕ್ಕಾಬಿಕ್ಕಿಯಾಗಿದ್ದು ವರದಿಯಾಗಿತ್ತು. ಇದೀಗ, ಮತ್ತೆ ಅಂತದ್ಧೇ ಘಟನೆ ನಡೆದಿದೆ.

ಭಾನುವಾರ ದೆಹಲಿಯ ರೋಹಿಣಿ ಪ್ರದೇಶದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಮಾವೇಶ ಆಯೋಜಿಸಿತ್ತು. ಪ್ರಚಾರದಲ್ಲಿ ಭಾಗಿಯಾಗಿದ್ದ ಮೋದಿ ಅವರು ಅಬ್ಬರದ ಭಾಷಣ ಮಾಡಲು ಮುಂದಾಗಿದ್ದರು. ಈ ವೇಳೆ, ಟೆಲಿಪ್ರಾಂಪ್ಟರ್ ಕೈಕೊಟ್ಟಿದ್ದು, ಮೋದಿ ಅವರು ಭಾಷಣದ ಮಧ್ಯೆ ತಡವರಿಸಿದ್ದಾರೆ. ಭಾಷಣವನ್ನು ಸುಮಾರು 30 ಸೆಕೆಂಡ್‌ಗಳ ಕಾಲ ನಿಲ್ಲಿಸಿದ್ದು, ಟೆಲಿಪ್ರಾಂಪ್ಟರ್ ಪುನರಾರಂಭವಾದ ಬಳಿಕ ಮತ್ತೆ ಭಾಷಣ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ. ಭಾ‍‍‍ಷಣದ ವೇಳೆ ಕೈಕೊಟ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಘಟನೆಯ ವಿಡಿಯೋವನ್ನು ಹಂಚಿಕೊಂಡಿರುವ ಆಮ್ ಆದ್ಮಿ ಪಕ್ಷ (ಎಎಪಿ) ಪ್ರಧಾನಿ ಮೋದಿ ಅವರು ತಮ್ಮ ಭಾಷಣಗಳ ಸಮಯದಲ್ಲಿ ಟೆಲಿಪ್ರಾಂಪ್ಟರ್‌ ಅನ್ನು ಬಳಸುತ್ತಾರೆ ಎಂಬ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ. “ದೆಹಲಿಯಲ್ಲಿ ಬಿಜೆಪಿಯಂತೆ ಮೋದಿಜಿ ಅವರ ಟೆಲಿಪ್ರಾಂಪ್ಟರ್ ಕೂಡ ವಿಫಲವಾಗಿದೆ…” ಎಎಪಿ ಲೇವಡಿ ಮಾಡಿದೆ.

ಈ ಹಿಂದೆ, 2022ರ ಜನವರಿ 18ರಂದು world economy forum ಆಯೋಜಿಸಿದ್ದ ದಾವೂಸ್ ಅಜೆಂಡಾ ಶೃಂಗಸಭೆಯಲ್ಲಿ ಮೋದಿ ಭಾಗವಹಿಸಿದ್ದರು. ಆ ವೇಳೆಯೂ ಶೃಂಗಸಭೆಯನ್ನು ಉದ್ದೇಶಿಸಿ ಮೋದಿ ಮಾತನಾಡುವಾಗ ಟೆಲಿಪ್ರಾಂಪ್ಟರ್ ಕೈಕೊಟ್ಟಿತ್ತು. ಆಗಲೂ ಭಾಷಣ ಮಾಡುವಾಗ ಮೋದಿ ತಬ್ಬಿಬ್ಬಾಗಿದ್ದರು.

ಆ ವೇಳೆ, ಮೋದಿ ಅವರ ವಿಡಿಯೋವನ್ನು ಹಂಚಿಕೊಂಡಿದ್ದ ಸಾಮಾಜಿಕ ಮಾಧ್ಯಮ ಬಳಕೆದಾರರು, ಪ್ರಧಾನ ಮಂತ್ರಿ ಮೋದಿಯವರು ಕೆಂಪು ಕೋಟೆಯಲ್ಲಿ ಭಾಷಣ ಮಾಡುವಾಗ ಅವರ ಸುತ್ತಲೂ ಕಾಣುವ ಗಾಜಿನ ಫಲಕವು ಬುಲೆಟ್ ಪ್ರೂಫ್ ಗ್ಲಾಸ್ ಎಂದು ಹಲವರು ಭಾವಿಸುತ್ತಾರೆ. ಆದರೆ, ಅದು ವಾಸ್ತವವಾಗಿ ಟೆಲಿಪ್ರಾಂಪ್ಟರ್ ಆಗಿದೆ ಎಂದು ಹೇಳಿದ್ದಾರೆ.

“ಟೆಲಿಪ್ರಾಂಪ್ಟರ್ ಸಹಾಯದಿಂದ ಯಾವುದೇ ಸಮಸ್ಯೆಯಿಲ್ಲದೆ ಪ್ರಧಾನಿ ಭಾಷಣ ಮಾಡುತ್ತಾರೆ. ಅವರ ಭಾಷಣದ ವೇಗವನ್ನು ನಿರ್ವಾಹಕರು ನಿಯಂತ್ರಿಸುತ್ತಾರೆ. ಆದರೆ, ಆ ಟೆಲಿಪ್ರಾಂಪ್ಟರ್ ಕಾಣದಂತೆ ವಿಡಿಯೋಗ್ರಫರ್‌ಗಳು ಚಿತ್ರೀಕರಿಸುತ್ತಾರೆ” ಎಂದು ಆರೋಪಿಸಿದ್ದಾರೆ.

ಅದಾದ ಬಳಿಕ, 2022ರ ಆಗಸ್ಟ್‌ 15ರಂದು ನಡೆದ ಸ್ವಾತಂತ್ರ್ಯ ದಿನಾಚರಣೆಯ ಭಾಷಣದ ವೇಳೆ ಮೋದಿ ಅವರು ಟೆಲಿಪ್ರಾಂಪ್ಟರ್‌ಅನ್ನು ಬಳಸದೆ, ಭಾಷಣದ ಪ್ರಿಂಟ್‌ಔಟ್‌ ತೆಗೆದ ಪೇಪರ್‌ ಬಳಸಿಕೊಂಡು ಭಾಷಣ ಮಾಡಿದ್ದರು. ಇದೀಗ, ಮತ್ತೆ ಟೆಲಿಪ್ರಾಂಪ್ಟರ್ ಬಳಸಿದ್ದು, ಯಡವಟ್ಟು ಮಾಡಿಕೊಂಡಿದ್ದಾರೆ. ಹಾಗಾಗಿ ಮತ್ತೆ ಟ್ರೋಲ್‌ಗೆ ಗುರಿಯಾಗಿದ್ದಾರೆ.

ಇದನ್ನೂಓದಿ:  ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...