Homeಅಂತರಾಷ್ಟ್ರೀಯನ್ಯೂಜಿಲೆಂಡ್ ನಲ್ಲಿ ವೀಸಾ ನಿಯಮಗಳ ಬದಲಾವಣೆ: ಭಾರತೀಯ ವಲಸಿಗ ಕಾರ್ಮಿಕರ ಮೇಲೆ ಇದರ ಪರಿಣಾಮವೇನು?

ನ್ಯೂಜಿಲೆಂಡ್ ನಲ್ಲಿ ವೀಸಾ ನಿಯಮಗಳ ಬದಲಾವಣೆ: ಭಾರತೀಯ ವಲಸಿಗ ಕಾರ್ಮಿಕರ ಮೇಲೆ ಇದರ ಪರಿಣಾಮವೇನು?

- Advertisement -
- Advertisement -

ವೆಲ್ಲಿಂಗ್ಟನ್: ನಿರಂತರವಾಗಿ ಕಾರ್ಮಿಕರ ಕೊರತೆಗಳ ಮಧ್ಯೆ, ವಲಸೆ ಕಾರ್ಯವಿಧಾನಗಳನ್ನು ಸುಗಮಗೊಳಿಸಲು ನ್ಯೂಜಿಲೆಂಡ್ ತನ್ನ ವೀಸಾ ಮತ್ತು ಉದ್ಯೋಗದ ಅವಶ್ಯಕತೆಗೆ ಅನುಗುಣವಾಗಿ ಗಮನಾರ್ಹವಾದ ಮಾರ್ಪಡುಗಳೊಂದಿಗೆ ಹೊಸ ನಿಯಮಗಳನ್ನು ಹೊರಡಿಸಿದೆ. ಈ ನಿಯಮ ಉದ್ಯೋಗಿಗಳಿಗೆ ಮತ್ತು ಉದ್ಯೋಗದಾತರಿಗೆ ವಲಸೆ ದಾರಿಗಳನ್ನು ಸರಳಗೊಳಿಸುವ ಗುರಿಯನ್ನು ಹೊಂದಿದೆ.

ಕಾರ್ಮಿಕರ ಕೊರತೆಯನ್ನು ನಿವಾರಿಸಲು, ನ್ಯೂಜಿಲೆಂಡ್ ಸರ್ಕಾರವು ವಲಸಿಗರಿಗೆ ಕೆಲಸದ ಅನುಭವದ ಮಾನದಂಡವನ್ನು ಮೂರರಿಂದ ಎರಡು ವರ್ಷಗಳವರೆಗೆ ಇಳಿಕೆ ಮಾಡಿದೆ. ಈ ಕ್ರಮವು ಸಮರ್ಥ ಕೆಲಸಗಾರರಿಗೆ ನ್ಯೂಜಿಲೆಂಡ್‌ನಲ್ಲಿ ತಮ್ಮ ಕೌಶಲ್ಯಕ್ಕೆ ಅನುಗುಣವಾಗಿ ಹೆಚ್ಚು ಸುಲಭದ ಉದ್ಯೋಗವನ್ನು ಹುಡುಕಲು ಅನುವು ಮಾಡಿಕೊಡುತ್ತದೆ. ಈ ಹೊಸ ನಿಯಮಗಳು ನ್ಯೂಜಿಲೆಂಡ್‌ನಲ್ಲಿ ಉದ್ಯೋಗಾವಕಾಶಗಳನ್ನು ಬಯಸುವ ಭಾರತೀಯ ವಲಸಿಗರಿಗೆ ಸಹಾಯ ಮಾಡುವ ನಿರೀಕ್ಷೆಯಿದೆ.

ಋತುಮಾನಕ್ಕನುಗುಣವಾದ ಕೆಲಸಗಾರರಿಗೆ ನ್ಯೂಜಿಲೆಂಡ್‌ನಲ್ಲಿ ಉಳಿಯಲು ದೇಶವು ಎರಡು ಹೊಸ ಮಾರ್ಗಗಳನ್ನು ಪರಿಚಯಿಸಿದೆ. ಅನುಭವಿಗಳಾದ ಋತುಮಾನಕ್ಕನುಗುಣದ ಕೆಲಸಗಾರರಿಗೆ ಮೂರು ವರ್ಷಗಳ ಬಹುಪ್ರವೇಶ ವೀಸಾ ಮತ್ತು ಕಡಿಮೆ ಕುಶಲ ಕೆಲಸಗಾರರಿಗೆ ಏಳು ತಿಂಗಳ ಏಕಪ್ರವೇಶ ವೀಸಾವನ್ನು ಪರಿಚಯಿಸಲಾಗಿದೆ. ಕಾಲಕ್ಕನುಗುಣವಾದ ಕಾರ್ಮಿಕರ ಬೇಡಿಕೆಗಳನ್ನು ಸರಿಹೊಂದಿಸಲು ಈ ನಿಯಮಗಳನ್ನು ಮಾಡಲಾಗಿದೆ.

ಇದಲ್ಲದೆ, ಮಾನ್ಯತೆ ಪಡೆದ ಉದ್ಯೋಗದಾತರ ಕೆಲಸದ ವೀಸಾ (AEWV) ಮತ್ತು ನಿರ್ದಿಷ್ಟ ಉದ್ದೇಶದ ಕೆಲಸದ ವೀಸಾ (SPWV) ಗಾಗಿ ಸರಾಸರಿ ವೇತನ ಮಾನದಂಡಗಳನ್ನು ಸರ್ಕಾರವು ತೆಗೆದುಹಾಕಿದೆ. ಹೊಸ ನಿಯಮಗಳ ಅಡಿಯಲ್ಲಿ ಉದ್ಯೋಗದಾತರು ಉದ್ಯೋಗಾವಕಾಶಗಳನ್ನು ಒದಗಿಸುವಾಗ ಮಾರುಕಟ್ಟೆ ದರದ ಪ್ರಕಾರ ಸಂಬಳವನ್ನು ನೀಡಲು ನಿರ್ಬಂಧಿತರಾಗಿದ್ದರೂ, ಅವರು ಇನ್ನು ಮುಂದೆ ಪೂರ್ವನಿರ್ಧರಿತ ಸಂಬಳದ ಮಾನದಂಡವನ್ನು ಪೂರೈಸುವ ಅಗತ್ಯವಿಲ್ಲ. ಇದು ಉದ್ಯೋಗದಾತರಿಗೆ ಸಮಾನವಾದ ಕಾರ್ಮಿಕರ ಸಂಭಾವನೆಯನ್ನು ಉಳಿಸಿಕೊಳ್ಳುವ ಸ್ವಾತಂತ್ರ್ಯವನ್ನು ನೀಡುತ್ತದೆ.

ತಮ್ಮ ಮಕ್ಕಳನ್ನು ನ್ಯೂಜಿಲೆಂಡ್‌ಗೆ ಕರೆತರಲು ಬಯಸುವ ವಲಸಿಗರಿಗೆ, AEWV ಹೊಂದಿರುವವರು ಈಗ ವಾರ್ಷಿಕವಾಗಿ ಕನಿಷ್ಠ NZ$55,844 ಗಳಿಸಬೇಕು. ಈ ಕನಿಷ್ಠ ಮಿತಿಯನ್ನು 2019ರಿಂದ ಬದಲಾಯಿಸಲಾಗಿಲ್ಲ, ವಲಸೆ ಕುಟುಂಬಗಳು ದೇಶದಲ್ಲಿ ವಾಸಿಸುತ್ತಿರುವಾಗ ಆರ್ಥಿಕವಾಗಿ ತಮ್ಮನ್ನು ತಾವು ಆರ್ಥಿಕವಾಗಿ ಸಬಲರಾಗುವುದನ್ನು ಖಚಿತಪಡಿಸಿಕೊಳ್ಳುವುದೇ ಈ ಉದ್ದೇಶದ ಹಿಂದೆ ಆಡಗಿದೆ.

ಇದಲ್ಲದೆ, ಆಸ್ಟ್ರೇಲಿಯನ್ ಮತ್ತು ನ್ಯೂಜಿಲೆಂಡ್ ಸ್ಟ್ಯಾಂಡರ್ಡ್ ಕ್ಲಾಸಿಫಿಕೇಶನ್ ಆಫ್ ಆಕ್ಯುಪೇಷನ್ಸ್ (ANZSCO) ಕೌಶಲ್ಯ ಮಟ್ಟದಲ್ಲಿ 4 ಅಥವಾ 5 ರೊಳಗೆ ಬರುವ ಉದ್ಯೋಗಿಗಳಿಗೆ ನ್ಯೂಜಿಲೆಂಡ್ ಎರಡು ವರ್ಷಗಳ ವೀಸಾ ಅವಧಿಯನ್ನು ಮೂರು ವರ್ಷಗಳವರೆಗೆ ವಿಸ್ತರಿಸಿದೆ. ಎರಡು ವರ್ಷಗಳ ವೀಸಾ ಹೊಂದಿರುವ ಈ ಉದ್ಯೋಗಗಳಲ್ಲಿ ಪ್ರಸ್ತುತ ಉದ್ಯೋಗಿಗಳು ಒಂದು ವರ್ಷದ ವಿಸ್ತರಣೆಯನ್ನು ಕೋರಬಹುದಾಗಿದೆ.

ಕೌಶಲ್ಯ ಮಟ್ಟ 4 ಅಥವಾ 5 ಗಾಗಿ ಉದ್ಯೋಗಾವಕಾಶಗಳನ್ನು ಒದಗಿಸುವಾಗ ಉದ್ಯೋಗದಾತರು 21 ದಿನದ ಕಡ್ಡಾಯ ನೇಮಕಾತಿ ಅವಧಿಯನ್ನು ಅನುಸರಿಸುವ ಅಗತ್ಯವಿಲ್ಲ. ಅವರು ಸ್ಥಳೀಯವಾಗಿ ನೇಮಕ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ತೋರಿಸಲು ಅರ್ಹ ಅಭ್ಯರ್ಥಿಗಳಿಗಾಗಿ ಜಾಹೀರಾತು ಮತ್ತು ಸಂದರ್ಶನ ಮಾಡಬಹುದಾಗಿದೆ.

ಕಟ್ಟಡದಂತಹ ನಿರ್ಮಾಣ ಉದ್ಯಮದಲ್ಲಿನ ಕಾರ್ಮಿಕರ ಕೊರತೆಯನ್ನು ಪರಿಹರಿಸುವ ಸಲುವಾಗಿ ಸರ್ಕಾರವು  ದೇಶೀಯ ಉದ್ಯೋಗಿಗಳ ಮಾನದಂಡವನ್ನು %35ರಿಂದ % 15ಕ್ಕೆ ಇಳಿಕೆ ಮಾಡಿದೆ.

ಈ ವರ್ಷದಿಂದ ಮಾನ್ಯತೆ ಪಡೆದ ಉದ್ಯೋಗದಾತರು ನ್ಯೂಜಿಲೆಂಡ್ ಒದಗಿಸಿದ ಆನ್‌ಲೈನ್ ತರಬೇತಿ ಮಾನದಂಡಗಳನ್ನು ಪೂರ್ಣಗೊಳಿಸುವ ಅಗತ್ಯವಿಲ್ಲ. ಬದಲಿಗೆ ಉದ್ಯೋಗ ಹಕ್ಕುಗಳು ಮತ್ತು ಜವಾಬ್ದಾರಿಗಳ ಮೇಲೆ ಸುಲಭ ಪ್ರವೇಶದ ಕೊಡುಗೆಯನ್ನು ಅದು ನೀಡಿದೆ.

ಏಪ್ರಿಲ್ 2025ರಿಂದ ವಿದ್ಯಾರ್ಥಿ ವೀಸಾ ಅಥವಾ ಯಾವುದೇ ಇತರ ಕೆಲಸದಿಂದ AEWVಗೆ ಪರಿವರ್ತನೆ ಮಾಡಲು ಬಯಸುವ ವಲಸಿಗರಿಗೆ ಮಧ್ಯಂತರ ಕೆಲಸದ ಹಕ್ಕುಗಳನ್ನು ನೀಡಲಾಗುತ್ತದೆ.

ಭಾ‍‍‍ಷಣದ ವೇಳೆ ಕೈಕೊಟ್ಟ ಟೆಲಿಪ್ರಾಂಪ್ಟರ್, ಪ್ರಧಾನಿ ಮೋದಿ ಕಕ್ಕಾಬಿಕ್ಕಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...