Homeಅಂತರಾಷ್ಟ್ರೀಯನ್ಯೂಜಿಲೆಂಡ್ ನಲ್ಲಿ ವೀಸಾ ನಿಯಮಗಳ ಬದಲಾವಣೆ: ಭಾರತೀಯ ವಲಸಿಗ ಕಾರ್ಮಿಕರ ಮೇಲೆ ಇದರ ಪರಿಣಾಮವೇನು?

ನ್ಯೂಜಿಲೆಂಡ್ ನಲ್ಲಿ ವೀಸಾ ನಿಯಮಗಳ ಬದಲಾವಣೆ: ಭಾರತೀಯ ವಲಸಿಗ ಕಾರ್ಮಿಕರ ಮೇಲೆ ಇದರ ಪರಿಣಾಮವೇನು?

- Advertisement -
- Advertisement -

ವೆಲ್ಲಿಂಗ್ಟನ್: ನಿರಂತರವಾಗಿ ಕಾರ್ಮಿಕರ ಕೊರತೆಗಳ ಮಧ್ಯೆ, ವಲಸೆ ಕಾರ್ಯವಿಧಾನಗಳನ್ನು ಸುಗಮಗೊಳಿಸಲು ನ್ಯೂಜಿಲೆಂಡ್ ತನ್ನ ವೀಸಾ ಮತ್ತು ಉದ್ಯೋಗದ ಅವಶ್ಯಕತೆಗೆ ಅನುಗುಣವಾಗಿ ಗಮನಾರ್ಹವಾದ ಮಾರ್ಪಡುಗಳೊಂದಿಗೆ ಹೊಸ ನಿಯಮಗಳನ್ನು ಹೊರಡಿಸಿದೆ. ಈ ನಿಯಮ ಉದ್ಯೋಗಿಗಳಿಗೆ ಮತ್ತು ಉದ್ಯೋಗದಾತರಿಗೆ ವಲಸೆ ದಾರಿಗಳನ್ನು ಸರಳಗೊಳಿಸುವ ಗುರಿಯನ್ನು ಹೊಂದಿದೆ.

ಕಾರ್ಮಿಕರ ಕೊರತೆಯನ್ನು ನಿವಾರಿಸಲು, ನ್ಯೂಜಿಲೆಂಡ್ ಸರ್ಕಾರವು ವಲಸಿಗರಿಗೆ ಕೆಲಸದ ಅನುಭವದ ಮಾನದಂಡವನ್ನು ಮೂರರಿಂದ ಎರಡು ವರ್ಷಗಳವರೆಗೆ ಇಳಿಕೆ ಮಾಡಿದೆ. ಈ ಕ್ರಮವು ಸಮರ್ಥ ಕೆಲಸಗಾರರಿಗೆ ನ್ಯೂಜಿಲೆಂಡ್‌ನಲ್ಲಿ ತಮ್ಮ ಕೌಶಲ್ಯಕ್ಕೆ ಅನುಗುಣವಾಗಿ ಹೆಚ್ಚು ಸುಲಭದ ಉದ್ಯೋಗವನ್ನು ಹುಡುಕಲು ಅನುವು ಮಾಡಿಕೊಡುತ್ತದೆ. ಈ ಹೊಸ ನಿಯಮಗಳು ನ್ಯೂಜಿಲೆಂಡ್‌ನಲ್ಲಿ ಉದ್ಯೋಗಾವಕಾಶಗಳನ್ನು ಬಯಸುವ ಭಾರತೀಯ ವಲಸಿಗರಿಗೆ ಸಹಾಯ ಮಾಡುವ ನಿರೀಕ್ಷೆಯಿದೆ.

ಋತುಮಾನಕ್ಕನುಗುಣವಾದ ಕೆಲಸಗಾರರಿಗೆ ನ್ಯೂಜಿಲೆಂಡ್‌ನಲ್ಲಿ ಉಳಿಯಲು ದೇಶವು ಎರಡು ಹೊಸ ಮಾರ್ಗಗಳನ್ನು ಪರಿಚಯಿಸಿದೆ. ಅನುಭವಿಗಳಾದ ಋತುಮಾನಕ್ಕನುಗುಣದ ಕೆಲಸಗಾರರಿಗೆ ಮೂರು ವರ್ಷಗಳ ಬಹುಪ್ರವೇಶ ವೀಸಾ ಮತ್ತು ಕಡಿಮೆ ಕುಶಲ ಕೆಲಸಗಾರರಿಗೆ ಏಳು ತಿಂಗಳ ಏಕಪ್ರವೇಶ ವೀಸಾವನ್ನು ಪರಿಚಯಿಸಲಾಗಿದೆ. ಕಾಲಕ್ಕನುಗುಣವಾದ ಕಾರ್ಮಿಕರ ಬೇಡಿಕೆಗಳನ್ನು ಸರಿಹೊಂದಿಸಲು ಈ ನಿಯಮಗಳನ್ನು ಮಾಡಲಾಗಿದೆ.

ಇದಲ್ಲದೆ, ಮಾನ್ಯತೆ ಪಡೆದ ಉದ್ಯೋಗದಾತರ ಕೆಲಸದ ವೀಸಾ (AEWV) ಮತ್ತು ನಿರ್ದಿಷ್ಟ ಉದ್ದೇಶದ ಕೆಲಸದ ವೀಸಾ (SPWV) ಗಾಗಿ ಸರಾಸರಿ ವೇತನ ಮಾನದಂಡಗಳನ್ನು ಸರ್ಕಾರವು ತೆಗೆದುಹಾಕಿದೆ. ಹೊಸ ನಿಯಮಗಳ ಅಡಿಯಲ್ಲಿ ಉದ್ಯೋಗದಾತರು ಉದ್ಯೋಗಾವಕಾಶಗಳನ್ನು ಒದಗಿಸುವಾಗ ಮಾರುಕಟ್ಟೆ ದರದ ಪ್ರಕಾರ ಸಂಬಳವನ್ನು ನೀಡಲು ನಿರ್ಬಂಧಿತರಾಗಿದ್ದರೂ, ಅವರು ಇನ್ನು ಮುಂದೆ ಪೂರ್ವನಿರ್ಧರಿತ ಸಂಬಳದ ಮಾನದಂಡವನ್ನು ಪೂರೈಸುವ ಅಗತ್ಯವಿಲ್ಲ. ಇದು ಉದ್ಯೋಗದಾತರಿಗೆ ಸಮಾನವಾದ ಕಾರ್ಮಿಕರ ಸಂಭಾವನೆಯನ್ನು ಉಳಿಸಿಕೊಳ್ಳುವ ಸ್ವಾತಂತ್ರ್ಯವನ್ನು ನೀಡುತ್ತದೆ.

ತಮ್ಮ ಮಕ್ಕಳನ್ನು ನ್ಯೂಜಿಲೆಂಡ್‌ಗೆ ಕರೆತರಲು ಬಯಸುವ ವಲಸಿಗರಿಗೆ, AEWV ಹೊಂದಿರುವವರು ಈಗ ವಾರ್ಷಿಕವಾಗಿ ಕನಿಷ್ಠ NZ$55,844 ಗಳಿಸಬೇಕು. ಈ ಕನಿಷ್ಠ ಮಿತಿಯನ್ನು 2019ರಿಂದ ಬದಲಾಯಿಸಲಾಗಿಲ್ಲ, ವಲಸೆ ಕುಟುಂಬಗಳು ದೇಶದಲ್ಲಿ ವಾಸಿಸುತ್ತಿರುವಾಗ ಆರ್ಥಿಕವಾಗಿ ತಮ್ಮನ್ನು ತಾವು ಆರ್ಥಿಕವಾಗಿ ಸಬಲರಾಗುವುದನ್ನು ಖಚಿತಪಡಿಸಿಕೊಳ್ಳುವುದೇ ಈ ಉದ್ದೇಶದ ಹಿಂದೆ ಆಡಗಿದೆ.

ಇದಲ್ಲದೆ, ಆಸ್ಟ್ರೇಲಿಯನ್ ಮತ್ತು ನ್ಯೂಜಿಲೆಂಡ್ ಸ್ಟ್ಯಾಂಡರ್ಡ್ ಕ್ಲಾಸಿಫಿಕೇಶನ್ ಆಫ್ ಆಕ್ಯುಪೇಷನ್ಸ್ (ANZSCO) ಕೌಶಲ್ಯ ಮಟ್ಟದಲ್ಲಿ 4 ಅಥವಾ 5 ರೊಳಗೆ ಬರುವ ಉದ್ಯೋಗಿಗಳಿಗೆ ನ್ಯೂಜಿಲೆಂಡ್ ಎರಡು ವರ್ಷಗಳ ವೀಸಾ ಅವಧಿಯನ್ನು ಮೂರು ವರ್ಷಗಳವರೆಗೆ ವಿಸ್ತರಿಸಿದೆ. ಎರಡು ವರ್ಷಗಳ ವೀಸಾ ಹೊಂದಿರುವ ಈ ಉದ್ಯೋಗಗಳಲ್ಲಿ ಪ್ರಸ್ತುತ ಉದ್ಯೋಗಿಗಳು ಒಂದು ವರ್ಷದ ವಿಸ್ತರಣೆಯನ್ನು ಕೋರಬಹುದಾಗಿದೆ.

ಕೌಶಲ್ಯ ಮಟ್ಟ 4 ಅಥವಾ 5 ಗಾಗಿ ಉದ್ಯೋಗಾವಕಾಶಗಳನ್ನು ಒದಗಿಸುವಾಗ ಉದ್ಯೋಗದಾತರು 21 ದಿನದ ಕಡ್ಡಾಯ ನೇಮಕಾತಿ ಅವಧಿಯನ್ನು ಅನುಸರಿಸುವ ಅಗತ್ಯವಿಲ್ಲ. ಅವರು ಸ್ಥಳೀಯವಾಗಿ ನೇಮಕ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ತೋರಿಸಲು ಅರ್ಹ ಅಭ್ಯರ್ಥಿಗಳಿಗಾಗಿ ಜಾಹೀರಾತು ಮತ್ತು ಸಂದರ್ಶನ ಮಾಡಬಹುದಾಗಿದೆ.

ಕಟ್ಟಡದಂತಹ ನಿರ್ಮಾಣ ಉದ್ಯಮದಲ್ಲಿನ ಕಾರ್ಮಿಕರ ಕೊರತೆಯನ್ನು ಪರಿಹರಿಸುವ ಸಲುವಾಗಿ ಸರ್ಕಾರವು  ದೇಶೀಯ ಉದ್ಯೋಗಿಗಳ ಮಾನದಂಡವನ್ನು %35ರಿಂದ % 15ಕ್ಕೆ ಇಳಿಕೆ ಮಾಡಿದೆ.

ಈ ವರ್ಷದಿಂದ ಮಾನ್ಯತೆ ಪಡೆದ ಉದ್ಯೋಗದಾತರು ನ್ಯೂಜಿಲೆಂಡ್ ಒದಗಿಸಿದ ಆನ್‌ಲೈನ್ ತರಬೇತಿ ಮಾನದಂಡಗಳನ್ನು ಪೂರ್ಣಗೊಳಿಸುವ ಅಗತ್ಯವಿಲ್ಲ. ಬದಲಿಗೆ ಉದ್ಯೋಗ ಹಕ್ಕುಗಳು ಮತ್ತು ಜವಾಬ್ದಾರಿಗಳ ಮೇಲೆ ಸುಲಭ ಪ್ರವೇಶದ ಕೊಡುಗೆಯನ್ನು ಅದು ನೀಡಿದೆ.

ಏಪ್ರಿಲ್ 2025ರಿಂದ ವಿದ್ಯಾರ್ಥಿ ವೀಸಾ ಅಥವಾ ಯಾವುದೇ ಇತರ ಕೆಲಸದಿಂದ AEWVಗೆ ಪರಿವರ್ತನೆ ಮಾಡಲು ಬಯಸುವ ವಲಸಿಗರಿಗೆ ಮಧ್ಯಂತರ ಕೆಲಸದ ಹಕ್ಕುಗಳನ್ನು ನೀಡಲಾಗುತ್ತದೆ.

ಭಾ‍‍‍ಷಣದ ವೇಳೆ ಕೈಕೊಟ್ಟ ಟೆಲಿಪ್ರಾಂಪ್ಟರ್, ಪ್ರಧಾನಿ ಮೋದಿ ಕಕ್ಕಾಬಿಕ್ಕಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...