HomeUncategorizedಒಳ ಮೀಸಲಾತಿ ಕಲ್ಪಿಸಲು ಸರ್ಕಾರ ಬದ್ಧ: ಯುವಜನೋತ್ಸವದಲ್ಲಿ ಸಿದ್ದರಾಮಯ್ಯ

ಒಳ ಮೀಸಲಾತಿ ಕಲ್ಪಿಸಲು ಸರ್ಕಾರ ಬದ್ಧ: ಯುವಜನೋತ್ಸವದಲ್ಲಿ ಸಿದ್ದರಾಮಯ್ಯ

- Advertisement -
- Advertisement -

ದಾವಣಗೆರೆ: ಪರಿಶಿಷ್ಟ ಜಾತಿಗಳಲ್ಲಿ (ಎಸ್‌ಸಿ) ಒಳ ಮೀಸಲಾತಿ ಕಲ್ಪಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.

ದಾವಣಗೆರೆಯಲ್ಲಿ ರಾಜ್ಯಮಟ್ಟದ ಯುವಜನೋತ್ಸವವನ್ನು ಉದ್ಘಾಟಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಮತ್ತ ಪಕ್ಷದ ಅಧ್ಯಕ್ಷ ಸ್ಥಾನದ ಬದಲಾವಣೆಯ ಊಹಾಪೋಹಗಳಿಗೆ ಸಂಬಂಧಿಸಿದ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಮತ್ತು ತಮ್ಮ ಸಂಪುಟದಲ್ಲಿ ಖಾಲಿ ಇರುವ ಸ್ಥಾನವನ್ನು ಭರ್ತಿ ಮಾಡುವ ಬಗ್ಗೆ ರಾಜ್ಯದ ನಾಯಕತ್ವದೊಂದಿಗೆ ಸಮಾಲೋಚನೆಯಲ್ಲಿ ಅವರು ನಿರ್ಧರಿಸುತ್ತಾರೆ ಎಂದು ಸಿಎಂ ತಿಳಿಸಿದ್ದಾರೆ.

ಒಳಮೀಸಲಾತಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ, ಆದರೆ ಪ್ರಾಯೋಗಿಕ ದತ್ತಾಂಶ ಇಲ್ಲ ಎಂದು ಕೆಲವರು ಹೇಳಿರುವುದರಿಂದ (ನ್ಯಾಯಮೂರ್ತಿ) ನಾಗಮೋಹನ್ ದಾಸ್ ನೇತೃತ್ವದಲ್ಲಿ ಆಯೋಗ ರಚಿಸಲಾಗಿದೆ. ಒಳಮೀಸಲಾತಿ ನೀಡಲು ನಾವು ಬದ್ಧರಾಗಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಎಸ್‌ಸಿಗಳಲ್ಲಿ ಒಳ ಮೀಸಲಾತಿಯನ್ನು ಶಿಫಾರಸು ಮಾಡುವ ಆಯೋಗದ ಮುಖ್ಯಸ್ಥರಾಗಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌ಎನ್ ನಾಗಮೋಹನ್ ದಾಸ್ ಅವರನ್ನು ಸರ್ಕಾರ ನವೆಂಬರ್‌ನಲ್ಲಿ ನೇಮಿಸಿತ್ತು.
ಎಸ್‌ಸಿಗಳ ಅನೇಕ ಸಮುದಾಯಗಳು ಇನ್ನೂ ಅಂಚಿನಲ್ಲಿರುವಾಗ ಕೆಲವು ಪ್ರಭಾವಿ ಉಪಜಾತಿಗಳು ಮಾತ್ರ ಬಹುಪಾಲು ಪ್ರಯೋಜನಗಳನ್ನು ಕಸಿದುಕೊಳ್ಳುತ್ತಿವೆ ಎಂದು ಆರೋಪಿಸಿ ಒಳ ಮೀಸಲಾತಿಗೆ ಒತ್ತಾಯಿಸುತ್ತಿದ್ದಾರೆ ಎಂದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರನ್ನು ಬದಲಾಯಿಸುವ ಕುರಿತು ಕೇಳಿದ ಪ್ರಶ್ನೆಗೆ, “ಇದನ್ನು ಹೈಕಮಾಂಡ್ ನಿರ್ಧರಿಸುತ್ತದೆ, ನಾವಲ್ಲ, ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿ — ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ” ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷರಾಗಿ ನಾಲ್ಕು ವರ್ಷ ಪೂರೈಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಸ್ತುತ ಹುದ್ದೆಯಲ್ಲಿ ಮುಂದುವರಿಯುತ್ತಿದ್ದಾರೆ. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅವ್ಯವಹಾರ ಆರೋಪದ ಹಿನ್ನೆಲೆಯಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಸಚಿವ ಸಂಪುಟದಲ್ಲಿ ಖಾಲಿ ಇರುವ ಸ್ಥಾನವನ್ನು ತುಂಬುವ ಕುರಿತು ಹೈಕಮಾಂಡ್ ಜೊತೆ ಚರ್ಚಿಸುತ್ತೇವೆ ಎಂದು ತಿಳಿಸಿದರು.

ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಮಾತನಾಡಿ, ವಿಷಯ ನ್ಯಾಯಾಲಯದಲ್ಲಿದೆ. ಅಲ್ಲಿಯೇ ತೀರ್ಮಾನವಾಗಬೇಕು, ಚುನಾವಣೆ ನಡೆಸಲು ಸರ್ಕಾರ ಸಿದ್ಧವಾಗಿದೆ ಎಂದರು.

ಬೆಂಗಳೂರಿನಲ್ಲಿ ಸಚಿವರೊಂದಿಗೆ ಊಟಕ್ಕೆ ಸಭೆ ಸೇರಿದ ಬಗ್ಗೆ ಕುರಿತು ಪ್ರಶ್ನಿಸಿದ ಅವರು, ಊಟಕ್ಕೆ ಸೇರುವುದು ತಪ್ಪಾ. ನಾಲ್ಕೈದು ಮಂದಿ ಊಟಕ್ಕೆ ಸೇರುವುದು ಸಹಜವಲ್ಲವೇ. ರಾಜಕಾರಣಿಗಳು ಜೊತೆಯಾಗಿ ಊಟ ಮಾಡಿದರೆ ಅದನ್ನು ಬೇರೆ ರೀತಿಯಲ್ಲಿ ವ್ಯಾಖ್ಯಾನಿಸುವುದು ಸರಿಯಲ್ಲ ಎಂದರು.

ಕೆಲವರು ನಾನ್ ವೆಜ್ ಊಟ ಮಾಡುತ್ತಾರೆ, ಇನ್ನೂ ಕೆಲವರು ವೆಜ್ ಊಟ ಮಾಡುತ್ತಾರೆ. ಅದೇ ರೀತಿ ನಾವು ಸೇರಿದ್ದೇವು. ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಪುನರುಚ್ಚರಿಸಿದರು.

‘ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ’ಯಿಂದ ಬಸ್ ಪ್ರಯಾಣ ದರ ಏರಿಕೆಗೆ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...