Homeಮುಖಪುಟಸ್ಫೇನ್ ದಂಪತಿಯ ದತ್ತುಪುತ್ರಿ 20 ವರ್ಷದ ನಂತರ ಹೆತ್ತವರ ಹುಡುಕುತ್ತಾ ಒಡಿಶಾಗೆ.... 

ಸ್ಫೇನ್ ದಂಪತಿಯ ದತ್ತುಪುತ್ರಿ 20 ವರ್ಷದ ನಂತರ ಹೆತ್ತವರ ಹುಡುಕುತ್ತಾ ಒಡಿಶಾಗೆ…. 

- Advertisement -
- Advertisement -

ಭುವನೇಶ್ವರ: 20 ವರ್ಷಗಳ ಹಿಂದೆ ತನ್ನ ತಾಯಿಯಿಂದ ತೊರೆಯಲ್ಪಟ್ಟಿದ್ದ ಮತ್ತು ಸ್ಪ್ಯಾನಿಷ್ ದಂಪತಿಗಳಿಂದ ದತ್ತು ಪಡೆದಿರುವ ಭಾರತೀಯ ಮೂಲದ ಮಹಿಳೆಯೊಬ್ಬರು ತನ್ನ ಹೆತ್ತ ತಾಯಿಯನ್ನು ಹುಡುಕಲು ಒಡಿಶಾಗೆ ಬಂದಿದ್ದಾರೆ.

ಸ್ಪೇನ್‌ನಲ್ಲಿ ಮಕ್ಕಳ ಶಿಕ್ಷಣದ ಸಂಶೋಧಕಿ ಸ್ನೇಹಾ, ತನ್ನ ಮೂಲದ ಬಗ್ಗೆ ಸ್ವಲ್ಪ ಮಾಹಿತಿಯೊಂದಿಗೆ ತನ್ನ ಬೇರುಗಳನ್ನು ಪತ್ತೆಹಚ್ಚಲು ಭಾರತಕ್ಕೆ ಪ್ರಯಾಣ ಬೆಳೆಸಿದ್ದಾಳೆ. ಆಕೆಯ ಸ್ಪ್ಯಾನಿಷ್ ಪೋಷಕರಾದ ಗೆಮಾ ವಿಡಾಲ್ ಮತ್ತು ಜುವಾನ್ ಜೋಶ್ ಅವರು ಸ್ನೇಹಾ ಅವರ ಹುಡುಕಾಟವನ್ನು ಬೆಂಬಲಿಸಿ, ಪ್ರವಾಸದಲ್ಲಿ ಅವಳೊಂದಿಗೆ ಸಹ ಬಂದಿದ್ದಾರೆ.

ಅವರು ಭುವನೇಶ್ವರಕ್ಕೆ ಇದೀಗ ಬಂದಿದ್ದಾರೆ. ಅಲ್ಲಿ ಅವರು ಸ್ನೇಹಾ ಮತ್ತು ಅವರ ಸಹೋದರ ಸೋಮು ಅವರನ್ನು 2010ರಲ್ಲಿ ಅನಾಥಾಶ್ರಮದಿಂದ ದತ್ತು ಪಡೆದಿದ್ದರು. 2005ರಲ್ಲಿ ಸ್ನೇಹಾ ಕೇವಲ ಒಂದು ವರ್ಷದವಳಿದ್ದಾಗ ಅವರ ತಾಯಿ ಅವರನ್ನು ತೊರೆದ ನಂತರ ಈ ಒಡಹುಟ್ಟಿದವರು ಅನಾಥಾಶ್ರಮದಲ್ಲಿ ವಾಸಿಸುತ್ತಿದ್ದರು.

ಸ್ಪೇನ್‌ನಿಂದ ಭುವನೇಶ್ವರಕ್ಕೆ ನನ್ನ ಪ್ರಯಾಣದ ಉದ್ದೇಶ ನನ್ನ ಜೈವಿಕ ಪೋಷಕರನ್ನು, ವಿಶೇಷವಾಗಿ ನನ್ನ ತಾಯಿಯನ್ನು ಹುಡುಕುವುದಾಗಿದೆ. ನಾನು ಅವಳನ್ನು ಹುಡುಕಲು ಮತ್ತು ಭೇಟಿಯಾಗಲು ಬಯಸುತ್ತೇನೆ. ಕಷ್ಟವಾದರೂ ಪ್ರಯಾಣಕ್ಕೆ ನಾನು ಸಂಪೂರ್ಣವಾಗಿ ಸಿದ್ಧಳಾಗಿ ಬಂದಿದ್ದೇನೆ ಎಂದು ಸ್ನೇಹಾ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ತಾಯಿ ಸಿಕ್ಕರೆ ಏನು ಮಾಡುತ್ತೀರಿ ಎಂದು ಕೇಳಿದಾಗ, ಸ್ನೇಹಾ ತನ್ನ ಭಾವನೆಯನ್ನು ಬಹಿರಂಗಪಡಿಸದಿರಲು ನಿರ್ಧರಿಸಿದಳು. ಆದರೆ 21 ವರ್ಷದ ಯುವತಿ ತನ್ನ ಶೈಕ್ಷಣಿಕ ಬದ್ಧತೆಗಳಿಗಾಗಿ ಸೋಮವಾರ ಸ್ಪೇನ್‌ಗೆ ಹಿಂತಿರುಗಬೇಕಾಗಿರುವುದರಿಂದ ಈಗ ಸಮಯ ಮೀರುತ್ತಿದೆ.

“ಸ್ನೇಹಾ ತರಬೇತಿ ಕಾರ್ಯಕ್ರಮಕ್ಕೆ ಸೇರಿಕೊಂಡಿದ್ದರಿಂದ ನಾವು ಸ್ಪೇನ್‌ಗೆ ಹಿಂತಿರುಗಬೇಕಾಗಿದೆ, ಅದನ್ನು ನಿಲ್ಲಿಸಬಾರದು. ಮುಂದಿನ 24 ಗಂಟೆಗಳಲ್ಲಿ ನಮಗೆ ಅವಳ ತಾಯಿ ಸಿಗದಿದ್ದರೆ, ನಾವು ಮಾರ್ಚ್‌ನಲ್ಲಿ ಭುವನೇಶ್ವರಕ್ಕೆ ಮತ್ತೆ ಹಿಂತಿರುಗುತ್ತೇವೆ ಎಂದು ಅವರ ದತ್ತು ತಾಯಿ ಹೇಳಿದರು.

ಸ್ನೇಹಾಳ ತಾಯಿ ಬನಲತಾ ಅವರು 2005ರಲ್ಲಿ ಸ್ನೇಹ ಮತ್ತು ಸೋಮು ಅವರನ್ನು ಭುವನೇಶ್ವರದ ನಾಯಪಲ್ಲಿ ಪ್ರದೇಶದ ಬಾಡಿಗೆ ಮನೆಯಲ್ಲಿ ತೊರೆದಿದ್ದರು. ಖಾಸಗಿ ಸಂಸ್ಥೆಯೊಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಆಕೆಯ ಪತಿ ಸಂತೋಷ್ ಈ ಹಿಂದೆ ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಒಳಗೊಂಡ ಕುಟುಂಬವನ್ನು ತೊರೆದಿದ್ದರು.

ಪತಿ ಮನೆ ತೊರೆದ ನಂತರ ಬಾನಲತಾ ಕೂಡ ಬಾಡಿಗೆ ಮನೆ ಬಿಟ್ಟು ತನ್ನ ಇಬ್ಬರು ಮಕ್ಕಳಾದ ಸ್ನೇಹಾ ಮತ್ತು ಸೋಮು ಅವರನ್ನು ಬಿಟ್ಟು ಹೋಗಿದ್ದರು. ನಂತರ ಮನೆಯ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರನ್ನು ಅನಾಥಾಶ್ರಮಕ್ಕೆ ಸ್ಥಳಾಂತರಿಸಲಾಗಿತ್ತು.

2010ರಲ್ಲಿ ಐದು ವರ್ಷಕ್ಕಿಂತ ಹೆಚ್ಚು ವಯಸ್ಸಿನ ಸ್ನೇಹಾ ಮತ್ತು ಸುಮಾರು ನಾಲ್ಕು ವರ್ಷದ ಸೋಮು ಅವರನ್ನು ಸ್ಪ್ಯಾನಿಷ್ ದಂಪತಿಗಳು ಕಾನೂನುಬದ್ಧವಾಗಿ ದತ್ತು ಪಡೆದರು. “ಸ್ನೇಹಾ ತುಂಬಾ ಜವಾಬ್ದಾರಿಯುತ ಮತ್ತು ವಿದ್ಯಾವಂತಳು, ಅವಳು ನಮ್ಮ ಮನೆಯ ಸಂತೋಷ, ಅವಳು ನಮ್ಮ ಜೀವನ” ಎಂದು ಜೆಮಾ ಹೇಳಿದ್ದಾರೆ.

ಒಡಿಶಾದಲ್ಲಿರುವ ಸ್ನೇಹ ಮತ್ತು ಸೋಮು ಅವರ ಮೂಲಬೇರುಗಳ ಬಗ್ಗೆ ತಿಳಿಸಿದ್ದೇನೆ ಮತ್ತು ಅವರನ್ನು ದತ್ತು ತೆಗೆದುಕೊಳ್ಳಲಾಗಿದೆ ಎಂಬುದನ್ನು ಹೇಳಿದ್ದೇನೆ. ಅವರು ಸುಶಿಕ್ಷಿತರು ಮತ್ತು ಸಂಶೋಧನೆ ನಡೆಸುತ್ತಿದ್ದಾರೆ, ಆದ್ದರಿಂದ ಅವರು ತಮ್ಮ ಹೆತ್ತ ತಾಯಿಯನ್ನು ಪತ್ತೆಹಚ್ಚಲು ನಿರ್ಧರಿಸಿದರು ಮತ್ತು ನಾನು ಅವಳೊಂದಿಗೆ ಈ ಸ್ಥಳಕ್ಕೆ ಬಂದೆ ಎಂದು ಗೆಮಾ ತಿಳಿಸಿದ್ದಾರೆ.

ಭುವನೇಶ್ವರದಲ್ಲಿ ತಮ್ಮ ಕ್ಲಿಷ್ಟಮಯ ಹುಡುಕಾಟದ ಸಮಯದಲ್ಲಿ, ಗೆಮಾ ಮತ್ತು ಸ್ನೇಹಾಯವರು  ರಮಾದೇವಿ ಮಹಿಳಾ ವಿಶ್ವವಿದ್ಯಾಲಯದ ನಿವೃತ್ತ ಶಿಕ್ಷಕಿ ಸುಧಾ ಮಿಶ್ರಾ ಅವರನ್ನು ಕಂಡರು, ಅವರು ಸ್ನೇಹರ ಪೋಷಕರ ಹೆಸರನ್ನು ಕಂಡುಹಿಡಿಯಲು ಸಹಾಯ ಮಾಡಿದರು. “ನಾಯಪಲ್ಲಿಯಲ್ಲಿರುವ ಮನೆ ಮಾಲೀಕರಿಂದ ಆಕೆಯ ಪೋಷಕರ ಹೆಸರುಗಳನ್ನು ನಾವು ಕಂಡುಕೊಂಡಿದ್ದೇವೆ ಮತ್ತು ನಂತರ ಪೊಲೀಸರು ಮತ್ತು ಅನಾಥಾಶ್ರಮದಲ್ಲಿ ಹೆಸರುಗಳನ್ನು ಪರಿಶೀಲಿಸಲಾಗಿದೆ” ಎಂದು ಮಿಶ್ರಾ ಹೇಳಿದ್ದಾರೆ.

ಒಡಿಶಾ ಪೊಲೀಸರು ಕೂಡ ಸ್ನೇಹಾಳ ತಾಯಿಯನ್ನು ಪತ್ತೆ ಹಚ್ಚಲು ಸಹಾಯ ಮಾಡಲು ಮುಂದಾಗಿದ್ದಾರೆ. “ಬನಲತಾ ದಾಸ್ ಮತ್ತು ಸಂತೋಷ್ ಕಟಕ್ ಜಿಲ್ಲೆಯ ಬದಂಬಾ-ನರಸಿಂಗ್‌ಪುರ ಪ್ರದೇಶದವರು ಎಂದು ನಾವು ಕಂಡುಕೊಂಡಿದ್ದೇವೆ. ನಾವು ಅವರನ್ನು ಪತ್ತೆ ಮಾಡಲು ಪೊಲೀಸರು ಮತ್ತು ಪಂಚಾಯತ್ ಕಾರ್ಯನಿರ್ವಾಹಕರನ್ನು ತೊಡಗಿಸಿಕೊಂಡಿದ್ದೇವೆ” ಎಂದು ಇನ್ಸ್‌ಪೆಕ್ಟರ್ ಅಂಜಲಿ ಛೋತ್ರೇ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಬಿಜೆಪಿ ಗೆದ್ದರೆ ಪ್ರಿಯಾಂಕಾ ಗಾಂಧಿ ಕೆನ್ನೆಯಂತ ರಸ್ತೆ ನಿರ್ಮಾಣ ಎಂದ ಮಾಜಿ ಸಂಸದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...