Homeಮುಖಪುಟಸ್ಫೇನ್ ದಂಪತಿಯ ದತ್ತುಪುತ್ರಿ 20 ವರ್ಷದ ನಂತರ ಹೆತ್ತವರ ಹುಡುಕುತ್ತಾ ಒಡಿಶಾಗೆ.... 

ಸ್ಫೇನ್ ದಂಪತಿಯ ದತ್ತುಪುತ್ರಿ 20 ವರ್ಷದ ನಂತರ ಹೆತ್ತವರ ಹುಡುಕುತ್ತಾ ಒಡಿಶಾಗೆ…. 

- Advertisement -
- Advertisement -

ಭುವನೇಶ್ವರ: 20 ವರ್ಷಗಳ ಹಿಂದೆ ತನ್ನ ತಾಯಿಯಿಂದ ತೊರೆಯಲ್ಪಟ್ಟಿದ್ದ ಮತ್ತು ಸ್ಪ್ಯಾನಿಷ್ ದಂಪತಿಗಳಿಂದ ದತ್ತು ಪಡೆದಿರುವ ಭಾರತೀಯ ಮೂಲದ ಮಹಿಳೆಯೊಬ್ಬರು ತನ್ನ ಹೆತ್ತ ತಾಯಿಯನ್ನು ಹುಡುಕಲು ಒಡಿಶಾಗೆ ಬಂದಿದ್ದಾರೆ.

ಸ್ಪೇನ್‌ನಲ್ಲಿ ಮಕ್ಕಳ ಶಿಕ್ಷಣದ ಸಂಶೋಧಕಿ ಸ್ನೇಹಾ, ತನ್ನ ಮೂಲದ ಬಗ್ಗೆ ಸ್ವಲ್ಪ ಮಾಹಿತಿಯೊಂದಿಗೆ ತನ್ನ ಬೇರುಗಳನ್ನು ಪತ್ತೆಹಚ್ಚಲು ಭಾರತಕ್ಕೆ ಪ್ರಯಾಣ ಬೆಳೆಸಿದ್ದಾಳೆ. ಆಕೆಯ ಸ್ಪ್ಯಾನಿಷ್ ಪೋಷಕರಾದ ಗೆಮಾ ವಿಡಾಲ್ ಮತ್ತು ಜುವಾನ್ ಜೋಶ್ ಅವರು ಸ್ನೇಹಾ ಅವರ ಹುಡುಕಾಟವನ್ನು ಬೆಂಬಲಿಸಿ, ಪ್ರವಾಸದಲ್ಲಿ ಅವಳೊಂದಿಗೆ ಸಹ ಬಂದಿದ್ದಾರೆ.

ಅವರು ಭುವನೇಶ್ವರಕ್ಕೆ ಇದೀಗ ಬಂದಿದ್ದಾರೆ. ಅಲ್ಲಿ ಅವರು ಸ್ನೇಹಾ ಮತ್ತು ಅವರ ಸಹೋದರ ಸೋಮು ಅವರನ್ನು 2010ರಲ್ಲಿ ಅನಾಥಾಶ್ರಮದಿಂದ ದತ್ತು ಪಡೆದಿದ್ದರು. 2005ರಲ್ಲಿ ಸ್ನೇಹಾ ಕೇವಲ ಒಂದು ವರ್ಷದವಳಿದ್ದಾಗ ಅವರ ತಾಯಿ ಅವರನ್ನು ತೊರೆದ ನಂತರ ಈ ಒಡಹುಟ್ಟಿದವರು ಅನಾಥಾಶ್ರಮದಲ್ಲಿ ವಾಸಿಸುತ್ತಿದ್ದರು.

ಸ್ಪೇನ್‌ನಿಂದ ಭುವನೇಶ್ವರಕ್ಕೆ ನನ್ನ ಪ್ರಯಾಣದ ಉದ್ದೇಶ ನನ್ನ ಜೈವಿಕ ಪೋಷಕರನ್ನು, ವಿಶೇಷವಾಗಿ ನನ್ನ ತಾಯಿಯನ್ನು ಹುಡುಕುವುದಾಗಿದೆ. ನಾನು ಅವಳನ್ನು ಹುಡುಕಲು ಮತ್ತು ಭೇಟಿಯಾಗಲು ಬಯಸುತ್ತೇನೆ. ಕಷ್ಟವಾದರೂ ಪ್ರಯಾಣಕ್ಕೆ ನಾನು ಸಂಪೂರ್ಣವಾಗಿ ಸಿದ್ಧಳಾಗಿ ಬಂದಿದ್ದೇನೆ ಎಂದು ಸ್ನೇಹಾ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ತಾಯಿ ಸಿಕ್ಕರೆ ಏನು ಮಾಡುತ್ತೀರಿ ಎಂದು ಕೇಳಿದಾಗ, ಸ್ನೇಹಾ ತನ್ನ ಭಾವನೆಯನ್ನು ಬಹಿರಂಗಪಡಿಸದಿರಲು ನಿರ್ಧರಿಸಿದಳು. ಆದರೆ 21 ವರ್ಷದ ಯುವತಿ ತನ್ನ ಶೈಕ್ಷಣಿಕ ಬದ್ಧತೆಗಳಿಗಾಗಿ ಸೋಮವಾರ ಸ್ಪೇನ್‌ಗೆ ಹಿಂತಿರುಗಬೇಕಾಗಿರುವುದರಿಂದ ಈಗ ಸಮಯ ಮೀರುತ್ತಿದೆ.

“ಸ್ನೇಹಾ ತರಬೇತಿ ಕಾರ್ಯಕ್ರಮಕ್ಕೆ ಸೇರಿಕೊಂಡಿದ್ದರಿಂದ ನಾವು ಸ್ಪೇನ್‌ಗೆ ಹಿಂತಿರುಗಬೇಕಾಗಿದೆ, ಅದನ್ನು ನಿಲ್ಲಿಸಬಾರದು. ಮುಂದಿನ 24 ಗಂಟೆಗಳಲ್ಲಿ ನಮಗೆ ಅವಳ ತಾಯಿ ಸಿಗದಿದ್ದರೆ, ನಾವು ಮಾರ್ಚ್‌ನಲ್ಲಿ ಭುವನೇಶ್ವರಕ್ಕೆ ಮತ್ತೆ ಹಿಂತಿರುಗುತ್ತೇವೆ ಎಂದು ಅವರ ದತ್ತು ತಾಯಿ ಹೇಳಿದರು.

ಸ್ನೇಹಾಳ ತಾಯಿ ಬನಲತಾ ಅವರು 2005ರಲ್ಲಿ ಸ್ನೇಹ ಮತ್ತು ಸೋಮು ಅವರನ್ನು ಭುವನೇಶ್ವರದ ನಾಯಪಲ್ಲಿ ಪ್ರದೇಶದ ಬಾಡಿಗೆ ಮನೆಯಲ್ಲಿ ತೊರೆದಿದ್ದರು. ಖಾಸಗಿ ಸಂಸ್ಥೆಯೊಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಆಕೆಯ ಪತಿ ಸಂತೋಷ್ ಈ ಹಿಂದೆ ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಒಳಗೊಂಡ ಕುಟುಂಬವನ್ನು ತೊರೆದಿದ್ದರು.

ಪತಿ ಮನೆ ತೊರೆದ ನಂತರ ಬಾನಲತಾ ಕೂಡ ಬಾಡಿಗೆ ಮನೆ ಬಿಟ್ಟು ತನ್ನ ಇಬ್ಬರು ಮಕ್ಕಳಾದ ಸ್ನೇಹಾ ಮತ್ತು ಸೋಮು ಅವರನ್ನು ಬಿಟ್ಟು ಹೋಗಿದ್ದರು. ನಂತರ ಮನೆಯ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರನ್ನು ಅನಾಥಾಶ್ರಮಕ್ಕೆ ಸ್ಥಳಾಂತರಿಸಲಾಗಿತ್ತು.

2010ರಲ್ಲಿ ಐದು ವರ್ಷಕ್ಕಿಂತ ಹೆಚ್ಚು ವಯಸ್ಸಿನ ಸ್ನೇಹಾ ಮತ್ತು ಸುಮಾರು ನಾಲ್ಕು ವರ್ಷದ ಸೋಮು ಅವರನ್ನು ಸ್ಪ್ಯಾನಿಷ್ ದಂಪತಿಗಳು ಕಾನೂನುಬದ್ಧವಾಗಿ ದತ್ತು ಪಡೆದರು. “ಸ್ನೇಹಾ ತುಂಬಾ ಜವಾಬ್ದಾರಿಯುತ ಮತ್ತು ವಿದ್ಯಾವಂತಳು, ಅವಳು ನಮ್ಮ ಮನೆಯ ಸಂತೋಷ, ಅವಳು ನಮ್ಮ ಜೀವನ” ಎಂದು ಜೆಮಾ ಹೇಳಿದ್ದಾರೆ.

ಒಡಿಶಾದಲ್ಲಿರುವ ಸ್ನೇಹ ಮತ್ತು ಸೋಮು ಅವರ ಮೂಲಬೇರುಗಳ ಬಗ್ಗೆ ತಿಳಿಸಿದ್ದೇನೆ ಮತ್ತು ಅವರನ್ನು ದತ್ತು ತೆಗೆದುಕೊಳ್ಳಲಾಗಿದೆ ಎಂಬುದನ್ನು ಹೇಳಿದ್ದೇನೆ. ಅವರು ಸುಶಿಕ್ಷಿತರು ಮತ್ತು ಸಂಶೋಧನೆ ನಡೆಸುತ್ತಿದ್ದಾರೆ, ಆದ್ದರಿಂದ ಅವರು ತಮ್ಮ ಹೆತ್ತ ತಾಯಿಯನ್ನು ಪತ್ತೆಹಚ್ಚಲು ನಿರ್ಧರಿಸಿದರು ಮತ್ತು ನಾನು ಅವಳೊಂದಿಗೆ ಈ ಸ್ಥಳಕ್ಕೆ ಬಂದೆ ಎಂದು ಗೆಮಾ ತಿಳಿಸಿದ್ದಾರೆ.

ಭುವನೇಶ್ವರದಲ್ಲಿ ತಮ್ಮ ಕ್ಲಿಷ್ಟಮಯ ಹುಡುಕಾಟದ ಸಮಯದಲ್ಲಿ, ಗೆಮಾ ಮತ್ತು ಸ್ನೇಹಾಯವರು  ರಮಾದೇವಿ ಮಹಿಳಾ ವಿಶ್ವವಿದ್ಯಾಲಯದ ನಿವೃತ್ತ ಶಿಕ್ಷಕಿ ಸುಧಾ ಮಿಶ್ರಾ ಅವರನ್ನು ಕಂಡರು, ಅವರು ಸ್ನೇಹರ ಪೋಷಕರ ಹೆಸರನ್ನು ಕಂಡುಹಿಡಿಯಲು ಸಹಾಯ ಮಾಡಿದರು. “ನಾಯಪಲ್ಲಿಯಲ್ಲಿರುವ ಮನೆ ಮಾಲೀಕರಿಂದ ಆಕೆಯ ಪೋಷಕರ ಹೆಸರುಗಳನ್ನು ನಾವು ಕಂಡುಕೊಂಡಿದ್ದೇವೆ ಮತ್ತು ನಂತರ ಪೊಲೀಸರು ಮತ್ತು ಅನಾಥಾಶ್ರಮದಲ್ಲಿ ಹೆಸರುಗಳನ್ನು ಪರಿಶೀಲಿಸಲಾಗಿದೆ” ಎಂದು ಮಿಶ್ರಾ ಹೇಳಿದ್ದಾರೆ.

ಒಡಿಶಾ ಪೊಲೀಸರು ಕೂಡ ಸ್ನೇಹಾಳ ತಾಯಿಯನ್ನು ಪತ್ತೆ ಹಚ್ಚಲು ಸಹಾಯ ಮಾಡಲು ಮುಂದಾಗಿದ್ದಾರೆ. “ಬನಲತಾ ದಾಸ್ ಮತ್ತು ಸಂತೋಷ್ ಕಟಕ್ ಜಿಲ್ಲೆಯ ಬದಂಬಾ-ನರಸಿಂಗ್‌ಪುರ ಪ್ರದೇಶದವರು ಎಂದು ನಾವು ಕಂಡುಕೊಂಡಿದ್ದೇವೆ. ನಾವು ಅವರನ್ನು ಪತ್ತೆ ಮಾಡಲು ಪೊಲೀಸರು ಮತ್ತು ಪಂಚಾಯತ್ ಕಾರ್ಯನಿರ್ವಾಹಕರನ್ನು ತೊಡಗಿಸಿಕೊಂಡಿದ್ದೇವೆ” ಎಂದು ಇನ್ಸ್‌ಪೆಕ್ಟರ್ ಅಂಜಲಿ ಛೋತ್ರೇ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಬಿಜೆಪಿ ಗೆದ್ದರೆ ಪ್ರಿಯಾಂಕಾ ಗಾಂಧಿ ಕೆನ್ನೆಯಂತ ರಸ್ತೆ ನಿರ್ಮಾಣ ಎಂದ ಮಾಜಿ ಸಂಸದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...