Homeಮುಖಪುಟಸ್ಫೇನ್ ದಂಪತಿಯ ದತ್ತುಪುತ್ರಿ 20 ವರ್ಷದ ನಂತರ ಹೆತ್ತವರ ಹುಡುಕುತ್ತಾ ಒಡಿಶಾಗೆ.... 

ಸ್ಫೇನ್ ದಂಪತಿಯ ದತ್ತುಪುತ್ರಿ 20 ವರ್ಷದ ನಂತರ ಹೆತ್ತವರ ಹುಡುಕುತ್ತಾ ಒಡಿಶಾಗೆ…. 

- Advertisement -
- Advertisement -

ಭುವನೇಶ್ವರ: 20 ವರ್ಷಗಳ ಹಿಂದೆ ತನ್ನ ತಾಯಿಯಿಂದ ತೊರೆಯಲ್ಪಟ್ಟಿದ್ದ ಮತ್ತು ಸ್ಪ್ಯಾನಿಷ್ ದಂಪತಿಗಳಿಂದ ದತ್ತು ಪಡೆದಿರುವ ಭಾರತೀಯ ಮೂಲದ ಮಹಿಳೆಯೊಬ್ಬರು ತನ್ನ ಹೆತ್ತ ತಾಯಿಯನ್ನು ಹುಡುಕಲು ಒಡಿಶಾಗೆ ಬಂದಿದ್ದಾರೆ.

ಸ್ಪೇನ್‌ನಲ್ಲಿ ಮಕ್ಕಳ ಶಿಕ್ಷಣದ ಸಂಶೋಧಕಿ ಸ್ನೇಹಾ, ತನ್ನ ಮೂಲದ ಬಗ್ಗೆ ಸ್ವಲ್ಪ ಮಾಹಿತಿಯೊಂದಿಗೆ ತನ್ನ ಬೇರುಗಳನ್ನು ಪತ್ತೆಹಚ್ಚಲು ಭಾರತಕ್ಕೆ ಪ್ರಯಾಣ ಬೆಳೆಸಿದ್ದಾಳೆ. ಆಕೆಯ ಸ್ಪ್ಯಾನಿಷ್ ಪೋಷಕರಾದ ಗೆಮಾ ವಿಡಾಲ್ ಮತ್ತು ಜುವಾನ್ ಜೋಶ್ ಅವರು ಸ್ನೇಹಾ ಅವರ ಹುಡುಕಾಟವನ್ನು ಬೆಂಬಲಿಸಿ, ಪ್ರವಾಸದಲ್ಲಿ ಅವಳೊಂದಿಗೆ ಸಹ ಬಂದಿದ್ದಾರೆ.

ಅವರು ಭುವನೇಶ್ವರಕ್ಕೆ ಇದೀಗ ಬಂದಿದ್ದಾರೆ. ಅಲ್ಲಿ ಅವರು ಸ್ನೇಹಾ ಮತ್ತು ಅವರ ಸಹೋದರ ಸೋಮು ಅವರನ್ನು 2010ರಲ್ಲಿ ಅನಾಥಾಶ್ರಮದಿಂದ ದತ್ತು ಪಡೆದಿದ್ದರು. 2005ರಲ್ಲಿ ಸ್ನೇಹಾ ಕೇವಲ ಒಂದು ವರ್ಷದವಳಿದ್ದಾಗ ಅವರ ತಾಯಿ ಅವರನ್ನು ತೊರೆದ ನಂತರ ಈ ಒಡಹುಟ್ಟಿದವರು ಅನಾಥಾಶ್ರಮದಲ್ಲಿ ವಾಸಿಸುತ್ತಿದ್ದರು.

ಸ್ಪೇನ್‌ನಿಂದ ಭುವನೇಶ್ವರಕ್ಕೆ ನನ್ನ ಪ್ರಯಾಣದ ಉದ್ದೇಶ ನನ್ನ ಜೈವಿಕ ಪೋಷಕರನ್ನು, ವಿಶೇಷವಾಗಿ ನನ್ನ ತಾಯಿಯನ್ನು ಹುಡುಕುವುದಾಗಿದೆ. ನಾನು ಅವಳನ್ನು ಹುಡುಕಲು ಮತ್ತು ಭೇಟಿಯಾಗಲು ಬಯಸುತ್ತೇನೆ. ಕಷ್ಟವಾದರೂ ಪ್ರಯಾಣಕ್ಕೆ ನಾನು ಸಂಪೂರ್ಣವಾಗಿ ಸಿದ್ಧಳಾಗಿ ಬಂದಿದ್ದೇನೆ ಎಂದು ಸ್ನೇಹಾ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ತಾಯಿ ಸಿಕ್ಕರೆ ಏನು ಮಾಡುತ್ತೀರಿ ಎಂದು ಕೇಳಿದಾಗ, ಸ್ನೇಹಾ ತನ್ನ ಭಾವನೆಯನ್ನು ಬಹಿರಂಗಪಡಿಸದಿರಲು ನಿರ್ಧರಿಸಿದಳು. ಆದರೆ 21 ವರ್ಷದ ಯುವತಿ ತನ್ನ ಶೈಕ್ಷಣಿಕ ಬದ್ಧತೆಗಳಿಗಾಗಿ ಸೋಮವಾರ ಸ್ಪೇನ್‌ಗೆ ಹಿಂತಿರುಗಬೇಕಾಗಿರುವುದರಿಂದ ಈಗ ಸಮಯ ಮೀರುತ್ತಿದೆ.

“ಸ್ನೇಹಾ ತರಬೇತಿ ಕಾರ್ಯಕ್ರಮಕ್ಕೆ ಸೇರಿಕೊಂಡಿದ್ದರಿಂದ ನಾವು ಸ್ಪೇನ್‌ಗೆ ಹಿಂತಿರುಗಬೇಕಾಗಿದೆ, ಅದನ್ನು ನಿಲ್ಲಿಸಬಾರದು. ಮುಂದಿನ 24 ಗಂಟೆಗಳಲ್ಲಿ ನಮಗೆ ಅವಳ ತಾಯಿ ಸಿಗದಿದ್ದರೆ, ನಾವು ಮಾರ್ಚ್‌ನಲ್ಲಿ ಭುವನೇಶ್ವರಕ್ಕೆ ಮತ್ತೆ ಹಿಂತಿರುಗುತ್ತೇವೆ ಎಂದು ಅವರ ದತ್ತು ತಾಯಿ ಹೇಳಿದರು.

ಸ್ನೇಹಾಳ ತಾಯಿ ಬನಲತಾ ಅವರು 2005ರಲ್ಲಿ ಸ್ನೇಹ ಮತ್ತು ಸೋಮು ಅವರನ್ನು ಭುವನೇಶ್ವರದ ನಾಯಪಲ್ಲಿ ಪ್ರದೇಶದ ಬಾಡಿಗೆ ಮನೆಯಲ್ಲಿ ತೊರೆದಿದ್ದರು. ಖಾಸಗಿ ಸಂಸ್ಥೆಯೊಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಆಕೆಯ ಪತಿ ಸಂತೋಷ್ ಈ ಹಿಂದೆ ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಒಳಗೊಂಡ ಕುಟುಂಬವನ್ನು ತೊರೆದಿದ್ದರು.

ಪತಿ ಮನೆ ತೊರೆದ ನಂತರ ಬಾನಲತಾ ಕೂಡ ಬಾಡಿಗೆ ಮನೆ ಬಿಟ್ಟು ತನ್ನ ಇಬ್ಬರು ಮಕ್ಕಳಾದ ಸ್ನೇಹಾ ಮತ್ತು ಸೋಮು ಅವರನ್ನು ಬಿಟ್ಟು ಹೋಗಿದ್ದರು. ನಂತರ ಮನೆಯ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರನ್ನು ಅನಾಥಾಶ್ರಮಕ್ಕೆ ಸ್ಥಳಾಂತರಿಸಲಾಗಿತ್ತು.

2010ರಲ್ಲಿ ಐದು ವರ್ಷಕ್ಕಿಂತ ಹೆಚ್ಚು ವಯಸ್ಸಿನ ಸ್ನೇಹಾ ಮತ್ತು ಸುಮಾರು ನಾಲ್ಕು ವರ್ಷದ ಸೋಮು ಅವರನ್ನು ಸ್ಪ್ಯಾನಿಷ್ ದಂಪತಿಗಳು ಕಾನೂನುಬದ್ಧವಾಗಿ ದತ್ತು ಪಡೆದರು. “ಸ್ನೇಹಾ ತುಂಬಾ ಜವಾಬ್ದಾರಿಯುತ ಮತ್ತು ವಿದ್ಯಾವಂತಳು, ಅವಳು ನಮ್ಮ ಮನೆಯ ಸಂತೋಷ, ಅವಳು ನಮ್ಮ ಜೀವನ” ಎಂದು ಜೆಮಾ ಹೇಳಿದ್ದಾರೆ.

ಒಡಿಶಾದಲ್ಲಿರುವ ಸ್ನೇಹ ಮತ್ತು ಸೋಮು ಅವರ ಮೂಲಬೇರುಗಳ ಬಗ್ಗೆ ತಿಳಿಸಿದ್ದೇನೆ ಮತ್ತು ಅವರನ್ನು ದತ್ತು ತೆಗೆದುಕೊಳ್ಳಲಾಗಿದೆ ಎಂಬುದನ್ನು ಹೇಳಿದ್ದೇನೆ. ಅವರು ಸುಶಿಕ್ಷಿತರು ಮತ್ತು ಸಂಶೋಧನೆ ನಡೆಸುತ್ತಿದ್ದಾರೆ, ಆದ್ದರಿಂದ ಅವರು ತಮ್ಮ ಹೆತ್ತ ತಾಯಿಯನ್ನು ಪತ್ತೆಹಚ್ಚಲು ನಿರ್ಧರಿಸಿದರು ಮತ್ತು ನಾನು ಅವಳೊಂದಿಗೆ ಈ ಸ್ಥಳಕ್ಕೆ ಬಂದೆ ಎಂದು ಗೆಮಾ ತಿಳಿಸಿದ್ದಾರೆ.

ಭುವನೇಶ್ವರದಲ್ಲಿ ತಮ್ಮ ಕ್ಲಿಷ್ಟಮಯ ಹುಡುಕಾಟದ ಸಮಯದಲ್ಲಿ, ಗೆಮಾ ಮತ್ತು ಸ್ನೇಹಾಯವರು  ರಮಾದೇವಿ ಮಹಿಳಾ ವಿಶ್ವವಿದ್ಯಾಲಯದ ನಿವೃತ್ತ ಶಿಕ್ಷಕಿ ಸುಧಾ ಮಿಶ್ರಾ ಅವರನ್ನು ಕಂಡರು, ಅವರು ಸ್ನೇಹರ ಪೋಷಕರ ಹೆಸರನ್ನು ಕಂಡುಹಿಡಿಯಲು ಸಹಾಯ ಮಾಡಿದರು. “ನಾಯಪಲ್ಲಿಯಲ್ಲಿರುವ ಮನೆ ಮಾಲೀಕರಿಂದ ಆಕೆಯ ಪೋಷಕರ ಹೆಸರುಗಳನ್ನು ನಾವು ಕಂಡುಕೊಂಡಿದ್ದೇವೆ ಮತ್ತು ನಂತರ ಪೊಲೀಸರು ಮತ್ತು ಅನಾಥಾಶ್ರಮದಲ್ಲಿ ಹೆಸರುಗಳನ್ನು ಪರಿಶೀಲಿಸಲಾಗಿದೆ” ಎಂದು ಮಿಶ್ರಾ ಹೇಳಿದ್ದಾರೆ.

ಒಡಿಶಾ ಪೊಲೀಸರು ಕೂಡ ಸ್ನೇಹಾಳ ತಾಯಿಯನ್ನು ಪತ್ತೆ ಹಚ್ಚಲು ಸಹಾಯ ಮಾಡಲು ಮುಂದಾಗಿದ್ದಾರೆ. “ಬನಲತಾ ದಾಸ್ ಮತ್ತು ಸಂತೋಷ್ ಕಟಕ್ ಜಿಲ್ಲೆಯ ಬದಂಬಾ-ನರಸಿಂಗ್‌ಪುರ ಪ್ರದೇಶದವರು ಎಂದು ನಾವು ಕಂಡುಕೊಂಡಿದ್ದೇವೆ. ನಾವು ಅವರನ್ನು ಪತ್ತೆ ಮಾಡಲು ಪೊಲೀಸರು ಮತ್ತು ಪಂಚಾಯತ್ ಕಾರ್ಯನಿರ್ವಾಹಕರನ್ನು ತೊಡಗಿಸಿಕೊಂಡಿದ್ದೇವೆ” ಎಂದು ಇನ್ಸ್‌ಪೆಕ್ಟರ್ ಅಂಜಲಿ ಛೋತ್ರೇ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಬಿಜೆಪಿ ಗೆದ್ದರೆ ಪ್ರಿಯಾಂಕಾ ಗಾಂಧಿ ಕೆನ್ನೆಯಂತ ರಸ್ತೆ ನಿರ್ಮಾಣ ಎಂದ ಮಾಜಿ ಸಂಸದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...

ಡಿಲಿಮಿಟೇಷನ್ ಮೂಲಕ ದಕ್ಷಿಣ ಭಾರತದ ಪ್ರಭಾವ ಕಸಿದುಕೊಳ್ಳಲು ಬಿಜೆಪಿಯಿಂದ ಪಿತೂರಿ: ರೇವಂತ್ ರೆಡ್ಡಿ

ಜನಸಂಖ್ಯೆ ಅನುಪಾತದ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆಯು ದಕ್ಷಿಣ ರಾಜ್ಯಗಳಿಗೆ ಅನ್ಯಾಯವನ್ನುಂಟು ಮಾಡುತ್ತದೆ ಎಂದು ಎಚ್ಚರಿಸಿದ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ, ರಾಜಕೀಯ ಪಕ್ಷಗಳು ಮತ್ತು ಇತರರೊಂದಿಗೆ ವ್ಯಾಪಕ ಸಮಾಲೋಚನೆಯ...

ನೋಯ್ಡಾ ಕಾರ್ಮಿಕ ಪ್ರತಿಭಟನೆ: 300ಕ್ಕೂ ಹೆಚ್ಚು ಜನರ ಬಂಧನ, 7 ಎಫ್‌ಐಆರ್‌: ಅಶಾಂತಿಯ ಹಿಂದೆ ‘ಸಂಘಟಿತ ಸಿಂಡಿಕೇಟ್’ ಕುರಿತು ತನಿಖೆ

ನೋಯ್ಡಾದಲ್ಲಿ ಹಿಂಸಾತ್ಮಕವಾಗಿ ತಿರುಗಿದ ಕಾರ್ಮಿಕರ ಪ್ರತಿಭಟನೆಗೆ ಸಂಬಂಧಿಸಿದಂತೆ 300ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಮತ್ತು ಏಳು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಗೌತಮ್ ಬುದ್ಧ ನಗರ ಪೊಲೀಸ್ ಆಯುಕ್ತ ಲಕ್ಷ್ಮಿ ಸಿಂಗ್ ಮಂಗಳವಾರ ಹೇಳಿದ್ದಾರೆ,...