Homeಕರ್ನಾಟಕಹೊಸ ರೀತಿಯ ಅನೈತಿಕ ಪಕ್ಷಾಂತರಕ್ಕೆ ಮದ್ದು ನೀಡಲು ವಿಫಲವಾದ ಸುಪ್ರೀಂ.. : ಡಾ.ವಾಸು ಎಚ್.ವಿ

ಹೊಸ ರೀತಿಯ ಅನೈತಿಕ ಪಕ್ಷಾಂತರಕ್ಕೆ ಮದ್ದು ನೀಡಲು ವಿಫಲವಾದ ಸುಪ್ರೀಂ.. : ಡಾ.ವಾಸು ಎಚ್.ವಿ

- Advertisement -
- Advertisement -

ಬಹುನಿರೀಕ್ಷಿತವಾಗಿದ್ದ ಅನರ್ಹ ಶಾಸಕರ ಕುರಿತಾದ ಮೊಕದ್ದಮೆಯಲ್ಲಿ ಇಂದು ಸುಪ್ರೀಂಕೋರ್ಟು ನಿರೀಕ್ಷಿತ ತೀರ್ಪನ್ನು ನೀಡಿದೆ. ಅವರು ಅನರ್ಹರೇ, ಆದರೆ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂಬ ಸುಪ್ರೀಂಕೋರ್ಟಿನ ತೀರ್ಪಿನ ಹಿಂದಿರಬಹುದಾದ ಸದುದ್ದೇಶವೇನಿರಬಹುದು? ಅನರ್ಹರು ಎನ್ನುವ ಟ್ಯಾಗ್ ಕೊಡೋಣ. ಆದರೆ, ಜನತಾ ನ್ಯಾಯಾಲಯಕ್ಕೆ ಹೋಗಿ ಸ್ಪರ್ಧೆ ಮಾಡಲಿ. ಜನರು ತೀರ್ಮಾನ ಮಾಡಲಿ ಎಂಬ ಸದುದ್ದೇಶವನ್ನು ಆರೋಪಿಸಬಹುದು.

ನಮ್ಮ ಸಂವಿಧಾನದ ಪ್ರಕಾರ ತೀವ್ರ ಸ್ವರೂಪದ ಕ್ರಿಮಿನಲ್ ಪ್ರಕರಣಗಳಲ್ಲಿ ಶಿಕ್ಷೆಯಾಗಿರುವವರು ಸ್ಪರ್ಧೆ ಮಾಡುವಂತಿಲ್ಲ. ಆದರೆ, ಅಂತಹ ವ್ಯಕ್ತಿಗಳು ಸ್ಪರ್ಧೆ ಮಾಡಿದರೆ ಜನರು ಅವರನ್ನು ಚುನಾಯಿಸುವುದಿಲ್ಲವೇ? ಚುನಾಯಿಸುವ ಸಾಧ್ಯತೆ ಹೆಚ್ಚೇ ಇರಬಹುದು. ಅಲ್ಲಿ ಒಂದು ನೈತಿಕ ನಿರ್ಬಂಧವನ್ನು ಸಂವಿಧಾನವು ಒಡ್ಡಿದೆ. ಈ ಹಿನ್ನೆಲೆಯಲ್ಲಿ ಒಂದು ವಿಶ್ಲೇಷಣೆ ಮಾಡುವ ಅಗತ್ಯ ಇದೆ.

ಪಕ್ಷಾಂತರ ನಿಷೇಧ ಕಾಯ್ದೆ ಜಾರಿಗೆ ತಂದಾಗ ಎಲ್ಲಾ ಪಕ್ಷಗಳ ನಡುವೆ ಸಹಮತ ಇತ್ತು. ಹಾಗೆ ನೋಡಿದರೆ ಇತಿಹಾಸದಲ್ಲೇ ಅತ್ಯಂತ ಹೆಚ್ಚು ಬಹುಮತವಿದ್ದು, ಯಾವ ಪಕ್ಷಾಂತರವೂ ಅಲುಗಾಡಿಸಲು ಸಾಧ್ಯವಿರದ ಸರ್ಕಾರವು (ರಾಜೀವ್ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರ) ಪಕ್ಷಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿತ್ತು. ನಂತರದ ದಿನಗಳಲ್ಲಿ ಸುಪ್ರೀಂಕೋರ್ಟು ಸಹಾ ಅದಕ್ಕೆ ತನ್ನದೇ ರೀತಿಯಲ್ಲಿ ಮಾನ್ಯತೆಯನ್ನು ನೀಡಿತ್ತು.

ಮೂರನೇ ಒಂದು ಭಾಗದಷ್ಟು ಶಾಸಕರು ಒಟ್ಟಿಗೆ ಹೋದರೆ ಅದು ಪಕ್ಷಾಂತರವಾಗದು ಎಂಬುದು ನಂತರ ಮೂರನೇ ಎರಡು ಭಾಗ ಆದದ್ದಕ್ಕೂ ಕಾರಣವಿತ್ತು. ‘ಪಕ್ಷಾಂತರವನ್ನು ನಿಷೇಧಿಸಬೇಕು; ಏಕೆಂದರೆ ಇದು ಅನೈತಿಕವಾದುದು; ಗೆದ್ದ ಜನಪ್ರತಿನಿಧಿಗಳು ತಮ್ಮ ಸ್ವಂತ ಹಿತಾಸಕ್ತಿಗಾಗಿ ಮಾಡುತ್ತಿರುವ ಪಕ್ಷಾಂತರವಿದು’ ಎಂಬ ಕುರಿತು ಯಾರಿಗೂ ಅಸಮ್ಮತಿಯಿರಲಿಲ್ಲ. ಹೀಗಾಗಿ ಪಕ್ಷಾಂತರ ನಿಷೇಧ ಕಾನೂನನ್ನು ಗಟ್ಟಿ ಮಾಡುವ ಕೆಲಸ ನಡೆಯಿತು.

ಅದನ್ನೂ ಉಲ್ಲಂಘಿಸಲು ಕೆಲವು ದಾರಿಗಳನ್ನು ಅನೈತಿಕ ರಾಜಕಾರಣದಲ್ಲಿ ತೊಡಗಿರುವ ರಾಜಕೀಯ ಪಕ್ಷಗಳು ಕಂಡುಕೊಂಡವು. ಅದರಲ್ಲಿ ಒಂದು – ಸ್ಪೀಕರ್ ಅವರು ಪಕ್ಷಾಂತರಿಗಳ ಪರ ಇದ್ದರೆ, ವಿಳಂಬ ನೀತಿಯನ್ನು ಅನುಸರಿಸಿ ಶಾಸನಸಭೆಯ ಅವಧಿ ಮುಗಿಯುವತನಕ ಎಳೆದು ಅನರ್ಹಗೊಳಿಸಲು ಕೋರಿದ ದೂರೇ ಅಪ್ರಸ್ತುತವಾಗುವಂತೆ ಮಾಡುವುದು. ಎರಡು- ಆಡಳಿತ ಪಕ್ಷಕ್ಕೆ ಪಕ್ಷಾಂತರ ಮಾಡಿಸಲು ಶಾಸನಸಭೆಯ ಸದಸ್ಯರ ಕೈಯ್ಯಲ್ಲಿ ರಾಜೀನಾಮೆ ಕೊಡಿಸುವುದು. ನಂತರ ಅವರಿಗೆ ಅಧಿಕಾರ ನೀಡಿ, ಆಡಳಿತದ ಬಲದೊಂದಿಗೆ ಆಡಳಿತ ಪಕ್ಷದ ಟಿಕೆಟ್ ಮೇಲೆ ಸ್ಪರ್ಧಿಸಿ ಗೆಲ್ಲಿಸಿಕೊಂಡು ಬರುವುದು. ಇದನ್ನು ಬಿಜೆಪಿಯೇ ಶುರು ಮಾಡಿದ್ದರಿಂದ ಮತ್ತು ಹೆಚ್ಚು ಬಳಸಿದ್ದರಿಂದ ‘ಆಪರೇಷನ್ ಕಮಲ’ ಎಂಬ ಹೆಸರಿನಲ್ಲಿ ಚಾಲ್ತಿಯಲ್ಲಿದೆ.

ಅಂತಹ ಆಪರೇಷನ್ ಕಮಲಕ್ಕೆ ಮದ್ದು ಕಂಡುಕೊಳ್ಳುವುದು ಬಹಳ ಅಗತ್ಯವಿತ್ತು. ಆದರೆ, ಸ್ವತಃ ಬಿಜೆಪಿ (ಅಥವಾ ಇನ್ನಾವುದೋ ಪಕ್ಷ) ಅಧಿಕಾರದಲ್ಲಿದ್ದಾಗ ಅವರದ್ದೇ ಸ್ಪೀಕರ್ ಇರುವುದರಿಂದ ಅನರ್ಹತೆ ಆಗುತ್ತಿರಲಿಲ್ಲ. ಈ ಸಾರಿ ಕರ್ನಾಕಟದಲ್ಲಿ ಪರಿಸ್ಥಿತಿ ಸ್ವಲ್ಪ ಭಿನ್ನವಾಗಿತ್ತು. ಅಧಿಕಾರದಲ್ಲಿದ್ದ ಸಮ್ಮಿಶ್ರ ಸರ್ಕಾರದ ಶಾಸಕರನ್ನು ಸೆಳೆದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದು ರಾಜ್ಯದಲ್ಲಿ ವಿರೋಧ ಪಕ್ಷದಲ್ಲಿದ್ದ ಪಕ್ಷವಾದ ಬಿಜೆಪಿಯು ಪಕ್ಷಾಂತರ ಮಾಡಿಸಿತ್ತು. ಹೀಗಾಗಿ ಸಮ್ಮಿಶ್ರ ಸರ್ಕಾರದ ಪಕ್ಷಗಳ ಬೆಂಬಲದೊಂದಿಗೆ (ವಾಸ್ತವದಲ್ಲಿ ಸರ್ವಾನುಮತದಿಂದ) ಆಯ್ಕೆಯಾಗಿದ್ದ ಸ್ಪೀಕರ್ ರಮೇಶ್ ಕುಮಾರ್ ಅವರು ತೀರ್ಮಾನ ತೆಗೆದುಕೊಳ್ಳುವ ಸ್ಥಾನದಲ್ಲಿದ್ದರು. ಅವರು ಸದರಿ ಶಾಸಕರನ್ನು ಅನರ್ಹಗೊಳಿಸಿದರು ಮತ್ತು ಷೆಡ್ಯೂಲ್ 10ರ ಪ್ರಕಾರ ವಿಧಾನಸಭೆಯ ಈ ಅವಧಿ ಮುಗಿಯುವವರೆಗೆ ಅವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂಬ ತೀರ್ಪಿತ್ತಿದ್ದರು. ಒಂದು ರೀತಿಯಲ್ಲಿ ಅದು ಆಪರೇಷನ್ ಕಮಲಕ್ಕೆ ಮದ್ದಾಗಿತ್ತು.

ಅದು ನಂತರ ಸುಪ್ರೀಂಕೋರ್ಟಿನ ಮೆಟ್ಟಿಲೇರಿತ್ತು. ಇವೆಲ್ಲದರಿಂದ ಶಾಸಕರುಗಳು ಗುಂಪಾಗಿ, ಒಂದು ನಿರ್ದಿಷ್ಟ ಯೋಜನೆಯ ಭಾಗವಾಗಿ ವಿರೋಧ ಪಕ್ಷವನ್ನು ಸ್ವಂತ ಹಿತಾಸಕ್ತಿಗಾಗಿ ಅಧಿಕಾರಕ್ಕೆ ತರಲೆಂದೇ (ಅಂದರೆ ಪಕ್ಷಾಂತರ ಮಾಡಲೆಂದೇ) ರಾಜೀನಾಮೆಗೆ ಮುಂದಾಗಿದ್ದಾರೆ ಎಂಬುದು ಸ್ಪಷ್ಟವಿತ್ತು. ಅದಕ್ಕೆ ಯಡಿಯೂರಪ್ಪನವರ ಆಡಿಯೋ ಕಡೆಯ ಸಾಕ್ಷಿಯಾಗಿತ್ತೇ ಹೊರತು, ಬೇಕಾದಷ್ಟು ಸಾಂದರ್ಭಿಕ ಸಾಕ್ಷಿಗಳಿತ್ತು. ಹೀಗಿದ್ದುದರಿಂದ, ಸದರಿ ಶಾಸಕರನ್ನು ಹಾಲಿ ವಿಧಾನಸಭೆಯ ಅವಧಿ ಮುಗಿಯುವವರೆಗೂ ಚುನಾವಣೆಗೆ ಸ್ಪರ್ಧಿಸಲು ಸುಪ್ರಿಂಕೋರ್ಟು ಯಾವ ನಿರ್ಬಂಧ ವಿಧಿಸುತ್ತದೆ ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿತ್ತು. ಒಂದು ವೇಳೆ ಅದು ಸರಿ ಇಲ್ಲ ಎನ್ನುವುದಾದರೂ ಬೇರೆ ಯಾವ ಮದ್ದು ನೀಡಲಿದೆ ಎಂಬುದು ಪ್ರಜಾತಂತ್ರದ ಉಳಿವಿನ ದೃಷ್ಟಿಯಿಂದ ಮಹತ್ವದ್ದಾಗಿತ್ತು.

ರಾಜೀನಾಮೆ ನೀಡಿ ಬೇರೆ ಪಕ್ಷಕ್ಕೆ ಹೋಗಲು ತುದಿಗಾಲಿನಲ್ಲಿ ನಿಂತಿದ್ದ ಗುಂಪಿಗೆ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎನ್ನುವುದು ಉಡುಗೊರೆಯೇ ಹೊರತು ಶಿಕ್ಷೆಯಲ್ಲ. ಹೀಗಿರುವಾಗ ಅನರ್ಹತೆಯನ್ನು ಎತ್ತಿ ಹಿಡಿದಿದ್ದೇವೆ ಎನ್ನುವುದಕ್ಕೆ ಯಾವ ಅರ್ಥವೂ ಇದ್ದಂತಿಲ್ಲ.

ಅನೈತಿಕ ಪಕ್ಷಾಂತರವನ್ನು ತಡೆಯಬಲ್ಲ ಯಾವ ಮದ್ದನ್ನು ನೀಡುವಲ್ಲಿಯೂ ಸುಪ್ರೀಂಕೋರ್ಟು ಸಫಲವಾಗಿಲ್ಲ ಎಂಬುದು ವಿಷಾದದ ಸಂಗತಿಯಾಗಿದೆ. ಅನರ್ಹಗೊಂಡ ಬಹುತೇಕ ಶಾಸಕರು ಈಗ ಬಿಜೆಪಿ ಟಿಕೆಟ್ ಮೇಲೆ ಸ್ಪರ್ಧಿಸಲಿದ್ದಾರೆ ಎನ್ನುವುದು ಸುಪ್ರೀಂಕೋರ್ಟು ವಿಫಲವಾದದ್ದಕ್ಕೆ ಸಾಕ್ಷಿಯಾಗಲಿದೆ. ಒಂದು ರೀತಿಯಲ್ಲಿ ಬಿಜೆಪಿಯಿಂದ ಅನರ್ಹರಿಗೆ ಟಿಕೆಟ್ ನೀಡುವುದು ಮತ್ತು ಪಡೆಯುವುದು ಸುಪ್ರೀಂಕೋರ್ಟನ್ನೇ ಅಣಕ ಮಾಡಿದಂತೆಯೂ ಆಗುವ ಸಾಧ್ಯತೆ ಇದೆ. ಯಾವುದಕ್ಕೂ ಉಪಚುನಾವಣೆಯಲ್ಲಿ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...