Homeಮುಖಪುಟಪಾಟ್ನಾ | ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್ ಕಿಶೋರ್ ಬಂಧನ

ಪಾಟ್ನಾ | ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್ ಕಿಶೋರ್ ಬಂಧನ

- Advertisement -
- Advertisement -

ಬಿಹಾರ ಲೋಕಸೇವಾ ಆಯೋಗ (ಬಿಪಿಎಸ್‌ಸಿ) ಡಿಸೆಂಬರ್ 13ರಂದು ನಡೆಸಿದ್ದ ಪರೀಕ್ಷೆಯನ್ನು ರದ್ದುಪಡಿಸಲು ಒತ್ತಾಯಿಸಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ‘ಜನ ಸೂರಜ್‌’ ಪಕ್ಷದ ಸ್ಥಾಪಕ ಪ್ರಶಾಂತ್ ಕಿಶೋರ್ ಅವರನ್ನು ಇಂದು (ಜ.6) ಮುಂಜಾನೆ ಪೊಲೀಸರು ಬಂಧಿಸಿದ್ದಾರೆ.

ವರದಿಗಳ ಪ್ರಕಾರ, ಪೊಲೀಸರು ಪ್ರಶಾಂತ್ ಅವರನ್ನು ಬಂಧಿಸಿ ಕರೆದೊಯ್ದ ಬಳಿಕ, ಅವರ ಬೆಂಬಲಿಗರನ್ನು ಪ್ರತಿಭಟನಾ ಸ್ಥಳದಿಂದ ಹೊರ ಕಳಿಸಿದ್ದಾರೆ. ಪ್ರಶಾಂತ್ ಅವರನ್ನು ಪೊಲೀಸರು ವೈದ್ಯಕೀಯ ಪರೀಕ್ಷೆಗಾಗಿ ಪಾಟ್ನಾ ಏಮ್ಸ್‌ಗೆ ಕರೆದೊಯ್ದಿದ್ದಾರೆ ಎಂದು ಅವರ ಬೆಂಬಲಿಗರು ಹೇಳಿದ್ದಾರೆ.

ಪಿಟಿಐ ಸುದ್ದಿ ಸಂಸ್ಥೆ ಜೊತೆ ಮಾತನಾಡಿರುವ ಪಾಟ್ನಾ, ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಚಂದ್ರಶೇಖರ್ ಸಿಂಗ್ ಅವರು, “ಹೌದು, ಗಾಂಧಿ ಮೈದಾನದಲ್ಲಿ ಧರಣಿ ಕುಳಿತಿದ್ದ ಪ್ರಶಾಂತ್ ಕಿಶೋರ್ ಮತ್ತು ಅವರ ಬೆಂಬಲಿಗರನ್ನು ಸೋಮವಾರ ಬೆಳಗ್ಗೆ ಪೊಲೀಸರು ಬಂಧಿಸಿದ್ದಾರೆ” ಎಂದು ತಿಳಿಸಿದ್ದಾರೆ.

“ಪ್ರಶಾಂತ್ ಕಿಶೋರ್ ಮತ್ತು ಬೆಂಬಲಿಗರು ನಿರ್ಬಂಧಿತ ಜಾಗದಲ್ಲಿ ಧರಣಿ ನಡೆಸುತ್ತಿದ್ದರು. ಈ ಕಾರಣಕ್ಕೆ ಬಂಧಿಸಲಾಗಿದೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು” ಎಂದು ಡಿಎಂ ಮಾಹಿತಿ ನೀಡಿದ್ದಾರೆ.

ಗಾಂಧಿ ಮೈದಾನದ ಮಹಾತ್ಮ ಗಾಂಧಿ ಪುತ್ಥಳಿ ಬಳಿಯ ನಿರ್ಬಂಧಿತ ಜಾಗದಲ್ಲಿ ಪ್ರಶಾಂತ್ ಕಿಶೋರ್ ಮತ್ತು ಬೆಂಬಲಿಗರು ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸಿದ್ದಕ್ಕಾಗಿ ಪಾಟ್ನಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಡಿಸೆಂಬರ್ 13ರಂದು ನಡೆದಿದ್ದ ಬಿಪಿಎಸ್‌ಸಿ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಪ್ರತಿಭಟನೆ ನಡೆಸುತ್ತಿದ್ದ ನಾಗರಿಕ ಸೇವಾ ಆಕಾಂಕ್ಷಿಗಳಿಗೆ ಬೆಂಬಲ ವ್ಯಕ್ತಪಡಿಸಿ ಜನವರಿ 2ರಿಂದ ಪ್ರಶಾಂತ್ ಕಿಶೋರ್ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.

ಆದರೆ, ಡಿಸೆಂಬರ್ 13ರಂದು ನಡೆದ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾದ ಆರೋಪ ಕೇಳಿ ಬಂದಿದ್ದ ಹಿನ್ನೆಲೆ, ಆಯ್ದ ಅಭ್ಯರ್ಥಿಗಳಿಗೆ ಮರುಪರೀಕ್ಷೆ ನಡೆಸುವಂತೆ ಬಿಪಿಎಸ್‌ಸಿ ಆದೇಶಿಸಿತ್ತು.

ಅದರಂತೆ, ಜನವರಿ 4ರಂದು ರಾಜ್ಯದ 22 ಕೇಂದ್ರಗಳಲ್ಲಿ ಮರುಪರೀಕ್ಷೆ ನಡೆದಿದೆ. ಒಟ್ಟು 12,012 ಅಭ್ಯರ್ಥಿಗಳಲ್ಲಿ, ಸುಮಾರು 8,111 ಮಂದಿ ಮರು ಪರೀಕ್ಷೆಗಾಗಿ ತಮ್ಮ ಪ್ರವೇಶ ಕಾರ್ಡ್‌ಗಳನ್ನು (ಹಾಲ್‌ ಟಿಕೆಟ್‌) ಡೌನ್‌ಲೋಡ್ ಮಾಡಿಕೊಂಡಿದ್ದರು. ಆದರೆ, ಮರುಪರೀಕ್ಷೆಗೆ 5,943 ಅಭ್ಯರ್ಥಿಗಳು ಮಾತ್ರ ಹಾಜರಾಗಿದ್ದರು.

ಯಾವುದೇ ಸಮಸ್ಯೆಗಳಿಲ್ಲದೆ ಎಲ್ಲಾ ಕೇಂದ್ರಗಳಲ್ಲಿ ಬಹಳ ಯಶಸ್ವಿಯಾಗಿ ಮರು ಪರೀಕ್ಷೆ ನಡೆಸಲಾಗಿದೆ ಎಂದು ಬಿಪಿಎಸ್‌ಸಿ ಹೇಳಿದೆ.

ಇದನ್ನೂ ಓದಿ : ಒಡಿಶಾ | ಮೇಕೆ ಕಳವು ಆರೋಪ; ದಲಿತ ಯುವಕರ ಮೇಲೆ ಹಲ್ಲೆ, ಚಪ್ಪಲಿ ಹಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...