Homeಮುಖಪುಟತಮಿಳುನಾಡು ವಿಧಾನಸಭೆಯಲ್ಲಿ ಮತ್ತೆ ಕೋಲಾಹಲ : ಭಾಷಣ ಮಾಡದೆ ಹೊರನಡೆದ ರಾಜ್ಯಪಾಲ

ತಮಿಳುನಾಡು ವಿಧಾನಸಭೆಯಲ್ಲಿ ಮತ್ತೆ ಕೋಲಾಹಲ : ಭಾಷಣ ಮಾಡದೆ ಹೊರನಡೆದ ರಾಜ್ಯಪಾಲ

- Advertisement -
- Advertisement -

ತಮಿಳುನಾಡು ವಿಧಾನಸಭೆ ಇಂದು (ಜ.6) ಮತ್ತೊಮ್ಮೆ ಕೋಲಾಹಲಕ್ಕೆ ಸಾಕ್ಷಿಯಾಯಿತು. ಸರ್ಕಾರದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ರಾಜ್ಯಪಾಲ ಆರ್‌.ಎನ್‌ ರವಿ ಅವರು ಭಾಷಣ ಮಾಡದೆ ಸದನದಿಂದ ಹೊರ ನಡೆದರು.

ವಿಧಾನಸಭೆ ಕಲಾಪ ಆರಂಭಗೊಂಡಾಗ ತಮಿಳುನಾಡು ನಾಡಗೀತೆ ‘ತಮಿಳ್ ತಾಯಿ ವಝುತ್ತು’ ಮಾತ್ರ ನುಡಿಸಲಾಗಿದೆ. ರಾಷ್ಟ್ರಗೀತೆ ನುಡಿಸಿಲ್ಲ. ಈ ಮೂಲಕ ರಾಷ್ಟ್ರಗೀತೆ ಮತ್ತು ಸಂವಿಧಾನಕ್ಕೆ ಸರ್ಕಾರ ಅವಮಾನ ಮಾಡಿದೆ ಎಂದು ರಾಜ್ಯಪಾಲರ ಕಚೇರಿ ಆರೋಪಿಸಿದೆ.

ವರದಿಗಳ ಪ್ರಕಾರ, ಇಂದು ಬೆಳಿಗ್ಗೆ 9.29ಕ್ಕೆ ನಾಡಗೀತೆ ‘ತಮಿಳ್ ತಾಯಿ ವಝುತ್ತು’ ನುಡಿಸುವ ಮೂಲಕ ವಿಧಾನಸಭೆಯ ಕಲಾಪ ಆರಂಭಗೊಂಡಿತು. ಇದಾದ ತಕ್ಷಣ ಕಾಂಗ್ರೆಸ್ ಶಾಸಕರು ಸದನದ ಬಾವಿಗಿಳಿದು ವಿಷಯವೊಂದರ ಸಂಬಂಧ ಘೋಷಣೆಗಳನ್ನು ಕೂಗಿದರು. ಈ ವೇಳೆ ಎಐಎಡಿಎಂಕೆ ಶಾಸಕರು ಕೂಡ ಬಾವಿಗಿಳಿದು ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು.

ಈ ಗದ್ದಲದ ನಡುವೆಯೇ ರಾಜ್ಯಪಾಲರು ಅಲ್ಲಿದ್ದವರಿಗೆ ಕೇಳಿಸದಂತೆ ಮಾತುಗಳನ್ನು ಹೇಳಿ 9:32ಕ್ಕೆ ವಿಧಾನಸಭೆಯಿಂದ ನಿರ್ಗಮಿಸಿದರು.

ರಾಜ್ಯಪಾಲರ ನಿರ್ಗಮನದ ನಂತರ, ಸ್ಪೀಕರ್ ಎಂ. ಅಪ್ಪಾವು ಅವರು ರಾಜ್ಯ ಸರ್ಕಾರ ಸಾಂಪ್ರದಾಯಿಕವಾಗಿ ಸಿದ್ಧಪಡಿಸಿದ ರಾಜ್ಯಪಾಲರ ಭಾಷಣದ ತಮಿಳು ಆವೃತ್ತಿಯನ್ನು ಓದಲು ಪ್ರಾರಂಭಿಸಿದರು. ಸ್ವಲ್ಪ ಸಮಯದ ನಂತರ, ಎಐಎಡಿಎಂಕೆ ಶಾಸಕರು ಪ್ರತಿಭಟನೆ ವ್ಯಕ್ತಪಡಿಸುತ್ತ ಹೊರ ಹೋದರು. ಈ ವೇಳೆ ಬಿಜೆಪಿ, ಪಿಎಂಕೆ ಮತ್ತು ಡಿಎಂಕೆ ಮಿತ್ರಪಕ್ಷವಾದ ಕಾಂಗ್ರೆಸ್ ಸದಸ್ಯರು ಕೂಡ ಪ್ರತ್ಯೇಕ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ವ್ಯಕ್ತಪಡಿಸಿ ಸದನದಿಂದ ಹೊರ ನಡೆದರು.

ವಿಧಾನಸಭೆಯ ಕೋಲಾಹಲದ ಕುರಿತು ಎಕ್ಸ್‌ ಪೋಸ್ಟ್‌ ಮೂಲಕ ರಾಜಭವನ ಪ್ರತಿಕ್ರಿಯಿಸಿದ್ದು, “ಇಂದು ತಮಿಳುನಾಡು ವಿಧಾನಸಭೆಯಲ್ಲಿ ಭಾರತದ ಸಂವಿಧಾನ ಮತ್ತು ರಾಷ್ಟ್ರಗೀತೆಯನ್ನು ಮತ್ತೊಮ್ಮೆ ಅವಮಾನಿಸಲಾಗಿದೆ. ರಾಷ್ಟ್ರಗೀತೆಯನ್ನು ಗೌರವಿಸುವುದು ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೊದಲ ಮೂಲಭೂತ ಕರ್ತವ್ಯವಾಗಿದೆ. ರಾಜ್ಯಪಾಲರ ಭಾಷಣದ ಆರಂಭದಲ್ಲಿ ಮತ್ತು ಕೊನೆಯಲ್ಲಿ ಎಲ್ಲಾ ರಾಜ್ಯಗಳ ವಿಧಾನಸಭೆಗಳಲ್ಲಿ ಇದನ್ನು ನುಡಿಸಲಾಗುತ್ತದೆ” ಎಂದು ಬರೆದುಕೊಂಡಿದೆ.

ಮುಂದುವರಿದು, ವಿಧಾನಸಭೆಯಲ್ಲಿ ರಾಜ್ಯಪಾಲರ ಆಗಮನದ ನಂತರ ತಮಿಳು ನಾಡಗೀತೆ ಮಾತ್ರ ನುಡಿಸಲಾಗಿದೆ. ರಾಜ್ಯಗೀತೆಯ ಮೊದಲು ರಾಷ್ಟ್ರಗೀತೆಯನ್ನು ನುಡಿಸಬೇಕು ಎಂದು ರಾಜ್ಯಪಾಲರು ಪದೇ ಪದೇ ಒತ್ತಾಯಿಸಿದರು. ರಾಜ್ಯಪಾಲರು ಸದನದ ಸಾಂವಿಧಾನಿಕ ಕರ್ತವ್ಯವನ್ನು ಗೌರವಯುತವಾಗಿ ನೆನಪಿಸಿದ್ದಾರೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಸ್ಪೀಕರ್ ಎಂ. ಅಪ್ಪಾವು ಅವರಿಗೆ ರಾಷ್ಟ್ರಗೀತೆ ನುಡಿಸುವಂತೆ ಕೋರಿದ್ದಾರೆ. ಅವರ ನಿರಾಕರಣೆಯು ರಾಜ್ಯಪಾಲರ ಬೇಸರಕ್ಕೆ ಕಾರಣವಾಗಿದೆ. ಹಾಗಾಗಿ, ಅವರು ಸದನದಿಂದ ಹೊರನಡೆದರು” ಎಂದು ಹೇಳಿದೆ.

ತಮಿಳುನಾಡು ವಿಧಾನಸಭೆಯ ಸ್ಥಾಪಿತ ನಿಯಮಗಳ ಪ್ರಕಾರ, ಕಲಾಪಗಳ ಪ್ರಾರಂಭದಲ್ಲಿ ತಮಿಳು ನಾಡಗೀತೆಯನ್ನು ನುಡಿಸಲಾಗುತ್ತದೆ. ಸ್ಪೀಕರ್ ಅವರು ರಾಜ್ಯಪಾಲರ ಭಾಷಣದ ತಮಿಳು ಆವೃತ್ತಿಯನ್ನು ಓದಿದ ನಂತರ ದಿನದ ವ್ಯವಹಾರದ ಮುಕ್ತಾಯದಲ್ಲಿ ಸಾಂಪ್ರದಾಯಿಕವಾಗಿ ರಾಷ್ಟ್ರಗೀತೆಯನ್ನು ನುಡಿಸಲಾಗುತ್ತದೆ ಎಂದು ವರದಿಗಳು ಹೇಳಿವೆ.

ತಮ್ಮ ಅನುಮತಿ ಇಲ್ಲದೆ ವಿಧಾನಸಭೆಯೊಳಗೆ ನಡೆದ ಯಾವುದೇ ಬೆಳವಣಿಗೆಗಳನ್ನು ವರದಿ ಮಾಡದಂತೆ ಮಾಧ್ಯಮಗಳಿಗೆ ಸ್ಪೀಕರ್ ಅಪ್ಪಾವು ಸೂಚಿಸಿದ್ದು, ಉಲ್ಲಂಘನೆಗಳ ವಿರುದ್ಧ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ : ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...