Homeಮುಖಪುಟತಮಿಳುನಾಡು ವಿಧಾನಸಭೆಯಲ್ಲಿ ಮತ್ತೆ ಕೋಲಾಹಲ : ಭಾಷಣ ಮಾಡದೆ ಹೊರನಡೆದ ರಾಜ್ಯಪಾಲ

ತಮಿಳುನಾಡು ವಿಧಾನಸಭೆಯಲ್ಲಿ ಮತ್ತೆ ಕೋಲಾಹಲ : ಭಾಷಣ ಮಾಡದೆ ಹೊರನಡೆದ ರಾಜ್ಯಪಾಲ

- Advertisement -
- Advertisement -

ತಮಿಳುನಾಡು ವಿಧಾನಸಭೆ ಇಂದು (ಜ.6) ಮತ್ತೊಮ್ಮೆ ಕೋಲಾಹಲಕ್ಕೆ ಸಾಕ್ಷಿಯಾಯಿತು. ಸರ್ಕಾರದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ರಾಜ್ಯಪಾಲ ಆರ್‌.ಎನ್‌ ರವಿ ಅವರು ಭಾಷಣ ಮಾಡದೆ ಸದನದಿಂದ ಹೊರ ನಡೆದರು.

ವಿಧಾನಸಭೆ ಕಲಾಪ ಆರಂಭಗೊಂಡಾಗ ತಮಿಳುನಾಡು ನಾಡಗೀತೆ ‘ತಮಿಳ್ ತಾಯಿ ವಝುತ್ತು’ ಮಾತ್ರ ನುಡಿಸಲಾಗಿದೆ. ರಾಷ್ಟ್ರಗೀತೆ ನುಡಿಸಿಲ್ಲ. ಈ ಮೂಲಕ ರಾಷ್ಟ್ರಗೀತೆ ಮತ್ತು ಸಂವಿಧಾನಕ್ಕೆ ಸರ್ಕಾರ ಅವಮಾನ ಮಾಡಿದೆ ಎಂದು ರಾಜ್ಯಪಾಲರ ಕಚೇರಿ ಆರೋಪಿಸಿದೆ.

ವರದಿಗಳ ಪ್ರಕಾರ, ಇಂದು ಬೆಳಿಗ್ಗೆ 9.29ಕ್ಕೆ ನಾಡಗೀತೆ ‘ತಮಿಳ್ ತಾಯಿ ವಝುತ್ತು’ ನುಡಿಸುವ ಮೂಲಕ ವಿಧಾನಸಭೆಯ ಕಲಾಪ ಆರಂಭಗೊಂಡಿತು. ಇದಾದ ತಕ್ಷಣ ಕಾಂಗ್ರೆಸ್ ಶಾಸಕರು ಸದನದ ಬಾವಿಗಿಳಿದು ವಿಷಯವೊಂದರ ಸಂಬಂಧ ಘೋಷಣೆಗಳನ್ನು ಕೂಗಿದರು. ಈ ವೇಳೆ ಎಐಎಡಿಎಂಕೆ ಶಾಸಕರು ಕೂಡ ಬಾವಿಗಿಳಿದು ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು.

ಈ ಗದ್ದಲದ ನಡುವೆಯೇ ರಾಜ್ಯಪಾಲರು ಅಲ್ಲಿದ್ದವರಿಗೆ ಕೇಳಿಸದಂತೆ ಮಾತುಗಳನ್ನು ಹೇಳಿ 9:32ಕ್ಕೆ ವಿಧಾನಸಭೆಯಿಂದ ನಿರ್ಗಮಿಸಿದರು.

ರಾಜ್ಯಪಾಲರ ನಿರ್ಗಮನದ ನಂತರ, ಸ್ಪೀಕರ್ ಎಂ. ಅಪ್ಪಾವು ಅವರು ರಾಜ್ಯ ಸರ್ಕಾರ ಸಾಂಪ್ರದಾಯಿಕವಾಗಿ ಸಿದ್ಧಪಡಿಸಿದ ರಾಜ್ಯಪಾಲರ ಭಾಷಣದ ತಮಿಳು ಆವೃತ್ತಿಯನ್ನು ಓದಲು ಪ್ರಾರಂಭಿಸಿದರು. ಸ್ವಲ್ಪ ಸಮಯದ ನಂತರ, ಎಐಎಡಿಎಂಕೆ ಶಾಸಕರು ಪ್ರತಿಭಟನೆ ವ್ಯಕ್ತಪಡಿಸುತ್ತ ಹೊರ ಹೋದರು. ಈ ವೇಳೆ ಬಿಜೆಪಿ, ಪಿಎಂಕೆ ಮತ್ತು ಡಿಎಂಕೆ ಮಿತ್ರಪಕ್ಷವಾದ ಕಾಂಗ್ರೆಸ್ ಸದಸ್ಯರು ಕೂಡ ಪ್ರತ್ಯೇಕ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ವ್ಯಕ್ತಪಡಿಸಿ ಸದನದಿಂದ ಹೊರ ನಡೆದರು.

ವಿಧಾನಸಭೆಯ ಕೋಲಾಹಲದ ಕುರಿತು ಎಕ್ಸ್‌ ಪೋಸ್ಟ್‌ ಮೂಲಕ ರಾಜಭವನ ಪ್ರತಿಕ್ರಿಯಿಸಿದ್ದು, “ಇಂದು ತಮಿಳುನಾಡು ವಿಧಾನಸಭೆಯಲ್ಲಿ ಭಾರತದ ಸಂವಿಧಾನ ಮತ್ತು ರಾಷ್ಟ್ರಗೀತೆಯನ್ನು ಮತ್ತೊಮ್ಮೆ ಅವಮಾನಿಸಲಾಗಿದೆ. ರಾಷ್ಟ್ರಗೀತೆಯನ್ನು ಗೌರವಿಸುವುದು ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೊದಲ ಮೂಲಭೂತ ಕರ್ತವ್ಯವಾಗಿದೆ. ರಾಜ್ಯಪಾಲರ ಭಾಷಣದ ಆರಂಭದಲ್ಲಿ ಮತ್ತು ಕೊನೆಯಲ್ಲಿ ಎಲ್ಲಾ ರಾಜ್ಯಗಳ ವಿಧಾನಸಭೆಗಳಲ್ಲಿ ಇದನ್ನು ನುಡಿಸಲಾಗುತ್ತದೆ” ಎಂದು ಬರೆದುಕೊಂಡಿದೆ.

ಮುಂದುವರಿದು, ವಿಧಾನಸಭೆಯಲ್ಲಿ ರಾಜ್ಯಪಾಲರ ಆಗಮನದ ನಂತರ ತಮಿಳು ನಾಡಗೀತೆ ಮಾತ್ರ ನುಡಿಸಲಾಗಿದೆ. ರಾಜ್ಯಗೀತೆಯ ಮೊದಲು ರಾಷ್ಟ್ರಗೀತೆಯನ್ನು ನುಡಿಸಬೇಕು ಎಂದು ರಾಜ್ಯಪಾಲರು ಪದೇ ಪದೇ ಒತ್ತಾಯಿಸಿದರು. ರಾಜ್ಯಪಾಲರು ಸದನದ ಸಾಂವಿಧಾನಿಕ ಕರ್ತವ್ಯವನ್ನು ಗೌರವಯುತವಾಗಿ ನೆನಪಿಸಿದ್ದಾರೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಸ್ಪೀಕರ್ ಎಂ. ಅಪ್ಪಾವು ಅವರಿಗೆ ರಾಷ್ಟ್ರಗೀತೆ ನುಡಿಸುವಂತೆ ಕೋರಿದ್ದಾರೆ. ಅವರ ನಿರಾಕರಣೆಯು ರಾಜ್ಯಪಾಲರ ಬೇಸರಕ್ಕೆ ಕಾರಣವಾಗಿದೆ. ಹಾಗಾಗಿ, ಅವರು ಸದನದಿಂದ ಹೊರನಡೆದರು” ಎಂದು ಹೇಳಿದೆ.

ತಮಿಳುನಾಡು ವಿಧಾನಸಭೆಯ ಸ್ಥಾಪಿತ ನಿಯಮಗಳ ಪ್ರಕಾರ, ಕಲಾಪಗಳ ಪ್ರಾರಂಭದಲ್ಲಿ ತಮಿಳು ನಾಡಗೀತೆಯನ್ನು ನುಡಿಸಲಾಗುತ್ತದೆ. ಸ್ಪೀಕರ್ ಅವರು ರಾಜ್ಯಪಾಲರ ಭಾಷಣದ ತಮಿಳು ಆವೃತ್ತಿಯನ್ನು ಓದಿದ ನಂತರ ದಿನದ ವ್ಯವಹಾರದ ಮುಕ್ತಾಯದಲ್ಲಿ ಸಾಂಪ್ರದಾಯಿಕವಾಗಿ ರಾಷ್ಟ್ರಗೀತೆಯನ್ನು ನುಡಿಸಲಾಗುತ್ತದೆ ಎಂದು ವರದಿಗಳು ಹೇಳಿವೆ.

ತಮ್ಮ ಅನುಮತಿ ಇಲ್ಲದೆ ವಿಧಾನಸಭೆಯೊಳಗೆ ನಡೆದ ಯಾವುದೇ ಬೆಳವಣಿಗೆಗಳನ್ನು ವರದಿ ಮಾಡದಂತೆ ಮಾಧ್ಯಮಗಳಿಗೆ ಸ್ಪೀಕರ್ ಅಪ್ಪಾವು ಸೂಚಿಸಿದ್ದು, ಉಲ್ಲಂಘನೆಗಳ ವಿರುದ್ಧ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ : ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...