Homeಅಂತರಾಷ್ಟ್ರೀಯಭಾರೀ ಬೆಲೆ ಕುಸಿತ: ತರಕಾರಿ ಬೆಳೆಗಳನ್ನು ಹೊಲದಲ್ಲಿ ನಾಶಮಾಡುತ್ತಿರುವ ಜಾರ್ಖಂಡ್ ರೈತರು

ಭಾರೀ ಬೆಲೆ ಕುಸಿತ: ತರಕಾರಿ ಬೆಳೆಗಳನ್ನು ಹೊಲದಲ್ಲಿ ನಾಶಮಾಡುತ್ತಿರುವ ಜಾರ್ಖಂಡ್ ರೈತರು

- Advertisement -
- Advertisement -

ರಾಂಚಿ: ಜಾರ್ಖಂಡ್‌ನಲ್ಲಿ ಕಳೆದ ವಾರದಿಂದ ರಾಜ್ಯಾದ್ಯಂತ ಮಾರುಕಟ್ಟೆಗಳಲ್ಲಿ ತರಕಾರಿ ಬೆಳೆಯ ಬೆಲೆಗಳು ಭಾರೀ ಕುಸಿದಿದ್ದು, ರೈತರು ಬೇಸಾಯದ ಮೂಲ ವೆಚ್ಚವನ್ನು ಸಹ ಮರುಪಡೆಯಲು ಸಾಧ್ಯವಾಗದ ಕಾರಣ ಬಂಪರ್ ಫಸಲು ಹೊರತಾಗಿಯೂ ತೀವ್ರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದು, ಹತಾಶೆಗೊಂಡು ಹೊಲದಲ್ಲಿಯೇ ಅವುಗಳನ್ನು ನಾಶಪಡಿಸುತ್ತಿದ್ದಾರೆ.

ರಾಂಚಿಯ ನಗರದ ಮಾರುಕಟ್ಟೆಗಳಲ್ಲಿ ಪ್ರಮುಖ ತರಕಾರಿಗಳಾದ ಹೂಕೋಸು, ಎಲೆಕೋಸು, ಪಾಲಕ್ ಮತ್ತು ಟೊಮೆಟೊಗಳನ್ನು ಕೆಜಿಗೆ 5-10 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಈ ಬೆಲೆ ಇನ್ನೂ ಕಡಿಮೆ ಇದೆ. ಇದರಿಂದ ರೈತರು ಹತಾಶರಾಗಿ ತಮ್ಮ ತರಕಾರಿ ಬೆಳೆ ನಾಶ ಮಾಡುತ್ತಿದ್ದಾರೆ. ಮಧ್ಯವರ್ತಿಗಳು ರೈತರಿಗೆ ನ್ಯಾಯಯುತ ಬೆಲೆ ನೀಡಲು ಸಿದ್ಧರಿಲ್ಲ. ಈ ಕುರಿತು ಸರಕಾರವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ರೈತರು ಒತ್ತಾಯಿಸುತ್ತಿದ್ದಾರೆ.

ಚಿತಾರ್‌ಪುರ ಬ್ಲಾಕ್‌ನ ಬಡ್ಕಿಪೋನಾ ಗ್ರಾಮದ ರೈತ ರಾಧೇಶ್ಯಾಮ್ ಮಹತೋ ಎಂಬುವರು ತಮ್ಮ ಒಂದು ಎಕರೆ ಜಮೀನಿನಲ್ಲಿದ್ದ ಎಲೆಕೋಸು ಬೆಳೆಯನ್ನು ಟ್ರ್ಯಾಕ್ಟರ್ ಓಡಿಸಿ ನೆಲಸಮಗೊಳಿಸಿದ್ದಾರೆ. ಇದೇ ರೀತಿಯ ಘಟನೆ ಗೋಳಾ ಬ್ಲಾಕ್‌ನಲ್ಲಿ ಸಂಭವಿಸಿದ್ದು, ನ್ಯಾಯಯುತ ಬೆಲೆ ಸಿಗದ ಕಾರಣ ಮತ್ತೊಬ್ಬ ರೈತ ತನ್ನ ಹೂಕೋಸು ಬೆಳೆಯನ್ನು ನಾಶಪಡಿಸಿದ್ದಾನೆ. ರಾಂಚಿ ಜಿಲ್ಲೆಯ ಒರ್ಮಾಂಜಿಯಲ್ಲಿ ರೈತರು ತಮ್ಮ ತರಕಾರಿ ಬೆಳೆಗಳನ್ನು ಕಿತ್ತು ಬಿಸಾಡುತ್ತಿದ್ದಾರೆ. ಐದಾರು ಎಕರೆಯಲ್ಲಿ ಹೂಕೋಸು ಹಾಗೂ ಎಲೆಕೋಸು ಕೃಷಿ ಮಾಡಿರುವುದಾಗಿ ಉಕ್ರೀಡ್ ಗ್ರಾಮದ ರೈತ ಕಾಮೇಶ್ವರ ಮಹತೋ ತಿಳಿಸಿದ್ದಾರೆ.

ಈ ತರಕಾರಿ ಬೆಳೆಗಳಿಗೆ ಕೆ.ಜಿ.ಗೆ ಕೇವಲ 2-3 ರೂ.ಗೆ ಸಿಗುತ್ತಿದ್ದು, ಮಾರುಕಟ್ಟೆಯ ಸಾಗಣೆ ವೆಚ್ಚವೂ ಗಳಿಕೆಗಿಂತ ಹೆಚ್ಚಾಗಿದೆ ಎಂದು ರೈತರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ. ರಮೇಶ್ ವರ್ಮಾ, ರಾಮಚಂದ್ರ ಮಹತೋ, ಲಖನ್‌ಲಾಲ್ ಮಹತೋ ಮತ್ತು ನಿರಂಜನ್ ಮಹತೋ ಸೇರಿದಂತೆ ಬೊಕಾರೊ ಜಿಲ್ಲೆಯ ಕಸ್ಮಾರ್ ಬ್ಲಾಕ್‌ನ ಜಮ್ಹರ್ ಗ್ರಾಮದ ರೈತರು ಇದೇ ರೀತಿಯ ದುಃಖಗಳನ್ನು ಹಂಚಿಕೊಂಡಿದ್ದಾರೆ.

ಈ ಹಿಂದೆ ಅಕಾಲಿಕ ಮಳೆಯಿಂದಾಗಿ ಬೆಳೆ ಹಾನಿಯನ್ನು ಸಹಿಸಿಕೊಂಡಿದ್ದ ರೈತರು, ಹೆಚ್ಚಿನ ಭರವಸೆಯೊಂದಿಗೆ ತಮ್ಮ ಹೊಲಗಳಲ್ಲಿ ತರಕಾರಿ ಬೆಳೆಗಳನ್ನು ಮರುನಾಟಿ ಮಾಡಿದ್ದರು. ಈಗ ಈ ತರಕಾರಿ ಬೆಳೆಗಳ ಬೆಲೆಯು ಮಾರುಕಟ್ಟೆಯಲ್ಲಿ ಬೆಲೆ ಕುಸಿತವನ್ನು ಎದುರಿಸಬೇಕಾಗಿದೆ.

ಈ ಸಮಸ್ಯೆಯು ರಾಜ್ಯಾದ್ಯಂತ ವ್ಯಾಪಕವಾಗಿ ಹರಡಿದೆ. ಪ್ರಮುಖ ತರಕಾರಿ ಬೆಳೆಯುವ ಪ್ರದೇಶಗಳಾದ ಇಟ್ಕಿ, ಬೆಡೋ ಮತ್ತು ರಾಂಚಿ ಜಿಲ್ಲೆಯ ಮಂದರ್, ಬೊಕಾರೊ ಜಿಲ್ಲೆಯ ಪೆಟಾರ್ವಾರ್ ಮತ್ತು ಕಸ್ಮಾರ್, ರಾಮಗಢ ಜಿಲ್ಲೆಯ ಗೋಲಾ ಮತ್ತು ಚಿತಾರ್‌ಪುರ್ ಮತ್ತು ಕೊಡೆರ್ಮಾ ಜಿಲ್ಲೆಯ ಡೊಮ್‌ಚಾಂಚ್ ಮತ್ತು ದರ್ಗಾಂವ್ ಮುಂತಾದೆಡೆ ಈ ಬೆಲೆ ಕುಸಿತದ ಬಿಸಿ ತಟ್ಟಿದೆ.

ಹಜಾರಿಬಾಗ್ ಜಿಲ್ಲೆಯ ಚೌಪರಾನ್ ಬ್ಲಾಕ್‌ನ ದಾದ್‌ಪುರ ಗ್ರಾಮದ ರೈತ ಶಿಬು ಮಹತೋ ಮಾತನಾಡಿ, ಮೂಲಂಗಿ ಮತ್ತು ಎಲೆಕೋಸು ಕೆಜಿಗೆ ಕೇವಲ 4-5 ರೂ.ಗೆ ಮಾರಾಟವಾಗುತ್ತಿದೆ. ಖರೀದಿದಾರರು ಕಡಿಮೆ ದರಕ್ಕೆ ತರಕಾರಿ ಬೆಳೆಗಳನ್ನು ಖರೀದಿಸುತ್ತಿದ್ದಾರೆ. ಇದರಿಂದಾಗಿ ನಮ್ಮ ಹೊಲಗಳಿಂದ ಮಾರುಕಟ್ಟೆಗಳಿಗೆ ಬೆಳೆಗಳನ್ನು ಸಾಗಿಸಲು ಸಾಧ್ಯವಾಗುತ್ತಿಲ್ಲ ಎಂದು ತಮ್ಮ ಆಳಲನ್ನು ತೋಡಿಕೊಂಡಿದ್ದಾರೆ.

ಪ್ರತಿ ವರ್ಷ ಫೆಬ್ರವರಿಯಿಂದ ಏಪ್ರಿಲ್-ಮೇ ವರೆಗೆ ತರಕಾರಿಗಳ ಬೆಲೆ ಕುಸಿತವು ಪುನರಾವರ್ತಿತ ಸಮಸ್ಯೆಯಾಗಿದೆ. ತರಕಾರಿ ಸಂಸ್ಕರಣಾ ಘಟಕಗಳು ಮತ್ತು ಇವುಗಳಿಗೆ ನ್ಯಾಯಯುತ ಬೆಲೆಯನ್ನು ಖಚಿತಪಡಿಸಿಕೊಳ್ಳುವ ಕಾರ್ಯವಿಧಾನಗಳ ಮಾರ್ಪಾಡು ಅಗತ್ಯ. ಇಂತಹ ಕ್ರಮಗಳಿಲ್ಲದೆ, ರೈತರ ಪರಿಸ್ಥಿತಿ ಕತ್ತಲೆಕೂಪವಾಗುತ್ತದೆ ಎಂದು ಚತ್ರಾ ಜಿಲ್ಲೆಯ ಇತ್ಖೋರಿಯ ಸ್ಥಳೀಯ ಪತ್ರಕರ್ತ ರಾಮದೇವ್ ಕೇಸರಿ ಹೇಳಿದ್ದಾರೆ.

ಯುವ ಪತ್ರಕರ್ತನ ಕೊಲೆ ಪ್ರಕರಣ : ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...