Homeಮುಖಪುಟ‘ತಂದೆ ವಿರುದ್ಧ ಬಿಜೆಪಿ ನಾಯಕನ ಹೇಳಿಕೆ’ | ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಾದ ದಿಲ್ಲಿ ಸಿಎಂ ಅತಿಶಿ

‘ತಂದೆ ವಿರುದ್ಧ ಬಿಜೆಪಿ ನಾಯಕನ ಹೇಳಿಕೆ’ | ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಾದ ದಿಲ್ಲಿ ಸಿಎಂ ಅತಿಶಿ

- Advertisement -
- Advertisement -

ಬಿಜೆಪಿ ನಾಯಕ ರಮೇಶ್ ಬಿಧುರಿ ಅವರು ತಮ್ಮ ತಂದೆಯ ಬಗ್ಗೆ ಹೇಳಿದ್ದ ಆಕ್ಷೇಪಾರ್ಹ ಹೇಳಿಕೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ದೆಹಲಿ ಮುಖ್ಯಮಂತ್ರಿ ಅತಿಶಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಭಾವುಕರಾಗಿದ್ದಾರೆ. ಕ್ಯಾಮೆರಾ ಮುಂದೆಯೆ ಕಣ್ಣೀರು ಹಾಕಿದ ಅವರು, ಸಂಕಟದಿಂದ ಮಾತನಾಡಿದರು. ಬಿಧುರಿ ತಮ್ಮ ವಯಸ್ಸಾದ ತಂದೆಯನ್ನು ಮತ ಗಳಿಸಲು ಬಳಸಿಕೊಂಡು ಅಧೋಗತಿಗೆ ಇಳಿದಿದ್ದಾರೆ ಎಂದು ಆರೋಪಿಸಿದ್ದಾರೆ. ತಂದೆ ವಿರುದ್ಧ ಬಿಜೆಪಿ

”ವಯಸ್ಸಾದ, ನಡೆಯಲು ಸಹ ಆಸರೆ ಬೇಕಿರುವ ನನ್ನ ತಂದೆಯನ್ನು ರಾಜಕೀಯ ಲಾಭಕ್ಕಾಗಿ ಅವರು ಬಳಸಿಕೊಳ್ಳುತ್ತಿದ್ದಾರೆ” ಎಂದು ಅತಿಶಿ ಕಣ್ಣೀರಿಟ್ಟಿದ್ದಾರೆ. ಬಿಜೆಪಿ ನಾಯಕ ಬಿಧುರಿಯ ಟೀಕೆಗಳ ಬಗ್ಗೆ ಅವರು ತಮ್ಮ ದುಃಖವನ್ನು ವ್ಯಕ್ತಪಡಿಸಿ, ಇಂತಹ ತಂತ್ರಗಳು ತೀವ್ರ ನೋವುಂಟುಮಾಡುತ್ತವೆ ಮತ್ತು ಇದು ಅನುಚಿತವಾಗಿವೆ ಎಂದು ಒತ್ತಿ ಹೇಳಿದ್ದಾರೆ. ತಂದೆ ವಿರುದ್ಧ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪಕ್ಷದ ಕೆಲಸ ಮತ್ತು ಜನಸೇವೆಯ ಮೂಲಕ ಮತಗಳನ್ನು ಗೆಲ್ಲುವತ್ತ ಗಮನ ಹರಿಸಬೇಕು ಎಂದು ಹೇಳಿದ ಸಿಎಂ ಅತಿಶಿ, ರಾಜಕೀಯ ಪ್ರಚಾರದಲ್ಲಿ ವೈಯಕ್ತಿಕ ದಾಳಿ ಅಥವಾ ಕುಟುಂಬ ಸದಸ್ಯರನ್ನು ಬಳಸಿ ಶೋಷಣೆ ಮಾಡುವುದು ಸರಿಯಲ್ಲ, “ನೀವು ನಿಮ್ಮ ಕೆಲಸದ ವಿಚಾರದಲ್ಲಿ ಮತಗಳನ್ನು ಕೇಳಿ” ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

 

ರ‍್ಯಾಲಿಯೊಂದರಲ್ಲಿ ಮಾತನಾಡಿದ್ದ ರಮೇಶ್ ಬಿಧುರಿ, ಎಎಪಿ ನಾಯಕರಾದ ಅರವಿಂದ್ ಕೇಜ್ರಿವಾಲ್ ಮತ್ತು ಅತಿಶಿ ವಿರುದ್ಧ ವಾಗ್ದಾಳಿ ನಡೆಸುತ್ತಾ, “ಭ್ರಷ್ಟ ಕಾಂಗ್ರೆಸ್ ಜೊತೆ ಹೋಗುವುದಿಲ್ಲ ಎಂದು ಕೇಜ್ರಿವಾಲ್ ತಮ್ಮ ಮಕ್ಕಳ ಮೇಲೆ ಆಣೆ ಪ್ರಮಾಣ ಮಾಡಿದರು; ಮರ್ಲೆನಾ ತನ್ನ ತಂದೆಯನ್ನೆ ಬದಲಾಯಿಸಿದರು. ಮೊದಲು ಅವಳು ಮರ್ಲೆನಾ ಆಗಿದ್ದರು, ಈಗ ಅವಳು ಸಿಂಗ್ ಆಗಿದ್ದಾರೆ. ಇದು ಅವರ ಚಾರಿತ್ರ್ಯ” ಎಂದು ಹೇಳಿದ್ದಾರೆ

“ಅವರು ನಾಚಿಕೆಯ ಎಲ್ಲ ಮಿತಿಗಳನ್ನು ದಾಟಿದ್ದು, ಮಹಿಳಾ ಮುಖ್ಯಮಂತ್ರಿಯನ್ನು ಅವಮಾನ ಮಾಡಿರುವುದನ್ನು ದೆಹಲಿಯ ಜನರು ಸಹಿಸುವುದಿಲ್ಲ. ಇದರ ವಿರುದ್ಧ ದೆಹಲಿಯ ಎಲ್ಲಾ ಮಹಿಳೆಯರು ಪ್ರತೀಕಾರ ತೀರಿಸಿಕೊಳ್ಳುತ್ತಾರೆ” ಎಂದು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಎಕ್ಸ್‌ನಲ್ಲಿ ಹೇಳಿದ್ದಾರೆ.

ಅಷ್ಟೆ ಅಲ್ಲದೆ, ಬಿಧುರಿ ಪ್ರಿಯಾಂಕಾ ಗಾಂಧಿ ಅವರ ವಿರುದ್ಧ ಕೂಡಾ ಅಶ್ಲೀಲ ಹೇಳಿಕೆ ನೀಡಿದ್ದರು. ಅವರ ಹೇಳಿಕೆಗಳು ಬಿಜೆಪಿಯ “ಮಹಿಳಾ ವಿರೋಧಿ” ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಕಾಂಗ್ರೆಸ್ ಮತ್ತು ಎಎಪಿ ಆರೋಪಿಸಿದೆ.

“ಲಾಲು ಪ್ರಸಾದ್ ಯಾದವ್ ಅವರು ಬಿಹಾರದ ರಸ್ತೆಗಳನ್ನು ಹೇಮಾಮಾಲಿನಿಯ ಕೆನ್ನೆಯಂತೆ ಮಾಡುವುದಾಗಿ ಹೇಳಿದ್ದರು. ಆದರೆ ಅವರು ಸುಳ್ಳು ಹೇಳಿದ್ದು, ಅವರಿಗೆ ಅದನ್ನು ಮಾಡಲು ಸಾಧ್ಯವಾಗಿಲ್ಲ. ಆದರೆ ಓಖ್ಲಾ ಮತ್ತು ಸಂಗಮ್ ವಿಹಾರ್‌ನಲ್ಲಿ ನಾವು ನಿರ್ಮಿಸಿದ ರಸ್ತೆಗಳಂತೆ, ಕಲ್ಕಾಜಿಯ ಎಲ್ಲಾ ರಸ್ತೆಗಳನ್ನು ಪ್ರಿಯಾಂಕ ಗಾಂಧಿ ಅವರ ಕೆನ್ನೆಗಳಂತೆ ಮಾಡುತ್ತೇವೆ ಎಂದು ನಿಮಗೆ ಭರವಸೆ ನೀಡುತ್ತೇನೆ” ಎಂದು ಬಿಧುರಿ ಹೇಳಿರುವ ವಿಡಿಯೋದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ಅವರು, “ಪ್ರಿಯಾಂಕಾ ಗಾಂಧಿ ಬಗ್ಗೆ ರಮೇಶ್ ಬಿಧುರಿ ಅವರ ಹೇಳಿಕೆ ಅತ್ಯಂತ ನಾಚಿಕೆಗೇಡಿನ ಸಂಗತಿ. ಅಷ್ಟೆ ಅಲ್ಲದೆ, ಅವರ ಹೇಳಿಕೆ ಅವರ ಕೊಳಕು ಮಹಿಳಾ ವಿರೋಧಿ ಚಿಂತನೆಯನ್ನು ಬಿಂಬಿಸುತ್ತದೆ. ಅದಾಗ್ಯೂ, ಸದನದಲ್ಲಿ ತನ್ನ ಸಹ ಸಂಸದರ ವಿರುದ್ಧ ಅಸಭ್ಯ ಭಾಷೆ ಬಳಸಿ ಯಾವುದೇ ಶಿಕ್ಷೆಗೆ ಗುರಿಯಾಗದ ವ್ಯಕ್ತಿಯಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?” ಎಂದು ಹೇಳಿದ್ದಾರೆ.

“ಬಿಧುರಿ ಮಾತ್ರವಲ್ಲ, ಬಿಜೆಪಿಯ ಉನ್ನತ ನಾಯಕತ್ವ ಇದಕ್ಕಾಗಿ ಕೈ ಜೋಡಿಸಿ ಕ್ಷಮೆಯಾಚಿಸಬೇಕು” ಎಂದು ಶ್ರೀನಾಟೆ ಹೇಳಿದ್ದು, ಇದು ಕೇವಲ ಪ್ರಿಯಾಂಕಾ ಗಾಂಧಿಗೆ ಮಾತ್ರವಲ್ಲ ಎಲ್ಲಾ ಮಹಿಳೆಯರಿಗೆ ಮಾಡಿದ ಅವಮಾನವಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂಓದಿ:  ದೆಹಲಿ ಚುನಾವಣೆ: ಎಎಪಿಯ ‘ಮಹಿಳಾ ಸಮ್ಮಾನ್’ ನಂತರ ಕಾಂಗ್ರೆಸ್ ‘ಪ್ಯಾರಿ ದೀದಿ’ ಯೋಜನೆ

ದೆಹಲಿ ಚುನಾವಣೆ: ಎಎಪಿಯ ‘ಮಹಿಳಾ ಸಮ್ಮಾನ್’ ನಂತರ ಕಾಂಗ್ರೆಸ್ ‘ಪ್ಯಾರಿ ದೀದಿ’ ಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...