Homeಮುಖಪುಟಮಹಾರಾಷ್ಟ್ರ ಸಚಿವರಿಗೆ ಬೆದರಿಕೆ; ಮರಾಠ ಮೀಸಲಾತಿ ಹೋರಾಟಗಾರನ ವಿರುದ್ಧ ಎಫ್‌ಐಆರ್

ಮಹಾರಾಷ್ಟ್ರ ಸಚಿವರಿಗೆ ಬೆದರಿಕೆ; ಮರಾಠ ಮೀಸಲಾತಿ ಹೋರಾಟಗಾರನ ವಿರುದ್ಧ ಎಫ್‌ಐಆರ್

- Advertisement -
- Advertisement -

ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಸರಪಂಚ್‌ನ ಹತ್ಯೆಗೆ ಸಂಬಂಧಿಸಿದಂತೆ ರಾಜ್ಯದ ಸಚಿವ ಧನಂಜಯ್ ಮುಂಡೆ ಅವರಿಗೆ ಬೆದರಿಕೆಯೊಡ್ಡುವ ಹೇಳಿಕೆ ನೀಡಿರುವ ಆರೋಪದ ಮೇಲೆ ಮರಾಠಾ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ ವಿರುದ್ಧ ಮಹಾರಾಷ್ಟ್ರ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಜಾರಂಗೆ ಪಾಟೀಲ್ ಸಾಮಾಜ ದ್ರೋಹದ ಹೇಳಿಕೆಗಳನ್ನು ನೀಡಿದ್ದು, ವೈಷಮ್ಯವನ್ನು ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ನೀಡಿರುವ ದೂರಿನ ಆಧಾರದ ಮೇಲೆ ಬೀಡ್‌ ಜಿಲ್ಲೆಯ ಪರ್ಲಿ ಪಟ್ಟಣದ ಪೋಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಮಹಾರಾಷ್ಟ್ರ

ಶನಿವಾರ ಪರ್ಭಾನಿಯಲ್ಲಿ ನಡೆದ ರ‍್ಯಾಲಿಯಲ್ಲಿ ಜಾರಂಗೆ ಪಾಟೀಲ್ ಅವರು ಸರಪಂಚ್ ಸಂತೋಷ್ ದೇಶಮುಖ್ ಹತ್ಯೆಗೆ ಸಂಬಂಧಿಸಿದಂತೆ ಮುಂಡೆ ಅವರನ್ನು ಟೀಕಿಸಿದ್ದರು. ದೇಶಮುಖ್ ಅವರ ಕುಟುಂಬಕ್ಕೆ ಹಾನಿಯಾದರೆ ಮರಾಠ ಸಮುದಾಯವು ಮುಂಡೆಯನ್ನು ಮುಕ್ತವಾಗಿ ತಿರುಗಾಡಲು ಬಿಡುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪರ್ಲಿಯ ಶಾಸಕರಾದ ಮುಂಡೆ ಅವರು ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದಾರೆ. ಜಾರಂಗೆ ಪಾಟೀಲ್ ಅವರ ಹೇಳಿಕೆಯಿಂದ ಕೋಪಗೊಂಡಿರುವ ಮುಂಡೆ ಬೆಂಬಲಿಗರು ಜಾರಂಗೆ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದು, ಬೀಡ್‌ನ ಶಿವಾಜಿನಗರ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದ್ದಾರೆ.

ಬೀಡ್ ಜಿಲ್ಲೆಯ ವಿಂಡ್‌ಮಿಲ್ ಕಂಪನಿಯಿಂದ 2 ಕೋಟಿ ರೂ.ಗಳನ್ನು ಸುಲಿಗೆ ಮಾಡಲು ಕೆಲವು ವ್ಯಕ್ತಿಗಳು ನಡೆಸಿದ ಪ್ರಯತ್ನವನ್ನು ವಿರೋಧಿಸಿದ್ದಕ್ಕಾಗಿ ಮ್ಯಾಸಜೋಗ್ ಗ್ರಾಮದ ಸರಪಂಚ್ ದೇಶಮುಖ್ ಅವರನ್ನು ಡಿಸೆಂಬರ್ 9 ರಂದು ಅಪಹರಿಸಿ ಹತ್ಯೆ ಮಾಡಲಾಗಿತ್ತು. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ. ಕೊಲೆಗೆ ಸಂಬಂಧಿಸಿ ಸುಲಿಗೆ ಪ್ರಕರಣದಲ್ಲಿ ಮುಂಡೆ ಸಹಚರ ವಾಲ್ಮಿಕ್ ಕರಾದ್ ಎಂಬಾತನನ್ನು ಬಂಧಿಸಲಾಗಿದೆ.

ದೇಶ್‌ಮುಖ್ ಮರಾಠಾ ಆಗಿದ್ದರಿಂದ ಮತ್ತು ಪ್ರಕರಣದಲ್ಲಿ ಆರೋಪಿಯಾಗಿರುವ ಹೆಚ್ಚಿನ ವ್ಯಕ್ತಿಗಳು ಬೀಡ್ ಪ್ರದೇಶದ ಪ್ರಬಲ ವಂಜರಿ ಸಮುದಾಯದವರಾದ್ದರಿಂದ ಪರಿಸ್ಥಿತಿಯು ಜಾತಿ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಿದೆ.

ಇದನ್ನೂಓದಿ:  ಅಸೆಂಬ್ಲಿಯಿಂದ ಹೊರನಡೆದ ರಾಜ್ಯಪಾಲರ ನಡೆಯನ್ನು ‘ನಾಟಕ’ ಎಂದ ಡಿಎಂಕೆ; ಪ್ರತಿಭಟನೆಗೆ ನಿರ್ಧಾರ

ಅಸೆಂಬ್ಲಿಯಿಂದ ಹೊರನಡೆದ ರಾಜ್ಯಪಾಲರ ನಡೆಯನ್ನು ‘ನಾಟಕ’ ಎಂದ ಡಿಎಂಕೆ; ಪ್ರತಿಭಟನೆಗೆ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...