Homeಮುಖಪುಟಬಿಜೆಪಿ ಎಂಎಲ್‌ಸಿ ಹೆಸರಿನಲ್ಲಿ ಕಲಬೆರಕೆ ಸಿಹಿತಿಂಡಿ ಪಾರ್ಸೆಲ್ ಮಾಡಿದ ವಕೀಲ - ಸೇಡು!

ಬಿಜೆಪಿ ಎಂಎಲ್‌ಸಿ ಹೆಸರಿನಲ್ಲಿ ಕಲಬೆರಕೆ ಸಿಹಿತಿಂಡಿ ಪಾರ್ಸೆಲ್ ಮಾಡಿದ ವಕೀಲ – ಸೇಡು!

- Advertisement -
- Advertisement -

ಬಿಜೆಪಿ ಎಂಎಲ್‌ಸಿ ಧನಂಜಯ್ ಸರ್ಜಿ ಹೆಸರಿನಲ್ಲಿ ಮೂವರಿಗೆ ಹೊಸ ವರ್ಷದ ಉಡುಗೊರೆಯಾಗಿ ‘ಕಲುಷಿತ’ ಸಿಹಿತಿಂಡಿಗಳನ್ನು ಕಳುಹಿಸಿದ್ದ ಆರೋಪದ ಮೇಲೆ ಶಿವಮೊಗ್ಗದ 26 ವರ್ಷದ ವಕೀಲರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಆರೋಪಿಯನ್ನು ಶಿವಮೊಗ್ಗ ನಿವಾಸಿ ಸೌಹರ್ದ್ ಪಟೇಲ್ ಎಂದು ಪೊಲೀಸರು ಗುರುತಿಸಿದ್ದಾರೆ.

ತನ್ನ ಓದಿನ ಸಮಯದಲ್ಲಿ ಸಹ ವಿದ್ಯಾರ್ಥಿಯೊಂದಿಗಿನ ಸಂಬಂಧವನ್ನು ಕೊನೆಗೊಳಿಸಿ, ಖಿನ್ನತೆಗೆ ಚಿಕಿತ್ಸೆ ನೀಡಿದ್ದಕ್ಕಾಗಿ ಸೇಡು ತೀರಿಸಿಕೊಳ್ಳಲು, ನ್ಯಾಷನಲ್ ಎಜುಕೇಶನ್ ಸೊಸೈಟಿ (ಎನ್‌ಇಎಸ್)ಯ ಕಾರ್ಯದರ್ಶಿ ಎಸ್‌.ಎನ್. ನಾಗರಾಜ್ ಮತ್ತು ಇಬ್ಬರು ವೈದ್ಯರಿಗೆ ಕಲಬೆರಕೆ ಸಿಹಿತಿಂಡಿಗಳನ್ನು ಆರೋಪಿ ಕಳುಹಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಬಿಜೆಪಿ ಎಂಎಲ್‌ಸಿ ಸರ್ಜಿ ಅವರ ಹೆಸರಿನಲ್ಲಿ ಹೊಸ ವರ್ಷದ ಶುಭಾಶಯ ಪತ್ರದೊಂದಿಗೆ ಸಿಹಿತಿಂಡಿಗಳನ್ನು ಜನವರಿ 1 ರಂದು ಡಿಟಿಡಿಸಿ ಕೊರಿಯರ್‌ನಲ್ಲಿ ಕಳುಹಿಸಲಾಗಿದೆ ಎಂದು ವೆರದಿಯಾಗಿದೆ. ನಾಗರಾಜ್ ಅವರು ಪಡೆದ ಸಿಹಿತಿಂಡಿಯಲ್ಲಿ ತೀವ್ರ ಕಹಿ ಕಂಡುಬಂದಿದ್ದು, ಕಲಬೆರಕೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು. ಈ ವೇಳೆ ಗಾಬರಿಗೊಂಡ ಅವರು ಸರ್ಜಿ ಅವರನ್ನು ಸಂಪರ್ಕಿಸಿದ್ದರು. ಆಗ ಸರ್ಜಿ ಅವರು ಸಿಹಿ ತಿಂಡಿ ಪ್ಯಾಕೇಜ್ ಕಳುಹಿಸಿದ್ದನ್ನು ನಿರಾಕರಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇದರ ನಂತರ ಸರ್ಜಿ ಅವರ ಆಪ್ತ ಕಾರ್ಯದರ್ಶಿ ಸಚಿನ್ ರಾಜ್ ಅವರು ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದೇ ರೀತಿಯ ಪೆಟ್ಟಿಗೆಗಳನ್ನು ಭದ್ರಾವತಿಯ ಇಬ್ಬರು ವೈದ್ಯರಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ಕಂಡುಹಿಡಿದಿದ್ದರು. ಇಬ್ಬರು ವೈದ್ಯರಾದ ಅರವಿಂದ್ ಮತ್ತು ಕೆ.ಎಸ್. ಪವಿತ್ರಾ ಆರೋಪಿ ಪಟೇಲ್‌ನ ಖಿನ್ನತೆಗೆ ಚಿಕಿತ್ಸೆ ನೀಡಿದ್ದರು.

ಪೊಲೀಸರು ಡಿಟಿಡಿಸಿ ಪ್ಯಾಕೇಜ್‌ಗಳನ್ನು ಟ್ರ್ಯಾಕ್ ಮಾಡಿದ್ದು, ಅವುಗಳನ್ನು ಕಳುಹಿಸಿದ್ದು ಪಟೇಲ್ ಎಂದು ಪತ್ತೆ ಮಾಡಿದ್ದರು. ಇದರ ನಂತರ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದು, ಈ ವೇಳೆ ಆರೋಪಿ ತಾನು ಸಿಹಿತಿಂಡಿಗಳನ್ನು ಕಳುಹಿಸಿರುವುದಾಗಿ ಅವರು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

“ವಿಚಾರಣೆ ವೇಳೆ ಆರೋಪಿ ಪಟೇಲ್, ತಮ್ಮ ಗೆಳತಿಯೊಂದಿಗೆ ಸಂಬಂಧ ಮುರಿದುಬಿದ್ದ ನಂತರ ಡಾ.ಪವಿತ್ರರಿಂದ ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದಾಗಿ ಹೇಳಿದ್ದಾರೆ. ಅವರು ಉಲ್ಲೇಖಿಸಿರುವ ಪ್ರೇಮಕಥೆ ಎರಡು ವರ್ಷಗಳಷ್ಟು ಹಳೆಯದಾಗಿರುವ ಕಾರಣ ನಾವು ಅವರ ಪ್ರತಿಪಾದನೆಗಳನ್ನು ಪರಿಶೀಲಿಸುತ್ತಿದ್ದೇವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಪಟೇಲ್ ಓದುತ್ತಿದ್ದಾಗ ವೈದ್ಯರೊಬ್ಬರ ಮಗಳೊಂದಿಗೆ ಪ್ರೇಮ ಸಂಬಂಧ ಹೊಂದಿದ್ದರು. ಈ ವೇಳೆ ವಿಷಯ ತಿಳಿದ ನಾಗರಾಜ್ ದೂರ ಇರುವಂತೆ ತಾಕೀತು ಮಾಡಿದ್ದರು. ಇದರ ನಂತರ ಅವರ ನಡುವಿನ ಸಂಬಂಧ ಮುರಿದುಬಿದ್ದಿತ್ತು. ಈ ವೇಳೆ ಪಟೇಲ್ ಅವರು ತೀವ್ರ ಖಿನ್ನತೆಗೆ ಒಳಗಾಗಿದ್ದರು ಮತ್ತು ಡಾ.ಪವಿತ್ರ ಅವರಿಗೆ ಕೆಲವು ಮಾತ್ರೆಗಳನ್ನು ನೀಡಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಪಟೇಲ್‌ಗೆ ತನ್ನನ್ನು ರೋಗಿಯೆಂದು ಪರಿಗಣಿಸಲಾಗಿದೆ ಎಂದು ಅತೃಪ್ತಿ ವ್ಯಕ್ತಪಡಿಸಿದ್ದಾರೆ”ಎಂದು ಅಧಿಕಾರಿ ಹೇಳಿದ್ದಾರೆ.

“ಕಾರ್ಯಕ್ರಮವೊಂದರಲ್ಲಿ ಸರ್ಜಿ ಮತ್ತು ನಾಗರಾಜ್ ಅವರನ್ನು ಒಟ್ಟಿಗೆ ನೋಡಿದ ನಂತರ ಅವರು ಒಂದು ಯೋಜನೆಯನ್ನು ರೂಪಿಸಿದ್ದರು. ಅವರು ಕೆಲವು ಔಷಧಿಗಳನ್ನು ಬಳಸಿಕೊಂಡು ಸಿಹಿತಿಂಡಿಗಳನ್ನು ಹಾಳುಮಾಡಿ, ಮೂವರಿಗೆ ಕೊರಿಯರ್ ಮೂಲಕ ಅವುಗಳನ್ನು ಕಳುಹಿಸಿದ್ದಾರೆ” ಎಂದು ಅಧಿಕಾರಿ ಹೇಳಿದ್ದಾರೆ. ಕೋಟೆ ಪೊಲೀಸರು ಪಟೇಲ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರಸ್ ವರದಿ ಮಾಡಿದೆ.

ಇದನ್ನೂಓದಿ:  ಬಿಜೆಪಿ ನಾಯಕ ರಮೇಶ್‌ ಬಿಧುರಿ ಮನೆ ಮುಂದೆ ‘ಮಹಿಳಾ ವಿರೋಧಿ’ ಎಂದು ಬರೆದ ಕಾಂಗ್ರೆಸ್‌ ಕಾರ್ಯಕರ್ತರು

ಬಿಜೆಪಿ ನಾಯಕ ರಮೇಶ್‌ ಬಿಧುರಿ ಮನೆ ಮುಂದೆ ‘ಮಹಿಳಾ ವಿರೋಧಿ’ ಎಂದು ಬರೆದ ಕಾಂಗ್ರೆಸ್‌ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...