Homeಮುಖಪುಟಬಿಜೆಪಿ ಎಂಎಲ್‌ಸಿ ಹೆಸರಿನಲ್ಲಿ ಕಲಬೆರಕೆ ಸಿಹಿತಿಂಡಿ ಪಾರ್ಸೆಲ್ ಮಾಡಿದ ವಕೀಲ - ಸೇಡು!

ಬಿಜೆಪಿ ಎಂಎಲ್‌ಸಿ ಹೆಸರಿನಲ್ಲಿ ಕಲಬೆರಕೆ ಸಿಹಿತಿಂಡಿ ಪಾರ್ಸೆಲ್ ಮಾಡಿದ ವಕೀಲ – ಸೇಡು!

- Advertisement -
- Advertisement -

ಬಿಜೆಪಿ ಎಂಎಲ್‌ಸಿ ಧನಂಜಯ್ ಸರ್ಜಿ ಹೆಸರಿನಲ್ಲಿ ಮೂವರಿಗೆ ಹೊಸ ವರ್ಷದ ಉಡುಗೊರೆಯಾಗಿ ‘ಕಲುಷಿತ’ ಸಿಹಿತಿಂಡಿಗಳನ್ನು ಕಳುಹಿಸಿದ್ದ ಆರೋಪದ ಮೇಲೆ ಶಿವಮೊಗ್ಗದ 26 ವರ್ಷದ ವಕೀಲರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಆರೋಪಿಯನ್ನು ಶಿವಮೊಗ್ಗ ನಿವಾಸಿ ಸೌಹರ್ದ್ ಪಟೇಲ್ ಎಂದು ಪೊಲೀಸರು ಗುರುತಿಸಿದ್ದಾರೆ.

ತನ್ನ ಓದಿನ ಸಮಯದಲ್ಲಿ ಸಹ ವಿದ್ಯಾರ್ಥಿಯೊಂದಿಗಿನ ಸಂಬಂಧವನ್ನು ಕೊನೆಗೊಳಿಸಿ, ಖಿನ್ನತೆಗೆ ಚಿಕಿತ್ಸೆ ನೀಡಿದ್ದಕ್ಕಾಗಿ ಸೇಡು ತೀರಿಸಿಕೊಳ್ಳಲು, ನ್ಯಾಷನಲ್ ಎಜುಕೇಶನ್ ಸೊಸೈಟಿ (ಎನ್‌ಇಎಸ್)ಯ ಕಾರ್ಯದರ್ಶಿ ಎಸ್‌.ಎನ್. ನಾಗರಾಜ್ ಮತ್ತು ಇಬ್ಬರು ವೈದ್ಯರಿಗೆ ಕಲಬೆರಕೆ ಸಿಹಿತಿಂಡಿಗಳನ್ನು ಆರೋಪಿ ಕಳುಹಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಬಿಜೆಪಿ ಎಂಎಲ್‌ಸಿ ಸರ್ಜಿ ಅವರ ಹೆಸರಿನಲ್ಲಿ ಹೊಸ ವರ್ಷದ ಶುಭಾಶಯ ಪತ್ರದೊಂದಿಗೆ ಸಿಹಿತಿಂಡಿಗಳನ್ನು ಜನವರಿ 1 ರಂದು ಡಿಟಿಡಿಸಿ ಕೊರಿಯರ್‌ನಲ್ಲಿ ಕಳುಹಿಸಲಾಗಿದೆ ಎಂದು ವೆರದಿಯಾಗಿದೆ. ನಾಗರಾಜ್ ಅವರು ಪಡೆದ ಸಿಹಿತಿಂಡಿಯಲ್ಲಿ ತೀವ್ರ ಕಹಿ ಕಂಡುಬಂದಿದ್ದು, ಕಲಬೆರಕೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು. ಈ ವೇಳೆ ಗಾಬರಿಗೊಂಡ ಅವರು ಸರ್ಜಿ ಅವರನ್ನು ಸಂಪರ್ಕಿಸಿದ್ದರು. ಆಗ ಸರ್ಜಿ ಅವರು ಸಿಹಿ ತಿಂಡಿ ಪ್ಯಾಕೇಜ್ ಕಳುಹಿಸಿದ್ದನ್ನು ನಿರಾಕರಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇದರ ನಂತರ ಸರ್ಜಿ ಅವರ ಆಪ್ತ ಕಾರ್ಯದರ್ಶಿ ಸಚಿನ್ ರಾಜ್ ಅವರು ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದೇ ರೀತಿಯ ಪೆಟ್ಟಿಗೆಗಳನ್ನು ಭದ್ರಾವತಿಯ ಇಬ್ಬರು ವೈದ್ಯರಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ಕಂಡುಹಿಡಿದಿದ್ದರು. ಇಬ್ಬರು ವೈದ್ಯರಾದ ಅರವಿಂದ್ ಮತ್ತು ಕೆ.ಎಸ್. ಪವಿತ್ರಾ ಆರೋಪಿ ಪಟೇಲ್‌ನ ಖಿನ್ನತೆಗೆ ಚಿಕಿತ್ಸೆ ನೀಡಿದ್ದರು.

ಪೊಲೀಸರು ಡಿಟಿಡಿಸಿ ಪ್ಯಾಕೇಜ್‌ಗಳನ್ನು ಟ್ರ್ಯಾಕ್ ಮಾಡಿದ್ದು, ಅವುಗಳನ್ನು ಕಳುಹಿಸಿದ್ದು ಪಟೇಲ್ ಎಂದು ಪತ್ತೆ ಮಾಡಿದ್ದರು. ಇದರ ನಂತರ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದು, ಈ ವೇಳೆ ಆರೋಪಿ ತಾನು ಸಿಹಿತಿಂಡಿಗಳನ್ನು ಕಳುಹಿಸಿರುವುದಾಗಿ ಅವರು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

“ವಿಚಾರಣೆ ವೇಳೆ ಆರೋಪಿ ಪಟೇಲ್, ತಮ್ಮ ಗೆಳತಿಯೊಂದಿಗೆ ಸಂಬಂಧ ಮುರಿದುಬಿದ್ದ ನಂತರ ಡಾ.ಪವಿತ್ರರಿಂದ ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದಾಗಿ ಹೇಳಿದ್ದಾರೆ. ಅವರು ಉಲ್ಲೇಖಿಸಿರುವ ಪ್ರೇಮಕಥೆ ಎರಡು ವರ್ಷಗಳಷ್ಟು ಹಳೆಯದಾಗಿರುವ ಕಾರಣ ನಾವು ಅವರ ಪ್ರತಿಪಾದನೆಗಳನ್ನು ಪರಿಶೀಲಿಸುತ್ತಿದ್ದೇವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಪಟೇಲ್ ಓದುತ್ತಿದ್ದಾಗ ವೈದ್ಯರೊಬ್ಬರ ಮಗಳೊಂದಿಗೆ ಪ್ರೇಮ ಸಂಬಂಧ ಹೊಂದಿದ್ದರು. ಈ ವೇಳೆ ವಿಷಯ ತಿಳಿದ ನಾಗರಾಜ್ ದೂರ ಇರುವಂತೆ ತಾಕೀತು ಮಾಡಿದ್ದರು. ಇದರ ನಂತರ ಅವರ ನಡುವಿನ ಸಂಬಂಧ ಮುರಿದುಬಿದ್ದಿತ್ತು. ಈ ವೇಳೆ ಪಟೇಲ್ ಅವರು ತೀವ್ರ ಖಿನ್ನತೆಗೆ ಒಳಗಾಗಿದ್ದರು ಮತ್ತು ಡಾ.ಪವಿತ್ರ ಅವರಿಗೆ ಕೆಲವು ಮಾತ್ರೆಗಳನ್ನು ನೀಡಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಪಟೇಲ್‌ಗೆ ತನ್ನನ್ನು ರೋಗಿಯೆಂದು ಪರಿಗಣಿಸಲಾಗಿದೆ ಎಂದು ಅತೃಪ್ತಿ ವ್ಯಕ್ತಪಡಿಸಿದ್ದಾರೆ”ಎಂದು ಅಧಿಕಾರಿ ಹೇಳಿದ್ದಾರೆ.

“ಕಾರ್ಯಕ್ರಮವೊಂದರಲ್ಲಿ ಸರ್ಜಿ ಮತ್ತು ನಾಗರಾಜ್ ಅವರನ್ನು ಒಟ್ಟಿಗೆ ನೋಡಿದ ನಂತರ ಅವರು ಒಂದು ಯೋಜನೆಯನ್ನು ರೂಪಿಸಿದ್ದರು. ಅವರು ಕೆಲವು ಔಷಧಿಗಳನ್ನು ಬಳಸಿಕೊಂಡು ಸಿಹಿತಿಂಡಿಗಳನ್ನು ಹಾಳುಮಾಡಿ, ಮೂವರಿಗೆ ಕೊರಿಯರ್ ಮೂಲಕ ಅವುಗಳನ್ನು ಕಳುಹಿಸಿದ್ದಾರೆ” ಎಂದು ಅಧಿಕಾರಿ ಹೇಳಿದ್ದಾರೆ. ಕೋಟೆ ಪೊಲೀಸರು ಪಟೇಲ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರಸ್ ವರದಿ ಮಾಡಿದೆ.

ಇದನ್ನೂಓದಿ:  ಬಿಜೆಪಿ ನಾಯಕ ರಮೇಶ್‌ ಬಿಧುರಿ ಮನೆ ಮುಂದೆ ‘ಮಹಿಳಾ ವಿರೋಧಿ’ ಎಂದು ಬರೆದ ಕಾಂಗ್ರೆಸ್‌ ಕಾರ್ಯಕರ್ತರು

ಬಿಜೆಪಿ ನಾಯಕ ರಮೇಶ್‌ ಬಿಧುರಿ ಮನೆ ಮುಂದೆ ‘ಮಹಿಳಾ ವಿರೋಧಿ’ ಎಂದು ಬರೆದ ಕಾಂಗ್ರೆಸ್‌ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...