Homeಕರ್ನಾಟಕರಾಜ್ಯದಲ್ಲಿ ಎರಡು ದಶಕದ ನಕ್ಸಲ್-ಪೊಲೀಸ್ ಮುಖಾಮುಖಿಯಲ್ಲಿ 38 ಮಂದಿಯ ಹತ್ಯೆ

ರಾಜ್ಯದಲ್ಲಿ ಎರಡು ದಶಕದ ನಕ್ಸಲ್-ಪೊಲೀಸ್ ಮುಖಾಮುಖಿಯಲ್ಲಿ 38 ಮಂದಿಯ ಹತ್ಯೆ

- Advertisement -
- Advertisement -
ರಾಜ್ಯದ ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ ಕಳೆದ ಎರಡು ದಶಕದಲ್ಲಿ ನಡೆದ ನಕ್ಸಲ್ ಚಟುವಟಿಕೆಯಲ್ಲಿ ಇಲ್ಲಿಯವರೆಗೆ 38 ಮಂದಿ ಪ್ರಾಣ ತೆತ್ತಿದ್ದಾರೆ. ನಕ್ಸಲರು, ಪೊಲೀಸರು ಮತ್ತು ಎಎನ್ಎಫ್ ಮುಖಾಮುಖಿಯಲ್ಲಿ ಒಟ್ಟು 38 ಮಂದಿ ಪ್ರಾಣ ಕಳೆದುಕೊಂಡಿದ್ದು, ಇದರಲ್ಲಿ 20 ಮಂದಿ ನಕ್ಸಲರು, 8 ಮಂದಿ ನಾಗರಿಕರು ಹಾಗೂ 10 ಮಂದಿ ಪೊಲೀಸರು ಸೇರಿದ್ದಾರೆ.
ಪೊಲೀಸ್ ಮತ್ತು ಎಎನ್‌ಎಫ್ ಪಡೆಯಿಂದ ಹತ್ಯೆಯಾದ 20 ನಕ್ಸಲರ ಪಟ್ಟಿ
  • ಆಂಧ್ರ ಮೂಲದ ನಕ್ಸಲ್ ನಾಯಕ ಭಾಸ್ಕರ್ ಅವರನ್ನು ರಾಯಚೂರಿನಲ್ಲಿ ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ್ದರು
  • ನಕಲ್ಸ್ ಕಾರ್ಯಕರ್ತ ರಾಯಚೂರಿನ ಬುಡ್ಡಣ್ಣ ಅವರ ಹತ್ಯೆಯಾಗಿತ್ತು
  • ನಕ್ಸಲ್ ವಲಯದಲ್ಲಿ ಸರಳ ಎಂದು ಚಿರಪರಿಚಿತರಾಗಿದ್ದ ಮೈಸೂರಿನ ರಾಜೇಶ್ವರಿಯವರು ಆಂಧ್ರದಲ್ಲಿ ನಕ್ಸಲ್ ಹೋರಾಟದ ಕುರಿತು ಅಧ್ಯಯನಕ್ಕೆ ಹೋಗಿದ್ದಾಗ ನಡೆದ ಎನ್ ಕೌಂಟರ್ ವೊಂದರಲ್ಲಿ 2001ರ ಜನವರಿಯಲ್ಲಿ ಹತರಾಗಿದ್ದರು. ಇವರು ಸಾಕೇತ್ ರಾಜನ್ ಅವರ ಬಾಳಸಂಗಾತಿಯಾಗಿದ್ದರು.
  • 2003ರ ನವೆಂಬರ್ 17ರಂದು ರಾಯಚೂರು ಜಿಲ್ಲೆಯ ಸಿಂಧನೂರಿನ ಹಾಜಿಮಾ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಪಾರ್ವತಿ ಎಂಬಿಬ್ಬರು ಪೊಲೀಸರ ಗುಂಡಿಗೆ ಬಲಿಯಾಗಿದ್ದರು.
  • 2005ರ ಫೆಬ್ರವರಿ 6ರಂದು ಮಾವೋವಾದಿ ಪಕ್ಷದ ರಾಜ್ಯ ಕಾರ್ಯದರ್ಶಿ ಸಾಕೇತ್ ರಾಜನ್ ಪೊಲೀಸ್ ಎನ್‌ಕೌಂಟರ್‌ ಬಲಿಯಾಗಿದ್ದರು. ಇವರ ಅಂಗರಕ್ಷಕನಾಗಿದ್ದ ಸಿಂಧನೂರಿನ ಶಿವಲಿಂಗು ಅವರನ್ನು ಈ ಸಂದರ್ಭದಲ್ಲಿ ಹತ್ಯೆ ಮಾಡಲಾಗಿತ್ತು.

  • 2005ರ ಜೂನ್ 23ರಂದು ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಹಳ್ಳಿಹೊಳೆ ಸಮೀಪದ ದೇವರಬಾಳು ಎಂಬಲ್ಲಿ ಪೊಲೀಸರ ಗುಂಡಿಗೆ ಬೆಳಗಾವಿಯ ಅಜಿತ್ ಕುಸುಬಿ ಮತ್ತು ಮೂಡಿಗೆರೆಯ ಉಮೇಶ್ ಬಣಕಲ್ ಬಲಿಯಾಗಿದ್ದರು.
  • 2006ರ ಡಿಸೆಂಬರ್ 25ರಂದು ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಬಳಿಯ ಕಿಗ್ಗದಲ್ಲಿ ನಕ್ಸಲ್ ದಿನಕರ ಎಎನ್‌ಎಫ್‌ನಿಂದ ಹತ್ಯೆಯಾಗಿದ್ದರು.
  • 2007ರ ಜುಲೈ 10ರಂದು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಗುಡ್ಡೆ ತೋಟದ ಒಡೆಯರ ಮಠದಲ್ಲಿ ಸಿಂಧನೂರಿನ ಗೌತಮ್, ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವಿರೋಧಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪರಮೇಶ್ವರ, ಸುಂದರೇಶ್, ರಾಮೇಗೌಡ್ಲು, ಮತ್ತು ಕಾವೇರಿಯವರನ್ನು ಎಎನ್ಎಫ್ ಹತ್ಯೆ ಮಾಡಿತ್ತು.
  • 2008ರ ನವೆಂಬರ್ 20ರಂದು ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಮಾವಿನಹೊಲದಲ್ಲಿ ಸೊರಬದ ಮನೋಹರ್, ನವೀನ್, ಅಭಿಲಾಷ್ ಹತ್ಯೆಯಾಗಿದ್ದರು.
  • 2010ರ ಮಾರ್ಚ್ 1ರಂದು ಕಾರ್ಕಳ ತಾಲೂಕಿನ ಮುನಿಯಾಲು ಮುಟ್ಲುಪಾಡಿಯ ಮೈರೋಳಿಯಲ್ಲಿ ಬೆಳ್ತಂಗಡಿ ತಾಲೂಕು ಕುತ್ಲೂರಿನ ವಸಂತ ಗೌಡ್ಲು ಅವರನ್ನು ಹತ್ಯೆ ಮಾಡಲಾಗಿತ್ತು.
  • 2024ರ ನವೆಂಬರ್ 18ರಂದು ಕಾರ್ಕಳ ತಾಲೂಕಿನ ಹೆಬ್ರಿ ಸಮೀಪದ ಕಬ್ಬಿನಾಲೆಯಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಅವರನ್ನು ಹತ್ಯೆ ಮಾಡಲಾಗಿತ್ತು.
ನಕ್ಸಲರಿಂದ ಹತ್ಯೆಯಾದ 7 ಮಂದಿ ನಾಗರೀಕರು
  • ರಾಯಚೂರಿನಲ್ಲಿ ಶಂಕಿತ ನಕ್ಸಲರು ಸುದರ್ಶನ್ ರೆಡ್ಡಿಯವರನ್ನು ಹತ್ಯೆ ಮಾಡಿದ್ದರು.
  • 2005ರ ಮೇ17ರಂದು ಕೊಪ್ಪ ತಾಲೂಕಿನ ಮೆಣಸಿನ ಹಾಡ್ಯದಲ್ಲಿ ಗಿರಿಜನ ಮುಖಂಡ ಶೇಷಪ್ಪಗೌಡ್ಲು ಹತ್ಯೆ
  • 2007ರ ಜೂನ್ 3ರಂದು ಶೃಂಗೇರಿಯ ಕಿಗ್ಗ ಸಮೀಪದ ಗುಂಡಘಟ್ಟದಲ್ಲಿ ನಕ್ಸಲರಿಂದ ಅಂಗಡಿ ಮಾಲೀಕ ವೆಂಕಟೇಶ ಹತ್ಯೆ
  • 2008ರ ಮೇ 15ರಂದು ಹೆಬ್ರಿ ಸಮೀಪದ ಸೀತಾನದಿ ಬಳಿ ನಕ್ಸಲರ ಗುಂಡಿಗೆ ಶಿಕ್ಷಕ ಭೋಜ ಶೆಟ್ಟಿ ಹಾಗೂ ಅವರ ಗೆಳೆಯ ಕೃಷಿಕ ಸುರೇಶ್ ಶೆಟ್ಟಿ ಬಲಿ
  • 2008 ಡಿಸೆಂಬರ್ 7ರಂದು ಬೈಂದೂರಿನ ಹಳ್ಳಿಹೊಳೆ ಸಮೀಪದ ಕೃಷಿಕ ಜಮೀನ್ದಾರ ಕೇಶವ ಯಡಿಯಾಳರನ್ನು ಪೊಲೀಸರ ಮಾಹಿತಿದಾರನೆಂಬ ಆರೋಪದಲ್ಲಿ ಮನೆಗೆ ನುಗ್ಗಿ ನಕ್ಸಲರು ಹತ್ಯೆಗೈದಿದ್ದರು.
  • 2011ರ ಡಿಸೆಂಬರ್ 28ರಂದು ಉಡುಪಿಯ ತೆಂಗಿನಮಾರುವಿನಿಂದ ಎರಡು ಕಿ.ಮೀ. ದೂರ ದಟ್ಟಾರಣ್ಯದಲ್ಲಿ ಸದಾಶಿವ ಗೌಡ ಎಂಬವರ ಶವ ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
  • …………………………………………………………………………………
  • 2005ರ ಫೆಬ್ರವರಿ 10ರಂದು ತುಮಕೂರು ಜಿಲ್ಲೆ ಪಾವಗಡದಲ್ಲಿ ಕೆಎಸ್ಆರ್‌ಪಿ 9ನೇ ಕ್ಯಾಂಪ್ ಸಿಬ್ಬಂದಿ ಮೇಲಿನ ನಕ್ಸಲ್ ದಾಳಿಯಲ್ಲಿ ನಾಗರೀಕನೊಬ್ಬನ ಸಾವು
10 ಮಂದಿ ಪೊಲೀಸರ ಸಾವು
  • 2007ರ ಜುಲೈ 17ರಂದು ಆಗುಂಬೆ ಸಮೀಪದ ಹುಲ್ಲಾರಬೈಲಿನಲ್ಲಿ ಗುಂಡಿನ ಚಕಮಕಿ, ಎಸ್ಐ ವೆಂಕಟೇಶ ಹತ್ಯೆ
  • 2008ರ ನವೆಂಬರ್ 20ರಂದು ಹೊರನಾಡು ಸಮೀಪ ಮಾವಿನಹೊಲ ಬಳಿ ಎನ್‌ಕೌಂಟರ್‌ ವೇಳೆ ಪೇದೆ ಗುರುಪ್ರಸಾದ್ ಸಾವು
  • 2011ರ ಅಗಸ್ಟ್ 9ರಂದು ಬೆಳ್ತಂಗಡಿ ತಾಲೂಕು ಇಂದಬೆಟ್ಟು ಗ್ರಾ.ಪಂ ವ್ಯಾಪ್ತಿಯ ನಾವೂರ ಗ್ರಾಮದ ಮಂಜಲದಲ್ಲಿ ಬೆಳಗಿನ ಜಾವ ನಕ್ಸಲ್ ನಿಗ್ರಹದಳದ ಪೊಲೀಸರ ಗನ್ ಮಿಸ್ ಫೈರ್ ಆಗಿ ಎಎನ್ಎಫ್ ಸಿಬ್ಬಂದಿ ಮಹಾದೇವ ಮಾನೆ ಬಲಿ.
  • 2005ರ ಫೆಬ್ರವರಿ 10ರಂದು ರಾತ್ರಿ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿಯ ವೆಂಕಟಮ್ಮನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬೀಡು ಬಿಟ್ಟಿದ್ದ ಕೆಎಸ್ಆರ್‌ಪಿ 9ನೇ ಕ್ಯಾಂಪ್ ಸಿಬ್ಬಂದಿ ಮೇಲೆ ನಕ್ಸಲರು ದಾಳಿ ನಡೆಸಿದ್ದರು. ಆಂಧ್ರ ಗಡಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ತೀವ್ರ ಸ್ವರೂಪ ಪಡೆದುಕೊಂಡಿದ್ದ ಸಂದರ್ಭದಲ್ಲಿ ನಡೆದ ಈ ನಕ್ಸಲ್ ದಾಳಿಯಲ್ಲಿ 7 ಪೊಲೀಸರು ಸೇರಿ 8 ಜನ ಹತರಾಗಿದ್ದರು. 300ಕ್ಕೂ ಹೆಚ್ಚು ನಕ್ಸಲರ ತಂಡ ಒಮ್ಮೆಲೇ ದಾಳಿ ನಡೆಸಿತ್ತು.

ಶರಣಾಗತಿಗೂ ಮುನ್ನ ಸರ್ಕಾರಕ್ಕೆ ಪತ್ರ : ಹಕ್ಕೊತ್ತಾಯಗಳನ್ನು ಮುಂದಿಟ್ಟ ನಕ್ಸಲ್ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...