Homeಎಕಾನಮಿಪ್ರಸಕ್ತ ವರ್ಷದಲ್ಲಿ ದೇಶದ ಆರ್ಥಿಕ ಬೆಳವಣಿಗೆ ಶೇ.5ಕ್ಕೆ ಕುಸಿಯಲಿದೆ: ಎಸ್‌ಬಿಐ ವರದಿ

ಪ್ರಸಕ್ತ ವರ್ಷದಲ್ಲಿ ದೇಶದ ಆರ್ಥಿಕ ಬೆಳವಣಿಗೆ ಶೇ.5ಕ್ಕೆ ಕುಸಿಯಲಿದೆ: ಎಸ್‌ಬಿಐ ವರದಿ

- Advertisement -
- Advertisement -

ಜುಲೈ ಮತ್ತು ಸೆಪ್ಟಂಬರ್‌ ತ್ರೈಮಾಸಿಕ ಅವಧಿಯಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಶೇ.4.2 ದರದಲ್ಲಿ ಇರಲಿದೆ ಹಾಗೂ 2019-20ನೇ ಇಡೀ ವಿತ್ತ ವರ್ಷದಲ್ಲಿ ಆರ್ಥಿಕ ಬೆಳವಣಿಗೆ ಶೇ. 5ರ ದರಕ್ಕೆ ಕುಸಿಯಲಿದೆ ಎಂದು ಎಂದು ಎಸ್‌ಬಿಐ ( ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ) ಮಂಗಳವಾರ ಬಿಡುಗಡೆ ಮಾಡಿದ ತನ್ನ ವರದಿಯಲ್ಲಿ ತಿಳಿಸಿದೆ.

ವರ್ಷದ ಪ್ರಥಮಾರ್ಧದಲ್ಲಿ ಪ್ರಕಟಿಸಿದ್ದ ವರದಿಯಲ್ಲಿ ಇದೆ ಎಸ್.ಬಿ.ಐ, ಪ್ರಸಕ್ತ ವಿತ್ತ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯು ಶೇ.6.1ರಷ್ಟು ಇರಲಿದೆ ಎಂದು ಅಂದಾಜಿಸಿತ್ತು. ಈಗ ತನ್ನ ಅಂದಾಜನ್ನು ಮಾರ್ಪಡಿಸಿಕೊಂಡಿರುವ ಅದು, ಮೊದಲು ಅಂದಾಜಿಸಿದ್ದಕ್ಕಿಂತ ಶೇ.1.1ರಷ್ಟು ಕಡಿಮೆ ದರದಲ್ಲಿ ಅಂದರೆ, ಶೇ.5ರಷ್ಟು ದರದಲ್ಲಿ ಮಾತ್ರ ಭಾರತದ ಜಿಡಿಪಿ ಇರಲಿದೆ ಎಂದು ಹೇಳಿದೆ. ಜುಲೈ-ಸೆಪ್ಟೆಂಬರ್ ತ್ರೈಮಾಸಿಕಕ್ಕೆ ಸಂಬಂಧಿಸಿ ವಿವಿಧ ಆರ್ಥಿಕ ಸಮೀಕ್ಷೆಗಳು ಅಂದಾಜಿಸಿರುವ ಭಾರತದ ಆರ್ಥಿಕ ಬೆಳವಣಿಗೆಗಳಲ್ಲೇ ಎಸ್.ಬಿ.ಐ ನೀಡಿರುವ ದರ ಅತ್ಯಂತ ಕಡಿಮೆಯದ್ದಾಗಿದೆ. ಸದರಿ ತ್ರೈಮಾಸಿಕಕ್ಕೆ ಸಂಬಂಧಿಸಿದಂತೆ ಆರ್ಥಿಕ ಸೇವಾ ಸಂಸ್ಥೆಯಾದ `ನೊಮುರಾಸ್’ ಕಂಪನಿ ಅಂದಾಜಿಸಿರುವ ಜಿಡಿಪಿ ದರವೇ ಭಾರತದ ಮಟ್ಟಿಗಿನ ಅತಿ ಆಶಾದಾಯಕ ಅಂದಾಜು ಎನ್ನಬಹುದು. ಅದರ ಪ್ರಕಾರ ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಶೇ.4.9ರ ದರದಲ್ಲಿ ಇರಲಿದೆ. ಅತಿ ಹೆಚ್ಚಿನ ಅಂದಾಜು ಮಾಪನವು ಕೂಡಾ (ನೊಮುರಾಸ್) ಶೇ.5ನ್ನು ದಾಟದಿರುವುದು ಆತಂಕಕಾರಿ ವಿಷಯ. ಇನ್ನು ಎಸ್.ಬಿ.ಐ ಪ್ರಕಾರ ಈ ದರ ಶೇ.4.2 ಮಾತ್ರ!

ಅಂದಹಾಗೆ ಇಷ್ಟರ ಮಟ್ಟಿಗೆ ಜಿಡಿಪಿ ಕುಸಿತಕ್ಕೆ ಕಾರಣವೇನು..? ಅನ್ನೋದನ್ನು ವರದಿಯಲ್ಲಿ  ತಿಳಿಸಿದೆ. ಕೈಗಾರಿಕೆ ಮತ್ತು ಉದ್ಯಮಗಳಲ್ಲಿ ಆದ ಮಹತ್ತರ ನಷ್ಟ ಹಾಗೂ ಉತ್ಪಾದನೆಯ ಮಟ್ಟ ಕುಸಿದಿರುವುದೇ ಇದಕ್ಕೆ ಕಾರಣ ಎಂದು ಎಸ್‌ಬಿಐ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಆಟೋಮೊಬೈಲ್‌ ಕ್ಷೇತ್ರ, ವಿಮಾನ ಪ್ರಯಾಣಿಕರಲ್ಲಿ ಇಳಿಕೆ, ಮೂಲಸೌಲಭ್ಯಗಳಲ್ಲಿ ಅಭಿವೃದ್ಧಿಯ ಕೊರತೆ, ಮೂಲ ಸೌಕರ್ಯ ಮತ್ತು ನಿರ್ಮಾಣ ಕ್ಷೇತ್ರಗಳಲ್ಲಿ ಹೂಡಿಕೆ ಪ್ರಮಾಣ ಇಳಿಕೆ ಇವೆಲ್ಲವೂ ಜಿಡಿಪಿ ದರ ಕುಸಿಯಲು ಕಾರಣ ಎಂದಿರುವ ವರದಿ, ಇದರಿಂದಾಗಿಯೇ ದರ ೪.೨ರಷ್ಟು ಅತ್ಯಂತ ಕಡಿಮೆ ಮಟ್ಟದಲ್ಲಿ ದಾಖಲಾಗುವ ಎಲ್ಲ ಸಾಧ್ಯತೆಗಳು ಇವೆ ಎಂದಿದೆ. ಈ ತ್ರೈಮಾಸಿಕದಲ್ಲಿ ನಿರೀಕ್ಷೆಗು ಮೀರಿ ಜಿಡಿಪಿ ಕುಸಿದಿರುವುದರಿಂದಲೇ ಒಟ್ಟಾರೆ ವರ್ಷದ ಆರ್ಥಿಕ ಬೆಳವಣಿಗೆ ದರ  ಶೇ.5ರಷ್ಟು (ಈ ಮೊದಲು ತಾನು ಅಂದಾಜಿಸಿದ್ದಕ್ಕಿಂತಲು ಶೇ1.1 ರಷ್ಟು ಕಡಿಮೆ) ದಾಖಲಾಗಿದೆ ಎಂದು ಎಸ್‌ಬಿಐ ಹೇಳಿದೆ.

ಇದನ್ನೂ ಓದಿ: ಸುಪ್ರೀಂ ತೀರ್ಪು: ಅನರ್ಹರಿಗೆ ನಿಟ್ಟುಸಿರು, ಬಿಜೆಪಿಗೆ ಇಕ್ಕಟ್ಟು! : ಗಿರೀಶ್ ತಾಳಿಕಟ್ಟೆ

ಕೈಗಾರಿಕೋದ್ಯಮದ ಕ್ಷೀಣಿಸುವಿಕೆಯ ಜೊತೆಗೆ ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್‌, ಕರ್ನಾಟಕ, ಪಂಜಾಬ್‌ನಲ್ಲಿ ಉಂಟಾದ ಅತಿವೃಷ್ಟಿ, ಪ್ರವಾಹದಿಂದ ಆದ ಖಾರಿಫ್ ಬೆಳೆ ನಾಶವೂ ಕೃಷಿ ಕ್ಷೇತ್ರದ ಉತ್ಪಾದನಾ ಸಾಮರ್ಥ್ಯವನ್ನು ಕುಗ್ಗಿಸಿರುವುದು ಕೂಡಾ ಜಿಡಿಪಿ ಕುಸಿಯಲು ಕಾರಣವಾಗಿ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಎಲ್ಲಾ ದೇಶೀಯ ಮಾನದಂಡಗಳು ಮತ್ತು ಜಾಗತಿಕ ಮಾರುಕಟ್ಟೆಯಲ ಮಂದಗತಿಯ ಬೆಳವಣಿಗೆಯಿಂದಾಗಿ ಬೆಳವಣಿಗೆ ದರ ಕುಸಿಯಲಿದೆ ಎಂಬ ನಿರ್ಧಾರಕ್ಕೆ ತಾನು ಬಂದಿರುವುದಾಗಿ ವರದಿ ಸಮರ್ಥಿಸಿಕೊಂಡಿದೆ.

ಇಷ್ಟೆಲ್ಲಾ ಇಳಿಕೆ, ಆರ್ಥಿಕ ಕುಸಿತದ ಮಧ್ಯೆಯೂ ಟೆಲಿಕಾಂ, ವಿದ್ಯುತ್‌ ಮತ್ತು ಎನ್‌ಬಿಎಫ್‌ಸಿಎಸ್ ಮೇಲೆ ಯಾವುದೇ ಋಣಾತ್ಮಕ ಪ್ರಭಾವ ಬೀರದ ತನ್ನ ನೀತಿಗಳಿಗೆ ಸರ್ಕಾರ ಬದ್ಧವಾಗಿರುವುದು ಅಚ್ಚರಿಯ ಗಮನಾರ್ಹ ಸಂಗತಿ ಎಂದು ವರದಿ ಸಿದ್ದಪಡಿಸಿದ ತಂಡದ ಮುಖ್ಯಸ್ಥೆ ಎಸ್‌ಬಿಐನ ಮುಖ್ಯ ಆರ್ಥಿಕ ಸಲಹೆಗಾರ್ತಿ ಸೌಮ್ಯ ಕಂಠಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...