Homeಎಕಾನಮಿಪ್ರಸಕ್ತ ವರ್ಷದಲ್ಲಿ ದೇಶದ ಆರ್ಥಿಕ ಬೆಳವಣಿಗೆ ಶೇ.5ಕ್ಕೆ ಕುಸಿಯಲಿದೆ: ಎಸ್‌ಬಿಐ ವರದಿ

ಪ್ರಸಕ್ತ ವರ್ಷದಲ್ಲಿ ದೇಶದ ಆರ್ಥಿಕ ಬೆಳವಣಿಗೆ ಶೇ.5ಕ್ಕೆ ಕುಸಿಯಲಿದೆ: ಎಸ್‌ಬಿಐ ವರದಿ

- Advertisement -
- Advertisement -

ಜುಲೈ ಮತ್ತು ಸೆಪ್ಟಂಬರ್‌ ತ್ರೈಮಾಸಿಕ ಅವಧಿಯಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಶೇ.4.2 ದರದಲ್ಲಿ ಇರಲಿದೆ ಹಾಗೂ 2019-20ನೇ ಇಡೀ ವಿತ್ತ ವರ್ಷದಲ್ಲಿ ಆರ್ಥಿಕ ಬೆಳವಣಿಗೆ ಶೇ. 5ರ ದರಕ್ಕೆ ಕುಸಿಯಲಿದೆ ಎಂದು ಎಂದು ಎಸ್‌ಬಿಐ ( ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ) ಮಂಗಳವಾರ ಬಿಡುಗಡೆ ಮಾಡಿದ ತನ್ನ ವರದಿಯಲ್ಲಿ ತಿಳಿಸಿದೆ.

ವರ್ಷದ ಪ್ರಥಮಾರ್ಧದಲ್ಲಿ ಪ್ರಕಟಿಸಿದ್ದ ವರದಿಯಲ್ಲಿ ಇದೆ ಎಸ್.ಬಿ.ಐ, ಪ್ರಸಕ್ತ ವಿತ್ತ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯು ಶೇ.6.1ರಷ್ಟು ಇರಲಿದೆ ಎಂದು ಅಂದಾಜಿಸಿತ್ತು. ಈಗ ತನ್ನ ಅಂದಾಜನ್ನು ಮಾರ್ಪಡಿಸಿಕೊಂಡಿರುವ ಅದು, ಮೊದಲು ಅಂದಾಜಿಸಿದ್ದಕ್ಕಿಂತ ಶೇ.1.1ರಷ್ಟು ಕಡಿಮೆ ದರದಲ್ಲಿ ಅಂದರೆ, ಶೇ.5ರಷ್ಟು ದರದಲ್ಲಿ ಮಾತ್ರ ಭಾರತದ ಜಿಡಿಪಿ ಇರಲಿದೆ ಎಂದು ಹೇಳಿದೆ. ಜುಲೈ-ಸೆಪ್ಟೆಂಬರ್ ತ್ರೈಮಾಸಿಕಕ್ಕೆ ಸಂಬಂಧಿಸಿ ವಿವಿಧ ಆರ್ಥಿಕ ಸಮೀಕ್ಷೆಗಳು ಅಂದಾಜಿಸಿರುವ ಭಾರತದ ಆರ್ಥಿಕ ಬೆಳವಣಿಗೆಗಳಲ್ಲೇ ಎಸ್.ಬಿ.ಐ ನೀಡಿರುವ ದರ ಅತ್ಯಂತ ಕಡಿಮೆಯದ್ದಾಗಿದೆ. ಸದರಿ ತ್ರೈಮಾಸಿಕಕ್ಕೆ ಸಂಬಂಧಿಸಿದಂತೆ ಆರ್ಥಿಕ ಸೇವಾ ಸಂಸ್ಥೆಯಾದ `ನೊಮುರಾಸ್’ ಕಂಪನಿ ಅಂದಾಜಿಸಿರುವ ಜಿಡಿಪಿ ದರವೇ ಭಾರತದ ಮಟ್ಟಿಗಿನ ಅತಿ ಆಶಾದಾಯಕ ಅಂದಾಜು ಎನ್ನಬಹುದು. ಅದರ ಪ್ರಕಾರ ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಶೇ.4.9ರ ದರದಲ್ಲಿ ಇರಲಿದೆ. ಅತಿ ಹೆಚ್ಚಿನ ಅಂದಾಜು ಮಾಪನವು ಕೂಡಾ (ನೊಮುರಾಸ್) ಶೇ.5ನ್ನು ದಾಟದಿರುವುದು ಆತಂಕಕಾರಿ ವಿಷಯ. ಇನ್ನು ಎಸ್.ಬಿ.ಐ ಪ್ರಕಾರ ಈ ದರ ಶೇ.4.2 ಮಾತ್ರ!

ಅಂದಹಾಗೆ ಇಷ್ಟರ ಮಟ್ಟಿಗೆ ಜಿಡಿಪಿ ಕುಸಿತಕ್ಕೆ ಕಾರಣವೇನು..? ಅನ್ನೋದನ್ನು ವರದಿಯಲ್ಲಿ  ತಿಳಿಸಿದೆ. ಕೈಗಾರಿಕೆ ಮತ್ತು ಉದ್ಯಮಗಳಲ್ಲಿ ಆದ ಮಹತ್ತರ ನಷ್ಟ ಹಾಗೂ ಉತ್ಪಾದನೆಯ ಮಟ್ಟ ಕುಸಿದಿರುವುದೇ ಇದಕ್ಕೆ ಕಾರಣ ಎಂದು ಎಸ್‌ಬಿಐ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಆಟೋಮೊಬೈಲ್‌ ಕ್ಷೇತ್ರ, ವಿಮಾನ ಪ್ರಯಾಣಿಕರಲ್ಲಿ ಇಳಿಕೆ, ಮೂಲಸೌಲಭ್ಯಗಳಲ್ಲಿ ಅಭಿವೃದ್ಧಿಯ ಕೊರತೆ, ಮೂಲ ಸೌಕರ್ಯ ಮತ್ತು ನಿರ್ಮಾಣ ಕ್ಷೇತ್ರಗಳಲ್ಲಿ ಹೂಡಿಕೆ ಪ್ರಮಾಣ ಇಳಿಕೆ ಇವೆಲ್ಲವೂ ಜಿಡಿಪಿ ದರ ಕುಸಿಯಲು ಕಾರಣ ಎಂದಿರುವ ವರದಿ, ಇದರಿಂದಾಗಿಯೇ ದರ ೪.೨ರಷ್ಟು ಅತ್ಯಂತ ಕಡಿಮೆ ಮಟ್ಟದಲ್ಲಿ ದಾಖಲಾಗುವ ಎಲ್ಲ ಸಾಧ್ಯತೆಗಳು ಇವೆ ಎಂದಿದೆ. ಈ ತ್ರೈಮಾಸಿಕದಲ್ಲಿ ನಿರೀಕ್ಷೆಗು ಮೀರಿ ಜಿಡಿಪಿ ಕುಸಿದಿರುವುದರಿಂದಲೇ ಒಟ್ಟಾರೆ ವರ್ಷದ ಆರ್ಥಿಕ ಬೆಳವಣಿಗೆ ದರ  ಶೇ.5ರಷ್ಟು (ಈ ಮೊದಲು ತಾನು ಅಂದಾಜಿಸಿದ್ದಕ್ಕಿಂತಲು ಶೇ1.1 ರಷ್ಟು ಕಡಿಮೆ) ದಾಖಲಾಗಿದೆ ಎಂದು ಎಸ್‌ಬಿಐ ಹೇಳಿದೆ.

ಇದನ್ನೂ ಓದಿ: ಸುಪ್ರೀಂ ತೀರ್ಪು: ಅನರ್ಹರಿಗೆ ನಿಟ್ಟುಸಿರು, ಬಿಜೆಪಿಗೆ ಇಕ್ಕಟ್ಟು! : ಗಿರೀಶ್ ತಾಳಿಕಟ್ಟೆ

ಕೈಗಾರಿಕೋದ್ಯಮದ ಕ್ಷೀಣಿಸುವಿಕೆಯ ಜೊತೆಗೆ ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್‌, ಕರ್ನಾಟಕ, ಪಂಜಾಬ್‌ನಲ್ಲಿ ಉಂಟಾದ ಅತಿವೃಷ್ಟಿ, ಪ್ರವಾಹದಿಂದ ಆದ ಖಾರಿಫ್ ಬೆಳೆ ನಾಶವೂ ಕೃಷಿ ಕ್ಷೇತ್ರದ ಉತ್ಪಾದನಾ ಸಾಮರ್ಥ್ಯವನ್ನು ಕುಗ್ಗಿಸಿರುವುದು ಕೂಡಾ ಜಿಡಿಪಿ ಕುಸಿಯಲು ಕಾರಣವಾಗಿ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಎಲ್ಲಾ ದೇಶೀಯ ಮಾನದಂಡಗಳು ಮತ್ತು ಜಾಗತಿಕ ಮಾರುಕಟ್ಟೆಯಲ ಮಂದಗತಿಯ ಬೆಳವಣಿಗೆಯಿಂದಾಗಿ ಬೆಳವಣಿಗೆ ದರ ಕುಸಿಯಲಿದೆ ಎಂಬ ನಿರ್ಧಾರಕ್ಕೆ ತಾನು ಬಂದಿರುವುದಾಗಿ ವರದಿ ಸಮರ್ಥಿಸಿಕೊಂಡಿದೆ.

ಇಷ್ಟೆಲ್ಲಾ ಇಳಿಕೆ, ಆರ್ಥಿಕ ಕುಸಿತದ ಮಧ್ಯೆಯೂ ಟೆಲಿಕಾಂ, ವಿದ್ಯುತ್‌ ಮತ್ತು ಎನ್‌ಬಿಎಫ್‌ಸಿಎಸ್ ಮೇಲೆ ಯಾವುದೇ ಋಣಾತ್ಮಕ ಪ್ರಭಾವ ಬೀರದ ತನ್ನ ನೀತಿಗಳಿಗೆ ಸರ್ಕಾರ ಬದ್ಧವಾಗಿರುವುದು ಅಚ್ಚರಿಯ ಗಮನಾರ್ಹ ಸಂಗತಿ ಎಂದು ವರದಿ ಸಿದ್ದಪಡಿಸಿದ ತಂಡದ ಮುಖ್ಯಸ್ಥೆ ಎಸ್‌ಬಿಐನ ಮುಖ್ಯ ಆರ್ಥಿಕ ಸಲಹೆಗಾರ್ತಿ ಸೌಮ್ಯ ಕಂಠಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...