Homeಎಕಾನಮಿಪ್ರಸಕ್ತ ವರ್ಷದಲ್ಲಿ ದೇಶದ ಆರ್ಥಿಕ ಬೆಳವಣಿಗೆ ಶೇ.5ಕ್ಕೆ ಕುಸಿಯಲಿದೆ: ಎಸ್‌ಬಿಐ ವರದಿ

ಪ್ರಸಕ್ತ ವರ್ಷದಲ್ಲಿ ದೇಶದ ಆರ್ಥಿಕ ಬೆಳವಣಿಗೆ ಶೇ.5ಕ್ಕೆ ಕುಸಿಯಲಿದೆ: ಎಸ್‌ಬಿಐ ವರದಿ

- Advertisement -
- Advertisement -

ಜುಲೈ ಮತ್ತು ಸೆಪ್ಟಂಬರ್‌ ತ್ರೈಮಾಸಿಕ ಅವಧಿಯಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಶೇ.4.2 ದರದಲ್ಲಿ ಇರಲಿದೆ ಹಾಗೂ 2019-20ನೇ ಇಡೀ ವಿತ್ತ ವರ್ಷದಲ್ಲಿ ಆರ್ಥಿಕ ಬೆಳವಣಿಗೆ ಶೇ. 5ರ ದರಕ್ಕೆ ಕುಸಿಯಲಿದೆ ಎಂದು ಎಂದು ಎಸ್‌ಬಿಐ ( ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ) ಮಂಗಳವಾರ ಬಿಡುಗಡೆ ಮಾಡಿದ ತನ್ನ ವರದಿಯಲ್ಲಿ ತಿಳಿಸಿದೆ.

ವರ್ಷದ ಪ್ರಥಮಾರ್ಧದಲ್ಲಿ ಪ್ರಕಟಿಸಿದ್ದ ವರದಿಯಲ್ಲಿ ಇದೆ ಎಸ್.ಬಿ.ಐ, ಪ್ರಸಕ್ತ ವಿತ್ತ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯು ಶೇ.6.1ರಷ್ಟು ಇರಲಿದೆ ಎಂದು ಅಂದಾಜಿಸಿತ್ತು. ಈಗ ತನ್ನ ಅಂದಾಜನ್ನು ಮಾರ್ಪಡಿಸಿಕೊಂಡಿರುವ ಅದು, ಮೊದಲು ಅಂದಾಜಿಸಿದ್ದಕ್ಕಿಂತ ಶೇ.1.1ರಷ್ಟು ಕಡಿಮೆ ದರದಲ್ಲಿ ಅಂದರೆ, ಶೇ.5ರಷ್ಟು ದರದಲ್ಲಿ ಮಾತ್ರ ಭಾರತದ ಜಿಡಿಪಿ ಇರಲಿದೆ ಎಂದು ಹೇಳಿದೆ. ಜುಲೈ-ಸೆಪ್ಟೆಂಬರ್ ತ್ರೈಮಾಸಿಕಕ್ಕೆ ಸಂಬಂಧಿಸಿ ವಿವಿಧ ಆರ್ಥಿಕ ಸಮೀಕ್ಷೆಗಳು ಅಂದಾಜಿಸಿರುವ ಭಾರತದ ಆರ್ಥಿಕ ಬೆಳವಣಿಗೆಗಳಲ್ಲೇ ಎಸ್.ಬಿ.ಐ ನೀಡಿರುವ ದರ ಅತ್ಯಂತ ಕಡಿಮೆಯದ್ದಾಗಿದೆ. ಸದರಿ ತ್ರೈಮಾಸಿಕಕ್ಕೆ ಸಂಬಂಧಿಸಿದಂತೆ ಆರ್ಥಿಕ ಸೇವಾ ಸಂಸ್ಥೆಯಾದ `ನೊಮುರಾಸ್’ ಕಂಪನಿ ಅಂದಾಜಿಸಿರುವ ಜಿಡಿಪಿ ದರವೇ ಭಾರತದ ಮಟ್ಟಿಗಿನ ಅತಿ ಆಶಾದಾಯಕ ಅಂದಾಜು ಎನ್ನಬಹುದು. ಅದರ ಪ್ರಕಾರ ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಶೇ.4.9ರ ದರದಲ್ಲಿ ಇರಲಿದೆ. ಅತಿ ಹೆಚ್ಚಿನ ಅಂದಾಜು ಮಾಪನವು ಕೂಡಾ (ನೊಮುರಾಸ್) ಶೇ.5ನ್ನು ದಾಟದಿರುವುದು ಆತಂಕಕಾರಿ ವಿಷಯ. ಇನ್ನು ಎಸ್.ಬಿ.ಐ ಪ್ರಕಾರ ಈ ದರ ಶೇ.4.2 ಮಾತ್ರ!

ಅಂದಹಾಗೆ ಇಷ್ಟರ ಮಟ್ಟಿಗೆ ಜಿಡಿಪಿ ಕುಸಿತಕ್ಕೆ ಕಾರಣವೇನು..? ಅನ್ನೋದನ್ನು ವರದಿಯಲ್ಲಿ  ತಿಳಿಸಿದೆ. ಕೈಗಾರಿಕೆ ಮತ್ತು ಉದ್ಯಮಗಳಲ್ಲಿ ಆದ ಮಹತ್ತರ ನಷ್ಟ ಹಾಗೂ ಉತ್ಪಾದನೆಯ ಮಟ್ಟ ಕುಸಿದಿರುವುದೇ ಇದಕ್ಕೆ ಕಾರಣ ಎಂದು ಎಸ್‌ಬಿಐ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಆಟೋಮೊಬೈಲ್‌ ಕ್ಷೇತ್ರ, ವಿಮಾನ ಪ್ರಯಾಣಿಕರಲ್ಲಿ ಇಳಿಕೆ, ಮೂಲಸೌಲಭ್ಯಗಳಲ್ಲಿ ಅಭಿವೃದ್ಧಿಯ ಕೊರತೆ, ಮೂಲ ಸೌಕರ್ಯ ಮತ್ತು ನಿರ್ಮಾಣ ಕ್ಷೇತ್ರಗಳಲ್ಲಿ ಹೂಡಿಕೆ ಪ್ರಮಾಣ ಇಳಿಕೆ ಇವೆಲ್ಲವೂ ಜಿಡಿಪಿ ದರ ಕುಸಿಯಲು ಕಾರಣ ಎಂದಿರುವ ವರದಿ, ಇದರಿಂದಾಗಿಯೇ ದರ ೪.೨ರಷ್ಟು ಅತ್ಯಂತ ಕಡಿಮೆ ಮಟ್ಟದಲ್ಲಿ ದಾಖಲಾಗುವ ಎಲ್ಲ ಸಾಧ್ಯತೆಗಳು ಇವೆ ಎಂದಿದೆ. ಈ ತ್ರೈಮಾಸಿಕದಲ್ಲಿ ನಿರೀಕ್ಷೆಗು ಮೀರಿ ಜಿಡಿಪಿ ಕುಸಿದಿರುವುದರಿಂದಲೇ ಒಟ್ಟಾರೆ ವರ್ಷದ ಆರ್ಥಿಕ ಬೆಳವಣಿಗೆ ದರ  ಶೇ.5ರಷ್ಟು (ಈ ಮೊದಲು ತಾನು ಅಂದಾಜಿಸಿದ್ದಕ್ಕಿಂತಲು ಶೇ1.1 ರಷ್ಟು ಕಡಿಮೆ) ದಾಖಲಾಗಿದೆ ಎಂದು ಎಸ್‌ಬಿಐ ಹೇಳಿದೆ.

ಇದನ್ನೂ ಓದಿ: ಸುಪ್ರೀಂ ತೀರ್ಪು: ಅನರ್ಹರಿಗೆ ನಿಟ್ಟುಸಿರು, ಬಿಜೆಪಿಗೆ ಇಕ್ಕಟ್ಟು! : ಗಿರೀಶ್ ತಾಳಿಕಟ್ಟೆ

ಕೈಗಾರಿಕೋದ್ಯಮದ ಕ್ಷೀಣಿಸುವಿಕೆಯ ಜೊತೆಗೆ ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್‌, ಕರ್ನಾಟಕ, ಪಂಜಾಬ್‌ನಲ್ಲಿ ಉಂಟಾದ ಅತಿವೃಷ್ಟಿ, ಪ್ರವಾಹದಿಂದ ಆದ ಖಾರಿಫ್ ಬೆಳೆ ನಾಶವೂ ಕೃಷಿ ಕ್ಷೇತ್ರದ ಉತ್ಪಾದನಾ ಸಾಮರ್ಥ್ಯವನ್ನು ಕುಗ್ಗಿಸಿರುವುದು ಕೂಡಾ ಜಿಡಿಪಿ ಕುಸಿಯಲು ಕಾರಣವಾಗಿ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಎಲ್ಲಾ ದೇಶೀಯ ಮಾನದಂಡಗಳು ಮತ್ತು ಜಾಗತಿಕ ಮಾರುಕಟ್ಟೆಯಲ ಮಂದಗತಿಯ ಬೆಳವಣಿಗೆಯಿಂದಾಗಿ ಬೆಳವಣಿಗೆ ದರ ಕುಸಿಯಲಿದೆ ಎಂಬ ನಿರ್ಧಾರಕ್ಕೆ ತಾನು ಬಂದಿರುವುದಾಗಿ ವರದಿ ಸಮರ್ಥಿಸಿಕೊಂಡಿದೆ.

ಇಷ್ಟೆಲ್ಲಾ ಇಳಿಕೆ, ಆರ್ಥಿಕ ಕುಸಿತದ ಮಧ್ಯೆಯೂ ಟೆಲಿಕಾಂ, ವಿದ್ಯುತ್‌ ಮತ್ತು ಎನ್‌ಬಿಎಫ್‌ಸಿಎಸ್ ಮೇಲೆ ಯಾವುದೇ ಋಣಾತ್ಮಕ ಪ್ರಭಾವ ಬೀರದ ತನ್ನ ನೀತಿಗಳಿಗೆ ಸರ್ಕಾರ ಬದ್ಧವಾಗಿರುವುದು ಅಚ್ಚರಿಯ ಗಮನಾರ್ಹ ಸಂಗತಿ ಎಂದು ವರದಿ ಸಿದ್ದಪಡಿಸಿದ ತಂಡದ ಮುಖ್ಯಸ್ಥೆ ಎಸ್‌ಬಿಐನ ಮುಖ್ಯ ಆರ್ಥಿಕ ಸಲಹೆಗಾರ್ತಿ ಸೌಮ್ಯ ಕಂಠಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...