Homeಕರ್ನಾಟಕಫ್ರೀಡಂ ಪಾರ್ಕ್ ನಲ್ಲಿ 25 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ನಿಗದಿತ ವೇತನ, ಪ್ರೋತ್ಸಾಹ...

ಫ್ರೀಡಂ ಪಾರ್ಕ್ ನಲ್ಲಿ 25 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ನಿಗದಿತ ವೇತನ, ಪ್ರೋತ್ಸಾಹ ಧನಕ್ಕೆ ಆಗ್ರಹ

- Advertisement -
- Advertisement -

ಬೆಂಗಳೂರು: ನಿಗದಿತ ವೇತನ, ಸರ್ಕಾರದಿಂದ ಪ್ರೋತ್ಸಾಹ ಧನಕ್ಕೆ ಆಗ್ರಹಿಸಿ ಮಂಗಳವಾರ ನಗರದ ಫ್ರೀಡಂ ಪಾರ್ಕ್‌ನಲ್ಲಿ 25 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದಾರೆ‌.

ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿರುವ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ. ರಾಜ್ಯದಲ್ಲಿರುವ 42,000 ಜನ ಆಶಾ ಕಾರ್ಯಕರ್ತೆಯರ ಬೇಡಿಕೆಗಳು ಹಲವು ವರ್ಷಗಳಿಂದ ಈಡೇರಿಲ್ಲ. ಆದ್ದರಿಂದ ಕೆಲಸ ಸ್ಥಗಿತಗೊಳಿಸಿ ಧರಣಿಗೆ ನಿರ್ಧರಿಸಿದ್ದೇವೆ ಎಂದು ಪ್ರತಿಭಟನಾ ನಿರತರು ತಿಳಿಸಿದರು.

8 ವರ್ಷಗಳಿಂದಲೂ ಆಶಾ ಕಾರ್ಯಕರ್ತೆಯರು ಮಾಡುತ್ತಿರುವ ಕೆಲಸಗಳು ಆಶಾ ನಿಧಿ ಪೋರ್ಟಲ್‌ನಲ್ಲಿ ದಾಖಲಾಗುತ್ತಿಲ್ಲ. ರಾಜ್ಯಾದ್ಯಂತ ಬಾಕಿ ಇರುವ 3 ತಿಂಗಳ ಪ್ರೋತ್ಸಾಹಧನ ಕೂಡಲೇ ಬಿಡುಗಡೆಗೊಳಿಸಬೇಕು ಹಾಗೂ ಆಶಾ ಕಾರ್ಯಕರ್ತೆಯರಿಗೆ ವಹಿಸಿರುವ ಮೊಬೈಲ್ ಆಧಾರಿತ ಕೆಲಸಗಳನ್ನ ಒತ್ತಾಯಪೂರ್ವಕವಾಗಿ ಮಾಡಿಸಿಕೊಳ್ಳಬಾರದು. ಇಲ್ಲದಿದ್ದರೆ ಮೊಬೈಲ್‌ ಆಧಾರಿತ ಕೆಲಸಗಳಿಗೆ ಪ್ರೋತ್ಸಾಹಧನ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ, ಸಾಹಿತಿ ಪ್ರೊ. ಅಲ್ಲಮಪ್ರಭು ಬೆಟ್ಟದೂರು, ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ್, ಎಐಯುಟಿಯುಸಿ ರಾಜ್ಯ ಅಧ್ಯಕ್ಷ ಕೆ.ಸೋಮಶೇಖರ್, ರಾಜ್ಯ ಉಪಾಧ್ಯಕ್ಷ ಉಮಾದೇವ, ಟಿ.ಎಸ್.ರಮಾ ಮುಂತಾದವರು ಹಾಜರಿದ್ದರು.

ಆಶಾ ಕಾರ್ಯಕರ್ತ ಬೇಡಿಕೆಗಳೇನು?

– ನಗರ ಪ್ರದೇಶದ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ವೆಚ್ಚಗಳಿಗೆ ಅನುಗುಣವಾಗಿ ಗೌರವಧನವನ್ನು ಮಾಸಿಕ ರೂ.20 ಸಾವಿರಕ್ಕೆ ಹೆಚ್ಚಿಸಬೇಕು.

– 8 ವರ್ಷಗಳಿಂದ ಆಶಾನಿಧಿ ಪೋರ್ಟಲ್‌ನಲ್ಲಿ ಆಶಾ ಕಾರ್ಯಕರ್ತೆಯರು ಮಾಡಿದ ಕೆಲಸಗಳು ದಾಖಲಾಗದೇ, ಪ್ರೋತ್ಸಾಹಧನವೂ ಬಂದಿಲ್ಲ. ರಾಜ್ಯದಾದ್ಯಂತ ಬಾಕಿ ಇರುವ 3 ತಿಂಗಳ ಪ್ರೋತ್ಸಾಹಧನ ಕೂಡಲೇ ಬಿಡುಗಡೆಗೊಳಿಸಬೇಕು.

– ಮೊಬೈಲ್ ಆಧಾರಿತ ಕೆಲಸಗಳನ್ನು ಒತ್ತಾಯಪೂರ್ವಕವಾಗಿ ಮಾಡಿಸಿಕೊಳ್ಳಬಾರದು. ಇಲ್ಲದಿದ್ದರೆ ಮೊಬೈಲ್‌ ಆಧಾರಿತ ಕೆಲಸಗಳಿಗೆ ಪ್ರೋತ್ಸಾಹಧನ ನಿಗದಿಪಡಿಸಬೇಕು.

– ಪಶ್ಚಿಮ ಬಂಗಾಳದ ಮಾದರಿಯಲ್ಲಿ ಸೇವಾ ನಿವೃತ್ತಿ ಪಡೆಯುವ ಆಶಾ ಕಾರ್ಯಕರ್ತೆಯರಿಗೆ ವರ್ಷಕ್ಕೆ ರೂ.5 ಲಕ್ಷ ನೀಡಬೇಕು.

– ಪ್ರತಿವರ್ಷ ಆಶಾ ಕಾರ್ಯಕರ್ತೆಯರಿಗೆ ಸಂಪೂರ್ಣ ಆರೋಗ್ಯ ತಪಾಸಣೆ ಸೌಲಭ್ಯ ಕಲ್ಪಿಸಬೇಕು. ನಮ್ಮನ್ನು ಕಾರ್ಮಿಕರೆಂದು ಪರಿಗಣಿಸಿ ಕನಿಷ್ಠ ವೇತನ, ಗ್ರಾಚ್ಯುಟಿ, ಭವಿಷ್ಯನಿಧಿ, ಕಾರ್ಮಿಕರ ರಾಜ್ಯ ವಿಮೆ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಆಶಾ ಕಾರ್ಯಕರ್ತೆಯರ ಬೇಡಿಕೆಗೆ ಆರೋಗ್ಯ ಇಲಾಖೆ ಹೇಳುವುದೇನು?

– ರಾಜ್ಯ ಸರ್ಕಾರದ ವತಿಯಿಂದ ಮಾಸಿಕ ಗೌರವಧನ ರೂ.5000/- ಗಳನ್ನು ನೀಡಲಾಗುತ್ತಿದೆ.

-ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದ ಎಂಟು ಆವರ್ತಕ ಮತ್ತು ನಿಯಮಿತ ಚಟುವಟಿಕೆಗಳಿಗೆ ಮಾಸಿಕ ಪ್ರೋತ್ಸಾಹಧನ ರೂ.2000/-ಗಳನ್ನು ನೀಡಲಾಗುತ್ತಿದೆ.

– ಆಯುಷ್ಮಾನ್ ಆರೋಗ್ಯ ಮಂದಿರದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಕಾರ್ಯಕರ್ತೆಯರಿಗೆ ಮಾಸಿಕ ರೂ.1000/-ಗಳ ಟೀಮ್ ಬೇಸ್ಟ್ ಇನ್ಸೆಂಟಿವ್ ಕೊಡಲಾಗುತ್ತಿದೆ.

– 34 ಆರೋಗ್ಯ ಚಟುವಟಿಕೆಗಳ ಕಾರ್ಯಕ್ರಮ ಅನುಷ್ಠಾನದ ಆಧಾರದ ಪ್ರೋತ್ಸಾಹಧನ ನೀಡಲಾಗುತ್ತಿದೆ. ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ (PMJJBY) ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಯೋಜನೆ (PMSBY) ಯಡಿಯಲ್ಲಿ ತಲಾ ಎರಡು ಲಕ್ಷಗಳ ರೂ. ವಿಮಾ ಸೌಲಭ್ಯ ಮುಖಾಂತರ ಸಾಮಾಜಿಕ ಸುರಕ್ಷೆ ಒದಗಿಸಲಾಗಿದೆ.

– ಆಶಾ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಯೋಜನೆಯ ವೈದ್ಯಕೀಯ ವಿಮಾ ಸೌಲಭ್ಯವನ್ನು ಕೂಡ ಕಲ್ಪಿಸಲಾಗಿದೆ.

– ಆಶಾ ಕಾರ್ಯಕರ್ತೆಯರು ಇಲಾಖೆಯ ಇತರ ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯರೊಂದಿಗೆ ಆರೋಗ್ಯ ಸೇವೆಗೆ ಸಂಬಂಧಿಸಿದ ಮಾಹಿತಿ ವಿನಿಮಯಕ್ಕಾಗಿ ಸಿಯುಜಿ ಸಿಮ್‌ಗಳ ಸೌಲಭ್ಯವನ್ನು ಕಲ್ಪಿಸುವ ಅವಕಾಶ ಇದೆ.

– ಆಶಾ ಕಾರ್ಯಕರ್ತೆಯರು ಆರೋಗ್ಯ ಚಟುವಟಿಕೆಗಳನ್ನು ಸ್ಮಾರ್ಟ್‌ ಫೋನ್ ಬಳಸಿ ದಾಖಲಿಸಲು ಮಾಸಿಕ ರೂ.280/- ಗಳ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ. ಆಶಾ ಕಾರ್ಯಕರ್ತೆಯರಿಗೆ ವಾರ್ಷಿಕ ಎರಡು ಜೊತೆ ಸಮವಸ್ತ್ರಗಳನ್ನು ನೀಡಲಾಗುತ್ತಿದೆ.

– ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ತ್ರೈಮಾಸಿಕ ಆಶಾ ಕಾರ್ಯಕರ್ತೆಯರ ಕುಂದುಕೊರತೆ ನಿವಾರಣಾ ಸಭೆ ನಡೆಸಿ ಪರಿಹಾರ ಕ್ರಮ ಕೈಗೊಳ್ಳಲಾಗುತ್ತಿದೆ.

– ರಾಜ್ಯ ಮಟ್ಟದಲ್ಲಿ ಆಶಾ ಸಂಘಟನೆಯ ಮುಖಂಡರ ಜೊತೆ ನಿರಂತರವಾಗಿ ಸಭೆಗಳನ್ನು ಸಹ ಸಂಧರ್ಭಕ್ಕೆ ಅನುಸಾರವಾಗಿ ನಡೆಸಿ ನೈಜ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿರುತ್ತದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಚಿಕ್ಕಮಗಳೂರು : ಮುಖ್ಯವಾಹಿನಿಗೆ ಇಂದು ಆರು ನಕ್ಸಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...