Homeಕರ್ನಾಟಕಫ್ರೀಡಂ ಪಾರ್ಕ್ ನಲ್ಲಿ 25 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ನಿಗದಿತ ವೇತನ, ಪ್ರೋತ್ಸಾಹ...

ಫ್ರೀಡಂ ಪಾರ್ಕ್ ನಲ್ಲಿ 25 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ನಿಗದಿತ ವೇತನ, ಪ್ರೋತ್ಸಾಹ ಧನಕ್ಕೆ ಆಗ್ರಹ

- Advertisement -
- Advertisement -

ಬೆಂಗಳೂರು: ನಿಗದಿತ ವೇತನ, ಸರ್ಕಾರದಿಂದ ಪ್ರೋತ್ಸಾಹ ಧನಕ್ಕೆ ಆಗ್ರಹಿಸಿ ಮಂಗಳವಾರ ನಗರದ ಫ್ರೀಡಂ ಪಾರ್ಕ್‌ನಲ್ಲಿ 25 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದಾರೆ‌.

ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿರುವ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ. ರಾಜ್ಯದಲ್ಲಿರುವ 42,000 ಜನ ಆಶಾ ಕಾರ್ಯಕರ್ತೆಯರ ಬೇಡಿಕೆಗಳು ಹಲವು ವರ್ಷಗಳಿಂದ ಈಡೇರಿಲ್ಲ. ಆದ್ದರಿಂದ ಕೆಲಸ ಸ್ಥಗಿತಗೊಳಿಸಿ ಧರಣಿಗೆ ನಿರ್ಧರಿಸಿದ್ದೇವೆ ಎಂದು ಪ್ರತಿಭಟನಾ ನಿರತರು ತಿಳಿಸಿದರು.

8 ವರ್ಷಗಳಿಂದಲೂ ಆಶಾ ಕಾರ್ಯಕರ್ತೆಯರು ಮಾಡುತ್ತಿರುವ ಕೆಲಸಗಳು ಆಶಾ ನಿಧಿ ಪೋರ್ಟಲ್‌ನಲ್ಲಿ ದಾಖಲಾಗುತ್ತಿಲ್ಲ. ರಾಜ್ಯಾದ್ಯಂತ ಬಾಕಿ ಇರುವ 3 ತಿಂಗಳ ಪ್ರೋತ್ಸಾಹಧನ ಕೂಡಲೇ ಬಿಡುಗಡೆಗೊಳಿಸಬೇಕು ಹಾಗೂ ಆಶಾ ಕಾರ್ಯಕರ್ತೆಯರಿಗೆ ವಹಿಸಿರುವ ಮೊಬೈಲ್ ಆಧಾರಿತ ಕೆಲಸಗಳನ್ನ ಒತ್ತಾಯಪೂರ್ವಕವಾಗಿ ಮಾಡಿಸಿಕೊಳ್ಳಬಾರದು. ಇಲ್ಲದಿದ್ದರೆ ಮೊಬೈಲ್‌ ಆಧಾರಿತ ಕೆಲಸಗಳಿಗೆ ಪ್ರೋತ್ಸಾಹಧನ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ, ಸಾಹಿತಿ ಪ್ರೊ. ಅಲ್ಲಮಪ್ರಭು ಬೆಟ್ಟದೂರು, ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ್, ಎಐಯುಟಿಯುಸಿ ರಾಜ್ಯ ಅಧ್ಯಕ್ಷ ಕೆ.ಸೋಮಶೇಖರ್, ರಾಜ್ಯ ಉಪಾಧ್ಯಕ್ಷ ಉಮಾದೇವ, ಟಿ.ಎಸ್.ರಮಾ ಮುಂತಾದವರು ಹಾಜರಿದ್ದರು.

ಆಶಾ ಕಾರ್ಯಕರ್ತ ಬೇಡಿಕೆಗಳೇನು?

– ನಗರ ಪ್ರದೇಶದ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ವೆಚ್ಚಗಳಿಗೆ ಅನುಗುಣವಾಗಿ ಗೌರವಧನವನ್ನು ಮಾಸಿಕ ರೂ.20 ಸಾವಿರಕ್ಕೆ ಹೆಚ್ಚಿಸಬೇಕು.

– 8 ವರ್ಷಗಳಿಂದ ಆಶಾನಿಧಿ ಪೋರ್ಟಲ್‌ನಲ್ಲಿ ಆಶಾ ಕಾರ್ಯಕರ್ತೆಯರು ಮಾಡಿದ ಕೆಲಸಗಳು ದಾಖಲಾಗದೇ, ಪ್ರೋತ್ಸಾಹಧನವೂ ಬಂದಿಲ್ಲ. ರಾಜ್ಯದಾದ್ಯಂತ ಬಾಕಿ ಇರುವ 3 ತಿಂಗಳ ಪ್ರೋತ್ಸಾಹಧನ ಕೂಡಲೇ ಬಿಡುಗಡೆಗೊಳಿಸಬೇಕು.

– ಮೊಬೈಲ್ ಆಧಾರಿತ ಕೆಲಸಗಳನ್ನು ಒತ್ತಾಯಪೂರ್ವಕವಾಗಿ ಮಾಡಿಸಿಕೊಳ್ಳಬಾರದು. ಇಲ್ಲದಿದ್ದರೆ ಮೊಬೈಲ್‌ ಆಧಾರಿತ ಕೆಲಸಗಳಿಗೆ ಪ್ರೋತ್ಸಾಹಧನ ನಿಗದಿಪಡಿಸಬೇಕು.

– ಪಶ್ಚಿಮ ಬಂಗಾಳದ ಮಾದರಿಯಲ್ಲಿ ಸೇವಾ ನಿವೃತ್ತಿ ಪಡೆಯುವ ಆಶಾ ಕಾರ್ಯಕರ್ತೆಯರಿಗೆ ವರ್ಷಕ್ಕೆ ರೂ.5 ಲಕ್ಷ ನೀಡಬೇಕು.

– ಪ್ರತಿವರ್ಷ ಆಶಾ ಕಾರ್ಯಕರ್ತೆಯರಿಗೆ ಸಂಪೂರ್ಣ ಆರೋಗ್ಯ ತಪಾಸಣೆ ಸೌಲಭ್ಯ ಕಲ್ಪಿಸಬೇಕು. ನಮ್ಮನ್ನು ಕಾರ್ಮಿಕರೆಂದು ಪರಿಗಣಿಸಿ ಕನಿಷ್ಠ ವೇತನ, ಗ್ರಾಚ್ಯುಟಿ, ಭವಿಷ್ಯನಿಧಿ, ಕಾರ್ಮಿಕರ ರಾಜ್ಯ ವಿಮೆ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಆಶಾ ಕಾರ್ಯಕರ್ತೆಯರ ಬೇಡಿಕೆಗೆ ಆರೋಗ್ಯ ಇಲಾಖೆ ಹೇಳುವುದೇನು?

– ರಾಜ್ಯ ಸರ್ಕಾರದ ವತಿಯಿಂದ ಮಾಸಿಕ ಗೌರವಧನ ರೂ.5000/- ಗಳನ್ನು ನೀಡಲಾಗುತ್ತಿದೆ.

-ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದ ಎಂಟು ಆವರ್ತಕ ಮತ್ತು ನಿಯಮಿತ ಚಟುವಟಿಕೆಗಳಿಗೆ ಮಾಸಿಕ ಪ್ರೋತ್ಸಾಹಧನ ರೂ.2000/-ಗಳನ್ನು ನೀಡಲಾಗುತ್ತಿದೆ.

– ಆಯುಷ್ಮಾನ್ ಆರೋಗ್ಯ ಮಂದಿರದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಕಾರ್ಯಕರ್ತೆಯರಿಗೆ ಮಾಸಿಕ ರೂ.1000/-ಗಳ ಟೀಮ್ ಬೇಸ್ಟ್ ಇನ್ಸೆಂಟಿವ್ ಕೊಡಲಾಗುತ್ತಿದೆ.

– 34 ಆರೋಗ್ಯ ಚಟುವಟಿಕೆಗಳ ಕಾರ್ಯಕ್ರಮ ಅನುಷ್ಠಾನದ ಆಧಾರದ ಪ್ರೋತ್ಸಾಹಧನ ನೀಡಲಾಗುತ್ತಿದೆ. ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ (PMJJBY) ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಯೋಜನೆ (PMSBY) ಯಡಿಯಲ್ಲಿ ತಲಾ ಎರಡು ಲಕ್ಷಗಳ ರೂ. ವಿಮಾ ಸೌಲಭ್ಯ ಮುಖಾಂತರ ಸಾಮಾಜಿಕ ಸುರಕ್ಷೆ ಒದಗಿಸಲಾಗಿದೆ.

– ಆಶಾ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಯೋಜನೆಯ ವೈದ್ಯಕೀಯ ವಿಮಾ ಸೌಲಭ್ಯವನ್ನು ಕೂಡ ಕಲ್ಪಿಸಲಾಗಿದೆ.

– ಆಶಾ ಕಾರ್ಯಕರ್ತೆಯರು ಇಲಾಖೆಯ ಇತರ ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯರೊಂದಿಗೆ ಆರೋಗ್ಯ ಸೇವೆಗೆ ಸಂಬಂಧಿಸಿದ ಮಾಹಿತಿ ವಿನಿಮಯಕ್ಕಾಗಿ ಸಿಯುಜಿ ಸಿಮ್‌ಗಳ ಸೌಲಭ್ಯವನ್ನು ಕಲ್ಪಿಸುವ ಅವಕಾಶ ಇದೆ.

– ಆಶಾ ಕಾರ್ಯಕರ್ತೆಯರು ಆರೋಗ್ಯ ಚಟುವಟಿಕೆಗಳನ್ನು ಸ್ಮಾರ್ಟ್‌ ಫೋನ್ ಬಳಸಿ ದಾಖಲಿಸಲು ಮಾಸಿಕ ರೂ.280/- ಗಳ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ. ಆಶಾ ಕಾರ್ಯಕರ್ತೆಯರಿಗೆ ವಾರ್ಷಿಕ ಎರಡು ಜೊತೆ ಸಮವಸ್ತ್ರಗಳನ್ನು ನೀಡಲಾಗುತ್ತಿದೆ.

– ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ತ್ರೈಮಾಸಿಕ ಆಶಾ ಕಾರ್ಯಕರ್ತೆಯರ ಕುಂದುಕೊರತೆ ನಿವಾರಣಾ ಸಭೆ ನಡೆಸಿ ಪರಿಹಾರ ಕ್ರಮ ಕೈಗೊಳ್ಳಲಾಗುತ್ತಿದೆ.

– ರಾಜ್ಯ ಮಟ್ಟದಲ್ಲಿ ಆಶಾ ಸಂಘಟನೆಯ ಮುಖಂಡರ ಜೊತೆ ನಿರಂತರವಾಗಿ ಸಭೆಗಳನ್ನು ಸಹ ಸಂಧರ್ಭಕ್ಕೆ ಅನುಸಾರವಾಗಿ ನಡೆಸಿ ನೈಜ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿರುತ್ತದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಚಿಕ್ಕಮಗಳೂರು : ಮುಖ್ಯವಾಹಿನಿಗೆ ಇಂದು ಆರು ನಕ್ಸಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...