Homeನಿಜವೋ ಸುಳ್ಳೋಅಯೋಧ್ಯೆಯ ವಿವಾದಿತ ಜಾಗದಲ್ಲಿ ಚರ್ಚ್‌ ನಿರ್ಮಿಸಲು ಜಾಗ ಕೊಡಬೇಕು: ರಾನು ಮೊಂಡಲ್‌??

ಅಯೋಧ್ಯೆಯ ವಿವಾದಿತ ಜಾಗದಲ್ಲಿ ಚರ್ಚ್‌ ನಿರ್ಮಿಸಲು ಜಾಗ ಕೊಡಬೇಕು: ರಾನು ಮೊಂಡಲ್‌??

- Advertisement -
- Advertisement -

ಬಾಬ್ರಿ ಮಸೀದಿ ಧ್ವಂಸದ ನಂತರ ಬಹುನೀರಿಕ್ಷಿತ ತೀರ್ಪು ಸುಪ್ರೀಂ ಕೋರ್ಟ್‌‌ನಿಂದ ಹೊರಬಿದ್ದಿದೆ. ಅಲ್ಲಿ ರಾಮಮಂದಿರ ನಿರ್ಮಿಸಬೇಕೆಂದು, ಮುಸ್ಲಿಂಮರಿಗೆ ಮಸೀದಿ ಕಟ್ಟಲು ಬೇರೆಡೆ 5 ಎಕರೆ ಜಾಗ ನಿಡಬೇಕೆಂದು ತೀರ್ಪಿತ್ತಿದೆ. ಇಂತಹ ಸೂಕ್ಷ್ಮ ಸಮಯದಲ್ಲಿ ರೈಲ್ವೆ ನಿಲ್ದಾಣದಲ್ಲಿ ಭಿಕ್ಷೆ ಬೇಡುತ್ತಿದ್ದ ತನ್ನ ಸುಮಧುರ ಕಂಠದಿಂದ ರಾತ್ರೋರಾತ್ರಿ ಸ್ಟಾರ್‌ ಆದ ರಾನು ಮೊಂಡಲ್‌ ಅಯೋಧ್ಯೆಯ ವಿವಾದಿತ ಜಾಗದಲ್ಲಿ ಚರ್ಚ್‌ ನಿರ್ಮಿಸಲು ಜಾಗ ಕೊಡಬೇಕು ಎಂದು ಹೇಳಿದ್ದಾರೆ ಎಂಬ ಪೋಸ್ಟ್‌ಗಳು ಎಲ್ಲೆಡೆ ಹರಿದಾಡುತ್ತಿವೆ.

ಟ್ವಿಟ್ಟರ್‌ನಲ್ಲಿ 20 ಲಕ್ಷ ಅನುಯಾಯಿಗಳನ್ನು ಹೊಂದಿರುವ ಲೇಖಕಿ ಮಧು ಪೂರ್ಣಿಮ ಕಿಶ್ವರ್‌ ಎಂಬುವವರು ಪ್ರಶಾಂತ್‌ ಆರ್‌ಎಸ್‌ಎಸ್‌ ಎಂಬುವವರ ಟ್ವೀಟ್‌ ಒಂದನ್ನು ರೀಟ್ವೀಟ್‌ ಮಾಡಿದ್ದಾರೆ. ಅದರಲ್ಲಿ “ಅಯೋಧ್ಯೆಯ ವಿವಾದಿತ ಜಾಗದಲ್ಲಿ ಚರ್ಚ್‌ ನಿರ್ಮಿಸಲು ಜಾಗ ಕೊಡಬೇಕು ಎಂದು ರಾನು ಮೊಂಡಲ್‌ ಹೇಳಿದ್ದಾರೆ. ಅವಳು ರೈಲು ನಿಲ್ದಾಣದಲ್ಲಿ ಕುಳಿತಿದ್ದರೆ ಚೆನ್ನಾಗಿರುತ್ತಿತ್ತು ಬದಲಿಗೆ ಈಗ ನಮ್ಮ ತಲೆಯ ಮೇಲೆ ಕುಳಿತಿದ್ದಾಳೆ” ಎಂದು ಬರೆದಿದೆ.

ಇದಕ್ಕೆ ಮಧು ಪೂರ್ಣಿಮ ಕಿಶ್ವರ್‌ ’ನಿಜವಾಗಿಯೂ ನಿರಾಶಾದಾಯಕ. ಈಕೆ ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ವಾಸಿಸುತ್ತಿದ್ದಾಗ ಮಿಷನರಿಗಳು ಅವಳನ್ನು ಏಕೆ ಕಂಡುಹಿಡಿಯಲಿಲ್ಲ? ಎಂದು ಸೇರಿಸಿ ಟ್ವೀಟ್‌ ಮಾಡಿದ್ದಾರೆ. ಇದನ್ನು ಸುಮಾರು ಎರಡೂವರೆ ಸಾವಿರ ಜನರು ಇಷ್ಟಪಟ್ಟಿದ್ದಾರೆ. ಅಲ್ಲದೇ ನೂರಾರು ಜಾಲತಾಣಿಗರು ಇದೇ ವಿಷಯವನ್ನು ಷೇರ್‌ ಮಾಡಿದ್ದಾರೆ.

ಸತ್ಯ ಏನು?

ಆದರೆ ಇದರ ಫ್ಯಾಕ್ಟ್‌ ಚೆಕ್‌ ನಡೆಸಿದಾಗ ಈ ಸುದ್ದಿ ಸಂಪೂರ್ಣ ಸುಳ್ಳು ಎಂದು ತಿಳಿದುಬಂದಿದೆ. ಈ ಕುರಿತು ಮೊದಲ ಸುಳ್ಳು ಲೇಖನ ’Fauxy’ ಎಂಬ ವೆಬ್‌ ಸೈಟ್‌ನಲ್ಲಿ ಪ್ರಕಟಗೊಂಡಿದೆ. ನಂತರ ಅಲ್ಲಿಂದ ಉಳಿದವರು ತೆಗೆದಕೊಂಡು ಷೇರ್ ಮಾಡಿ ಸುಳ್ಳು ಹರಿಡಿದ್ದಾರೆ. ಈ ವೆಬ್‌ ಸೈಟ್‌ನ ಕೊನೆಯಲ್ಲಿ “ದಿ ಫಾಕ್ಸಿ ಒಂದು ವಿಡಂಬನಾತ್ಮಕ ವೆಬ್ ಪೋರ್ಟಲ್. ಈ ವೆಬ್‌ಸೈಟ್‌ನ ವಿಷಯವು ಕಾಲ್ಪನಿಕ ಕೃತಿಯಾಗಿದೆ. ದಿ ಫಾಕ್ಸಿಯ ಲೇಖನಗಳನ್ನು ನಿಜವಾದ ಮತ್ತು ನಿಜವೆಂದು ಗೊಂದಲಗೊಳಿಸದಂತೆ ಓದುಗರಿಗೆ ಸೂಚಿಸಲಾಗಿದೆ. ” ಎಂದು ಬರೆದುಕೊಂಡಿದ್ದಾರೆ. ಅಂದರೆ ಸುಳ್ಳು ಸುದ್ದಿ ಹರಡಲೆಂದೇ ಇರುವ ವೆಬ್‌ ಇದಾಗಿದೆ.

ಅಂದರೆ ರಾನು ಮೊಂಡಲ್‌ ಚರ್ಚ್‌‌ಗೆ ಜಾಗಬೇಕೆಂದು ಎಲ್ಲಿಯೂ ಹೇಳಿಲ್ಲ. ಆಕೆ ಕ್ರಿಶ್ಚಿಯನ್ ಆದ ಕಾರಣಕ್ಕಾಗಿ ಆಕೆಯ ವಿರುದ್ಧ ಅಪಪ್ರಚಾರ ಮಾಡಲು ಕೆಲವರು ಹೀಗೆ ಸುಳ್ಳು ಹಬ್ಬಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...