Homeಕರ್ನಾಟಕಈಡೇರದ ಸರ್ಕಾರದ ಭರವಸೆ: 8 ವರ್ಷದಿಂದ ಜೈಲಿನಲ್ಲಿ ಕೊಳೆಯುತ್ತಿರುವ ನಕ್ಸಲರು

ಈಡೇರದ ಸರ್ಕಾರದ ಭರವಸೆ: 8 ವರ್ಷದಿಂದ ಜೈಲಿನಲ್ಲಿ ಕೊಳೆಯುತ್ತಿರುವ ನಕ್ಸಲರು

ಶರಣಾದ ಕನ್ಯಾಕುಮಾರಿ ಅವರು 7-8 ವರ್ಷಗಳಿಂದ ಜೈಲಿನಲ್ಲಿದ್ದಾರೆ. ಈ ನಡುವೆ ಅಲ್ಲಿಯೇ ಅವರು ಮಗುವಿಗೆ ಜನ್ಮ ನೀಡಿದ್ದಾರೆ.

- Advertisement -
- Advertisement -

ಆರು ಮಂದಿ ನಕ್ಸಲ್ ಹೋರಾಟಗಾರರು ಇಂದು (ಜ.8) ಸರ್ಕಾರದ ಮುಂದೆ ಮುಖ್ಯವಾಹಿನಿಗೆ ಬಂದಿದ್ದಾರೆ. ಹಾಗೆಯೇ ಇವರಿಗೆ ನಕ್ಸಲ್ ಪ್ಯಾಕೇಜ್ ಮೂಲಕ ಸೂಕ್ತ ಆರ್ಥಿಕ, ಕಾನೂನು ಸಹಕಾರ ನೀಡುವುದಾಗಿ ಸರ್ಕಾರ ಭರವಸೆ ಕೊಟ್ಟಿದೆ. ಹಾಗೆಯೇ ಇಂದು (ಪೆ.1, 2025)ರಂದು ಮುಖ್ಯವಾಹಿನಿಗೆ ಬಂದಿರುವ ನಕ್ಸಲ್ ರವೀಂದ್ರ ಅವರಿಗೂ ಸರಕಾರ ಇದೆ ಭರವಸೆಯನ್ನು ಕೊಟ್ಟಿದೆ.

ಆದರೆ, ಈ ಹಿಂದೆ ಮುಖ್ಯವಾಹಿನಿಗೆ ಬಂದ ನಕ್ಸಲರಿಗೆ ಸರ್ಕಾರ ಕೊಟ್ಟ ಭರವಸೆಗಳನ್ನು ಈಡೇರಿಸಿದೆಯೇ? ಎಂದು ನೋಡಿದರೆ, ಬಹಳ ಶೋಚನೀಯ ಪರಿಸ್ಥಿತಿ ನಮ್ಮ ಕಣ್ಣಮುಂದೆ ಬರುತ್ತದೆ.

ಈ ಹಿಂದೆ ಕನ್ಯಾಕುಮಾರಿ, ಹೊಸಗದ್ದೆ ಪ್ರಭಾ, ಶೋಭಾ, ಶ್ರೀಮತಿ ಇವರು ಮುಖ್ಯವಾಹಿನಿಗೆ ಬಂದಿದ್ದು, ಬಿ.ಜಿ. ಕೃಷ್ಣಮೂರ್ತಿ, ರಮೇಶ್ ಮತ್ತು ಸಾವಿತ್ರಿ ಅವರನ್ನು ಪೊಲೀಸರು ಬಂಧಿಸಿದ್ದರು. ಇವರಿಗೆ ಸರ್ಕಾರ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ಈ ಕಾರಣಕ್ಕೆ ಈಗಲೂ ಇವರು ಕಾನೂನು ಸಮರ ನಡೆಸುತ್ತಾ ಸಂಕಷ್ಟದ ಜೀವನ ಮಾಡುತ್ತಿದ್ದಾರೆ. ಕೆಲವರು ಜೈಲಿನಲ್ಲಿ ಕೊಳೆಯುತ್ತಿದ್ದಾರೆ.

ಮುಖ್ಯವಾಹಿನಿಗೆ ಬಂದು ಕಳೆದ 7-8 ವರ್ಷಗಳಿಂದ ಜೈಲಿನಲ್ಲಿ ಕೊಳೆಯುತ್ತಿರುವ ಕನ್ಯಾಕುಮಾರಿ ಅವರು ಬಿಡುಗಡೆಯಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ.

ಈ ನಡುವೆ ಅವರು ಜೈಲಿನಲ್ಲೇ ಮಗುವಿಗೆ ಜನ್ಮ ನೀಡಿದ್ದು, ಆ ಮಗು ಕೂಡ ತನ್ನ ಬಾಲ್ಯವನ್ನು ಜೈಲಿನಲ್ಲಿ ಕಳೆಯುವಂತಾಗಿದ್ದು, ವ್ಯವಸ್ಥೆಯ ಲೋಪವಾಗಿದೆ.

ಮುಖ್ಯವಾಹಿನಿಗೆ ಬಂದು ಜಾಮೀನಿನ ಮೇಲೆ ಹೊರ ಬಂದಿರುವ ನಿಲುಗುಳಿ ಪದ್ಮನಾಭ್ ಅವರು ನಾನುಗೌರಿ ಜೊತೆ ಮಾತನಾಡಿ, ವಾರದಲ್ಲಿ 3-4 ದಿನ ನ್ಯಾಯಾಲಯಕ್ಕೆ ಅಲೆಯುವಂತಾಗಿದೆ. ಜೀವನೋಪಾಯಕ್ಕಾಗಿ ಯಾವುದೇ ಕೆಲಸ ಮಾಡಲು ಸಾಧ್ಯವಾಗದೇ ಸುಮಾರು 10 ಲಕ್ಷದವರೆಗೂ ಸಾಲ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಇಷ್ಟು ಮಾತ್ರವಲ್ಲದೆ ಪೊಲೀಸರಿಂದ ಬಂಧಿಸಲ್ಪಟ್ಟ ಬಿ.ಜಿ.ಕೃಷ್ಣಮೂರ್ತಿ, ರಮೇಶ್ ಮತ್ತು ಸಾವಿತ್ರಿಯವರು ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಇವರ ವಿರುದ್ಧ ಹಲವು ಪ್ರಕರಣಗಳು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ದಾಖಲಾಗಿದ್ದು, ನಿತ್ಯವೂ ನ್ಯಾಯಾಲಯಕ್ಕೆ ಅಲೆಸಲಾಗುತ್ತಿದೆ ಎಂದು ಪದ್ಮನಾಭ್ ದೂರಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಎನ್‌.ಆರ್‌ ಪುರ ನ್ಯಾಯಾಲಯದಲ್ಲಿ ಬಿ.ಜಿ ಕೃಷ್ಣಮೂರ್ತಿ (2022 ಫೆಬ್ರವರಿ 24)

ಸರ್ಕಾರ ಜ.8ರಂದು ಮುಖ್ಯವಾಹಿನಿಗೆ ನಕ್ಸಲರ ಜೊತೆ ಈ ಹಿಂದೆ ಶರಣಾದ, ಮುಖ್ಯವಾಹಿನಿಗೆ ಬಂದ ಮತ್ತು ಬಂಧಿಸಲ್ಪಟ್ಟವರ ಕುರಿತು ವಿಶೇಷ ಮುತುವರ್ಜಿವಹಿಸಿ ಪ್ರಕರಣಗಳನ್ನು ಬಗೆಹರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ನಮ್ಮ ರಾಜ್ಯದಲ್ಲಿ ಮತ್ತೆ ನಕ್ಸಲ್ ಹೋರಾಟ ತಲೆ ಎತ್ತಬಾರದೆಂದರೆ ನಕ್ಸಲರ ಬೇಡಿಕೆಯನ್ನು ರಾಜ್ಯ ಸರ್ಕಾರ ಈಡೇರಿಸುವುದು ಬಹಳ ಮುಖ್ಯ ಎಂದು ಈ ಹಿಂದೆ ನಕ್ಸಲ್ ಚಟುವಟಿಕೆಯಿಂದ ಮುಖ್ಯವಾಹಿನಿಗೆ ಬಂದಿರುವ ಸಿರಿಮನೆ ನಾಗರಾಜ್ ಅಭಿಪ್ರಾಯಿಸಿದ್ದಾರೆ.

ನೂರ್ ಶ್ರೀಧರ್ ಮತ್ತು ಸಿರಿಮನೆ ನಾಗರಾಜ್ ಅವರು ಮುಖ್ಯವಾಹಿನಿಗೆ ಬಂದ ನಂತರ ಕೆಲವು ದಿನಗಳನ್ನು ಜೈಲಿನಲ್ಲಿ ಕಳೆದು, ಪ್ರಕರಣದಿಂದ ಬೇಗನೆ ಖುಲಾಸೆಗೊಂಡು ಮುಖ್ಯವಾಹಿನಿಯಲ್ಲೇ ಇದ್ದು ಚಳುವಳಿಯನ್ನು ಮುಂದುವರಿಸುತ್ತಿದ್ದೇವೆ. ನಮ್ಮಂತೆ ಇಂದು ಬಿಡುಗಡೆಯಾದ ನಕ್ಸಲರ ಜೊತೆ ಸರ್ಕಾರ ವರ್ತಿಸಬೇಕೆಂದು ಸಿರಿಮನೆ ಒತ್ತಾಯಿಸಿದ್ದಾರೆ.

ನಕ್ಸಲ್ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾವಣೆ; ಸಿಎಂ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...