Homeಕರ್ನಾಟಕಬಿಎಸ್‌ವೈ ಪೋಕ್ಸೋ ಪ್ರಕರಣ| 'ಕೆಟ್ಟ ಘಟನೆಗಳು ತಂಗಿಯನ್ನು ನಿತ್ಯ ಕಾಡುತ್ತಿವೆ..'; ಅಸಹಾಯಕತೆ ವ್ಯಕ್ತಪಡಿಸಿದ ಸಂತ್ರಸ್ತೆ ಸಹೋದರ

ಬಿಎಸ್‌ವೈ ಪೋಕ್ಸೋ ಪ್ರಕರಣ| ‘ಕೆಟ್ಟ ಘಟನೆಗಳು ತಂಗಿಯನ್ನು ನಿತ್ಯ ಕಾಡುತ್ತಿವೆ..’; ಅಸಹಾಯಕತೆ ವ್ಯಕ್ತಪಡಿಸಿದ ಸಂತ್ರಸ್ತೆ ಸಹೋದರ

- Advertisement -
- Advertisement -

ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ.ಎಸ್‌ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ದಾಖಲಾಗಿ ಸುಮಾರು 10 ತಿಂಗಳುಗಳಾಗಿದ್ದು, ಸಂತ್ರಸ್ತೆಯ ಸಹೋದರ ವಿಡಿಯೋ ಬಿಡುಗಡೆ ಮಾಡಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

“ಪ್ರಕರಣದ ತನಿಖೆ ತ್ವರಿತವಾಗಿ ನಡೆಯುತ್ತಿಲ್ಲ; ನಮಗೆ ನ್ಯಾಯವೂ ಸಿಗುತ್ತಿಲ್ಲ. ನಿತ್ಯವೂ ನರಕಯಾತನೆಯಾಗಿದೆ” ಎಂದು ಅಳಲು ತೋಡಿಕೊಂಡಿದ್ದಾರೆ. ಪ್ರಕರಣ ದಾಖಲಾದ ಬಳಿಕ ತಾವು ಅನುಭವಿಸುತ್ತಿರುವ ಸಂಕಷ್ಟಗಳು ಮತ್ತು ಯಡಿಯೂರಪ್ಪ ವಿರುದ್ಧ ಹಲವಾರು ಆರೋಪಗಳನ್ನು ಮಾಡಿ ಸಂತ್ರಸ್ತೆಯ ಸಹೋದರ ವಿಡಿಯೋ ಹಂಚಿಕೊಂಡಿದ್ದಾರೆ.

“ಅತೀವ ದುಃಖದಿಂದ ನಾನು ಈ ವಿಡಿಯೋ ಮಾಡುತ್ತಿದ್ದೇನೆ. ನನ್ನ ಪುಟ್ಟ ತಂಗಿ ಮೇಲಾದ ದೌರ್ಜನ್ಯದಿಂದಾಗಿ ನನ್ನ ಕುಟುಂಬ ಚೇತರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದಕ್ಕೆಲ್ಲ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕಾರಣ. ನಿಜಕ್ಕೂ ಯಡಿಯೂರಪ್ಪ ರೀತಿಯ ಜನರು ಇಂತಹ ಕೃತ್ಯವೆಸಗುತ್ತಾರೆಂದು ಊಹಿಸಲೂ ಅಸಾಧ್ಯ. ಅದೂ ಕೂಡ ಅವರ ಮೊಮ್ಮಕ್ಕಳಿಗಿಂತಲೂ ಚಿಕ್ಕವಳಾದ ನನ್ನ ಪುಟ್ಟ ತಂಗಿ ಮೇಲೆ ಇಂತಹ ಕೃತ್ಯ ನಡೆಸಿದ್ಜಾರೆ. ನನಗೆ ಮತ್ತು ನನ್ನ ಪುಟ್ಟ ತಂಗಿಗೆ ಇದು ನಿಜಕ್ಕೂ ಆಘಾತವಾಗಿದೆ” ಎಂದು ಬೇಸರ ಹೊರಹಾಕಿದ್ದಾರೆ.

“ತನ್ನ ಮೇಲಾದ ದೌರ್ಜನ್ಯದಿಂದಾಗಿ ನನ್ನ ತಂಗಿ ನಿತ್ಯವೂ ನರಕ ಯಾತನೆ ಅನುಭವಿಸುತ್ತಿದ್ದಾಳೆ. ಅಂದು ನಡೆದ ಆ ಕೆಟ್ಟ ಘಟನೆಗಳು ಆಕೆಯನ್ನು ಕಾಡುತ್ತಿವೆ. ನನ್ನ ತಂಗಿಯ ಮೇಲಾದ ದೌರ್ಜನ್ಯದ ವಿರುದ್ಧದ ಹೋರಾಟ ನಡೆಸುತ್ತಿದ್ದ ನಮ್ಮ ತಾಯಿ ಕೂಡ ಸಾವನ್ನಪ್ಪಿದ್ದಾರೆ. ಅವರ ಸಾವು ನಮ್ಮನ್ನು ಮತ್ತಷ್ಟು ಆಘಾತಕ್ಕೀಡುಮಾಡಿದೆ. ನಮ್ಮ ತಾಯಿ ಸುಮಾರು 10 ವರ್ಷಗಳ ಹಿಂದೆ ಮೊದಲ ಪೋಕ್ಸೋ ಪ್ರಕರಣ ದಾಖಲಿಸಿದಾಗಿನಿಂದಲೂ ಹೋರಾಟ ನಡೆಸುತ್ತಿದ್ದರು. ನಮ್ಮ ತಾಯಿಯೇ ನಮಗೆ ಧೈರ್ಯವಾಗಿದ್ದರು. ಆದರೆ, ಅವರಿಲ್ಲ ನಾವು ಕಷ್ಟಪಡುತ್ತಿದ್ದೇವೆ. ನಮ್ಮ ಭಾವನೆ, ಆಕ್ರೋಶ ಎಲ್ಲವನ್ನೂ ನಮ್ಮೊಳಗೇ ಇಟ್ಟುಕೊಂಡು ಒದ್ದಾಡುತ್ತಿದ್ದೇವೆ” ಎಂದು ವಿವರಿಸಿದ್ದಾರೆ.

“ನ್ಯಾಯಕ್ಕಾಗಿ ನಮ್ಮ ತಾಯಿ ಹಲವು ರಾಜಕೀಯ ನಾಯಕರು ಹಾಗೂ ಅಧಿಕಾರಿಗಳನ್ನು ಭೇಟಿ ಮಾಡಿದ್ದರು. ಮನವಿ ಸಲ್ಲಿಸಿದ್ದರು. ಆದರೆ, ಯಾರಿಂದಲೂ ನ್ಯಾಯ ದೊರೆಯಲಿಲ್ಲ. ಆಕೆಯ ವಿರುದ್ಧವೇ ಸುಳ್ಳು ಪ್ರಕರಣಗಳು ದಾಖಲಾದವು. ಯಡಿಯೂರಪ್ಪರನ್ನು ರಕ್ಷಿಸಲು ನಮ್ಮ ತಾಯಿ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗಿದೆ. ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ಆರೋಪಿಸಿದ್ದಾರೆ.

“ನ್ಯಾಯ ಕೇಳಲು ಹೋದ ನಮ್ಮ ತಾಯಿಯ ಮೇಲೆ ಹಿರಿಯ ಪೊಲೀಸ್ ಅಧಿಕಾರಿ ಹಲ್ಲೆ ನಡೆಸಲು ಯತ್ನಿಸಿದ್ದರು. ಇಂತಹ ಕೃತ್ಯಗಳನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಬೇಕು. ಯಡಿಯೂರಪ್ಪ ಮೇಲಿನ ಪ್ರಕರಣವನ್ನು ವಾಪಸ್ ಪಡೆಯಲು ಬೆದರಿಕೆಗಳು ಬರುತ್ತಿವೆ. ನಮ್ಮ ಕುಟುಂಬ ಜೀವನ ನಡೆಸುವುದೇ ಸವಾಲಾಗಿದೆ. ನನ್ನ ತಂಗಿ ಜರ್ಜಿರಿತಳಾಗಿದ್ದಾಳೆ. ಶಾಲೆಗೆ ಹೋಗುವುದನ್ನೂ ನಿಲ್ಲಿಸಿದ್ದಾಳೆ. ಹೊರ ಹೋಗಲು ಭಯವಾಗುತ್ತಿದೆ ಎನ್ನುತ್ತಿದ್ದಾಳೆ. ನನ್ನ ತಂಗಿಗಾದ ಅನ್ಯಾಯ ಬೇರೆ ಯಾರಿಗೂ ಆಗಬಾರದು. ಅಪರಾಧಿಗೆ ಶಿಕ್ಷೆಯಾಗಬೇಕು. ಪ್ರಕರಣ ರದ್ದಾಗದಂತೆ ನೋಡಿಕೊಳ್ಳಬೇಕು. ನಮಗೆ ನ್ಯಾಯ ಕೊಡಿಸಿ, ನ್ಯಾಯಕ್ಕಾಗಿ ವಾದ ಮಂಡಿಸಲು ಒಳ್ಳೆಯ ವಕೀಲರನ್ನು ನೇಮಿಸಿಕೊಡಿ ಎಂದು ನಾನು ಕಾಂಗ್ರೆಸ್ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡುತ್ತಿದ್ದೇನೆ” ಎಂದು ಮನವಿ ಮಾಡಿಕೊಂಡಿದ್ದಾರೆ.

ಇದೆಲ್ಲದರ ನಡುವೆ ತಮ್ಮ ವಿರುದ್ಧದ ದಾಖಲಾಗಿರುವ ಪೋಕ್ಸೋ ಪ್ರಕರಣ‌ ರದ್ದು ಕೋರಿ ಯಡಿಯೂರಪ್ಪ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠವು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಜ.10ಕ್ಕೆ ಮುಂದೂಡಿದೆ.

ತಮ್ಮ ಮಗಳ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯ ಪಡೆಯಲು ಸಹಾಯ ಕೇಳಲು ಹೋಗಿದ್ದಾಗ ತಮ್ಮ ಮಗಳಿಗೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ. ಬಾಲಕಿಯ ಖಾಸಗಿ ಅಂಗ ಸ್ಪರ್ಶಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಆರೋಪಸಿದ್ದರು. ಅವರ ದೂರಿನ ಆಧಾರದ ಮೇಲೆ 2024ರ ಮಾರ್ಚ್‌ 15ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ; ನಕ್ಸಲ್ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾವಣೆ; ಸಿಎಂ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...