Homeಮುಖಪುಟಪೋಕ್ಸೋ ಪ್ರಕರಣದ ಆರೋಪಿಗೆ ರಕ್ಷಣೆ : ಮಹಿಳಾ ಇನ್‌ಸ್ಪೆಕ್ಟರ್, ಎಡಿಎಂಕೆ ಕಾರ್ಯಕರ್ತನ ಬಂಧನ

ಪೋಕ್ಸೋ ಪ್ರಕರಣದ ಆರೋಪಿಗೆ ರಕ್ಷಣೆ : ಮಹಿಳಾ ಇನ್‌ಸ್ಪೆಕ್ಟರ್, ಎಡಿಎಂಕೆ ಕಾರ್ಯಕರ್ತನ ಬಂಧನ

- Advertisement -
- Advertisement -

ಪೋಕ್ಸೋ ಪ್ರಕರಣದ ಆರೋಪಿಯನ್ನು ಬಂಧನದಿಂದ ರಕ್ಷಿಸಿ ಕಾನೂನುಬಾಹಿರ ಕೃತ್ಯವೆಸಗಿದ ಪ್ರಕರಣದಲ್ಲಿ ಚೆನ್ನೈನ ಅಣ್ಣಾ ನಗರ ಮಹಿಳಾ ಠಾಣೆಯ ಇನ್‌ಸ್ಪೆಕ್ಟರ್ ಮತ್ತು ಎಐಎಡಿಎಂಕೆ ಪಕ್ಷದ ಕಾರ್ಯಕರ್ತನನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಬಂಧಿಸಿದೆ.

ಅಣ್ಣಾ ನಗರ ಮಹಿಳಾ (ಎಲ್ಲಾ) ಠಾಣೆಯ ಇನ್‌ಸ್ಪೆಕ್ಟರ್ ರಾಜಿ ಮತ್ತು ಎಐಎಡಿಎಂಕೆ ಪಕ್ಷದ ಕಾರ್ಯಕರ್ತ ಸುಧಾಕರ್ ಬಂಧನಕ್ಕೊಳಗಾದ ಆರೋಪಿಗಳು ಎಂದು ದಿ ನ್ಯೂಸ್‌ ಮಿನಿಟ್ ವರದಿ ಹೇಳಿದೆ.

ಇನ್‌ಸ್ಪೆಕ್ಟರ್‌ ರಾಜಿ ವಿರುದ್ದ ಸಂತ್ರಸ್ತೆಗೆ ಬೆದರಿಕೆ ಹಾಕಿ ಹೇಳಿಕೆ ಬದಲಿಸುವ ಮೂಲಕ ಪ್ರಕರಣದ ದಿಕ್ಕು ತಪ್ಪಿಸಿದ ಅಥವಾ ಕಳಪೆ ತನಿಖೆ ನಡೆಸಿದ ಆರೋಪವಿದೆ. ಎಐಎಡಿಎಂ ಕಾರ್ಯಕರ್ತ ಸುಧಾಕರ್ ವಿರುದ್ದ ಆರೋಪಿಗೆ ರಕ್ಷಣೆ ಒದಗಿಸಿರುವ ಆರೋಪವಿದೆ.

ಪ್ರಕರಣದ ಹಿನ್ನೆಲೆ : ಆರೋಗ್ಯ ಹದೆಗೆಟ್ಟ ಕಾರಣ ಆಗಸ್ಟ್ 29, 2024ರಂದು 10 ವರ್ಷದ ಬಾಲಕಿಯನ್ನು ಆಕೆಯ ಪೋಷಕರು ಆಸ್ಪತ್ರೆಗೆ ಕರೆದೊಯ್ದಿದ್ದರು. ಪರೀಕ್ಷಿಸಿದ ವೈದ್ಯರು ಆಕೆಯ ಮೇಲೆ ಅತ್ಯಾಚಾರ ನಡೆದಿರುವುದಾಗಿ ಹೇಳಿದ್ದರು. ಬಾಲಕಿಯನ್ನು ವಿಚಾರಿಸಿದಾಗ, ಆಕೆ ತನ್ನ ಪಕ್ಷದ ಮನೆಯ ನೀರು ವಿತರಕ 30 ವರ್ಷದ ಸತೀಶ್ ಎಂಬಾತ ಕೃತ್ಯವೆಸಗಿರುವುದಾಗಿ ಹೇಳಿದ್ದಳು.

ತಮ್ಮ ಮಗಳ ಮೇಲೆ ದೌರ್ಜನ್ಯ ನಡೆದಿರುವ ಕುರಿತು ದೂರು ನೀಡಲು ಬಾಲಕಿಯ ಪೋಷಕರು ಆಗಸ್ಟ್ 30, 2024ರಂದು ಅಣ್ಣಾ ನಗರ ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ ಇನ್‌ಸ್ಪೆಕ್ಟರ್ ರಾಜಿ ಅವರಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಬಳಿಕ ಪೋಷಕರಿಂದ ದೂರು ಪಡೆದುಕೊಂಡ ಪೊಲೀಸರು, ಅಂದೇ ಎಫ್‌ಐಆರ್ ದಾಖಲಿಸಿದ್ದರು. ಬಾಲಕಿ ಹೆಸರಿಸಿದ ಆರೋಪಿ ಸತೀಶ್ ವಿರುದ್ದ ಸೆಕ್ಷನ್ 5(ಐ),5(ಎಂ), ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆ- 2012ರ ಸೆಕ್ಷನ್ 6ರ ಅಡಿಯಲ್ಲಿ ಆರೋಪ ಹೊರಿಸಿದ್ದರು. ರಾತ್ರಿ 10 ಗಂಟೆಯ ನಂತರ ಬಾಲಕಿ ದಾಖಲಾಗಿದ್ದ ಆಸ್ಪತ್ರೆಗೆ ತೆರಳಿ ಬಾಲಕಿಯಿಂದ ಹೇಳಿಕೆ ಪಡೆದಿದ್ದರು.

“ಬಾಲಕಿಯಿಂದ ಹೇಳಿಕೆ ಪಡೆಯವಾಗ, ಆರೋಪಿ ಸತೀಶ್ ಹೆಸರು ಹೇಳದಂತೆ ಪೊಲೀಸರು ಆಕೆಯನ್ನು ಹೆದರಿಸಿದ್ದಾರೆ. ಸತೀಶ್ ಹೆಸರು ಹೇಳಿದರೆ ನಿನ್ನ ತಂದೆ-ತಾಯಿ ಜೈಲಿಗೆ ಹೋಗುತ್ತಾರೆ. ನಂತರ ನಿನ್ನ ಸಹೋದರರು ಕೇರ್ ಹೋಮ್‌ನಲ್ಲಿ ಉಳಿಯಬೇಕಾಗುತ್ತದೆ ಎಂದು ಭಯ ಹುಟ್ಟಿಸಿದ್ದಾರೆ. ಇದರಿಂದ ಹೆದರಿದ ಬಾಲಕಿ ಆರಂಭದಲ್ಲಿ ಹೇಳಿದ್ದ ಸತೀಶ್ ಬದಲು, ಮತ್ತೊಬ್ಬ ಅಪ್ರಾಪ್ತನನ್ನು ಆರೋಪಿ ಎಂದು ಹೆಸರಿಸಿದ್ದಾಳೆ” ಎಂದು ಆಕೆಯ ತಾಯಿ ಆರೋಪಿಸಿದ್ದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಈ ನಡುವೆ ಸಂತ್ರಸ್ತ ಬಾಲಕಿ ಪೊಲೀಸರ ಮುಂದೆ ಹೇಳಿಕೆ ನೀಡಿದ ಆಡಿಯೋ ಮತ್ತು ಪ್ರಕರಣದ ಎಫ್‌ಐಆರ್ ಮಾಹಿತಿ ಸೆಪ್ಟೆಂಬರ್ 2024ರಂದು ಪೊಲೀಸರು ಸೋರಿಕೆ ಮಾಡಿದ್ದರು.

ಮದ್ರಾಸ್ ಹೈಕೋರ್ಟ್ ಈ ಸಂಬಂಧ ಸೆಪ್ಟೆಂಬರ್‌ನಲ್ಲಿ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿತ್ತು. ಅಕ್ಟೋಬರ್ 1ರಂದು ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಿತ್ತು. ಆದರೆ, ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚಿಸಿತ್ತು.

ಉದ್ಯಮಿ ಬಾಬಿ ಚೆಮ್ಮನ್ನೂರ್ ವಿರುದ್ಧ ದೂರು ದಾಖಲಿಸಿದ ಮಲಯಾಳಂ ನಟಿ ಹನಿ ರೋಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...