Homeಮುಖಪುಟಶೀಶ್ ಮಹಲ್ to ರಾಜ್‌ಮಹಲ್ : ಏನಿದು ದೆಹಲಿಯ ಬಂಗಲೆ ಗಲಾಟೆ?

ಶೀಶ್ ಮಹಲ್ to ರಾಜ್‌ಮಹಲ್ : ಏನಿದು ದೆಹಲಿಯ ಬಂಗಲೆ ಗಲಾಟೆ?

- Advertisement -
- Advertisement -

ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ‘ಶೀಶ್ ಮಹಲ್ ಮತ್ತು ರಾಜ್‌ಮಹಲ್‘ ಎಂಬ ಎರಡು ಬಂಗಲೆಗಳನ್ನು ಮುಂದಿಟ್ಟುಕೊಂಡು ಆಮ್‌ ಆದ್ಮಿ ಪಕ್ಷ (ಎಎಪಿ) ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರು ಕಿತ್ತಾಟ ಶುರು ಮಾಡಿದ್ದಾರೆ.

ಶೀಶ್ ಮಹಲ್ ಮತ್ತು ರಾಜ್‌ಮಹಲ್ ಎಂಬ ಎರಡು ಬಂಗಲೆಗಳೇ ಪ್ರಸ್ತುತ ದೆಹಲಿ ವಿಧಾನಸಭೆ ಚುನಾವಣೆ ಪ್ರಚಾರದ ಪ್ರಮುಖ ಅಸ್ತ್ರವಾಗಿ ಮಾರ್ಪಟ್ಟಿದೆ.

ಪ್ರಧಾನಿ ನರೇಂದ್ರ ಮೋದಿಯವರ ನಿವಾಸವನ್ನು ‘ರಾಜ್‌ಮಹಲ್’ ಎಂದು ಕರೆದಿರುವ ದೆಹಲಿಯ ಆಡಳಿತರೂಢ ಎಎಪಿ, ಅ ಬಂಗಲೆಯ ನವೀಕರಣಕ್ಕೆ ಬರೋಬ್ಬರಿ 2,700 ಕೋಟಿ ರೂಪಾಯಿ ಸಾರ್ವಜನಿಕರ ಹಣವನ್ನು ಖರ್ಚು ಮಾಡಲಾಗಿದೆ ಎಂದು ಆರೋಪಿಸಿದೆ.

ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮುಖ್ಯಮಂತ್ರಿಯಾಗಿದ್ದಾಗ, ಅವರ ಅಧಿಕೃತ ನಿವಾಸ ಶೀಶ್‌ ಮಹಲ್‌ನ ನವೀಕರಣಕ್ಕೆ ಭಾರೀ ಪ್ರಮಾಣದಲ್ಲಿ ಸಾರ್ವಜನಿಕರ ಹಣವನ್ನು ಖರ್ಚು ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಕೇಜ್ರಿವಾಲ್ ಬಂಗಲೆಯನ್ನು ಖಾಲಿ ಮಾಡಿದ ನಂತರ “ಗೋಲ್ಡನ್ ಕಮೋಡ್” ಸೇರಿದಂತೆ ಅಮೂಲ್ಯ ವಸ್ತುಗಳು ಕಾಣೆಯಾಗಿವೆ ಎಂದು ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.

ಬಿಜೆಪಿಗರ ಈ ಆರೋಪಕ್ಕೆ ಪ್ರತ್ಯುತ್ತರವಾಗಿ ಪ್ರಧಾನಿಯ ನಿವಾಸದ ವಿಚಾರವನ್ನು ಎಎಪಿ ಮುನ್ನಲೆಗೆ ತಂದಿದೆ.

ಜನವರಿ 8, 2025ರಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಒಂದನ್ನು ಹಾಕಿದ್ದ ಎಎಪಿ, “ಮೋದಿಯವರ ಅರಮನೆಯನ್ನು (ರಾಜ್‌ಮಹಲ್) ಜನರಿಗೆ ತೋರಿಸಬೇಕು” ಎಂದು ಬರೆದುಕೊಂಡಿದೆ.

“ಮೋದಿಯವರ ಅರಮನೆ ನಿರ್ಮಾಣಕ್ಕೆ 2,700 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಅದರ ಕಾರ್ಪೆಟ್‌ಗೆ 300 ಕೋಟಿ ರೂಪಾಯಿ ಮತ್ತು ಗೊಂಚಲು ದೀಪಗಳಿಗೆ 200 ಕೋಟಿ ರೂಪಾಯಿ ವ್ಯಯಿಸಲಾಗಿದೆ” ಎಂದು ಎಎಪಿ ಆರೋಪಿಸಿದೆ.

ಎಎಪಿ ನಾಯಕರ ಸಿಎಂ ಮನೆ ಪ್ರವೇಶಕ್ಕೆ ತಡೆ

ಭಾರೀ ಪ್ರಮಾಣದ ಹಣ ಖರ್ಚು ಮಾಡಲಾಗಿದೆ ಎಂದು ಬಿಜೆಪಿಗರು ಆರೋಪಿಸಿರುತ್ತಿರುವ ದೆಹಲಿ ಮುಖ್ಯಮಂತ್ರಿಯ ಅಧಿಕೃತ ನಿವಾಸ ‘ಶೀಶ್‌ಮಹಲ್’ ನಲ್ಲಿ ಪ್ರಸ್ತುತ ಸಿಎಂ ಅತಿಶಿ ಮರ್ಲೆನಾ ಅವರು ವಾಸವಿದ್ದಾರೆ. ಅರವಿಂದ್ ಕೇಜ್ರಿವಾಲ್ ಸಿಎಂ ಹುದ್ದೆಯಿಂದ ಕೆಳಗಿಳಿದ ಬಳಿಕ, ನಿಯಮದ ಪ್ರಕಾರ ಅತಿಶಿ ಅವರಿಗೆ ಆ ಸರ್ಕಾರಿ ಬಂಗಲೆ ಹಂಚಿಕೆಯಾಗಿದೆ.

ಬಿಜೆಪಿಗರ ಆರೋಪ ಹಿನ್ನೆಲೆ, ಜನವರಿ 8ರಂದು ಮಾಧ್ಯಮದವರಿಗೆ ಶೀಶ್‌ಮಹಲ್ ತೋರಿಸಲು ಎಎಪಿ ನಾಯಕರಾದ ಸಂಜಯ್ ಸಿಂಗ್ ಮತ್ತು ಸೌರಭ್ ಭಾರದ್ವಾಜ್ ಮುಂದಾಗಿದ್ದರು. ಆದರೆ, ಸಿಎಂ ಮನೆ ಗೇಟ್ ಬಳಿ ಅವರನ್ನು ಪೊಲೀಸರು ತಡೆದಿದ್ದಾರೆ. ಒಳಗೆ ಪ್ರವೇಶಿಸಲು ಅವಕಾಶ ಕೊಟ್ಟಿಲ್ಲ.

ಈ ಕಾರಣಕ್ಕೆ ಪೊಲೀಸರು ಮತ್ತು ಎಎಪಿ ನಾಯಕರ ನಡುವೆ ಸಿಎಂ ಮನೆ ಗೇಟ್ ಬಳಿ ವಾಗ್ವಾದ ನಡೆದಿದೆ.

“ನಮ್ಮನ್ನು ತಡೆಯಲು ನಿಮಗೆ ಯಾರು ಸೂಚನೆ ನೀಡಿದ್ದಾರೆ? ನಾನೊಬ್ಬ ಸಚಿವ, ಪರಿಶೀಲನೆಗಾಗಿ ಇಲ್ಲಿಗೆ ಬಂದಿದ್ದೇನೆ. ನೀವು ನನ್ನನ್ನು ಹೇಗೆ ತಡೆಯುತ್ತೀರಿ? ಯಾರ ಆದೇಶದ ಮೇರೆಗೆ? ಲೆಫ್ಟಿನೆಂಟ್ ಗವರ್ನರ್ ಅವರಿಂದ ನಿಮಗೆ ನಿರ್ದೇಶನ ಬಂದಿದೆಯಾ? ಅವರು ನನ್ನ ಸ್ಥಾನಕ್ಕಿಂತ ಮೇಲೆ ಒಂದು ಅಧಿಕಾರ ಹೊಂದಿದ್ದಾರೆ ಅಷ್ಟೆ” ಎಂದು ಎಎಪಿ ನಾಯಕ ಸೌರಭ್ ಭಾರದ್ವಾಜ್ ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೂ ಮುನ್ನ ಪತ್ರಿಕಾಗೋಷ್ಠಿ ನಡೆಸಿದ್ದ ಭಾರದ್ವಾಜ್ ಅವರು, “ಮುಖ್ಯಮಂತ್ರಿಯವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿ, ಬಿಜೆಪಿ ಹೇಳಿಕೊಳ್ಳುತ್ತಿರುವ ಚಿನ್ನದ ಕಮೋಡ್, ಈಜುಕೊಳ ಮತ್ತು ಮಿನಿಬಾರ್ ಅನ್ನು ಹುಡುಕಲು ಪ್ರಯತ್ನಿಸುತ್ತೇವೆ” ಎಂದಿದ್ದರು.

“ಸಿಎಂ ಮನೆ ಸರ್ಕಾರದ ಆಸ್ತಿ ಎಂಬುವುದನ್ನು ಗಮನಿಸಬೇಕು. ಅವುಗಳನ್ನು ತೆರಿಗೆದಾರರ ಹಣದಿಂದ ನಿರ್ಮಿಸಲಾಗಿದೆ ಮತ್ತು ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ನಿರ್ಮಿಸಲಾಗಿದೆ. ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪಗಳಿದ್ದರೆ ತನಿಖೆ ಮಾಡಬೇಕು” ಎಂದು ಭಾರದ್ವಾಜ್ ಹೇಳಿದ್ದರು.

ಪ್ರಧಾನ ಮಂತ್ರಿಯ ನಿವಾಸವನ್ನು ‘ರಾಜ್‌ಮಹಲ್‌’ ಎಂದು ಕರೆದ ಸಂಜಯ್‌ ಸಿಂಗ್ ಮತ್ತು ಸೌರಭ್ ಭಾರದ್ವಾಜ್, “ನಾವು 2,700 ಕೋಟಿಯಲ್ಲಿ ನಿರ್ಮಿಸಿದ ಪ್ರಧಾನಿ ನಿವಾಸಕ್ಕೆ ಮಾಧ್ಯಮದವರನ್ನು ಕರೆದುಕೊಂಡು ಹೋಗುತ್ತೇವೆ ಎಂದಿದ್ದರು.

ಫೆಬ್ರವರಿ 5ರಂದು ದೆಹಲಿಯ ವಿಧಾನಸಭೆ ಚುನಾವಣೆಯ ಮತದಾನ ಒಂದೇ ಹಂತದಲ್ಲಿ ನಡೆಯಲಿದೆ. ಫೆಬ್ರವರಿ 8ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಬಾರಿಯ ಚುನಾವಣೆಯಲ್ಲಿ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಪ್ರಮುಖ ಸ್ಪರ್ಧೆ ಏರ್ಪಡಲಿದೆ.

ಎಎಪಿ ಮೂರನೇ ಬಾರಿಗೆ ರಾಜಧಾನಿಯ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ. ಬಿಜೆಪಿ ಎರಡು ದಶಕಗಳ ಬಳಿಕ ದೆಹಲಿ ಮೇಲೆ ಹಿಡಿತ ಸಾಧಿಸಲು ತಂತ್ರ ಹೆಣೆಯುತ್ತಿದೆ. ಈ ನಡುವೆ ಲೋಕಸಭೆ ಚುನಾವಣೆಯಲ್ಲಿ ಎಎಪಿಯ ಮಿತ್ರ ಪಕ್ಷವಾಗಿದ್ದ ಕಾಂಗ್ರೆಸ್, ಏಕಾಂಗಿ ಹೋರಾಟಕ್ಕೆ ಸಜ್ಜಾಗಿದೆ.

ಇದನ್ನೂ ಓದಿ : ಸಂಭಾಲ್ ಮಸೀದಿ ಪ್ರಕರಣ: ಅಲಹಾಬಾದ್ ಹೈಕೋರ್ಟ್ ನಿಂದ ಸಿವಿಲ್ ನ್ಯಾಯಾಲಯದ ವಿಚಾರಣೆಗೆ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...