Homeಮುಖಪುಟಶೀಶ್ ಮಹಲ್ to ರಾಜ್‌ಮಹಲ್ : ಏನಿದು ದೆಹಲಿಯ ಬಂಗಲೆ ಗಲಾಟೆ?

ಶೀಶ್ ಮಹಲ್ to ರಾಜ್‌ಮಹಲ್ : ಏನಿದು ದೆಹಲಿಯ ಬಂಗಲೆ ಗಲಾಟೆ?

- Advertisement -
- Advertisement -

ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ‘ಶೀಶ್ ಮಹಲ್ ಮತ್ತು ರಾಜ್‌ಮಹಲ್‘ ಎಂಬ ಎರಡು ಬಂಗಲೆಗಳನ್ನು ಮುಂದಿಟ್ಟುಕೊಂಡು ಆಮ್‌ ಆದ್ಮಿ ಪಕ್ಷ (ಎಎಪಿ) ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರು ಕಿತ್ತಾಟ ಶುರು ಮಾಡಿದ್ದಾರೆ.

ಶೀಶ್ ಮಹಲ್ ಮತ್ತು ರಾಜ್‌ಮಹಲ್ ಎಂಬ ಎರಡು ಬಂಗಲೆಗಳೇ ಪ್ರಸ್ತುತ ದೆಹಲಿ ವಿಧಾನಸಭೆ ಚುನಾವಣೆ ಪ್ರಚಾರದ ಪ್ರಮುಖ ಅಸ್ತ್ರವಾಗಿ ಮಾರ್ಪಟ್ಟಿದೆ.

ಪ್ರಧಾನಿ ನರೇಂದ್ರ ಮೋದಿಯವರ ನಿವಾಸವನ್ನು ‘ರಾಜ್‌ಮಹಲ್’ ಎಂದು ಕರೆದಿರುವ ದೆಹಲಿಯ ಆಡಳಿತರೂಢ ಎಎಪಿ, ಅ ಬಂಗಲೆಯ ನವೀಕರಣಕ್ಕೆ ಬರೋಬ್ಬರಿ 2,700 ಕೋಟಿ ರೂಪಾಯಿ ಸಾರ್ವಜನಿಕರ ಹಣವನ್ನು ಖರ್ಚು ಮಾಡಲಾಗಿದೆ ಎಂದು ಆರೋಪಿಸಿದೆ.

ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮುಖ್ಯಮಂತ್ರಿಯಾಗಿದ್ದಾಗ, ಅವರ ಅಧಿಕೃತ ನಿವಾಸ ಶೀಶ್‌ ಮಹಲ್‌ನ ನವೀಕರಣಕ್ಕೆ ಭಾರೀ ಪ್ರಮಾಣದಲ್ಲಿ ಸಾರ್ವಜನಿಕರ ಹಣವನ್ನು ಖರ್ಚು ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಕೇಜ್ರಿವಾಲ್ ಬಂಗಲೆಯನ್ನು ಖಾಲಿ ಮಾಡಿದ ನಂತರ “ಗೋಲ್ಡನ್ ಕಮೋಡ್” ಸೇರಿದಂತೆ ಅಮೂಲ್ಯ ವಸ್ತುಗಳು ಕಾಣೆಯಾಗಿವೆ ಎಂದು ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.

ಬಿಜೆಪಿಗರ ಈ ಆರೋಪಕ್ಕೆ ಪ್ರತ್ಯುತ್ತರವಾಗಿ ಪ್ರಧಾನಿಯ ನಿವಾಸದ ವಿಚಾರವನ್ನು ಎಎಪಿ ಮುನ್ನಲೆಗೆ ತಂದಿದೆ.

ಜನವರಿ 8, 2025ರಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಒಂದನ್ನು ಹಾಕಿದ್ದ ಎಎಪಿ, “ಮೋದಿಯವರ ಅರಮನೆಯನ್ನು (ರಾಜ್‌ಮಹಲ್) ಜನರಿಗೆ ತೋರಿಸಬೇಕು” ಎಂದು ಬರೆದುಕೊಂಡಿದೆ.

“ಮೋದಿಯವರ ಅರಮನೆ ನಿರ್ಮಾಣಕ್ಕೆ 2,700 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಅದರ ಕಾರ್ಪೆಟ್‌ಗೆ 300 ಕೋಟಿ ರೂಪಾಯಿ ಮತ್ತು ಗೊಂಚಲು ದೀಪಗಳಿಗೆ 200 ಕೋಟಿ ರೂಪಾಯಿ ವ್ಯಯಿಸಲಾಗಿದೆ” ಎಂದು ಎಎಪಿ ಆರೋಪಿಸಿದೆ.

ಎಎಪಿ ನಾಯಕರ ಸಿಎಂ ಮನೆ ಪ್ರವೇಶಕ್ಕೆ ತಡೆ

ಭಾರೀ ಪ್ರಮಾಣದ ಹಣ ಖರ್ಚು ಮಾಡಲಾಗಿದೆ ಎಂದು ಬಿಜೆಪಿಗರು ಆರೋಪಿಸಿರುತ್ತಿರುವ ದೆಹಲಿ ಮುಖ್ಯಮಂತ್ರಿಯ ಅಧಿಕೃತ ನಿವಾಸ ‘ಶೀಶ್‌ಮಹಲ್’ ನಲ್ಲಿ ಪ್ರಸ್ತುತ ಸಿಎಂ ಅತಿಶಿ ಮರ್ಲೆನಾ ಅವರು ವಾಸವಿದ್ದಾರೆ. ಅರವಿಂದ್ ಕೇಜ್ರಿವಾಲ್ ಸಿಎಂ ಹುದ್ದೆಯಿಂದ ಕೆಳಗಿಳಿದ ಬಳಿಕ, ನಿಯಮದ ಪ್ರಕಾರ ಅತಿಶಿ ಅವರಿಗೆ ಆ ಸರ್ಕಾರಿ ಬಂಗಲೆ ಹಂಚಿಕೆಯಾಗಿದೆ.

ಬಿಜೆಪಿಗರ ಆರೋಪ ಹಿನ್ನೆಲೆ, ಜನವರಿ 8ರಂದು ಮಾಧ್ಯಮದವರಿಗೆ ಶೀಶ್‌ಮಹಲ್ ತೋರಿಸಲು ಎಎಪಿ ನಾಯಕರಾದ ಸಂಜಯ್ ಸಿಂಗ್ ಮತ್ತು ಸೌರಭ್ ಭಾರದ್ವಾಜ್ ಮುಂದಾಗಿದ್ದರು. ಆದರೆ, ಸಿಎಂ ಮನೆ ಗೇಟ್ ಬಳಿ ಅವರನ್ನು ಪೊಲೀಸರು ತಡೆದಿದ್ದಾರೆ. ಒಳಗೆ ಪ್ರವೇಶಿಸಲು ಅವಕಾಶ ಕೊಟ್ಟಿಲ್ಲ.

ಈ ಕಾರಣಕ್ಕೆ ಪೊಲೀಸರು ಮತ್ತು ಎಎಪಿ ನಾಯಕರ ನಡುವೆ ಸಿಎಂ ಮನೆ ಗೇಟ್ ಬಳಿ ವಾಗ್ವಾದ ನಡೆದಿದೆ.

“ನಮ್ಮನ್ನು ತಡೆಯಲು ನಿಮಗೆ ಯಾರು ಸೂಚನೆ ನೀಡಿದ್ದಾರೆ? ನಾನೊಬ್ಬ ಸಚಿವ, ಪರಿಶೀಲನೆಗಾಗಿ ಇಲ್ಲಿಗೆ ಬಂದಿದ್ದೇನೆ. ನೀವು ನನ್ನನ್ನು ಹೇಗೆ ತಡೆಯುತ್ತೀರಿ? ಯಾರ ಆದೇಶದ ಮೇರೆಗೆ? ಲೆಫ್ಟಿನೆಂಟ್ ಗವರ್ನರ್ ಅವರಿಂದ ನಿಮಗೆ ನಿರ್ದೇಶನ ಬಂದಿದೆಯಾ? ಅವರು ನನ್ನ ಸ್ಥಾನಕ್ಕಿಂತ ಮೇಲೆ ಒಂದು ಅಧಿಕಾರ ಹೊಂದಿದ್ದಾರೆ ಅಷ್ಟೆ” ಎಂದು ಎಎಪಿ ನಾಯಕ ಸೌರಭ್ ಭಾರದ್ವಾಜ್ ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೂ ಮುನ್ನ ಪತ್ರಿಕಾಗೋಷ್ಠಿ ನಡೆಸಿದ್ದ ಭಾರದ್ವಾಜ್ ಅವರು, “ಮುಖ್ಯಮಂತ್ರಿಯವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿ, ಬಿಜೆಪಿ ಹೇಳಿಕೊಳ್ಳುತ್ತಿರುವ ಚಿನ್ನದ ಕಮೋಡ್, ಈಜುಕೊಳ ಮತ್ತು ಮಿನಿಬಾರ್ ಅನ್ನು ಹುಡುಕಲು ಪ್ರಯತ್ನಿಸುತ್ತೇವೆ” ಎಂದಿದ್ದರು.

“ಸಿಎಂ ಮನೆ ಸರ್ಕಾರದ ಆಸ್ತಿ ಎಂಬುವುದನ್ನು ಗಮನಿಸಬೇಕು. ಅವುಗಳನ್ನು ತೆರಿಗೆದಾರರ ಹಣದಿಂದ ನಿರ್ಮಿಸಲಾಗಿದೆ ಮತ್ತು ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ನಿರ್ಮಿಸಲಾಗಿದೆ. ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪಗಳಿದ್ದರೆ ತನಿಖೆ ಮಾಡಬೇಕು” ಎಂದು ಭಾರದ್ವಾಜ್ ಹೇಳಿದ್ದರು.

ಪ್ರಧಾನ ಮಂತ್ರಿಯ ನಿವಾಸವನ್ನು ‘ರಾಜ್‌ಮಹಲ್‌’ ಎಂದು ಕರೆದ ಸಂಜಯ್‌ ಸಿಂಗ್ ಮತ್ತು ಸೌರಭ್ ಭಾರದ್ವಾಜ್, “ನಾವು 2,700 ಕೋಟಿಯಲ್ಲಿ ನಿರ್ಮಿಸಿದ ಪ್ರಧಾನಿ ನಿವಾಸಕ್ಕೆ ಮಾಧ್ಯಮದವರನ್ನು ಕರೆದುಕೊಂಡು ಹೋಗುತ್ತೇವೆ ಎಂದಿದ್ದರು.

ಫೆಬ್ರವರಿ 5ರಂದು ದೆಹಲಿಯ ವಿಧಾನಸಭೆ ಚುನಾವಣೆಯ ಮತದಾನ ಒಂದೇ ಹಂತದಲ್ಲಿ ನಡೆಯಲಿದೆ. ಫೆಬ್ರವರಿ 8ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಬಾರಿಯ ಚುನಾವಣೆಯಲ್ಲಿ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಪ್ರಮುಖ ಸ್ಪರ್ಧೆ ಏರ್ಪಡಲಿದೆ.

ಎಎಪಿ ಮೂರನೇ ಬಾರಿಗೆ ರಾಜಧಾನಿಯ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ. ಬಿಜೆಪಿ ಎರಡು ದಶಕಗಳ ಬಳಿಕ ದೆಹಲಿ ಮೇಲೆ ಹಿಡಿತ ಸಾಧಿಸಲು ತಂತ್ರ ಹೆಣೆಯುತ್ತಿದೆ. ಈ ನಡುವೆ ಲೋಕಸಭೆ ಚುನಾವಣೆಯಲ್ಲಿ ಎಎಪಿಯ ಮಿತ್ರ ಪಕ್ಷವಾಗಿದ್ದ ಕಾಂಗ್ರೆಸ್, ಏಕಾಂಗಿ ಹೋರಾಟಕ್ಕೆ ಸಜ್ಜಾಗಿದೆ.

ಇದನ್ನೂ ಓದಿ : ಸಂಭಾಲ್ ಮಸೀದಿ ಪ್ರಕರಣ: ಅಲಹಾಬಾದ್ ಹೈಕೋರ್ಟ್ ನಿಂದ ಸಿವಿಲ್ ನ್ಯಾಯಾಲಯದ ವಿಚಾರಣೆಗೆ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ : ಮತದಾನದ ಹಿಂದಿನ ದಿನ ಪಕ್ಷಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್ ಅಭ್ಯರ್ಥಿ!

ಅಸ್ಸಾಂ ವಿಧಾನಸಭೆ ಚುನಾವಣೆಗೆ ಕೇವಲ ಒಂದು ದಿನ ಬಾಕಿ ಇರುವಾಗ, ಉದಲ್ಗುರಿ (ಎಸ್‌ಟಿ) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುರೇನ್ ದೈಮರಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಎಂದು ವರದಿಯಾಗಿದೆ. ಪಕ್ಷದ ನಾಯಕತ್ವದಿಂದ...

ವಿಧಾನಸಭೆ ಚುನಾವಣೆ : ಅಸ್ಸಾಂ, ಕೇರಳ, ಪುದುಚೇರಿಯಲ್ಲಿ ಇಂದು ಮತದಾನ

ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭೆಯ ಚುನಾವಣೆಯ ಮತದಾನ ಇಂದು (ಏ.9, 2026) ಒಂದೇ ಹಂತದಲ್ಲಿ ನಡೆಯಲಿದೆ. ಈಗಾಗಲೇ ಮತದಾನ ಆರಂಭಗೊಂಡಿದೆ. ಅಸ್ಸಾಂನ 126 ಸದಸ್ಯ ಬಲದ ವಿಧಾನಸಭೆಗೆ ನಡೆಯಲಿರುವ ಚುನಾವಣೆಯು...

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...