Homeಮುಖಪುಟತಿರುಪತಿ ಕಾಲ್ತುಳಿತ: ಸಂತ್ರಸ್ತರ ಕುಟುಂಬಗಳಿಗೆ ತಲಾ ₹25 ಲಕ್ಷ ಪರಿಹಾರ ಘೋಷಿಸಿದ ಆಂಧ್ರ ಸರ್ಕಾರ

ತಿರುಪತಿ ಕಾಲ್ತುಳಿತ: ಸಂತ್ರಸ್ತರ ಕುಟುಂಬಗಳಿಗೆ ತಲಾ ₹25 ಲಕ್ಷ ಪರಿಹಾರ ಘೋಷಿಸಿದ ಆಂಧ್ರ ಸರ್ಕಾರ

- Advertisement -
- Advertisement -

ಬುಧವಾರ ರಾತ್ರಿ (ಜನವರಿ 8) ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಡೆದ ಪವಿತ್ರ ಕಾರ್ಯಕ್ರಮದ ಟಿಕೆಟ್ ವಿತರಣೆಯ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಆರು ಭಕ್ತರ ಕುಟುಂಬಗಳಿಗೆ ಆಂಧ್ರ ಪ್ರದೇಶ ಸರ್ಕಾರ ಗುರುವಾರ (ಜನವರಿ 9) ತಲಾ ₹25 ಲಕ್ಷ ಪರಿಹಾರ ಘೋಷಿಸಿದೆ.

ಆಂಧ್ರ ಪ್ರದೇಶದ ಕಂದಾಯ ಸಚಿವ ಅನಗಣಿ ಸತ್ಯ ಪ್ರಸಾದ್, “ನಾವು ಜೀವವನ್ನು ಬೇರೆ ಯಾವುದರಿಂದಲೂ ಬದಲಾಯಿಸಲು ಸಾಧ್ಯವಿಲ್ಲ. ಆದರೆ, ಕುಟುಂಬಗಳಿಗೆ ಬೆಂಬಲ ನೀಡುತ್ತೇವೆ. ನಾವು ₹25 ಲಕ್ಷಗಳನ್ನು ಘೋಷಿಸಿದ್ದೇವೆ. ಮುಖ್ಯಮಂತ್ರಿ ಗಾಯಗೊಂಡ ಜನರೊಂದಿಗೆ ಮಾತನಾಡುತ್ತಾರೆ” ಎಂದು ಹೇಳಿದರು.

ಸಚಿವರ ತಂಡವು ರುಯಾ ಆಸ್ಪತ್ರೆಯಲ್ಲಿ ಮೃತರ ಕುಟುಂಬಗಳನ್ನು ಭೇಟಿ ಮಾಡಿದ ನಂತರ ಕಂದಾಯ ಸಚಿವ ಸತ್ಯ ಪ್ರಸಾದ್ ಈ ಘೋಷಣೆ ಮಾಡಿದರು. ಸಚಿವರಾದ ಅನಿತಾ, ಪಾರ್ಥಸಾರಥಿ ಮತ್ತು ಅನಮ್ ರಾಮನಾರಾಯಣ ರೆಡ್ಡಿ ಅವರನ್ನೊಳಗೊಂಡ ನಿಯೋಗವು ಎಸ್‌ವಿಐಎಂಎಸ್‌ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡಿತು.

ಸಚಿವರು ಈ ಘಟನೆಯನ್ನು ದುರದೃಷ್ಟಕರ ಎಂದು ಬಣ್ಣಿಸಿದರು. ಈ ಘಟನೆಯು ಯಾವುದೇ ಆತುರದ ಕ್ರಮ ಅಥವಾ ಸಮನ್ವಯದ ಕೊರತೆಯಿಂದ ಉಂಟಾಗಿದೆಯೇ ಎಂದು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು. ಇದು ಅಪಘಾತವೋ ಅಥವಾ ಪಿತೂರಿಯೋ ಎಂಬುದನ್ನು ಖಚಿತಪಡಿಸಿಕೊಳ್ಳಲು ತನಿಖೆ ನಡೆಯುತ್ತಿದೆ ಎಂದು ಗೃಹ ಸಚಿವೆ ಅನಿತಾ ಹೇಳಿದರು.

ಸಿಸಿಟಿವಿ ದೃಶ್ಯಾವಳಿಗಳು ಯಾರ ತಪ್ಪುಗಳಿಂದ ಈ ದುರಂತ ಸಂಭವಿಸಿದೆ ಎಂಬುದನ್ನು ಬಹಿರಂಗಪಡಿಸುತ್ತದೆ. ನಿರ್ಲಕ್ಷ್ಯ ತೋರಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಹೇಳಿದರು. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಮೃತರ ಶವಗಳನ್ನು ಶವಪರೀಕ್ಷೆಯ ನಂತರ ಆಯಾ ಪಟ್ಟಣಗಳಿಗೆ ಕಳುಹಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.

ಮೃತರಲ್ಲಿ ಮೂವರು ವಿಶಾಖಪಟ್ಟಣಂನವರು ಮತ್ತು ಒಬ್ಬರು ನರಸಿಪಟ್ಟಣಂನವರು. ಉಳಿದ ಇಬ್ಬರು ಬಲಿಪಶುಗಳು ತಮಿಳುನಾಡು ಮತ್ತು ಕೇರಳದವರು.

ಜನವರಿ 10 ರಂದು ಪ್ರಾರಂಭವಾಗುವ ವಾರ್ಷಿಕ ವೈಕುಂಠ ಏಕಾದಶಿ ಉತ್ಸವದ ಸಮಯದಲ್ಲಿ ವೈಕುಂಠ ದ್ವಾರ ದರ್ಶನಕ್ಕಾಗಿ ಟೋಕನ್ ವಿತರಿಸಲು ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಕೌಂಟರ್‌ಗಳನ್ನು ಸ್ಥಾಪಿಸಿದ್ದ ತಿರುಪತಿಯ ವಿಷ್ಣು ನಿವಾಸಂ ದೇವಾಲಯದ ಬಳಿ ಕಾಲ್ತುಳಿತ ಸಂಭವಿಸಿದೆ.

10 ದಿನಗಳ ಈ ಕಾರ್ಯಕ್ರಮದಲ್ಲಿ, ಭಕ್ತರಿಗೆ ಉತ್ತರ ದ್ವಾರದ ಮೂಲಕ ದೇವರ ವಿಶೇಷ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಗುರುವಾರ ಬೆಳಿಗ್ಗೆ ಟೋಕನ್ ವಿತರಣೆ ಆರಂಭವಾಗಬೇಕಿದ್ದರೂ ಬುಧವಾರ ಸಂಜೆಯಿಂದಲೇ ವಿವಿಧ ರಾಜ್ಯಗಳಿಂದ ಸಾವಿರಾರು ಭಕ್ತರು ಕೌಂಟರ್‌ಗಳಲ್ಲಿ ಸಾಲುಗಟ್ಟಿ ನಿಂತಿದ್ದರು. ತೊಂದರೆಗೀಡಾದ ಮಹಿಳೆಗೆ ಸಹಾಯ ಮಾಡಲು ಒಂದು ಗೇಟ್ ತೆರೆದಾಗ, ಭಕ್ತರು ಮುಂದೆ ದೌಡಾಯಿಸಿದ್ದರಿಂದ ಕಾಲ್ತುಳಿತ ಸಂಭವಿಸಿತು.

ಹಬ್ಬದ ಮೊದಲ ಮೂರು ದಿನಗಳವರೆಗೆ (ಜನವರಿ 10–12) 1.20 ಲಕ್ಷ ಟೋಕನ್‌ಗಳ ವಿತರಣೆಗೆ ಟಿಟಿಡಿ ವ್ಯವಸ್ಥೆ ಮಾಡಿತ್ತು. ತಿರುಪತಿಯ 94 ಸ್ಥಳಗಳಲ್ಲಿ ವಿಶೇಷ ಕೌಂಟರ್‌ಗಳನ್ನು ಸ್ಥಾಪಿಸಲಾಗಿತ್ತು.

ಇದನ್ನೂ ಓದಿ; ತಿರುಪತಿ ಕಾಲ್ತುಳಿತ ದುರಂತ : ಮೃತರ ಸಂಖ್ಯೆ 7ಕ್ಕೆ ಏರಿಕೆ; 40ಕ್ಕೂ ಅಧಿಕ ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...