Homeಮುಖಪುಟಲಾಸ್ ಏಂಜಲೀಸ್‌ ಕಾಡ್ಗಿಚ್ಚು | ಐವರು ಸಾವು, 1 ಲಕ್ಷದಷ್ಟು ಜನರ ಸ್ಥಳಾಂತರ; ಹಾಲಿವುಡ್ ನಟರ...

ಲಾಸ್ ಏಂಜಲೀಸ್‌ ಕಾಡ್ಗಿಚ್ಚು | ಐವರು ಸಾವು, 1 ಲಕ್ಷದಷ್ಟು ಜನರ ಸ್ಥಳಾಂತರ; ಹಾಲಿವುಡ್ ನಟರ ಕಟ್ಟಡಗಳು ಬೆಂಕಿಗಾಹುತಿ

- Advertisement -
- Advertisement -

ಯುಎಸ್‌ನ (ಅಮೆರಿಕ) ಕ್ಯಾಲಿಫೋರ್ನಿಯಾ ರಾಜ್ಯದ ಲಾಸ್‌ ಏಂಜಲೀಸ್‌ ನಗರದ ಪೆಸಿಫಿಕ್‌ ಪ್ಯಾಲಿಸೈಡ್ಸ್‌ ಹಾಗೂ ಪ್ಯಾಸಡೀನಾದ ಈಟನ್‌ ಕೆಯಾನ್‌ ಪ್ರದೇಶಗಳಲ್ಲಿ ಉಂಟಾಗಿರುವ ಭೀಕರ ಕಾಡ್ಗಿಚ್ಚಿಗೆ ಐವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ದುರಂತದಲ್ಲಿ 1, 500ಕ್ಕೂ ಹೆಚ್ಚು ಕಟ್ಟಡಗಳು ಬೆಂಕಿಗಾಹುತಿಯಾಗಿವೆ. ಅರಣ್ಯ ಸಮೀಪದ 70 ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಕ್ಯಾಲಿಪೋರ್ನಿಯಾ ರಾಜ್ಯ ಸರ್ಕಾರ ತುರ್ತು ಪರಿಸ್ಥಿತಿ ಘೋಷಿಸಿದ್ದು, 1,30,000 ಅಧಿಕ ಜನರನ್ನು ಸ್ಥಳಾಂತರಿಸಲು ಮುಂದಾಗಿದೆ ಎಂದು ವರದಿಯಾಗಿದೆ.

ಕಾಡ್ಗಿಚ್ಚು ದುರಂತ ಹಿನ್ನೆಲೆ ಯುಎಸ್‌ ಅಧ್ಯಕ್ಷ ಜೋ ಬೈಡೆನ್‌ ಅವರು ತಮ್ಮ ಇಟಲಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಘಟನೆಯ ಕುರಿತು ಮಾತನಾಡಿರುವ ಅವರು, ಕಾಡ್ಗಿಚ್ಚು ತಡೆಯುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ. ಬೈಡನ್ ಅವರು ಜನವರಿ 9ರಿಂದ 12ರವರೆಗೆ ಇಟಲಿಯಲ್ಲಿ ಪೋಪ್‌ ಫ್ರಾನ್ಸಿಸ್‌ ಅವರನ್ನು ಭೇಟಿ ಮಾಡುವ ಕಾರ್ಯಕ್ರಮವಿತ್ತು.

ವರದಿಗಳ ಪ್ರಕಾರ, ಕಳೆದ ಮಂಗಳವಾರ (ಜ.7) ಕಾಡ್ಗಿಚ್ಚು ಶುರುವಾಗಿದೆ. ಲಾಸ್‌ ಏಂಜಲೀಸ್‌ನ ಪೆಸಿಫಿಕ್‌ ಪ್ಯಾಲಿಸೈಡ್ಸ್‌ನ ಹಾಲಿವುಡ್‌ ಕಲಾವಿದರ ಮನೆಗಳಿರುವ ಪ್ರತಿಷ್ಠಿತ ಹಾಲಿವುಡ್‌ ಹಿಲ್ಸ್‌ಗೆ ಬೆಂಕಿ ವ್ಯಾಪಿಸಿ ಅಪಾರ ನಷ್ಟ ಉಂಟು ಮಾಡಿದೆ. ಪ್ರಮುಖ ಕಲಾವಿದರ ಕಟ್ಟಡಗಳು ಭಸ್ಮವಾಗಿದೆ.

‘ಸನ್‌ಸೆಟ್ ಫೈರ್’ ಎಂದು ಕರೆಯಲ್ಪಡುವ ಬೆಂಕಿ ಜ್ವಾಲೆಯು ಹಾಲಿವುಡ್ ಹಿಲ್ಸ್‌ ಅನ್ನು ಆವರಿಸಿದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ 112 ಕಿಲೋ ಮೀಟರ್‌ ವೇಗದಲ್ಲಿ ಬೀಸುತ್ತಿರುವ ʻಸಾಂಟಾ ಅನಾʼ ಚಂಡಮಾರುತದಿಂದ ಪರಿಸ್ಥಿತಿ ಹದಗೆಡುತ್ತಲೇ ಇದೆ. ರನ್ಯಾನ್ ಕ್ಯಾನ್ಯನ್ ಮತ್ತು ವಾಟಲ್ಸ್ ಪಾರ್ಕ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ.

ಬೆಂಕಿ ನಂದಿಸಲು ಸುಮಾರು 7,500 ಅಗ್ನಿಶಾಮಕ ಸಿಬ್ಬಂದಿ ಮತ್ತು ಇತರರು ಕೆಲಸ ಮಾಡುತ್ತಿದ್ದಾರೆ. ಅಗ್ನಿಶಾಮಕ ವಾಹನಗಳು, ಹೆಲಿಕಾಫ್ಟರ್ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ. ಆದರೆ, ಈ ಕಾರ್ಯಾಚರಣೆಗೆ ನೀರಿನ ಕೊರತೆ ಉಂಟಾಗಿದೆ ಎಂದು ವರದಿಯಾಗಿದೆ.

‘ಕಾಡ್ಗಿಚ್ಚಿನ ಬಗ್ಗೆ ಮೊದಲೇ ಎಚ್ಚರಿಕೆ ವಹಿಸಿದ್ದ ಕಾರಣ, ಮುಂಚಿತವಾಗಿ 1 ಮಿಲಿಯನ್‌ ಗ್ಯಾಲನ್‌ನ (3.8 ಮಿಲಿಯನ್‌ ಲೀಟರ್‌ನ) ಮೂರು ನೀರಿನ ಟ್ಯಾಂಕ್‌ಗಳನ್ನು ತುಂಬಿಸಿಡಲಾಗಿತ್ತು. ಆದರೆ, ಈ ಸಂಗ್ರಹವೂ ಖಾಲಿಯಾಗುತ್ತಿದೆ. ಪೆಸಿಫಿಕ್‌ ಪ್ಯಾಲಿಸೈಡ್ಸ್‌ ಪ್ರದೇಶಕ್ಕೆ ಸಾಮಾನ್ಯವಾಗಿ ಪೂರೈಸುವ ಮೂರು ಪಟ್ಟು ಹೆಚ್ಚು ನೀರನ್ನು ಬೆಂಕಿ ನಿಯಂತ್ರಿಸಲು ಬಳಸಲಾಗುತ್ತಿದೆ.

ಮಂಗಳವಾರದಿಂದ 2 ಸಾವಿರದಿಂದ 4 ಸಾವಿರ ಗ್ಯಾಲನ್‌ ನೀರಿನ ಪ್ರಮಾಣದ 18 ನೀರಿನ ಟ್ಯಾಂಕರ್‌ಗಳು ಕಾರ್ಯನಿರ್ವಹಿಸುತ್ತಿವೆ. ಹೀಗಾಗಿ ನೀರಿನ ಕೊರತೆ ಎದುರಾಗಿದೆ’ ಎಂದು ಲಾಸ್‌ ಏಂಜಲೀಸ್‌ನ ಜಲ ವಿಭಾಗ ಹೇಳಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ  : ತಾಲಿಬಾನ್ ಸಚಿವರನ್ನು ಭೇಟಿಯಾದ ಭಾರತದ ವಿದೇಶಾಂಗ ಕಾರ್ಯದರ್ಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...