Homeಮುಖಪುಟಮುಸ್ಲಿಂ ಯುವಕನಿಗೆ ಥಳಿಸಿ, ಹಂದಿ ಮಾಂಸ ತಿನ್ನುವಂತೆ ಒತ್ತಾಯ

ಮುಸ್ಲಿಂ ಯುವಕನಿಗೆ ಥಳಿಸಿ, ಹಂದಿ ಮಾಂಸ ತಿನ್ನುವಂತೆ ಒತ್ತಾಯ

- Advertisement -
- Advertisement -

ಇಂಫಾಲ್: ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಮೈತೆಯಿ ಗುಂಪಿನ ಅರಂಬೈ ಟೆಂಗೋಲ್ ಮುಸ್ಲಿಂ ಹುಡುಗನನ್ನು ಥಳಿಸಿ, ಅವನ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿ ಹಂದಿ ಮಾಂಸ ತಿನ್ನುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಜನವರಿ 4ರಂದು ಈ ಘಟನೆ ನಡೆದಿದೆ. ಕ್ವಾಕ್ಟಾ ವಾರ್ಡ್ ಸಂಖ್ಯೆ 2ರ ಟಂಪಕ್ಮಾಯುಮ್ ಕಮಲ್ ಹಸನ್ ಅವರ ಪುತ್ರ 18 ವರ್ಷದ ಟಂಪಕ್ಮಾಯುಮ್ ಅಕ್ತರ್ ಅವರನ್ನು ಸಹೋದ್ಯೋಗಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಅರಂಬೈ ಟೆಂಗೋಲ್ ಹೈಂಗಾಂಗ್ ಘಟಕವು ಸಮನ್ಸ್ ಜಾರಿ ಮಾಡಿತ್ತು ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

ತನ್ನ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿ ಗುಂಪು ತನ್ನನ್ನು ಕಟ್ಟಿಹಾಕಿ, ಹಲ್ಲೆ ಮಾಡಿ, ಹಂದಿ ಮಾಂಸ ತಿನ್ನುವಂತೆ ಒತ್ತಾಯಿಸಿದೆ ಎಂದು ಬಲಿಪಶು ಯುವಕನು ಆರೋಪಿಸಿದ್ದಾನೆ. ಅರಂಬೈ ಟೆಂಗೋಲ್ ನಾಯಕ ಕೊರೌಂಗನ್ಬಾ ಖುಮಾನ್ ಅವರು ತನ್ನ ಕೈಗಳನ್ನು ಉಗುರುಗಳಿಂದ ಚುಚ್ಚಿದ್ದಾರೆ ಎಂದು ಯುವಕ ಆರೋಪಿಸಿದ್ದಾನೆ.

ಘಟನೆಗೆ ಕಾರಣವಾದ ಕಾರಣಗಳ ಕುರಿತು ಮಾತನಾಡಿದ ಯುವಕ, ಇಂಫಾಲ್‌ನ ಕೀಶಾಂಪತ್‌ನಲ್ಲಿರುವ ಕಾಫಿ ಕೆಫೆಯಲ್ಲಿ ಕೆಲಸ ಮಾಡುತ್ತಿದ್ದ ಮೈತೆಯಿ ಹುಡುಗಿ ಜೆನಿತಾಳೊಂದಿಗಿನ ತನ್ನ ಕುರಿತು ತಪ್ಪು ತಿಳುವಳಿಕೆಯಿಂದಾಗಿ ಗುಂಪು ತನ್ನನ್ನು ಕರೆಸಿತು ಎಂದಿದ್ದಾನೆ.

ತಾನು, ಜೆನಿತಾ ಮತ್ತು ಇನ್ನೊಬ್ಬ ಸ್ನೇಹಿತ ಒಂದೇ ಕೆಫೆಯಲ್ಲಿ ಕೆಲಸ ಮಾಡುತ್ತಿದ್ದು, ಆಗಾಗ್ಗೆ ಸಾಂದರ್ಭಿಕ ಸಂಭಾಷಣೆಗಳಲ್ಲಿ ತೊಡಗಿರುತ್ತೇವೆ. ಆದಾಗ್ಯೂ, ತಾನು ಜೆನಿತಾಳನ್ನು ಪ್ರೀತಿಸುತ್ತಿರುವುದಾಗಿ ತಮಾಷೆಯಾಗಿ ತನ್ನ ಇನ್ನೊಬ್ಬ ಸ್ನೇಹಿತರಿಗೆ ಫೋನ್‌ನಲ್ಲಿ ಹೇಳಿದಾಗ, ಅವಳು ತನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿಕೊಂಡಳು ಮತ್ತು ತನ್ನ ಸಹೋದರರು ಮತ್ತು ಎಟಿ ಗುಂಪಿಗೆ ಈ ವಿಷಯವನ್ನು ತಿಳಿಸಿದಳು. ಇದರಿಂದಾಗಿ ನನ್ನನ್ನು ಕರೆಸಲಾಗಿತ್ತು. ನಾನು ಹೈಂಗಾಂಗ್ ಘಟಕಕ್ಕೆ ಬಂದಾಗ ನನಗೆ ಜೆನಿತಾಳೊಂದಿಗೆ ಸಂಬಂಧವಿದೆಯೇ ಎಂಬ ಬಗ್ಗೆ  ಪ್ರಶ್ನಿಸಲಾಯಿತು. ಅವಳೊಂದಿಗೆ ಯಾವುದೇ ಸಂಬಂಧವನ್ನು ನಾನು ನಿರಾಕರಿಸಿದೆನು. ಅವರು ನನ್ನ ನಿರಾಕರಣೆಯನ್ನು ಗಮನಕ್ಕೆ ತಗೆದುಕೊಳ್ಳದೆ ನನ್ನ ದೈಹಿಕವಾಗಿ ಹಲ್ಲೆ ನಡೆಸಲಾಯಿತು ಎಂದಿದ್ದಾನೆ.

ಆ ದುರದೃಷ್ಟಕರ ದಿನದಂದು ಅಕ್ತರ್ ತನಗೆ ಪ್ರಪೋಸ್ ಮಾಡಿದ್ದನು, ಆದರೆ ಅದನ್ನು ನಾನು ತಿರಸ್ಕರಿಸಿದೆ ಎಂದು ಜೆನಿತಾ ಹೇಳಿದ್ದಾಳೆ. ತನ್ನ ನಿರಾಕರಣೆಯ ನಂತರ, ಅವನು ತನ್ನೊಂದಿಗೆ ಅನುಚಿತವಾಗಿ ವರ್ತಿಸಿದನು.  ಇದರಿಂದಾಗಿ ನಾನು ಲ್ಯಾಂಫೆಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದೆ ಎಂದು ತಿಳಿಸಿದ್ದಾಳೆ.

ಅರಾಂಬೈ ಟೆಂಗೋಲ್ ನಾಯಕ ಈ ಆರೋಪಗಳನ್ನು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಅಕ್ತರ್ ಆರೋಪಿಸಿದಂತೆ ನಾವು ಆತನಿಗೆ  ಹಂದಿಮಾಂಸವನ್ನು ಬಲವಂತವಾಗಿ ತಿನ್ನಿಸಿಲ್ಲ ಎಂದು ಅವರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಸ್ಪಷ್ಟಪಡಿಸಿದ್ದಾರೆ. “ಯಾರನ್ನಾದರೂ ಹಂದಿಮಾಂಸ ತಿನ್ನಲು ಒತ್ತಾಯಿಸುವ ವೀಡಿಯೊವನ್ನು ಪೋಸ್ಟ್ ಮಾಡುವ ಅವಿವೇಕದ ವ್ಯಕ್ತಿ ನಾನು ಅಲ್ಲ. ದಯವಿಟ್ಟು ಅನಗತ್ಯ ಉದ್ವಿಗ್ನತೆಯನ್ನು ಸೃಷ್ಟಿಸುವುದನ್ನು ನಿಲ್ಲಿಸಿ. ಕಿರುಕುಳಕ್ಕೊಳಗಾಗಿದ್ದೇನೆ ಎಂದು ಹೇಳಿಕೊಂಡ ವ್ಯಕ್ತಿಯನ್ನು ಅವನ ಸ್ವಂತ ಸುರಕ್ಷತೆಗಾಗಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ” ಎಂದು ಕೊರೌಂಗನ್ಬಾ ಬರೆದಿದ್ದಾರೆ. ನಾಮಸೂಚಕ ರಾಜ ಲೈಶೆಂಬಾ ಸನಾಜಾಬಾ ಮತ್ತು ಮುಸ್ಲಿಂ ನಾಗರಿಕ ಸಂಘಟನೆಗಳನ್ನು ಒಳಗೊಂಡ ಸಭೆಯನ್ನು  ನಿಗದಿಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು ಮತ್ತು ಮತ್ತಷ್ಟು ಉದ್ವಿಗ್ನತೆಯನ್ನು ಸೃಷ್ಟಿಸುವುದನ್ನು ತಪ್ಪಿಸಲು ಎಲ್ಲರೂ ಶಾಂತ ರೀತಿಯಲ್ಲಿ ವರ್ತಿಸುವಂತೆ ಮನವಿ ಮಾಡಿದ್ದಾರೆ.

ಅಂಜುಮನ್ ಇಸ್ಲಾ ಇ ಮುಸ್ರಾ, ಕ್ವಾಕ್ತಾ ಜಮಿಯತ್ ಉಲ್ಮಾ ಬಿಷ್ಣುಪುರ ಜಿಲ್ಲೆ, ಆಲ್ ಕ್ವಾಕ್ತಾ ಸಮನ್ವಯ ಸಮಿತಿ, ಆಲ್ ಮೈತೆ ಪಂಗಲ್ ಯುವ ಸಂಘ, ಆಲ್ ಕ್ವಾಕ್ತಾ ಯುವ ಸ್ವಯಂಸೇವಾ ಸಂಸ್ಥೆ ಸೇರಿದಂತೆ ಹಲವಾರು ಮುಸ್ಲಿಂ ಸಂಘಟನೆಗಳು  ಅರಾಂಬೈ ಟೆಂಗೋಲ್ ಹೀಂಗಾಂಗ್ ಘಟಕ ಮತ್ತು ಅದರ ನಾಯಕಿ ಕೊರೌಂಗನ್ಬಾ ಅವರಿಂದ ವಿವರಣೆಯನ್ನು ಒತ್ತಾಯಿಸಿವೆ. ನಾಗರಿಕ ಮತ್ತು ಧಾರ್ಮಿಕ ಸಂಸ್ಥೆಗಳು ಈ ದಾಳಿಯನ್ನು ಕೋಮು ಸಾಮರಸ್ಯ ಮತ್ತು ಮಾನವ ಹಕ್ಕುಗಳ ಮೇಲಿನ ದಾಳಿ ಎಂದು ಖಂಡಿಸಿವೆ, ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ಕ್ರಮಗಳ ಎಚ್ಚರಿಕೆ ನೀಡಿವೆ.

ಏತನ್ಮಧ್ಯೆ, ಆಲ್ ಮಣಿಪುರ ಮುಸ್ಲಿಂ ವಿದ್ಯಾರ್ಥಿಗಳ ಸಂಘಟನೆಯೂ ಈ ಘಟನೆಯನ್ನು ಬಲವಾಗಿ ಖಂಡಿಸಿದೆ. ಈ ಘಟನೆಯನ್ನು ಎರಡು ಸಮುದಾಯಗಳ ನಡುವಿನ ಏಕತೆ ಮತ್ತು ಶಾಂತಿಯನ್ನು ಭಂಗಗೊಳಿಸುವ ಉದ್ದೇಶಪೂರ್ವಕ ಪ್ರಯತ್ನ ಎಂದು ಬಣ್ಣಿಸುತ್ತಾ, ಸಂಘಟನೆಯು ಹಲವಾರು ಪ್ರಶ್ನೆಗಳನ್ನು ಎತ್ತಿದೆ. 1. ಅರಾಂಬೈ ಟೆಂಗೋಲ್ ಕಾನೂನು ಜಾರಿ ಸಂಸ್ಥೆಯಾಗಿ ಕಾರ್ಯನಿರ್ವಹಿಸಲು ಅಧಿಕಾರ ಹೊಂದಿದೆಯೇ? ಈ ಗುಂಪು ವಿಷಯಗಳನ್ನು ತಮ್ಮ ಕೈಗೆ ತೆಗೆದುಕೊಂಡಿದ್ದು, ಪೊಲೀಸರಿಗೆ ಒಪ್ಪಿಸುವ ಮೊದಲು ಹುಡುಗನನ್ನು ಥಳಿಸಿದ್ದು ಏಕೆ? ಎಂದು ಕೇಳಿದೆ.

ಉತ್ತರಾಖಂಡ ಮದರಸಾಗಳಲ್ಲಿ ಸಂಸ್ಕೃತ ಕಡ್ಡಾಯ: ವಿದ್ವಾಂಸರ ಅಸಮಾಧಾನ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...