Homeಕರ್ನಾಟಕಬಂದೂಕು ತರಬೇತಿ ಪ್ರಕರಣ : ಶ್ರೀರಾಮ ಸೇನೆಯ 27 ಸದಸ್ಯರ ವಿರುದ್ಧ ಎಫ್‌ಐಆರ್‌

ಬಂದೂಕು ತರಬೇತಿ ಪ್ರಕರಣ : ಶ್ರೀರಾಮ ಸೇನೆಯ 27 ಸದಸ್ಯರ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಬಂದೂಕು ಮತ್ತು ಯುದ್ಧಕಲೆ ತರಬೇತಿ ಶಿಬಿರ ಆಯೋಜಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದುತ್ವ ಸಂಘಟನೆ ಶ್ರೀರಾಮ ಸೇನೆಯ 27 ಸದಸ್ಯರ ವಿರುದ್ದ ಬಾಗಲಕೋಟೆ ಜಿಲ್ಲೆಯ ಸಾವಳಗಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.

ಬಂದೂಕು ತರಬೇತಿ ಶಿಬಿರವನ್ನು ಆಯೋಜಿಸಿ ಅತಿಕ್ರಮಣ ಮತ್ತು ಶಸ್ತ್ರಾಸ್ತ್ರ ಕಾಯ್ದೆಯನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ನಿಂಗಪ್ಪ ಶಿವಪ್ಪ ಹೂಗಾರ ಎಂಬವರು ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ಜನವರಿ 7ರ ಮಂಗಳವಾರ ಪ್ರಕರಣ ದಾಖಲಾಗಿದೆ ಎಂದು ದಿ ನ್ಯೂಸ್‌ ಮಿನಿಟ್ ವರದಿ ಮಾಡಿದೆ.

2024ರ ಡಿಸೆಂಬರ್ 25 ರಿಂದ 29ರವರೆಗೆ ಬಾಗಲಕೋಟೆ ಜಿಲ್ಲೆಯ ತೊದಲಬಾಗಿ ಗ್ರಾಮದಲ್ಲಿರುವ ಕಾಶಿ ಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀರಾಮ ಸೇನೆಯು ಶಸ್ತ್ರಾಸ್ತ್ರ ತರಬೇತಿ ಶಿಬಿರವನ್ನು ನಡೆಸಿತ್ತು.

ತನ್ನ ಮತ್ತು ತನ್ನ ಸಹೋದರನ ಒಡೆತನದ ಜಮೀನಿಗೆ ಅತಿಕ್ರಮಣ ಪ್ರವೇಶ ಮಾಡಿದ್ದಲ್ಲದೆ, ಬಂದೂಕು ತರಬೇತಿ ನೀಡುವ ಮೂಲಕ ಕಾನೂನು ಉಲ್ಲಂಘಿಸಿರುವ ಶ್ರೀರಾಮ ಸೇನೆಯ 27 ಮಂದಿಯ ವಿರುದ್ದ ಕ್ರಮ ಕೈಗೊಳ್ಳುವಂತೆ ನಿಂಗಪ್ಪ ಅವರು ದೂರು ನೀಡಿದ್ದರು.

“ಅವರು (ಶ್ರೀರಾಮ ಸೇನೆ ಸದಸ್ಯರು) ಅನುಮತಿ ಪಡೆಯದೆ ಅಕ್ರಮವಾಗಿ ನಮ್ಮ ಜಮೀನಿಗೆ ಪ್ರವೇಶಿಸಿದ್ದಲ್ಲದೆ, ಶಸ್ತ್ರಾಸ್ತ್ರ ತರಬೇತಿ ಪಡೆದಿದ್ದಾರೆ. ಈ ಕಾರ್ಯಕ್ರಮದ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ಸಾರ್ವಜನಿಕರಲ್ಲಿ ಭಯ ಉಂಟಾಗಿದೆ” ಎಂದು ನಿಂಗಪ್ಪ ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ ಎಂದು ನ್ಯೂಸ್‌ ಮಿನಿಟ್ ವರದಿ ವಿವರಿಸಿದೆ.

“ಜಮೀನು ಮಾಲೀಕರಿಂದ ದೂರು ಬಂದ ನಂತರ ಕ್ರಮ ಕೈಗೊಳ್ಳಲಾಗಿದೆ. ತನಿಖೆ ನಡೆಯುತ್ತಿದೆ. ಶಿಬಿರದಲ್ಲಿ ಬಳಸಿರುವುದು ಬಂದೂಕುಗಳೇ ಅಥವಾ ಏರ್‌ಗನ್‌ಗಳೇ? ಎಂಬುದನ್ನು ನಿರ್ಧರಿಸಲು ಜಮಖಂಡಿ ಪೊಲೀಸ್ ಉಪ ವರಿಷ್ಠಾಧಿಕಾರಿಗೆ ನಿರ್ದೇಶನ ನೀಡಲಾಗಿದೆ, ಇನ್ನೂ ವರದಿ ಸಲ್ಲಿಕೆಯಾಗಿಲ್ಲ” ಎಂದು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೈ. ಅಮರನಾಥ ರೆಡ್ಡಿ ಹೇಳಿದ್ದಾಗಿ ವರದಿ ತಿಳಿಸಿದೆ.

ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) 2023ರ ಸೆಕ್ಷನ್ 329(3) (ಅತಿಕ್ರಮಣ) ಮತ್ತು ಶಸ್ತ್ರಾಸ್ತ್ರ ಪರವಾನಗಿ ಷರತ್ತುಗಳ ಉಲ್ಲಂಘನೆಗೆ ಸಂಬಂಧಿಸಿದಂತೆ 1959 ರ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 30ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಶ್ರೀರಾಮ ಸೇನೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟೀಸ್ (ಎಐಎಲ್‌ಎಜೆ) ಒತ್ತಾಯಿಸಿದ್ದು, ಪೊಲೀಸರ ಆರಂಭಿಕ ನಿಷ್ಕ್ರಿಯತೆಯನ್ನು ಟೀಕಿಸಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿರುವ ಎಐಎಲ್‌ಎಜೆ, ರಾಜ್ಯದಲ್ಲಿ ಉಗ್ರಗಾಮಿ ಗುಂಪುಗಳು ನಡೆಸುವ ಇದೇ ರೀತಿಯ ಚಟುವಟಿಕೆಗಳ ಮಾದರಿಯನ್ನು ಎತ್ತಿ ತೋರಿಸಿದೆ. ಇಂತಹ ಕೃತ್ಯಗಳು ಕೋಮು ಸಾಮರಸ್ಯವನ್ನು ಹಾಳುಮಾಡುತ್ತವೆ ಮತ್ತು ಅಲ್ಪಸಂಖ್ಯಾತರು, ದಲಿತರು ಮತ್ತು ಪ್ರಗತಿಪರ ಚಿಂತಕರ ವಿರುದ್ಧ ಹಿಂಸಾಚಾರವನ್ನು ಉತ್ತೇಜಿಸುತ್ತವೆ ಎಂದು ಹೇಳಿದೆ.

ಪತ್ರಕರ್ತೆ ಗೌರಿ ಲಂಕೇಶ್ ಮತ್ತು ವಿಚಾರವಾದಿ ಎಂ.ಎಂ. ಕಲ್ಬುರ್ಗಿ ಅವರ ಹತ್ಯೆಯಂತಹ ಘಟನೆಗಳನ್ನು ಉಲ್ಲೇಖಿಸಿ, ಈ ಶಿಬಿರಗಳಂತಹ ಅನಿಯಂತ್ರಿತ ಚಟುವಟಿಕೆಗಳು ಸಮಾಜಕ್ಕೆ ದೊಡ್ಡ ಮಟ್ಟದ ಅಪಾಯಗಳನ್ನು ಉಂಟು ಮಾಡುತ್ತವೆ ಎಂದು ಎಐಎಲ್‌ಎಜೆ ಕಳವಳ ವ್ಯಕ್ತಪಡಿಸಿದೆ.

ಬಂದೂಕು ತರಬೇತಿ ಶಿಬಿರ ಸಂಘಟಕರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 25 (ಕೆಲವು ಅಪರಾಧಗಳಿಗೆ ಶಿಕ್ಷೆ) ಮತ್ತು 27 (ಶಸ್ತ್ರಾಸ್ತ್ರಗಳನ್ನು ಬಳಸಿದ್ದಕ್ಕಾಗಿ ಶಿಕ್ಷೆ) ಹಾಗೂ ಬಿಎನ್‌ಎಸ್‌ನ ಸೆಕ್ಷನ್ 61 (ಕ್ರಿಮಿನಲ್ ಪಿತೂರಿ) ಮತ್ತು 189 (ಕಾನೂನುಬಾಹಿರ ಸಭೆ) ಅಡಿಯಲ್ಲಿ ಪ್ರಕರಣ ದಾಖಲಿಸಬೇಕೆಂದು ಎಐಎಲ್‌ಎಜೆ ಅಧಿಕಾರಿಗಳನ್ನು ಒತ್ತಾಯಿಸಿದೆ.

ಇದನ್ನೂ ಓದಿ : ಲೈಂಗಿಕ ದೌರ್ಜನ್ಯ ಪ್ರಕರಣ| ಪ್ರಜ್ವಲ್ ರೇವಣ್ಣ ವಿರುದ್ಧ ಆರೋಪ ನಿಗದಿಗೆ ಹೈಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...