HomeಮುಖಪುಟSC/ST Reservation |'ಕೆನೆಪದರ' ಕುರಿತು ಶಾಸಕಾಂಗ, ಕಾರ್ಯಾಂಗ ನಿರ್ಧರಿಸಲಿ : ಸುಪ್ರೀಂ ಕೋರ್ಟ್

SC/ST Reservation |’ಕೆನೆಪದರ’ ಕುರಿತು ಶಾಸಕಾಂಗ, ಕಾರ್ಯಾಂಗ ನಿರ್ಧರಿಸಲಿ : ಸುಪ್ರೀಂ ಕೋರ್ಟ್

- Advertisement -
- Advertisement -

ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿಯಲ್ಲಿ ‘ಕೆನೆಪದರ’ (ಕ್ರೀಮಿಲೇಯರ್) ತತ್ವ ಅಳವಡಿಸುವ ಕುರಿತು ಶಾಸಕಾಂಗ ಮತ್ತು ಕಾರ್ಯಾಂಗ ನಿರ್ಧರಿಸಲಿ. ಚೆಂಡು ಈಗ ಸರ್ಕಾರದ ಅಂಗಳದಲ್ಲಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ಜ.9) ಹೇಳಿದೆ.

ಮೀಸಲಾತಿಯ ಪ್ರಯೋಜನ ಪಡೆದು ಇತರರೊಂದಿಗೆ ಸ್ಪರ್ಧಿಸುವ ಸ್ಥಿತಿಯಲ್ಲಿ ಇರುವವರನ್ನು ಮೀಸಲಾತಿಯಿಂದ ಹೊರಗಿಡಬೇಕು ಎಂದು ಕೋರಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್‌. ಗವಾಯಿ ಹಾಗೂ ಆಗಸ್ಟಿನ್ ಜಾರ್ಜ್ ಮಸೀಹ್‌ ಅವರಿದ್ದ ನ್ಯಾಯಪೀಠ ಮೇಲಿನ ಹೇಳಿಕೆ ನೀಡಿದೆ.

ಏಳು ಸದಸ್ಯರಿದ್ದ ಸಂವಿಧಾನ ಪೀಠವು ಕಳೆದ ವರ್ಷ ಆಗಸ್ಟ್‌ನಲ್ಲಿ ನೀಡಿದ್ದ ತೀರ್ಪಿಗೆ ಸಂಬಂಧಿಸಿ ಸಂತೋಷ್ ಮಾಳವೀಯ ಎಂಬವರು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಪೀಠ ವಿಚಾರಣೆ ನಡೆಸಿದೆ.

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಲು ರಾಜ್ಯಗಳಿಗೆ ಅವಕಾಶ ನೀಡಿ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ 7 ನ್ಯಾಯಾಧೀಶರ ಪೀಠವು 6:1ರ ಬಹುಮತದೊಂದಿಗೆ 2024ರ ಆಗಸ್ಟ್‌ 1ರಂದು ತೀರ್ಪು ನೀಡಿತ್ತು. ಇ.ವಿ ಚಿನ್ನಯ್ಯ ಪ್ರಕರಣದಲ್ಲಿ ನೀಡಲಾಗಿದ್ದ ಒಳಮೀಸಲಾತಿ ಸಾಧ್ಯವಿಲ್ಲ ಎಂಬ ತೀರ್ಪನ್ನು ಪೀಠ ರದ್ದುಗೊಳಿಸಿತ್ತು.

ಈ ಪೀಠದಲ್ಲಿ ನ್ಯಾಯಮೂರ್ತಿ ಬಿ.ಆರ್‌. ಗವಾಯಿ ಕೂಡ ಇದ್ದರು. ಅವರು, ಪರಿಶಿಷ್ಟ ಜಾತಿ ಮತ್ತು ಪಂಗಡಗಳಲ್ಲಿನ ‘ಕೆನೆಪದರ’ ಗುರುತಿಸಿ, ಅವರಿಗೆ ಮೀಸಲಾತಿ ಸೌಲಭ್ಯ ನಿರಾಕರಿಸುವುದಕ್ಕಾಗಿ ರಾಜ್ಯಗಳು ನೀತಿಯೊಂದನ್ನು ರೂಪಿಸಬೇಕು ಎಂಬುದಾಗಿ ಪ್ರತ್ಯೇಕ ತೀರ್ಪು ಬರೆದಿದ್ದರು.

“ಮೀಸಲಾತಿಯ ಪ್ರಯೋಜನ ಪಡೆದವರು, ಇತರರೊಂದಿಗೆ ಸ್ಪರ್ಧಿಸುವ ಸ್ಥಿತಿಯಲ್ಲಿ ಇದ್ದಾಗ ಅವರನ್ನು ಮೀಸಲಾತಿ ಸೌಲಭ್ಯದಿಂದ ಹೊರಗಿಡಬೇಕು. ಕಳೆದ 75 ವರ್ಷಗಳ ವಿದ್ಯಮಾನಗಳನ್ನು ಪರಿಗಣನೆಗೆ ತೆಗೆದುಕೊಂಡೇ ನಾವು ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಆದರೆ, ಈ ಕುರಿತು ಶಾಸಕಾಂಗ ಮತ್ತು ಕಾರ್ಯಾಂಗ ನಿರ್ಧಾರ ಕೈಗೊಳ್ಳಬೇಕು” ಎಂದು ನ್ಯಾಯಮೂರ್ತಿ ಗವಾಯಿ ಹೇಳಿದ್ದಾರೆ.

ಇದನ್ನೂ ಓದಿ | ನ್ಯಾಯಾಧೀಶರಿಂದ ಮುಸ್ಲಿಂ ವಿರೋಧಿ ಹೇಳಿಕೆ : ಹೊಸ ವರದಿ ಕೇಳಿದ ಸಿಜೆಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...